Homeಕರ್ನಾಟಕ’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

- Advertisement -
- Advertisement -

’ಕುಟುಂಬ ರಾಜಕಾರಣ ಜೆಡಿಎಸ್ ಸಿದ್ಧಾಂತ’ ಎಂಬ ರಾಜ್ಯ ಬಿಜೆಪಿ ವ್ಯಂಗ್ಯಕ್ಕೆ ತಿರುಗೇಟು ನೀಡಿರುವ ಜೆಡಿಎಸ್, “ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ” ಎಂದಿದ್ದು, ಪಟ್ಟಿಯನ್ನು ಟ್ವೀಟ್ ಮಾಡಿದೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಜಾತ್ಯಾತೀತ ಜನತಾದಳದ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಬಿಜೆಪಿಯ ಕುಟುಂಬ ರಾಜಕಾರಣದ ಪಟ್ಟಿ ನೀಡಿದೆ. “ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ! ಬೀದಿಯಲ್ಲಿ ಇನ್ನೊಂದು ಮುಖ! ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ʼಆಪರೇಷನ್ ಕಮಲʼದ ಮೂಲಕ ರಚನೆ ಮಾಡಿದ ಸರಕಾರಗಳೇ ಸಾಕ್ಷಿ” ಎಂದಿದೆ.

“ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ” ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: RSS ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

  1. ಯಡಿಯೂರಪ್ಪ ಕುಟುಂಬ: ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ. ಹಿರಿಮಗ ಲೋಕಸಭೆ ಸದಸ್ಯ, ಕಿರಿಮಗ ಪಕ್ಷದ ಉಪಾಧ್ಯಕ್ಷ.

2. ಶೆಟ್ಟರ್ ಕುಟುಂಬ: ಜಗದೀಶ್ ಶೆಟ್ಟರ್ ಶಾಸಕರು, ಮಾಜಿ ಸಚಿವ, ಮಾಜಿ ಸಿಎಂ; ಅವರ ತಮ್ಮ ಹಾಲಿ ವಿಧಾನ ಪರಿಷತ್ ಸದಸ್ಯ.

3. ಅಣ್ಣಾ ಸಾಹೇಬ್ ಕುಟುಂಬ: ಪತಿ ಲೋಕಸಭೆ ಸದಸ್ಯ, ಪತ್ನಿ ರಾಜ್ಯದಲ್ಲಿ ಕ್ಯಾಬಿನೆಟ್ ಸಚಿವೆ.

4. ಬಳ್ಳಾರಿ ರೆಡ್ಡಿ ಕುಟುಂಬ: ಕರುಣಾಕರ ರೆಡ್ಡಿ ಶಾಸಕ, ಅವರ ಸಹೋದರ ಸೋಮಶೇಖರ ರೆಡ್ಡಿ ಕೂಡ ಶಾಸಕ. ಇನ್ನೊಬ್ಬ ಸಹೋದರ ಬಿಜೆಪಿ ನಾಯಕರೇ. ಅವರ ಗೆಳೆಯ ಶ್ರೀರಾಮುಲು ಈಗ ಮಂತ್ರಿ. ಮಾಜಿ ಎಂಪಿ ಶಾಂತಾ ಅವರು ಶ್ರೀರಾಮುಲು ತಂಗಿ. ಸಣ್ಣ ಫಕೀರಪ್ಪ ಕೂಡ ಅವರ ಪೈಕಿಯೇ.

5. ಜಾರಕಿಹೊಳಿ ಕುಟುಂಬ: ರಮೇಶ್ ಜಾರಕಿಹೊಳಿ ಮಾಜಿ ಮಂತ್ರಿ , ಶಾಸಕರು. ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಹಾಲಿ ಶಾಸಕರು, ಕೆಎಂಎಫ್ ಸದಸ್ಯರು.

6. ಲಿಂಬಾವಳಿ ಕುಟುಂಬ: ಅರವಿಂದ ಲಿಂಬಾವಳಿ ಶಾಸಕರು, ಅವರ ಭಾವಮೈದ ರಘು ಕೂಡ ಶಾಸಕರಲ್ಲವೇ..?

7. ಉದಾಸಿ ಕುಟುಂಬ: ದಿವಂಗತ ಉದಾಸಿ ಅವರು ಮಂತ್ರಿಗಳಾಗಿದ್ದರು. ಅವರ ಮಗ ಈಗ ಸಂಸತ್ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಎಚ್.ಡಿ.ಕುಮಾರಸ್ವಾಮಿ

’ಪಟ್ಟಿ ಇನ್ನೂ ಇದೆ. ರಾಜ್ಯವಾರು ಬರೆಯುತ್ತಾ ಹೋದರೆ ಪುಟಗಳೇ ಸಾಲುವುದಿಲ್ಲ. ಕುಟುಂಬ ರಾಜಕಾರಣದ  ರೆಂಬೆಕೊಂಬೆಗಳು ಸಮೃದ್ಧವಾಗಿರುವುದು ಎಲ್ಲಿ..? ಯಾವ ಪಕ್ಷದಲ್ಲಿ..? ಕುಟುಂಬ ರಾಜಕಾರಣದ ವಿರಾಟ ದರ್ಶನ ಆಗುತ್ತಿರುತ್ತಿರುವುದು ಎಲ್ಲಿ..?’ ಎಂದು ಪ್ರಶ್ನಿಸಿದೆ.

“ರಾಷ್ಟ್ರ ನಿರ್ಮಾಣ ಬಿಜೆಪಿಯ ಗುರಿಯಲ್ಲ. ಆಪರೇಷನ್ ಕಮಲ ಅದರ ಗರಿ. ಆಪರೇಷನ್ ಕಮಲವನ್ನು ರಾಷ್ಟ್ರೀಕರಣ ಮಾಡಿ ರಾಷ್ಟ್ರಪ್ರೇಮ ಮೆರೆದ ಕುಖ್ಯಾತಿ ಅದರದ್ದು. ಒಡಕು ರಾಜಕಾರಣ ಬಿಜೆಪಿ ನಿತ್ಯ ಕಾಯಕ. ಆಪರೇಷನ್ ಕಮಲ ಅದರ ಅಧಿಕೃತ ರಾಜಧರ್ಮ. ಕುಟುಂಬ ರಾಜಕಾರಣ ಅದರ ಅಧಿಕಾರದ ಸೋಪಾನ. ಸವಕಲು ಹೇಳಿಕೆಗಳಿಂದ ಬೇಳೆ ಬೇಯಿಸಿಕೊಳ್ಳುವುದು ಬಿಟ್ಟು ಜನರ ಕೆಲಸ ಮಾಡಿ. ಬೇರೆಯವರ ತಟ್ಟೆಯತ್ತ ನೋಡುವ ಚಾಳಿ ಬಿಟ್ಟರೆ ಉತ್ತಮ” ಎಂದು ಉಪದೇಶ ನೀಡಿದೆ.

ಶನಿವಾರ ಟ್ವೀಟ್ ಮಾಡಿ ಕುಟುಂಬ ರಾಜಕಾರಣ ಜೆಡಿಎಸ್ ಸಿದ್ಧಾಂತ ಎಂದಿದ್ದ ರಾಜ್ಯ ಬಿಜೆಪಿ, “ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ರೇವಣ್ಣ, ಪ್ರಜ್ವಲ್ ರೇವಣ್ಣ, ಭವಾನಿ, ರೇವಣ್ಣ, ಸೂರಜ್ ರೇವಣ್ಣ….ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಎಷ್ಟೊಂದು ಸಮೃದ್ಧವಾಗಿದೆ” ಎಂದಿತ್ತು.


ಇದನ್ನೂ ಓದಿ: ಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....