Homeಕರ್ನಾಟಕ’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

- Advertisement -
- Advertisement -

’ಕುಟುಂಬ ರಾಜಕಾರಣ ಜೆಡಿಎಸ್ ಸಿದ್ಧಾಂತ’ ಎಂಬ ರಾಜ್ಯ ಬಿಜೆಪಿ ವ್ಯಂಗ್ಯಕ್ಕೆ ತಿರುಗೇಟು ನೀಡಿರುವ ಜೆಡಿಎಸ್, “ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ” ಎಂದಿದ್ದು, ಪಟ್ಟಿಯನ್ನು ಟ್ವೀಟ್ ಮಾಡಿದೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಜಾತ್ಯಾತೀತ ಜನತಾದಳದ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಬಿಜೆಪಿಯ ಕುಟುಂಬ ರಾಜಕಾರಣದ ಪಟ್ಟಿ ನೀಡಿದೆ. “ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ! ಬೀದಿಯಲ್ಲಿ ಇನ್ನೊಂದು ಮುಖ! ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ʼಆಪರೇಷನ್ ಕಮಲʼದ ಮೂಲಕ ರಚನೆ ಮಾಡಿದ ಸರಕಾರಗಳೇ ಸಾಕ್ಷಿ” ಎಂದಿದೆ.

“ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ” ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: RSS ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

  1. ಯಡಿಯೂರಪ್ಪ ಕುಟುಂಬ: ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ. ಹಿರಿಮಗ ಲೋಕಸಭೆ ಸದಸ್ಯ, ಕಿರಿಮಗ ಪಕ್ಷದ ಉಪಾಧ್ಯಕ್ಷ.

2. ಶೆಟ್ಟರ್ ಕುಟುಂಬ: ಜಗದೀಶ್ ಶೆಟ್ಟರ್ ಶಾಸಕರು, ಮಾಜಿ ಸಚಿವ, ಮಾಜಿ ಸಿಎಂ; ಅವರ ತಮ್ಮ ಹಾಲಿ ವಿಧಾನ ಪರಿಷತ್ ಸದಸ್ಯ.

3. ಅಣ್ಣಾ ಸಾಹೇಬ್ ಕುಟುಂಬ: ಪತಿ ಲೋಕಸಭೆ ಸದಸ್ಯ, ಪತ್ನಿ ರಾಜ್ಯದಲ್ಲಿ ಕ್ಯಾಬಿನೆಟ್ ಸಚಿವೆ.

4. ಬಳ್ಳಾರಿ ರೆಡ್ಡಿ ಕುಟುಂಬ: ಕರುಣಾಕರ ರೆಡ್ಡಿ ಶಾಸಕ, ಅವರ ಸಹೋದರ ಸೋಮಶೇಖರ ರೆಡ್ಡಿ ಕೂಡ ಶಾಸಕ. ಇನ್ನೊಬ್ಬ ಸಹೋದರ ಬಿಜೆಪಿ ನಾಯಕರೇ. ಅವರ ಗೆಳೆಯ ಶ್ರೀರಾಮುಲು ಈಗ ಮಂತ್ರಿ. ಮಾಜಿ ಎಂಪಿ ಶಾಂತಾ ಅವರು ಶ್ರೀರಾಮುಲು ತಂಗಿ. ಸಣ್ಣ ಫಕೀರಪ್ಪ ಕೂಡ ಅವರ ಪೈಕಿಯೇ.

5. ಜಾರಕಿಹೊಳಿ ಕುಟುಂಬ: ರಮೇಶ್ ಜಾರಕಿಹೊಳಿ ಮಾಜಿ ಮಂತ್ರಿ , ಶಾಸಕರು. ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಹಾಲಿ ಶಾಸಕರು, ಕೆಎಂಎಫ್ ಸದಸ್ಯರು.

6. ಲಿಂಬಾವಳಿ ಕುಟುಂಬ: ಅರವಿಂದ ಲಿಂಬಾವಳಿ ಶಾಸಕರು, ಅವರ ಭಾವಮೈದ ರಘು ಕೂಡ ಶಾಸಕರಲ್ಲವೇ..?

7. ಉದಾಸಿ ಕುಟುಂಬ: ದಿವಂಗತ ಉದಾಸಿ ಅವರು ಮಂತ್ರಿಗಳಾಗಿದ್ದರು. ಅವರ ಮಗ ಈಗ ಸಂಸತ್ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಎಚ್.ಡಿ.ಕುಮಾರಸ್ವಾಮಿ

’ಪಟ್ಟಿ ಇನ್ನೂ ಇದೆ. ರಾಜ್ಯವಾರು ಬರೆಯುತ್ತಾ ಹೋದರೆ ಪುಟಗಳೇ ಸಾಲುವುದಿಲ್ಲ. ಕುಟುಂಬ ರಾಜಕಾರಣದ  ರೆಂಬೆಕೊಂಬೆಗಳು ಸಮೃದ್ಧವಾಗಿರುವುದು ಎಲ್ಲಿ..? ಯಾವ ಪಕ್ಷದಲ್ಲಿ..? ಕುಟುಂಬ ರಾಜಕಾರಣದ ವಿರಾಟ ದರ್ಶನ ಆಗುತ್ತಿರುತ್ತಿರುವುದು ಎಲ್ಲಿ..?’ ಎಂದು ಪ್ರಶ್ನಿಸಿದೆ.

“ರಾಷ್ಟ್ರ ನಿರ್ಮಾಣ ಬಿಜೆಪಿಯ ಗುರಿಯಲ್ಲ. ಆಪರೇಷನ್ ಕಮಲ ಅದರ ಗರಿ. ಆಪರೇಷನ್ ಕಮಲವನ್ನು ರಾಷ್ಟ್ರೀಕರಣ ಮಾಡಿ ರಾಷ್ಟ್ರಪ್ರೇಮ ಮೆರೆದ ಕುಖ್ಯಾತಿ ಅದರದ್ದು. ಒಡಕು ರಾಜಕಾರಣ ಬಿಜೆಪಿ ನಿತ್ಯ ಕಾಯಕ. ಆಪರೇಷನ್ ಕಮಲ ಅದರ ಅಧಿಕೃತ ರಾಜಧರ್ಮ. ಕುಟುಂಬ ರಾಜಕಾರಣ ಅದರ ಅಧಿಕಾರದ ಸೋಪಾನ. ಸವಕಲು ಹೇಳಿಕೆಗಳಿಂದ ಬೇಳೆ ಬೇಯಿಸಿಕೊಳ್ಳುವುದು ಬಿಟ್ಟು ಜನರ ಕೆಲಸ ಮಾಡಿ. ಬೇರೆಯವರ ತಟ್ಟೆಯತ್ತ ನೋಡುವ ಚಾಳಿ ಬಿಟ್ಟರೆ ಉತ್ತಮ” ಎಂದು ಉಪದೇಶ ನೀಡಿದೆ.

ಶನಿವಾರ ಟ್ವೀಟ್ ಮಾಡಿ ಕುಟುಂಬ ರಾಜಕಾರಣ ಜೆಡಿಎಸ್ ಸಿದ್ಧಾಂತ ಎಂದಿದ್ದ ರಾಜ್ಯ ಬಿಜೆಪಿ, “ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ರೇವಣ್ಣ, ಪ್ರಜ್ವಲ್ ರೇವಣ್ಣ, ಭವಾನಿ, ರೇವಣ್ಣ, ಸೂರಜ್ ರೇವಣ್ಣ….ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಎಷ್ಟೊಂದು ಸಮೃದ್ಧವಾಗಿದೆ” ಎಂದಿತ್ತು.


ಇದನ್ನೂ ಓದಿ: ಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...