Homeಕರ್ನಾಟಕಮುಂದುವರಿದ ಬಿಜೆಪಿ- ಜೆಡಿಎಸ್ ಕುಟುಂಬ ರಾಜಕಾರಣದ ಫೈಟ್: ಪಕ್ಷಕ್ಕಾಗಿ ದುಡಿದವರಿಗೆ ಅವಕಾಶ ಕೊಡಿ ಎಂದ ಬಿಜೆಪಿ

ಮುಂದುವರಿದ ಬಿಜೆಪಿ- ಜೆಡಿಎಸ್ ಕುಟುಂಬ ರಾಜಕಾರಣದ ಫೈಟ್: ಪಕ್ಷಕ್ಕಾಗಿ ದುಡಿದವರಿಗೆ ಅವಕಾಶ ಕೊಡಿ ಎಂದ ಬಿಜೆಪಿ

- Advertisement -
- Advertisement -

ಕಳೆದೆರಡು ದಿನಗಳಿಂದ ರಾಜ್ಯ ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಕುಟುಂಬ ರಾಜಕಾರಣದ ಫೈಟ್ ನಡೆಯುತ್ತಿದ್ದು, ಇಂದು ಕೂಡ ಮುಂದುವರೆದಿದೆ. ’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲಾ ಪಕ್ಷಗಳ ದಾಖಲೆ ಮುರಿದಿದೆ ಎಂದು ಆರೋಪಿಸಿದ್ದ ಜೆಡಿಎಸ್, ಬಿಜೆಪಿಯ ಪಟ್ಟಿಯನ್ನು ನೀಡಿತ್ತು. ಇದಕ್ಕೆ ಇಂದು ಕರ್ನಾಟಕ ಬಿಜೆಪಿ ಪ್ರತಿಕ್ರಿಯೆ ನೀಡಿದೆ.

“ಕುಮಾರಸ್ವಾಮಿ ಅವರೇ, ಜಾತ್ಯತೀತ ಜನತಾ ದಳ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ಯಾರ ಕುಟುಂಬಕ್ಕೆ ನೀಡಿದ್ದೀರಿ..? ರಾಜ್ಯ ಅಧ್ಯಕ್ಷ ಸ್ಥಾನದಲ್ಲಿ ಸುದೀರ್ಘ ಅವಧಿಗೆ ಇದ್ದಿದ್ದು ಯಾರ ಕುಟುಂಬ..?” ಎಂದು ಪ್ರಶ್ನಿಸಿ ಟ್ವೀಟ್ ಮಾಡಿದೆ.

ನ.14 ರಂದು ಟ್ವೀಟ್ ಮಾಡಿದ್ದ ಜಾತ್ಯಾತೀತ ಜನತಾ ದಳ, “ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ” ಎಂದಿತ್ತು.

ಇದನ್ನೂ ಓದಿ: ’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬೊಟ್ಟು ಮಾಡಿ ಮಾಡಿರುವ ಸರಣಿ ಟ್ವೀಟ್‌ಗಳಲ್ಲಿ, “ಕುಮಾರಸ್ವಾಮಿ ಅವರೇ, ಜೆಡಿಎಸ್‌ಗೆ ಅಧಿಕಾರ ಸಿಗುತ್ತದೆ ಎಂದು ಸ್ಪಷ್ಟವಾದ ಕ್ಷಣದಿಂದ ನಿಮ್ಮ ಶಾಸಕಾಂಗ ಪಕ್ಷದ ನಾಯಕರಾಗಿ ನೀವೇ ಯಾಕೆ ಆಯ್ಕೆಯಾಗುತ್ತೀರಿ..? ಪಕ್ಷಕ್ಕಾಗಿ ದುಡಿಮೆ ಮಾಡಿದವರಿಗೆ ಸ್ವಲ್ಪ ಅವಕಾಶ ಕೊಡಬಹುದಲ್ಲವೇ..!!?” ಎಂದು ಬಿಜೆಪಿ ಟೀಕಿಸಿದೆ.

ಮತ್ತೊಂದು ಟ್ವೀಟ್‌ನಲ್ಲಿ “ಮಾನ್ಯ ಎಚ್.ಡಿ.ಕುಮಾರಸ್ವಾಮಿ ಅವರೇ, ನಿಮ್ಮ ಪಕ್ಷದ ಅಧಿಕೃತ ವೆಬ್‌ಸೈಟ್‌ನಲ್ಲಿ ಪಕ್ಷದ ಹಾಲಿ ರಾಜ್ಯಾಧ್ಯಕ್ಷರ ಭಾವಚಿತ್ರಕ್ಕೇ ಜಾಗವಿಲ್ಲ. ಅವರು ನಿಮ್ಮ ಕುಟುಂಬದವರಲ್ಲ ಎಂಬ ಕಾರಣಕ್ಕಾಗಿ ಈ ದ್ವೇಷವೇ..? ಇದೂ ಕುಟುಂಬ ರಾಜಕಾರಣದ ಭಾಗವೇ..?” ಎಂದು ಪ್ರಶ್ನಿಸಿದೆ.

ಭಾನುವಾರ ಟ್ವೀಟ್ ಮಾಡಿದ್ದ ಜೆಡಿಎಸ್ ಬಿಜೆಪಿ ಪಕ್ಷದಲ್ಲಿರುವ ಒಂದೇ ಕುಟುಂಬದ ಸದಸ್ಯರು ರಾಜಕಾರಣದಲ್ಲಿ ತೊಡಗಿಸಿಕೊಂಡಿರುವ ಪಟ್ಟಿಯನ್ನು ನೀಡಿ ಬಿಜೆಪಿಯನ್ನು ಟೀಕಿಸಿತ್ತು.


ಇದನ್ನೂ ಓದಿ: RSS ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...

ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ; ವೀಡಿಯೊ ವೈರಲ್ ಬಳಿಕ ಆರೋಪಿ ಬಂಧನ

ಏಳು ತಿಂಗಳ ಹಿಂದಿನ ಘಟನೆಯ ಎರಡು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ 20 ವರ್ಷದ ದಲಿತ ವ್ಯಕ್ತಿಯ ಮೇಲೆ ಹಲ್ಲೆ ಮತ್ತು ಅವಮಾನ ಮಾಡಿದ ಆರೋಪದ...

ಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ

ಸುಮಾರು ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಸಿದ್ದತೆ ನಡೆಸಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಮಂಗಳವಾರ (ಜ.3) ಆಯ್ಕೆ...

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...