Homeಕರ್ನಾಟಕಪ್ರಮೀಳಾ ನಾಯ್ಡು ವಜಾಗೆ ಆಗ್ರಹಿಸಿ, ಮಹಿಳಾ ಆಯೋಗಕ್ಕೆ ಬೀಗ ಜಡಿದು ಎಎಪಿ ಪ್ರತಿಭಟನೆ

ಪ್ರಮೀಳಾ ನಾಯ್ಡು ವಜಾಗೆ ಆಗ್ರಹಿಸಿ, ಮಹಿಳಾ ಆಯೋಗಕ್ಕೆ ಬೀಗ ಜಡಿದು ಎಎಪಿ ಪ್ರತಿಭಟನೆ

- Advertisement -
- Advertisement -

ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದರೂ ಮಹಿಳಾ ಆಯೋಗವು ಕಣ್ಮುಚ್ಚಿ ಕುಳಿತಿದೆ ಎಂದು ಆರೋಪಿಸಿರುವ ಆಮ್‌ ಆದ್ಮಿ ಪಕ್ಷ ಮಹಿಳಾ ಆಯೋಗದ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದೆ.

ಬೆಂಗಳೂರು ನಗರ ಆಪ್ ಮಹಿಳಾ ಘಟಕದ ಅಧ್ಯಕ್ಷೆ ಕುಶಲಾ ಸ್ವಾಮಿ ಮಾತನಾಡಿ, “ರಾಜ್ಯದಲ್ಲಿ ತಿಂಗಳಿಗೆ ಸರಾಸರಿ 42 ಅತ್ಯಾಚಾರ ನಡೆಯುತ್ತಿದೆ. 2018ರ ಜನವರಿಯಿಂದ 2021ರ ಜುಲೈ ತನಕ ರಾಜ್ಯದಲ್ಲಿ 1,759 ಅತ್ಯಾಚಾರ ಪ್ರಕರಣಗಳು ನಡೆದಿವೆ. 2021ರ ಮೊದಲ ಏಳು ತಿಂಗಳಿನಲ್ಲಿ ರಾಜ್ಯದಲ್ಲಿ 307 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಅದೇ ಅವಧಿಯಲ್ಲಿ 1,300 ಆರೋಪಿಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದರೂ ಶಿಕ್ಷೆಯಾಗಿರುವುದು 6 ಆರೋಪಿಗಳಿಗೆ ಮಾತ್ರ” ಎಂದು ಹೇಳಿದ್ದಾರೆ.

“ಇತ್ತೀಚೆಗೆ ಬಿಡುಗಡೆಯಾದ ಎನ್‌ಸಿಆರ್‌ಬಿ ಮಾಹಿತಿ ಪ್ರಕಾರ, 2020ರಲ್ಲಿ ರಾಜ್ಯದಲ್ಲಿ 3,246 ಮಹಿಳೆಯರ ಮೇಲೆ ಹಲ್ಲೆ ಹಾಗೂ 47 ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. 8 ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ ಮಾಡಲಾಗಿದೆ. 178 ಮಹಿಳೆಯರು ವರದಕ್ಷಿಣೆ ಕಿರುಕುಳಕ್ಕೆ ಬಲಿಯಾಗಿದ್ದಾರೆ. ಮಾನಸಿಕ ಕಿರುಕುಳ ಹಾಗೂ ಬೆದರಿಕೆಗೆ ಹೆದರಿ 263 ಮಹಿಳೆಯರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. 6 ಮಹಿಳೆಯರ ಮೇಲೆ ಆಸಿಡ್‌ ದಾಳಿ ನಡೆದಿದೆ. ಅಶ್ಲೀಲ ವಿಡಿಯೋ ಚಿತ್ರೀಕರಣಕ್ಕೆ 55 ಹೆಣ್ಣು ಮಕ್ಕಳನ್ನು ಬಳಸಿಕೊಳ್ಳಲಾಗಿದೆ” ಎಂದು ಕುಶಲಾ ಸ್ವಾಮಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯವರು ಕಳ್ಳರಂತೆ ಗಮನ ಬೇರೆಡೆ ಸೆಳೆದು ಬೆಲೆ ಏರಿಕೆ ಮಾಡುತ್ತಿದ್ದಾರೆ: ಎಎಪಿ

ಈ ವೇಳೆ ಮಾತನಾಡಿದ ಎಎಪಿಯ ಉಷಾ ಮೋಹನ್‌, “ಪ್ರಮೀಳಾ ನಾಯ್ಡು ಅವರು ಆಯೋಗದ ಅಧ್ಯಕ್ಷರೋ ಅಥವಾ ಬಿಜೆಪಿಯ ಏಜೆಂಟರೋ ಎಂಬ ಅನುಮಾನ ಕಾಡುತ್ತಿದೆ. ಮಹಿಳಾ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದರೆ, ಪ್ರಕರಣಗಳು ಜನರ ಗಮನಕ್ಕೆ ಬಂದು ಸರ್ಕಾರದ ಮಾನ ಬೀದಿ ಪಾಲಾಗುತ್ತದೆ ಎಂಬ ಕಾರಣಕ್ಕೆ ಅವರು ನಿಷ್ಕ್ರಿಯರಾಗಿದ್ದಾರೆ. ಮಹಿಳಾ ಆಯೋಗದ ಅಧ್ಯಕ್ಷರಾದ ಆರ್. ಪ್ರಮೀಳಾ ನಾಯ್ಡು ಹಾಗೂ ಸದಸ್ಯರು ಸರ್ಕಾರದ ಸೌಲಭ್ಯ ಪಡೆಯುವುದಕ್ಕೆ ಸೀಮಿತವಾಗಿದ್ದಾರೆ. ಕೋಟ್ಯಂತರ ಅನುದಾನ, ನಾನಾ ಸೌಲಭ್ಯಗಳನ್ನು ಆಯೋಗಕ್ಕೆ ನೀಡಿ ದುಂದುವೆಚ್ಚ ಮಾಡುವ ಮಾಡಲು ಆಯೋಗವನ್ನು ವಜಾ ಮಾಡಿ, ಮಹಿಳೆಯರ ಬಗ್ಗೆ ಕಾಳಜಿ ಹೊಂದಿರುವ ದಿಟ್ಟ ಮಹಿಳೆಯ ನೇತೃತ್ವದಲ್ಲಿ ಆಯೋಗದ ಪುನಾರಚನೆ ಆಗಲಿ” ಎಂದು ಆಗ್ರಹಿಸಿದ್ದಾರೆ.

“ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ರವರ ಸರ್ಕಾರವು ಸ್ವಾತಿ ಮಾಲಿವಾಲ್‌ ಎಂಬ ದಿಟ್ಟ ಹೋರಾಟಗಾರ್ತಿಯನ್ನು ಮಹಿಳಾ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿದೆ. ಕಳೆದ ಐದು ವರ್ಷಗಳಲ್ಲಿ ಅವರ ನೇತೃತ್ವದಲ್ಲಿ 1,00,672 ಪ್ರಕರಣಗಳಿಗೆ ಸಂಬಂಧಿಸಿ 1,42,234 ಜನರ ವೈಯಕ್ತಿಕ ವಿಚಾರಣೆ ನಡೆದಿದೆ. ಸಹಾಯವಾಣಿಗೆ ಕರೆ ಮಾಡಿ ಕಷ್ಟ ಹೇಳಿಕೊಂಡ ದೆಹಲಿಯ 4.25 ಲಕ್ಷ ಮಹಿಳೆಯರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲಾಗಿದೆ. ದೆಹಲಿಯ ಮಹಿಳಾ ಆಯೋಗವು 250ಕ್ಕೂ ಶಿಫಾರಸ್ಸುಗಳು ಸರ್ಕಾರ ಹಾಗೂ ಪ್ರಾಧಿಕಾರಕ್ಕೆ ಕಳುಹಿಸಿದೆ. ರಾಜ್ಯದ ಆಯೋಗಕ್ಕೂ ಅಂತಹ ದಿಟ್ಟ ಅಧ್ಯಕ್ಷರ ಅಗತ್ಯವಿದೆ” ಎಂದಿದ್ದಾರೆ.

ಎಎಪಿಯ ರಾಜ್ಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ, “ಜಾರಕಿಹೊಳಿ ಪ್ರಕರಣದಲ್ಲಿ ವಿಡಿಯೋ ನಕಲಿ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದರು. ನಂತರ ಅದು ಹನಿಟ್ರಾಪ್‌ ಎಂದು ಜಾರಕಿಹೊಳಿಯವರೇ ಹೇಳಿದರು. ಅಧಿಕಾರ ದುರ್ಬಳಕೆ ಮಾಡಿಕೊಂಡು ಯುವತಿಯನ್ನು ಜಾರಕಿಹೊಳಿ ದುರ್ಬಳಕೆ ಮಾಡಿಕೊಂಡ ಪ್ರಕರಣದಲ್ಲಿ ಇಡೀ ಸರ್ಕಾರವೇ ಆರೋಪಿಯ ರಕ್ಷಣೆಗೆ ನಿಂತಿದೆ” ಎಂದು ಕಿಡಿಕಾರಿದ್ದಾರೆ.

“ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ನಿಯಂತ್ರಿಸಲು ಬಳಕೆಯಾಗುತ್ತಿದ್ದ 71 ಸಾಂತ್ವನ ಕೇಂದ್ರಗಳನ್ನು ಏಪ್ರಿಲ್‌ನಲ್ಲಿ ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿದ್ದ 194 ಸಾಂತ್ವನ ಕೇಂದ್ರಗಳ ಪೈಕಿ 123 ಮಾತ್ರ ಪ್ರಸ್ತುತ ಕಾರ್ಯನಿರ್ವಹಿಸುತ್ತಿದೆ. ಜನಸಂಖ್ಯೆ ಜಾಸ್ತಿಯಿರುವ ಹಾಗೂ ಲೈಂಗಿಕ ಕಿರುಕುಳ ಪ್ರಕರಣಗಳ ಹೆಚ್ಚು ದಾಖಲಾಗುವ ಬೆಂಗಳೂರಿನಲ್ಲೇ ಎಲ್ಲಾ ಸಾಂತ್ವನ ಕೇಂದ್ರಗಳು ಸ್ಥಗಿತಗೊಂಡಿವೆ” ಎಂದು ಎಎಪಿಯ ವೀಣಾ ಸೆರ್ರಾವ್‌ರವರು ಹೇಳಿದ್ದಾರೆ.

ಮಹಿಳಾ ನಾಯಕಿ ಪುಷ್ಪಾ ಕೇಶವ್‌ ಮಾತನಾಡಿ, “ಪೊಲೀಸರಿಗೆ ದೂರು ನೀಡಲು ಬರುವ ಲೈಂಗಿಕ ಕಿರುಕುಳಕ್ಕೊಳಗಾದ ಮಹಿಳೆಯರಿಗೆ ಸೂಕ್ತ ಸ್ಪಂದನೆ ಸಿಗುತ್ತಿಲ್ಲ. ಪೊಲೀಸರು ಎಫ್‌ಐಆರ್‌ ಹಾಕಲು ಮೀನಾಮೇಷ ಎಣಿಸುತ್ತಾರೆ. ಅತ್ಯಾಚಾರದಂತಹ ಗಂಭೀರ ಪ್ರಕರಣಗಳಲ್ಲೂ ರಾಜಿ ಮಾಡಿಸಲು ಪೊಲೀಸರು ಮುಂದಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಒಂದುವೇಳೆ ಎಫ್‌ಐಆರ್‌ ದಾಖಲಿಸಿಕೊಂಡರೂ, ಆರೋಪಿ ವಿರುದ್ಧ ಸಾಕ್ಷಿ ಸಂಗ್ರಹಕ್ಕೆ ಉದಾಸೀನ ತೋರುತ್ತಾರೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಮೇಕೆದಾಟು ಯೋಜನೆ ತ್ವರಿತಗೊಳಿಸಿ ಎಂದು ಎಎಪಿಯಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...