Homeಕರ್ನಾಟಕ’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

- Advertisement -
- Advertisement -

’ಕುಟುಂಬ ರಾಜಕಾರಣ ಜೆಡಿಎಸ್ ಸಿದ್ಧಾಂತ’ ಎಂಬ ರಾಜ್ಯ ಬಿಜೆಪಿ ವ್ಯಂಗ್ಯಕ್ಕೆ ತಿರುಗೇಟು ನೀಡಿರುವ ಜೆಡಿಎಸ್, “ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ” ಎಂದಿದ್ದು, ಪಟ್ಟಿಯನ್ನು ಟ್ವೀಟ್ ಮಾಡಿದೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಜಾತ್ಯಾತೀತ ಜನತಾದಳದ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಬಿಜೆಪಿಯ ಕುಟುಂಬ ರಾಜಕಾರಣದ ಪಟ್ಟಿ ನೀಡಿದೆ. “ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ! ಬೀದಿಯಲ್ಲಿ ಇನ್ನೊಂದು ಮುಖ! ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ʼಆಪರೇಷನ್ ಕಮಲʼದ ಮೂಲಕ ರಚನೆ ಮಾಡಿದ ಸರಕಾರಗಳೇ ಸಾಕ್ಷಿ” ಎಂದಿದೆ.

“ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ” ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: RSS ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

  1. ಯಡಿಯೂರಪ್ಪ ಕುಟುಂಬ: ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ. ಹಿರಿಮಗ ಲೋಕಸಭೆ ಸದಸ್ಯ, ಕಿರಿಮಗ ಪಕ್ಷದ ಉಪಾಧ್ಯಕ್ಷ.

2. ಶೆಟ್ಟರ್ ಕುಟುಂಬ: ಜಗದೀಶ್ ಶೆಟ್ಟರ್ ಶಾಸಕರು, ಮಾಜಿ ಸಚಿವ, ಮಾಜಿ ಸಿಎಂ; ಅವರ ತಮ್ಮ ಹಾಲಿ ವಿಧಾನ ಪರಿಷತ್ ಸದಸ್ಯ.

3. ಅಣ್ಣಾ ಸಾಹೇಬ್ ಕುಟುಂಬ: ಪತಿ ಲೋಕಸಭೆ ಸದಸ್ಯ, ಪತ್ನಿ ರಾಜ್ಯದಲ್ಲಿ ಕ್ಯಾಬಿನೆಟ್ ಸಚಿವೆ.

4. ಬಳ್ಳಾರಿ ರೆಡ್ಡಿ ಕುಟುಂಬ: ಕರುಣಾಕರ ರೆಡ್ಡಿ ಶಾಸಕ, ಅವರ ಸಹೋದರ ಸೋಮಶೇಖರ ರೆಡ್ಡಿ ಕೂಡ ಶಾಸಕ. ಇನ್ನೊಬ್ಬ ಸಹೋದರ ಬಿಜೆಪಿ ನಾಯಕರೇ. ಅವರ ಗೆಳೆಯ ಶ್ರೀರಾಮುಲು ಈಗ ಮಂತ್ರಿ. ಮಾಜಿ ಎಂಪಿ ಶಾಂತಾ ಅವರು ಶ್ರೀರಾಮುಲು ತಂಗಿ. ಸಣ್ಣ ಫಕೀರಪ್ಪ ಕೂಡ ಅವರ ಪೈಕಿಯೇ.

5. ಜಾರಕಿಹೊಳಿ ಕುಟುಂಬ: ರಮೇಶ್ ಜಾರಕಿಹೊಳಿ ಮಾಜಿ ಮಂತ್ರಿ , ಶಾಸಕರು. ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಹಾಲಿ ಶಾಸಕರು, ಕೆಎಂಎಫ್ ಸದಸ್ಯರು.

6. ಲಿಂಬಾವಳಿ ಕುಟುಂಬ: ಅರವಿಂದ ಲಿಂಬಾವಳಿ ಶಾಸಕರು, ಅವರ ಭಾವಮೈದ ರಘು ಕೂಡ ಶಾಸಕರಲ್ಲವೇ..?

7. ಉದಾಸಿ ಕುಟುಂಬ: ದಿವಂಗತ ಉದಾಸಿ ಅವರು ಮಂತ್ರಿಗಳಾಗಿದ್ದರು. ಅವರ ಮಗ ಈಗ ಸಂಸತ್ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಎಚ್.ಡಿ.ಕುಮಾರಸ್ವಾಮಿ

’ಪಟ್ಟಿ ಇನ್ನೂ ಇದೆ. ರಾಜ್ಯವಾರು ಬರೆಯುತ್ತಾ ಹೋದರೆ ಪುಟಗಳೇ ಸಾಲುವುದಿಲ್ಲ. ಕುಟುಂಬ ರಾಜಕಾರಣದ  ರೆಂಬೆಕೊಂಬೆಗಳು ಸಮೃದ್ಧವಾಗಿರುವುದು ಎಲ್ಲಿ..? ಯಾವ ಪಕ್ಷದಲ್ಲಿ..? ಕುಟುಂಬ ರಾಜಕಾರಣದ ವಿರಾಟ ದರ್ಶನ ಆಗುತ್ತಿರುತ್ತಿರುವುದು ಎಲ್ಲಿ..?’ ಎಂದು ಪ್ರಶ್ನಿಸಿದೆ.

“ರಾಷ್ಟ್ರ ನಿರ್ಮಾಣ ಬಿಜೆಪಿಯ ಗುರಿಯಲ್ಲ. ಆಪರೇಷನ್ ಕಮಲ ಅದರ ಗರಿ. ಆಪರೇಷನ್ ಕಮಲವನ್ನು ರಾಷ್ಟ್ರೀಕರಣ ಮಾಡಿ ರಾಷ್ಟ್ರಪ್ರೇಮ ಮೆರೆದ ಕುಖ್ಯಾತಿ ಅದರದ್ದು. ಒಡಕು ರಾಜಕಾರಣ ಬಿಜೆಪಿ ನಿತ್ಯ ಕಾಯಕ. ಆಪರೇಷನ್ ಕಮಲ ಅದರ ಅಧಿಕೃತ ರಾಜಧರ್ಮ. ಕುಟುಂಬ ರಾಜಕಾರಣ ಅದರ ಅಧಿಕಾರದ ಸೋಪಾನ. ಸವಕಲು ಹೇಳಿಕೆಗಳಿಂದ ಬೇಳೆ ಬೇಯಿಸಿಕೊಳ್ಳುವುದು ಬಿಟ್ಟು ಜನರ ಕೆಲಸ ಮಾಡಿ. ಬೇರೆಯವರ ತಟ್ಟೆಯತ್ತ ನೋಡುವ ಚಾಳಿ ಬಿಟ್ಟರೆ ಉತ್ತಮ” ಎಂದು ಉಪದೇಶ ನೀಡಿದೆ.

ಶನಿವಾರ ಟ್ವೀಟ್ ಮಾಡಿ ಕುಟುಂಬ ರಾಜಕಾರಣ ಜೆಡಿಎಸ್ ಸಿದ್ಧಾಂತ ಎಂದಿದ್ದ ರಾಜ್ಯ ಬಿಜೆಪಿ, “ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ರೇವಣ್ಣ, ಪ್ರಜ್ವಲ್ ರೇವಣ್ಣ, ಭವಾನಿ, ರೇವಣ್ಣ, ಸೂರಜ್ ರೇವಣ್ಣ….ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಎಷ್ಟೊಂದು ಸಮೃದ್ಧವಾಗಿದೆ” ಎಂದಿತ್ತು.


ಇದನ್ನೂ ಓದಿ: ಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...