Homeಕರ್ನಾಟಕನನಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ, ಆದರೂ ಸರ್ಕಾರ ಸಂಚು ನಡೆಸುತ್ತಿದೆ: ಡಿ.ಕೆ.ಶಿವಕುಮಾರ್‌ ಆರೋಪ

ನನಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ, ಆದರೂ ಸರ್ಕಾರ ಸಂಚು ನಡೆಸುತ್ತಿದೆ: ಡಿ.ಕೆ.ಶಿವಕುಮಾರ್‌ ಆರೋಪ

’ಜನರ ಮೇಲೆ ಬಿಜೆಪಿ ಕೋವಿಡ್, ಬಿಜೆಪಿ ಲಾಕ್ ಡೌನ್, ಬಿಜೆಪಿ ಕರ್ಫ್ಯೂ ಹೇರಲಾಗಿದೆ. ಸೋಂಕು ಇಲ್ಲದಿದ್ದರೂ ಇವರು ಜನರಿಗೆ ಸೋಂಕು ಬರಿಸುತ್ತಿದ್ದಾರೆ’

- Advertisement -
- Advertisement -

“ರಾಜ್ಯ ಸರ್ಕಾರ ನನ್ನ ಮೇಲೆ ಹಾಗೂ ಪಕ್ಷದ ವಿರುದ್ಧ ದೊಡ್ಡ ಸಂಚು ರೂಪಿಸುತ್ತಿದೆ. ಏನಾದರೂ ಮಾಡಿ ಪಾದಯಾತ್ರೆ ನಿಲ್ಲಿಸಲು ಯತ್ನಿಸುತ್ತಿದೆ. ಅದೇ ಅವರ ದೊಡ್ಡ ಕಾರ್ಯಕ್ರಮವಾಗಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಗಂಭೀರ ಆರೋಪ ಮಾಡಿದ್ದಾರೆ.

“ನನಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ ಆದರೂ ನನ್ನ ಬಳಿಗೆ ಅಧಿಕಾರಿಯನ್ನು ಕಳುಹಿಸಿ ಸ್ಯಾಂಪಲ್ ಕಲೆಹಾಕಲು ಮುಂದಾದರು. ನಿನ್ನೆ ನನಗೆ ಪರೀಕ್ಷೆ ನಡೆಸಲು ಕಳುಹಿಸಿದ್ದ ಅಧಿಕಾರಿಗೂ ಕೊರೊನಾ ಪಾಸಿಟಿವ್ ಎಂದು ಹೇಳುತ್ತಿದ್ದಾರೆ. ಇದು ಎಷ್ಟು ನಿಜವೋ ಗೊತ್ತಿಲ್ಲ. ನಾನು ಪ್ರಾಥಮಿಕ ಸಂಪರ್ಕಿತ ಎನ್ನುತ್ತಿದ್ದಾರೆ. ಆತನನ್ನು ನನ್ನ ಬಳಿ ಕಳುಹಿಸಿದ್ದು ಯಾರು..? ಯಾಕೆ ಕಳುಹಿಸಿದರು..?” ಎಂದು ಪ್ರಶ್ನಿಸಿದ್ದಾರೆ.

’ನಮ್ಮ ಮನೆಯಲ್ಲೇ ಡಜನ್ ವೈದ್ಯರಿದ್ದಾರೆ. ಅರ್ಧ ಡಜನ್ ವೈದ್ಯಕೀಯ ಕಾಲೇಜು ಮಾಲೀಕರಿದ್ದಾರೆ. ನನಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ ಹೀಗಾಗಿ ಯಾವುದೇ ಪರೀಕ್ಷೆ ಅಗತ್ಯವಿಲ್ಲ ಎಂದು ಅಧಿಕಾರಿಯನ್ನು ವಾಪಸ್ ಕಳುಹಿಸಿದೆ” ಎಂದು ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ನಡ ದಿನಪತ್ರಿಕೆಗಳಿಗೆ ‘ಮೇಕೆದಾಟು’ ಜಾಹೀರಾತು ಕೊಟ್ಟವರ್‍ಯಾರು? ಪತ್ರಿಕೆಗಳು ಹೇಳಿದ್ದೇನು?

ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚಳ ಬಿಜೆಪಿ ತಂತ್ರವಾಗಿದೆ ಎಂದು ಆರೋಪಿಸಿರುವ ಅವರು, “ವಿಮಾನ ನಿಲ್ದಾಣದಲ್ಲಿ ಬಂದವರನ್ನೆಲ್ಲಾ ಹಿಡಿದು ಸೋಂಕು ತಗುಲಿದೆ ಎಂದು ಹೇಳುತ್ತಿದ್ದಾರೆ. ಇದರಲ್ಲಿ ದೊಡ್ಡ ಷಡ್ಯಂತ್ರ ನಡೆಯುತ್ತಿದ್ದು, ಜನರ ಮೇಲೆ ಬಿಜೆಪಿ ಕೋವಿಡ್, ಬಿಜೆಪಿ ಲಾಕ್ ಡೌನ್, ಬಿಜೆಪಿ ಕರ್ಫ್ಯೂ ಹೇರಲಾಗಿದೆ. ಸೋಂಕು ಇಲ್ಲದಿದ್ದರೂ ಜನರಿಗೆ ಇವರು ಸೋಂಕು ಬರಿಸುತ್ತಿದ್ದಾರೆ. ಸೋಂಕು ಸಂಖ್ಯೆ ಹೆಚ್ಚಳ ವಿಚಾರವಾಗಿ ನ್ಯಾಯಾಂಗ ತನಿಖೆ ನಡೆಯಬೇಕು” ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಸಾತನೂರಿನಲ್ಲಿ ಕೊರೊನಾ ನಿಯಮ ಉಲ್ಲಂಘನೆ ಆರೋಪದಲ್ಲಿ ಪ್ರಕರಣ ದಾಖಲಾಗಿರುವುದಕ್ಕೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್‌, “ಕೆಲ ದಿನಗಳ ಹಿಂದೆ ಗೃಹ ಸಚಿವರು ತಮ್ಮ ಊರಿನಲ್ಲಿ ಜಾತ್ರೆ ಮಾಡಿದ್ದಾರೆ. ಅವರ ವಿರುದ್ಧ ಯಾಕೆ ಪ್ರಕರಣ ದಾಖಲಾಗಿಲ್ಲ..? ಬಿಜೆಪಿ ನಾಯಕ ಗುತ್ತೆದಾರ್ ಅವರು ಸಾವಿರಾರು ಜನರನ್ನು ಸೇರಿಸಿಕೊಂಡು ಕಾರ್ಯಕ್ರಮ ಮಾಡಿದ್ದಾರೆ. ಆದರೂ ಪ್ರಕರಣ ಯಾಕೆ ದಾಖಲಾಗಿಲ್ಲ..? ರಾಜಕೀಯ ಕಾರ್ಯದರ್ಶಿಯಾಗಿದ್ದ ರೇಣುಕಾಚಾರ್ಯ ಅವರು ನಿಯಮ ಉಲ್ಲಂಘಿಸಿದ್ದಾರೆ ” ಎಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸಾತನೂರಿನಲ್ಲಿ 30 ಜನರ ಮೇಲೆ ಕೇಸ್ ಹಾಕಿದ್ದಾರಂತೆ. ಇನ್ನಷ್ಟು ಜನರ ವಿವರಗಳನ್ನು ನಾನು ನೀಡುತ್ತೇನೆ. ಸಾವಿರಾರು ಜನ ಇದ್ದರಲ್ಲ ಅವರ ಮೇಲೆ ಯಾಕೆ ಕೇಸ್ ದಾಖಲಿಸಿಲ್ಲ..? ನಿನ್ನೆ 127 ತಾಲೂಕುಗಳಿಂದ ನಮಗೆ ಕರ್ಫ್ಯೂ ನಿಯಮ ಉಲ್ಲಂಘನೆ ಫೋಟೋ, ವಿಡಿಯೋಗಳು ಬಂದಿವೆ. ಎಲ್ಲಿಯೂ ನಿಯಮ ಪಾಲನೆ ಆಗಿಲ್ಲ. ಎಲ್ಲೆಡೆ ಓಡಾಟ ಮಾಡಲಾಗಿದೆ. ಇವರ ಮೇಲೂ ಕೇಸ್ ಹಾಕಿಲ್ಲ ಯಾಕೆ..?” ಎಂದು ಪ್ರಶ್ನಿಸಿದ್ದಾರೆ.

’ಈ ರಾಜ್ಯದಲ್ಲಿ ಎಲ್ಲರಿಗೂ ನ್ಯಾಯ ಒಂದೇ. ನಾನು ಏನೇ ಮಾತನಾಡಿದರೂ ಬೇರೆ ರೀತಿ ಬಿಂಬಿತವಾಗುತ್ತಿದೆ. ನಾನು ಹೇಳುವುದೊಂದು ಇವರು ತೋರಿಸುವುದೊಂದು. ಹೀಗಾಗಿ ಮುಂದಿನ ಮೂರು ದಿನ ನಾನು ಮೌನ ವಹಿಸುತ್ತೇನೆ. ಮಾಧ್ಯಮಗಳ ಮುಂದೆ ಯಾವುದೇ ಹೇಳಿಕೆ ನೀಡುವುದಿಲ್ಲ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಹರಿಯೋ ನೀರು, ಉರಿಯೋ ಸೂರ್ಯನ ತಡೆಯಲಾಗಲ್ಲ, ಮೇಕೆದಾಟು ಹೋರಾಟ ನಿಲ್ಲಿಸಲಾಗಲ್ಲ: ಡಿ.ಕೆ.ಶಿವಕುಮಾರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...