Homeಕರ್ನಾಟಕನನಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ, ಆದರೂ ಸರ್ಕಾರ ಸಂಚು ನಡೆಸುತ್ತಿದೆ: ಡಿ.ಕೆ.ಶಿವಕುಮಾರ್‌ ಆರೋಪ

ನನಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ, ಆದರೂ ಸರ್ಕಾರ ಸಂಚು ನಡೆಸುತ್ತಿದೆ: ಡಿ.ಕೆ.ಶಿವಕುಮಾರ್‌ ಆರೋಪ

’ಜನರ ಮೇಲೆ ಬಿಜೆಪಿ ಕೋವಿಡ್, ಬಿಜೆಪಿ ಲಾಕ್ ಡೌನ್, ಬಿಜೆಪಿ ಕರ್ಫ್ಯೂ ಹೇರಲಾಗಿದೆ. ಸೋಂಕು ಇಲ್ಲದಿದ್ದರೂ ಇವರು ಜನರಿಗೆ ಸೋಂಕು ಬರಿಸುತ್ತಿದ್ದಾರೆ’

- Advertisement -
- Advertisement -

“ರಾಜ್ಯ ಸರ್ಕಾರ ನನ್ನ ಮೇಲೆ ಹಾಗೂ ಪಕ್ಷದ ವಿರುದ್ಧ ದೊಡ್ಡ ಸಂಚು ರೂಪಿಸುತ್ತಿದೆ. ಏನಾದರೂ ಮಾಡಿ ಪಾದಯಾತ್ರೆ ನಿಲ್ಲಿಸಲು ಯತ್ನಿಸುತ್ತಿದೆ. ಅದೇ ಅವರ ದೊಡ್ಡ ಕಾರ್ಯಕ್ರಮವಾಗಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಗಂಭೀರ ಆರೋಪ ಮಾಡಿದ್ದಾರೆ.

“ನನಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ ಆದರೂ ನನ್ನ ಬಳಿಗೆ ಅಧಿಕಾರಿಯನ್ನು ಕಳುಹಿಸಿ ಸ್ಯಾಂಪಲ್ ಕಲೆಹಾಕಲು ಮುಂದಾದರು. ನಿನ್ನೆ ನನಗೆ ಪರೀಕ್ಷೆ ನಡೆಸಲು ಕಳುಹಿಸಿದ್ದ ಅಧಿಕಾರಿಗೂ ಕೊರೊನಾ ಪಾಸಿಟಿವ್ ಎಂದು ಹೇಳುತ್ತಿದ್ದಾರೆ. ಇದು ಎಷ್ಟು ನಿಜವೋ ಗೊತ್ತಿಲ್ಲ. ನಾನು ಪ್ರಾಥಮಿಕ ಸಂಪರ್ಕಿತ ಎನ್ನುತ್ತಿದ್ದಾರೆ. ಆತನನ್ನು ನನ್ನ ಬಳಿ ಕಳುಹಿಸಿದ್ದು ಯಾರು..? ಯಾಕೆ ಕಳುಹಿಸಿದರು..?” ಎಂದು ಪ್ರಶ್ನಿಸಿದ್ದಾರೆ.

’ನಮ್ಮ ಮನೆಯಲ್ಲೇ ಡಜನ್ ವೈದ್ಯರಿದ್ದಾರೆ. ಅರ್ಧ ಡಜನ್ ವೈದ್ಯಕೀಯ ಕಾಲೇಜು ಮಾಲೀಕರಿದ್ದಾರೆ. ನನಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ ಹೀಗಾಗಿ ಯಾವುದೇ ಪರೀಕ್ಷೆ ಅಗತ್ಯವಿಲ್ಲ ಎಂದು ಅಧಿಕಾರಿಯನ್ನು ವಾಪಸ್ ಕಳುಹಿಸಿದೆ” ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚಳ ಬಿಜೆಪಿ ತಂತ್ರವಾಗಿದೆ ಎಂದು ಆರೋಪಿಸಿರುವ ಅವರು, “ವಿಮಾನ ನಿಲ್ದಾಣದಲ್ಲಿ ಬಂದವರನ್ನೆಲ್ಲಾ ಹಿಡಿದು ಸೋಂಕು ತಗುಲಿದೆ ಎಂದು ಹೇಳುತ್ತಿದ್ದಾರೆ. ಇದರಲ್ಲಿ ದೊಡ್ಡ ಷಡ್ಯಂತ್ರ ನಡೆಯುತ್ತಿದ್ದು, ಜನರ ಮೇಲೆ ಬಿಜೆಪಿ ಕೋವಿಡ್, ಬಿಜೆಪಿ ಲಾಕ್ ಡೌನ್, ಬಿಜೆಪಿ ಕರ್ಫ್ಯೂ ಹೇರಲಾಗಿದೆ. ಸೋಂಕು ಇಲ್ಲದಿದ್ದರೂ ಜನರಿಗೆ ಇವರು ಸೋಂಕು ಬರಿಸುತ್ತಿದ್ದಾರೆ. ಸೋಂಕು ಸಂಖ್ಯೆ ಹೆಚ್ಚಳ ವಿಚಾರವಾಗಿ ನ್ಯಾಯಾಂಗ ತನಿಖೆ ನಡೆಯಬೇಕು” ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಸಾತನೂರಿನಲ್ಲಿ ಕೊರೊನಾ ನಿಯಮ ಉಲ್ಲಂಘನೆ ಆರೋಪದಲ್ಲಿ ಪ್ರಕರಣ ದಾಖಲಾಗಿರುವುದಕ್ಕೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್‌, “ಕೆಲ ದಿನಗಳ ಹಿಂದೆ ಗೃಹ ಸಚಿವರು ತಮ್ಮ ಊರಿನಲ್ಲಿ ಜಾತ್ರೆ ಮಾಡಿದ್ದಾರೆ. ಅವರ ವಿರುದ್ಧ ಯಾಕೆ ಪ್ರಕರಣ ದಾಖಲಾಗಿಲ್ಲ..? ಬಿಜೆಪಿ ನಾಯಕ ಗುತ್ತೆದಾರ್ ಅವರು ಸಾವಿರಾರು ಜನರನ್ನು ಸೇರಿಸಿಕೊಂಡು ಕಾರ್ಯಕ್ರಮ ಮಾಡಿದ್ದಾರೆ. ಆದರೂ ಪ್ರಕರಣ ಯಾಕೆ ದಾಖಲಾಗಿಲ್ಲ..? ರಾಜಕೀಯ ಕಾರ್ಯದರ್ಶಿಯಾಗಿದ್ದ ರೇಣುಕಾಚಾರ್ಯ ಅವರು ನಿಯಮ ಉಲ್ಲಂಘಿಸಿದ್ದಾರೆ ” ಎಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸಾತನೂರಿನಲ್ಲಿ 30 ಜನರ ಮೇಲೆ ಕೇಸ್ ಹಾಕಿದ್ದಾರಂತೆ. ಇನ್ನಷ್ಟು ಜನರ ವಿವರಗಳನ್ನು ನಾನು ನೀಡುತ್ತೇನೆ. ಸಾವಿರಾರು ಜನ ಇದ್ದರಲ್ಲ ಅವರ ಮೇಲೆ ಯಾಕೆ ಕೇಸ್ ದಾಖಲಿಸಿಲ್ಲ..? ನಿನ್ನೆ 127 ತಾಲೂಕುಗಳಿಂದ ನಮಗೆ ಕರ್ಫ್ಯೂ ನಿಯಮ ಉಲ್ಲಂಘನೆ ಫೋಟೋ, ವಿಡಿಯೋಗಳು ಬಂದಿವೆ. ಎಲ್ಲಿಯೂ ನಿಯಮ ಪಾಲನೆ ಆಗಿಲ್ಲ. ಎಲ್ಲೆಡೆ ಓಡಾಟ ಮಾಡಲಾಗಿದೆ. ಇವರ ಮೇಲೂ ಕೇಸ್ ಹಾಕಿಲ್ಲ ಯಾಕೆ..?” ಎಂದು ಪ್ರಶ್ನಿಸಿದ್ದಾರೆ.

’ಈ ರಾಜ್ಯದಲ್ಲಿ ಎಲ್ಲರಿಗೂ ನ್ಯಾಯ ಒಂದೇ. ನಾನು ಏನೇ ಮಾತನಾಡಿದರೂ ಬೇರೆ ರೀತಿ ಬಿಂಬಿತವಾಗುತ್ತಿದೆ. ನಾನು ಹೇಳುವುದೊಂದು ಇವರು ತೋರಿಸುವುದೊಂದು. ಹೀಗಾಗಿ ಮುಂದಿನ ಮೂರು ದಿನ ನಾನು ಮೌನ ವಹಿಸುತ್ತೇನೆ. ಮಾಧ್ಯಮಗಳ ಮುಂದೆ ಯಾವುದೇ ಹೇಳಿಕೆ ನೀಡುವುದಿಲ್ಲ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಹರಿಯೋ ನೀರು, ಉರಿಯೋ ಸೂರ್ಯನ ತಡೆಯಲಾಗಲ್ಲ, ಮೇಕೆದಾಟು ಹೋರಾಟ ನಿಲ್ಲಿಸಲಾಗಲ್ಲ: ಡಿ.ಕೆ.ಶಿವಕುಮಾರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....