Homeಕರ್ನಾಟಕ’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

- Advertisement -
- Advertisement -

’ಕುಟುಂಬ ರಾಜಕಾರಣ ಜೆಡಿಎಸ್ ಸಿದ್ಧಾಂತ’ ಎಂಬ ರಾಜ್ಯ ಬಿಜೆಪಿ ವ್ಯಂಗ್ಯಕ್ಕೆ ತಿರುಗೇಟು ನೀಡಿರುವ ಜೆಡಿಎಸ್, “ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ” ಎಂದಿದ್ದು, ಪಟ್ಟಿಯನ್ನು ಟ್ವೀಟ್ ಮಾಡಿದೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಜಾತ್ಯಾತೀತ ಜನತಾದಳದ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಬಿಜೆಪಿಯ ಕುಟುಂಬ ರಾಜಕಾರಣದ ಪಟ್ಟಿ ನೀಡಿದೆ. “ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ! ಬೀದಿಯಲ್ಲಿ ಇನ್ನೊಂದು ಮುಖ! ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ʼಆಪರೇಷನ್ ಕಮಲʼದ ಮೂಲಕ ರಚನೆ ಮಾಡಿದ ಸರಕಾರಗಳೇ ಸಾಕ್ಷಿ” ಎಂದಿದೆ.

“ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ” ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: RSS ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

  1. ಯಡಿಯೂರಪ್ಪ ಕುಟುಂಬ: ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ. ಹಿರಿಮಗ ಲೋಕಸಭೆ ಸದಸ್ಯ, ಕಿರಿಮಗ ಪಕ್ಷದ ಉಪಾಧ್ಯಕ್ಷ.

2. ಶೆಟ್ಟರ್ ಕುಟುಂಬ: ಜಗದೀಶ್ ಶೆಟ್ಟರ್ ಶಾಸಕರು, ಮಾಜಿ ಸಚಿವ, ಮಾಜಿ ಸಿಎಂ; ಅವರ ತಮ್ಮ ಹಾಲಿ ವಿಧಾನ ಪರಿಷತ್ ಸದಸ್ಯ.

3. ಅಣ್ಣಾ ಸಾಹೇಬ್ ಕುಟುಂಬ: ಪತಿ ಲೋಕಸಭೆ ಸದಸ್ಯ, ಪತ್ನಿ ರಾಜ್ಯದಲ್ಲಿ ಕ್ಯಾಬಿನೆಟ್ ಸಚಿವೆ.

4. ಬಳ್ಳಾರಿ ರೆಡ್ಡಿ ಕುಟುಂಬ: ಕರುಣಾಕರ ರೆಡ್ಡಿ ಶಾಸಕ, ಅವರ ಸಹೋದರ ಸೋಮಶೇಖರ ರೆಡ್ಡಿ ಕೂಡ ಶಾಸಕ. ಇನ್ನೊಬ್ಬ ಸಹೋದರ ಬಿಜೆಪಿ ನಾಯಕರೇ. ಅವರ ಗೆಳೆಯ ಶ್ರೀರಾಮುಲು ಈಗ ಮಂತ್ರಿ. ಮಾಜಿ ಎಂಪಿ ಶಾಂತಾ ಅವರು ಶ್ರೀರಾಮುಲು ತಂಗಿ. ಸಣ್ಣ ಫಕೀರಪ್ಪ ಕೂಡ ಅವರ ಪೈಕಿಯೇ.

5. ಜಾರಕಿಹೊಳಿ ಕುಟುಂಬ: ರಮೇಶ್ ಜಾರಕಿಹೊಳಿ ಮಾಜಿ ಮಂತ್ರಿ , ಶಾಸಕರು. ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಹಾಲಿ ಶಾಸಕರು, ಕೆಎಂಎಫ್ ಸದಸ್ಯರು.

6. ಲಿಂಬಾವಳಿ ಕುಟುಂಬ: ಅರವಿಂದ ಲಿಂಬಾವಳಿ ಶಾಸಕರು, ಅವರ ಭಾವಮೈದ ರಘು ಕೂಡ ಶಾಸಕರಲ್ಲವೇ..?

7. ಉದಾಸಿ ಕುಟುಂಬ: ದಿವಂಗತ ಉದಾಸಿ ಅವರು ಮಂತ್ರಿಗಳಾಗಿದ್ದರು. ಅವರ ಮಗ ಈಗ ಸಂಸತ್ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಎಚ್.ಡಿ.ಕುಮಾರಸ್ವಾಮಿ

’ಪಟ್ಟಿ ಇನ್ನೂ ಇದೆ. ರಾಜ್ಯವಾರು ಬರೆಯುತ್ತಾ ಹೋದರೆ ಪುಟಗಳೇ ಸಾಲುವುದಿಲ್ಲ. ಕುಟುಂಬ ರಾಜಕಾರಣದ  ರೆಂಬೆಕೊಂಬೆಗಳು ಸಮೃದ್ಧವಾಗಿರುವುದು ಎಲ್ಲಿ..? ಯಾವ ಪಕ್ಷದಲ್ಲಿ..? ಕುಟುಂಬ ರಾಜಕಾರಣದ ವಿರಾಟ ದರ್ಶನ ಆಗುತ್ತಿರುತ್ತಿರುವುದು ಎಲ್ಲಿ..?’ ಎಂದು ಪ್ರಶ್ನಿಸಿದೆ.

“ರಾಷ್ಟ್ರ ನಿರ್ಮಾಣ ಬಿಜೆಪಿಯ ಗುರಿಯಲ್ಲ. ಆಪರೇಷನ್ ಕಮಲ ಅದರ ಗರಿ. ಆಪರೇಷನ್ ಕಮಲವನ್ನು ರಾಷ್ಟ್ರೀಕರಣ ಮಾಡಿ ರಾಷ್ಟ್ರಪ್ರೇಮ ಮೆರೆದ ಕುಖ್ಯಾತಿ ಅದರದ್ದು. ಒಡಕು ರಾಜಕಾರಣ ಬಿಜೆಪಿ ನಿತ್ಯ ಕಾಯಕ. ಆಪರೇಷನ್ ಕಮಲ ಅದರ ಅಧಿಕೃತ ರಾಜಧರ್ಮ. ಕುಟುಂಬ ರಾಜಕಾರಣ ಅದರ ಅಧಿಕಾರದ ಸೋಪಾನ. ಸವಕಲು ಹೇಳಿಕೆಗಳಿಂದ ಬೇಳೆ ಬೇಯಿಸಿಕೊಳ್ಳುವುದು ಬಿಟ್ಟು ಜನರ ಕೆಲಸ ಮಾಡಿ. ಬೇರೆಯವರ ತಟ್ಟೆಯತ್ತ ನೋಡುವ ಚಾಳಿ ಬಿಟ್ಟರೆ ಉತ್ತಮ” ಎಂದು ಉಪದೇಶ ನೀಡಿದೆ.

ಶನಿವಾರ ಟ್ವೀಟ್ ಮಾಡಿ ಕುಟುಂಬ ರಾಜಕಾರಣ ಜೆಡಿಎಸ್ ಸಿದ್ಧಾಂತ ಎಂದಿದ್ದ ರಾಜ್ಯ ಬಿಜೆಪಿ, “ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ರೇವಣ್ಣ, ಪ್ರಜ್ವಲ್ ರೇವಣ್ಣ, ಭವಾನಿ, ರೇವಣ್ಣ, ಸೂರಜ್ ರೇವಣ್ಣ….ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಎಷ್ಟೊಂದು ಸಮೃದ್ಧವಾಗಿದೆ” ಎಂದಿತ್ತು.


ಇದನ್ನೂ ಓದಿ: ಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...