Homeಕರ್ನಾಟಕಪ್ರಮೀಳಾ ನಾಯ್ಡು ವಜಾಗೆ ಆಗ್ರಹಿಸಿ, ಮಹಿಳಾ ಆಯೋಗಕ್ಕೆ ಬೀಗ ಜಡಿದು ಎಎಪಿ ಪ್ರತಿಭಟನೆ

ಪ್ರಮೀಳಾ ನಾಯ್ಡು ವಜಾಗೆ ಆಗ್ರಹಿಸಿ, ಮಹಿಳಾ ಆಯೋಗಕ್ಕೆ ಬೀಗ ಜಡಿದು ಎಎಪಿ ಪ್ರತಿಭಟನೆ

- Advertisement -
- Advertisement -

ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದರೂ ಮಹಿಳಾ ಆಯೋಗವು ಕಣ್ಮುಚ್ಚಿ ಕುಳಿತಿದೆ ಎಂದು ಆರೋಪಿಸಿರುವ ಆಮ್‌ ಆದ್ಮಿ ಪಕ್ಷ ಮಹಿಳಾ ಆಯೋಗದ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದೆ.

ಬೆಂಗಳೂರು ನಗರ ಆಪ್ ಮಹಿಳಾ ಘಟಕದ ಅಧ್ಯಕ್ಷೆ ಕುಶಲಾ ಸ್ವಾಮಿ ಮಾತನಾಡಿ, “ರಾಜ್ಯದಲ್ಲಿ ತಿಂಗಳಿಗೆ ಸರಾಸರಿ 42 ಅತ್ಯಾಚಾರ ನಡೆಯುತ್ತಿದೆ. 2018ರ ಜನವರಿಯಿಂದ 2021ರ ಜುಲೈ ತನಕ ರಾಜ್ಯದಲ್ಲಿ 1,759 ಅತ್ಯಾಚಾರ ಪ್ರಕರಣಗಳು ನಡೆದಿವೆ. 2021ರ ಮೊದಲ ಏಳು ತಿಂಗಳಿನಲ್ಲಿ ರಾಜ್ಯದಲ್ಲಿ 307 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಅದೇ ಅವಧಿಯಲ್ಲಿ 1,300 ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದರೂ ಶಿಕ್ಷೆಯಾಗಿರುವುದು 6 ಆರೋಪಿಗಳಿಗೆ ಮಾತ್ರ” ಎಂದು ಹೇಳಿದ್ದಾರೆ.

“ಇತ್ತೀಚೆಗೆ ಬಿಡುಗಡೆಯಾದ ಎನ್‌ಸಿಆರ್‌ಬಿ ಮಾಹಿತಿ ಪ್ರಕಾರ, 2020ರಲ್ಲಿ ರಾಜ್ಯದಲ್ಲಿ 3,246 ಮಹಿಳೆಯರ ಮೇಲೆ ಹಲ್ಲೆ ಹಾಗೂ 47 ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. 8 ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ ಮಾಡಲಾಗಿದೆ. 178 ಮಹಿಳೆಯರು ವರದಕ್ಷಿಣೆ ಕಿರುಕುಳಕ್ಕೆ ಬಲಿಯಾಗಿದ್ದಾರೆ. ಮಾನಸಿಕ ಕಿರುಕುಳ ಹಾಗೂ ಬೆದರಿಕೆಗೆ ಹೆದರಿ 263 ಮಹಿಳೆಯರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. 6 ಮಹಿಳೆಯರ ಮೇಲೆ ಆಸಿಡ್‌ ದಾಳಿ ನಡೆದಿದೆ. ಅಶ್ಲೀಲ ವಿಡಿಯೋ ಚಿತ್ರೀಕರಣಕ್ಕೆ 55 ಹೆಣ್ಣು ಮಕ್ಕಳನ್ನು ಬಳಸಿಕೊಳ್ಳಲಾಗಿದೆ” ಎಂದು ಕುಶಲಾ ಸ್ವಾಮಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯವರು ಕಳ್ಳರಂತೆ ಗಮನ ಬೇರೆಡೆ ಸೆಳೆದು ಬೆಲೆ ಏರಿಕೆ ಮಾಡುತ್ತಿದ್ದಾರೆ: ಎಎಪಿ

ಈ ವೇಳೆ ಮಾತನಾಡಿದ ಎಎಪಿಯ ಉಷಾ ಮೋಹನ್‌, “ಪ್ರಮೀಳಾ ನಾಯ್ಡು ಅವರು ಆಯೋಗದ ಅಧ್ಯಕ್ಷರೋ ಅಥವಾ ಬಿಜೆಪಿಯ ಏಜೆಂಟರೋ ಎಂಬ ಅನುಮಾನ ಕಾಡುತ್ತಿದೆ. ಮಹಿಳಾ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದರೆ, ಪ್ರಕರಣಗಳು ಜನರ ಗಮನಕ್ಕೆ ಬಂದು ಸರ್ಕಾರದ ಮಾನ ಬೀದಿ ಪಾಲಾಗುತ್ತದೆ ಎಂಬ ಕಾರಣಕ್ಕೆ ಅವರು ನಿಷ್ಕ್ರಿಯರಾಗಿದ್ದಾರೆ. ಮಹಿಳಾ ಆಯೋಗದ ಅಧ್ಯಕ್ಷರಾದ ಆರ್. ಪ್ರಮೀಳಾ ನಾಯ್ಡು ಹಾಗೂ ಸದಸ್ಯರು ಸರ್ಕಾರದ ಸೌಲಭ್ಯ ಪಡೆಯುವುದಕ್ಕೆ ಸೀಮಿತವಾಗಿದ್ದಾರೆ. ಕೋಟ್ಯಂತರ ಅನುದಾನ, ನಾನಾ ಸೌಲಭ್ಯಗಳನ್ನು ಆಯೋಗಕ್ಕೆ ನೀಡಿ ದುಂದುವೆಚ್ಚ ಮಾಡುವ ಮಾಡಲು ಆಯೋಗವನ್ನು ವಜಾ ಮಾಡಿ, ಮಹಿಳೆಯರ ಬಗ್ಗೆ ಕಾಳಜಿ ಹೊಂದಿರುವ ದಿಟ್ಟ ಮಹಿಳೆಯ ನೇತೃತ್ವದಲ್ಲಿ ಆಯೋಗದ ಪುನಾರಚನೆ ಆಗಲಿ” ಎಂದು ಆಗ್ರಹಿಸಿದ್ದಾರೆ.

“ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ರವರ ಸರ್ಕಾರವು ಸ್ವಾತಿ ಮಾಲಿವಾಲ್‌ ಎಂಬ ದಿಟ್ಟ ಹೋರಾಟಗಾರ್ತಿಯನ್ನು ಮಹಿಳಾ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿದೆ. ಕಳೆದ ಐದು ವರ್ಷಗಳಲ್ಲಿ ಅವರ ನೇತೃತ್ವದಲ್ಲಿ 1,00,672 ಪ್ರಕರಣಗಳಿಗೆ ಸಂಬಂಧಿಸಿ 1,42,234 ಜನರ ವೈಯಕ್ತಿಕ ವಿಚಾರಣೆ ನಡೆದಿದೆ. ಸಹಾಯವಾಣಿಗೆ ಕರೆ ಮಾಡಿ ಕಷ್ಟ ಹೇಳಿಕೊಂಡ ದೆಹಲಿಯ 4.25 ಲಕ್ಷ ಮಹಿಳೆಯರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲಾಗಿದೆ. ದೆಹಲಿಯ ಮಹಿಳಾ ಆಯೋಗವು 250ಕ್ಕೂ ಶಿಫಾರಸ್ಸುಗಳು ಸರ್ಕಾರ ಹಾಗೂ ಪ್ರಾಧಿಕಾರಕ್ಕೆ ಕಳುಹಿಸಿದೆ. ರಾಜ್ಯದ ಆಯೋಗಕ್ಕೂ ಅಂತಹ ದಿಟ್ಟ ಅಧ್ಯಕ್ಷರ ಅಗತ್ಯವಿದೆ” ಎಂದಿದ್ದಾರೆ.

ಎಎಪಿಯ ರಾಜ್ಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ, “ಜಾರಕಿಹೊಳಿ ಪ್ರಕರಣದಲ್ಲಿ ವಿಡಿಯೋ ನಕಲಿ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರು. ನಂತರ ಅದು ಹನಿಟ್ರಾಪ್‌ ಎಂದು ಜಾರಕಿಹೊಳಿಯವರೇ ಹೇಳಿದರು. ಅಧಿಕಾರ ದುರ್ಬಳಕೆ ಮಾಡಿಕೊಂಡು ಯುವತಿಯನ್ನು ಜಾರಕಿಹೊಳಿ ದುರ್ಬಳಕೆ ಮಾಡಿಕೊಂಡ ಪ್ರಕರಣದಲ್ಲಿ ಇಡೀ ಸರ್ಕಾರವೇ ಆರೋಪಿಯ ರಕ್ಷಣೆಗೆ ನಿಂತಿದೆ” ಎಂದು ಕಿಡಿಕಾರಿದ್ದಾರೆ.

“ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ನಿಯಂತ್ರಿಸಲು ಬಳಕೆಯಾಗುತ್ತಿದ್ದ 71 ಸಾಂತ್ವನ ಕೇಂದ್ರಗಳನ್ನು ಏಪ್ರಿಲ್‌ನಲ್ಲಿ ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿದ್ದ 194 ಸಾಂತ್ವನ ಕೇಂದ್ರಗಳ ಪೈಕಿ 123 ಮಾತ್ರ ಪ್ರಸ್ತುತ ಕಾರ್ಯನಿರ್ವಹಿಸುತ್ತಿದೆ. ಜನಸಂಖ್ಯೆ ಜಾಸ್ತಿಯಿರುವ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳ ಹೆಚ್ಚು ದಾಖಲಾಗುವ ಬೆಂಗಳೂರಿನಲ್ಲೇ ಎಲ್ಲಾ ಸಾಂತ್ವನ ಕೇಂದ್ರಗಳು ಸ್ಥಗಿತಗೊಂಡಿವೆ” ಎಂದು ಎಎಪಿಯ ವೀಣಾ ಸೆರ್ರಾವ್‌ರವರು ಹೇಳಿದ್ದಾರೆ.

ಮಹಿಳಾ ನಾಯಕಿ ಪುಷ್ಪಾ ಕೇಶವ್‌ ಮಾತನಾಡಿ, “ಪೊಲೀಸರಿಗೆ ದೂರು ನೀಡಲು ಬರುವ ಲೈಂಗಿಕ ಕಿರುಕುಳಕ್ಕೊಳಗಾದ ಮಹಿಳೆಯರಿಗೆ ಸೂಕ್ತ ಸ್ಪಂದನೆ ಸಿಗುತ್ತಿಲ್ಲ. ಪೊಲೀಸರು ಎಫ್‌ಐಆರ್‌ ಹಾಕಲು ಮೀನಾಮೇಷ ಎಣಿಸುತ್ತಾರೆ. ಅತ್ಯಾಚಾರದಂತಹ ಗಂಭೀರ ಪ್ರಕರಣಗಳಲ್ಲೂ ರಾಜಿ ಮಾಡಿಸಲು ಪೊಲೀಸರು ಮುಂದಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಒಂದುವೇಳೆ ಎಫ್‌ಐಆರ್‌ ದಾಖಲಿಸಿಕೊಂಡರೂ, ಆರೋಪಿ ವಿರುದ್ಧ ಸಾಕ್ಷಿ ಸಂಗ್ರಹಕ್ಕೆ ಉದಾಸೀನ ತೋರುತ್ತಾರೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಮೇಕೆದಾಟು ಯೋಜನೆ ತ್ವರಿತಗೊಳಿಸಿ ಎಂದು ಎಎಪಿಯಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...