Homeಕರ್ನಾಟಕನನಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ, ಆದರೂ ಸರ್ಕಾರ ಸಂಚು ನಡೆಸುತ್ತಿದೆ: ಡಿ.ಕೆ.ಶಿವಕುಮಾರ್‌ ಆರೋಪ

ನನಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ, ಆದರೂ ಸರ್ಕಾರ ಸಂಚು ನಡೆಸುತ್ತಿದೆ: ಡಿ.ಕೆ.ಶಿವಕುಮಾರ್‌ ಆರೋಪ

’ಜನರ ಮೇಲೆ ಬಿಜೆಪಿ ಕೋವಿಡ್, ಬಿಜೆಪಿ ಲಾಕ್ ಡೌನ್, ಬಿಜೆಪಿ ಕರ್ಫ್ಯೂ ಹೇರಲಾಗಿದೆ. ಸೋಂಕು ಇಲ್ಲದಿದ್ದರೂ ಇವರು ಜನರಿಗೆ ಸೋಂಕು ಬರಿಸುತ್ತಿದ್ದಾರೆ’

- Advertisement -
- Advertisement -

“ರಾಜ್ಯ ಸರ್ಕಾರ ನನ್ನ ಮೇಲೆ ಹಾಗೂ ಪಕ್ಷದ ವಿರುದ್ಧ ದೊಡ್ಡ ಸಂಚು ರೂಪಿಸುತ್ತಿದೆ. ಏನಾದರೂ ಮಾಡಿ ಪಾದಯಾತ್ರೆ ನಿಲ್ಲಿಸಲು ಯತ್ನಿಸುತ್ತಿದೆ. ಅದೇ ಅವರ ದೊಡ್ಡ ಕಾರ್ಯಕ್ರಮವಾಗಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಗಂಭೀರ ಆರೋಪ ಮಾಡಿದ್ದಾರೆ.

“ನನಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ ಆದರೂ ನನ್ನ ಬಳಿಗೆ ಅಧಿಕಾರಿಯನ್ನು ಕಳುಹಿಸಿ ಸ್ಯಾಂಪಲ್ ಕಲೆಹಾಕಲು ಮುಂದಾದರು. ನಿನ್ನೆ ನನಗೆ ಪರೀಕ್ಷೆ ನಡೆಸಲು ಕಳುಹಿಸಿದ್ದ ಅಧಿಕಾರಿಗೂ ಕೊರೊನಾ ಪಾಸಿಟಿವ್ ಎಂದು ಹೇಳುತ್ತಿದ್ದಾರೆ. ಇದು ಎಷ್ಟು ನಿಜವೋ ಗೊತ್ತಿಲ್ಲ. ನಾನು ಪ್ರಾಥಮಿಕ ಸಂಪರ್ಕಿತ ಎನ್ನುತ್ತಿದ್ದಾರೆ. ಆತನನ್ನು ನನ್ನ ಬಳಿ ಕಳುಹಿಸಿದ್ದು ಯಾರು..? ಯಾಕೆ ಕಳುಹಿಸಿದರು..?” ಎಂದು ಪ್ರಶ್ನಿಸಿದ್ದಾರೆ.

’ನಮ್ಮ ಮನೆಯಲ್ಲೇ ಡಜನ್ ವೈದ್ಯರಿದ್ದಾರೆ. ಅರ್ಧ ಡಜನ್ ವೈದ್ಯಕೀಯ ಕಾಲೇಜು ಮಾಲೀಕರಿದ್ದಾರೆ. ನನಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ ಹೀಗಾಗಿ ಯಾವುದೇ ಪರೀಕ್ಷೆ ಅಗತ್ಯವಿಲ್ಲ ಎಂದು ಅಧಿಕಾರಿಯನ್ನು ವಾಪಸ್ ಕಳುಹಿಸಿದೆ” ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚಳ ಬಿಜೆಪಿ ತಂತ್ರವಾಗಿದೆ ಎಂದು ಆರೋಪಿಸಿರುವ ಅವರು, “ವಿಮಾನ ನಿಲ್ದಾಣದಲ್ಲಿ ಬಂದವರನ್ನೆಲ್ಲಾ ಹಿಡಿದು ಸೋಂಕು ತಗುಲಿದೆ ಎಂದು ಹೇಳುತ್ತಿದ್ದಾರೆ. ಇದರಲ್ಲಿ ದೊಡ್ಡ ಷಡ್ಯಂತ್ರ ನಡೆಯುತ್ತಿದ್ದು, ಜನರ ಮೇಲೆ ಬಿಜೆಪಿ ಕೋವಿಡ್, ಬಿಜೆಪಿ ಲಾಕ್ ಡೌನ್, ಬಿಜೆಪಿ ಕರ್ಫ್ಯೂ ಹೇರಲಾಗಿದೆ. ಸೋಂಕು ಇಲ್ಲದಿದ್ದರೂ ಜನರಿಗೆ ಇವರು ಸೋಂಕು ಬರಿಸುತ್ತಿದ್ದಾರೆ. ಸೋಂಕು ಸಂಖ್ಯೆ ಹೆಚ್ಚಳ ವಿಚಾರವಾಗಿ ನ್ಯಾಯಾಂಗ ತನಿಖೆ ನಡೆಯಬೇಕು” ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಸಾತನೂರಿನಲ್ಲಿ ಕೊರೊನಾ ನಿಯಮ ಉಲ್ಲಂಘನೆ ಆರೋಪದಲ್ಲಿ ಪ್ರಕರಣ ದಾಖಲಾಗಿರುವುದಕ್ಕೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್‌, “ಕೆಲ ದಿನಗಳ ಹಿಂದೆ ಗೃಹ ಸಚಿವರು ತಮ್ಮ ಊರಿನಲ್ಲಿ ಜಾತ್ರೆ ಮಾಡಿದ್ದಾರೆ. ಅವರ ವಿರುದ್ಧ ಯಾಕೆ ಪ್ರಕರಣ ದಾಖಲಾಗಿಲ್ಲ..? ಬಿಜೆಪಿ ನಾಯಕ ಗುತ್ತೆದಾರ್ ಅವರು ಸಾವಿರಾರು ಜನರನ್ನು ಸೇರಿಸಿಕೊಂಡು ಕಾರ್ಯಕ್ರಮ ಮಾಡಿದ್ದಾರೆ. ಆದರೂ ಪ್ರಕರಣ ಯಾಕೆ ದಾಖಲಾಗಿಲ್ಲ..? ರಾಜಕೀಯ ಕಾರ್ಯದರ್ಶಿಯಾಗಿದ್ದ ರೇಣುಕಾಚಾರ್ಯ ಅವರು ನಿಯಮ ಉಲ್ಲಂಘಿಸಿದ್ದಾರೆ ” ಎಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸಾತನೂರಿನಲ್ಲಿ 30 ಜನರ ಮೇಲೆ ಕೇಸ್ ಹಾಕಿದ್ದಾರಂತೆ. ಇನ್ನಷ್ಟು ಜನರ ವಿವರಗಳನ್ನು ನಾನು ನೀಡುತ್ತೇನೆ. ಸಾವಿರಾರು ಜನ ಇದ್ದರಲ್ಲ ಅವರ ಮೇಲೆ ಯಾಕೆ ಕೇಸ್ ದಾಖಲಿಸಿಲ್ಲ..? ನಿನ್ನೆ 127 ತಾಲೂಕುಗಳಿಂದ ನಮಗೆ ಕರ್ಫ್ಯೂ ನಿಯಮ ಉಲ್ಲಂಘನೆ ಫೋಟೋ, ವಿಡಿಯೋಗಳು ಬಂದಿವೆ. ಎಲ್ಲಿಯೂ ನಿಯಮ ಪಾಲನೆ ಆಗಿಲ್ಲ. ಎಲ್ಲೆಡೆ ಓಡಾಟ ಮಾಡಲಾಗಿದೆ. ಇವರ ಮೇಲೂ ಕೇಸ್ ಹಾಕಿಲ್ಲ ಯಾಕೆ..?” ಎಂದು ಪ್ರಶ್ನಿಸಿದ್ದಾರೆ.

’ಈ ರಾಜ್ಯದಲ್ಲಿ ಎಲ್ಲರಿಗೂ ನ್ಯಾಯ ಒಂದೇ. ನಾನು ಏನೇ ಮಾತನಾಡಿದರೂ ಬೇರೆ ರೀತಿ ಬಿಂಬಿತವಾಗುತ್ತಿದೆ. ನಾನು ಹೇಳುವುದೊಂದು ಇವರು ತೋರಿಸುವುದೊಂದು. ಹೀಗಾಗಿ ಮುಂದಿನ ಮೂರು ದಿನ ನಾನು ಮೌನ ವಹಿಸುತ್ತೇನೆ. ಮಾಧ್ಯಮಗಳ ಮುಂದೆ ಯಾವುದೇ ಹೇಳಿಕೆ ನೀಡುವುದಿಲ್ಲ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಹರಿಯೋ ನೀರು, ಉರಿಯೋ ಸೂರ್ಯನ ತಡೆಯಲಾಗಲ್ಲ, ಮೇಕೆದಾಟು ಹೋರಾಟ ನಿಲ್ಲಿಸಲಾಗಲ್ಲ: ಡಿ.ಕೆ.ಶಿವಕುಮಾರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...