Homeಕರ್ನಾಟಕಮುಂದುವರಿದ ಬಿಜೆಪಿ- ಜೆಡಿಎಸ್ ಕುಟುಂಬ ರಾಜಕಾರಣದ ಫೈಟ್: ಪಕ್ಷಕ್ಕಾಗಿ ದುಡಿದವರಿಗೆ ಅವಕಾಶ ಕೊಡಿ ಎಂದ ಬಿಜೆಪಿ

ಮುಂದುವರಿದ ಬಿಜೆಪಿ- ಜೆಡಿಎಸ್ ಕುಟುಂಬ ರಾಜಕಾರಣದ ಫೈಟ್: ಪಕ್ಷಕ್ಕಾಗಿ ದುಡಿದವರಿಗೆ ಅವಕಾಶ ಕೊಡಿ ಎಂದ ಬಿಜೆಪಿ

- Advertisement -
- Advertisement -

ಕಳೆದೆರಡು ದಿನಗಳಿಂದ ರಾಜ್ಯ ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಕುಟುಂಬ ರಾಜಕಾರಣದ ಫೈಟ್ ನಡೆಯುತ್ತಿದ್ದು, ಇಂದು ಕೂಡ ಮುಂದುವರೆದಿದೆ. ’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲಾ ಪಕ್ಷಗಳ ದಾಖಲೆ ಮುರಿದಿದೆ ಎಂದು ಆರೋಪಿಸಿದ್ದ ಜೆಡಿಎಸ್, ಬಿಜೆಪಿಯ ಪಟ್ಟಿಯನ್ನು ನೀಡಿತ್ತು. ಇದಕ್ಕೆ ಇಂದು ಕರ್ನಾಟಕ ಬಿಜೆಪಿ ಪ್ರತಿಕ್ರಿಯೆ ನೀಡಿದೆ.

“ಕುಮಾರಸ್ವಾಮಿ ಅವರೇ, ಜಾತ್ಯತೀತ ಜನತಾ ದಳ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ಯಾರ ಕುಟುಂಬಕ್ಕೆ ನೀಡಿದ್ದೀರಿ..? ರಾಜ್ಯ ಅಧ್ಯಕ್ಷ ಸ್ಥಾನದಲ್ಲಿ ಸುದೀರ್ಘ ಅವಧಿಗೆ ಇದ್ದಿದ್ದು ಯಾರ ಕುಟುಂಬ..?” ಎಂದು ಪ್ರಶ್ನಿಸಿ ಟ್ವೀಟ್ ಮಾಡಿದೆ.

ನ.14 ರಂದು ಟ್ವೀಟ್ ಮಾಡಿದ್ದ ಜಾತ್ಯಾತೀತ ಜನತಾ ದಳ, “ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ” ಎಂದಿತ್ತು.

ಇದನ್ನೂ ಓದಿ: ’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಬೊಟ್ಟು ಮಾಡಿ ಮಾಡಿರುವ ಸರಣಿ ಟ್ವೀಟ್‌ಗಳಲ್ಲಿ, “ಕುಮಾರಸ್ವಾಮಿ ಅವರೇ, ಜೆಡಿಎಸ್‌ಗೆ ಅಧಿಕಾರ ಸಿಗುತ್ತದೆ ಎಂದು ಸ್ಪಷ್ಟವಾದ ಕ್ಷಣದಿಂದ ನಿಮ್ಮ ಶಾಸಕಾಂಗ ಪಕ್ಷದ ನಾಯಕರಾಗಿ ನೀವೇ ಯಾಕೆ ಆಯ್ಕೆಯಾಗುತ್ತೀರಿ..? ಪಕ್ಷಕ್ಕಾಗಿ ದುಡಿಮೆ ಮಾಡಿದವರಿಗೆ ಸ್ವಲ್ಪ ಅವಕಾಶ ಕೊಡಬಹುದಲ್ಲವೇ..!!?” ಎಂದು ಬಿಜೆಪಿ ಟೀಕಿಸಿದೆ.

ಮತ್ತೊಂದು ಟ್ವೀಟ್‌ನಲ್ಲಿ “ಮಾನ್ಯ ಎಚ್.ಡಿ.ಕುಮಾರಸ್ವಾಮಿ ಅವರೇ, ನಿಮ್ಮ ಪಕ್ಷದ ಅಧಿಕೃತ ವೆಬ್‌ಸೈಟ್‌ನಲ್ಲಿ ಪಕ್ಷದ ಹಾಲಿ ರಾಜ್ಯಾಧ್ಯಕ್ಷರ ಭಾವಚಿತ್ರಕ್ಕೇ ಜಾಗವಿಲ್ಲ. ಅವರು ನಿಮ್ಮ ಕುಟುಂಬದವರಲ್ಲ ಎಂಬ ಕಾರಣಕ್ಕಾಗಿ ಈ ದ್ವೇಷವೇ..? ಇದೂ ಕುಟುಂಬ ರಾಜಕಾರಣದ ಭಾಗವೇ..?” ಎಂದು ಪ್ರಶ್ನಿಸಿದೆ.

ಭಾನುವಾರ ಟ್ವೀಟ್ ಮಾಡಿದ್ದ ಜೆಡಿಎಸ್ ಬಿಜೆಪಿ ಪಕ್ಷದಲ್ಲಿರುವ ಒಂದೇ ಕುಟುಂಬದ ಸದಸ್ಯರು ರಾಜಕಾರಣದಲ್ಲಿ ತೊಡಗಿಸಿಕೊಂಡಿರುವ ಪಟ್ಟಿಯನ್ನು ನೀಡಿ ಬಿಜೆಪಿಯನ್ನು ಟೀಕಿಸಿತ್ತು.


ಇದನ್ನೂ ಓದಿ: RSS ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...