Homeಕರ್ನಾಟಕ’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

- Advertisement -
- Advertisement -

’ಕುಟುಂಬ ರಾಜಕಾರಣ ಜೆಡಿಎಸ್ ಸಿದ್ಧಾಂತ’ ಎಂಬ ರಾಜ್ಯ ಬಿಜೆಪಿ ವ್ಯಂಗ್ಯಕ್ಕೆ ತಿರುಗೇಟು ನೀಡಿರುವ ಜೆಡಿಎಸ್, “ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ” ಎಂದಿದ್ದು, ಪಟ್ಟಿಯನ್ನು ಟ್ವೀಟ್ ಮಾಡಿದೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಜಾತ್ಯಾತೀತ ಜನತಾದಳದ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಬಿಜೆಪಿಯ ಕುಟುಂಬ ರಾಜಕಾರಣದ ಪಟ್ಟಿ ನೀಡಿದೆ. “ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ! ಬೀದಿಯಲ್ಲಿ ಇನ್ನೊಂದು ಮುಖ! ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ʼಆಪರೇಷನ್ ಕಮಲʼದ ಮೂಲಕ ರಚನೆ ಮಾಡಿದ ಸರಕಾರಗಳೇ ಸಾಕ್ಷಿ” ಎಂದಿದೆ.

“ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ” ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: RSS ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

  1. ಯಡಿಯೂರಪ್ಪ ಕುಟುಂಬ: ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ. ಹಿರಿಮಗ ಲೋಕಸಭೆ ಸದಸ್ಯ, ಕಿರಿಮಗ ಪಕ್ಷದ ಉಪಾಧ್ಯಕ್ಷ.

2. ಶೆಟ್ಟರ್ ಕುಟುಂಬ: ಜಗದೀಶ್ ಶೆಟ್ಟರ್ ಶಾಸಕರು, ಮಾಜಿ ಸಚಿವ, ಮಾಜಿ ಸಿಎಂ; ಅವರ ತಮ್ಮ ಹಾಲಿ ವಿಧಾನ ಪರಿಷತ್ ಸದಸ್ಯ.

3. ಅಣ್ಣಾ ಸಾಹೇಬ್ ಕುಟುಂಬ: ಪತಿ ಲೋಕಸಭೆ ಸದಸ್ಯ, ಪತ್ನಿ ರಾಜ್ಯದಲ್ಲಿ ಕ್ಯಾಬಿನೆಟ್ ಸಚಿವೆ.

4. ಬಳ್ಳಾರಿ ರೆಡ್ಡಿ ಕುಟುಂಬ: ಕರುಣಾಕರ ರೆಡ್ಡಿ ಶಾಸಕ, ಅವರ ಸಹೋದರ ಸೋಮಶೇಖರ ರೆಡ್ಡಿ ಕೂಡ ಶಾಸಕ. ಇನ್ನೊಬ್ಬ ಸಹೋದರ ಬಿಜೆಪಿ ನಾಯಕರೇ. ಅವರ ಗೆಳೆಯ ಶ್ರೀರಾಮುಲು ಈಗ ಮಂತ್ರಿ. ಮಾಜಿ ಎಂಪಿ ಶಾಂತಾ ಅವರು ಶ್ರೀರಾಮುಲು ತಂಗಿ. ಸಣ್ಣ ಫಕೀರಪ್ಪ ಕೂಡ ಅವರ ಪೈಕಿಯೇ.

5. ಜಾರಕಿಹೊಳಿ ಕುಟುಂಬ: ರಮೇಶ್ ಜಾರಕಿಹೊಳಿ ಮಾಜಿ ಮಂತ್ರಿ , ಶಾಸಕರು. ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಹಾಲಿ ಶಾಸಕರು, ಕೆಎಂಎಫ್ ಸದಸ್ಯರು.

6. ಲಿಂಬಾವಳಿ ಕುಟುಂಬ: ಅರವಿಂದ ಲಿಂಬಾವಳಿ ಶಾಸಕರು, ಅವರ ಭಾವಮೈದ ರಘು ಕೂಡ ಶಾಸಕರಲ್ಲವೇ..?

7. ಉದಾಸಿ ಕುಟುಂಬ: ದಿವಂಗತ ಉದಾಸಿ ಅವರು ಮಂತ್ರಿಗಳಾಗಿದ್ದರು. ಅವರ ಮಗ ಈಗ ಸಂಸತ್ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಎಚ್.ಡಿ.ಕುಮಾರಸ್ವಾಮಿ

’ಪಟ್ಟಿ ಇನ್ನೂ ಇದೆ. ರಾಜ್ಯವಾರು ಬರೆಯುತ್ತಾ ಹೋದರೆ ಪುಟಗಳೇ ಸಾಲುವುದಿಲ್ಲ. ಕುಟುಂಬ ರಾಜಕಾರಣದ  ರೆಂಬೆಕೊಂಬೆಗಳು ಸಮೃದ್ಧವಾಗಿರುವುದು ಎಲ್ಲಿ..? ಯಾವ ಪಕ್ಷದಲ್ಲಿ..? ಕುಟುಂಬ ರಾಜಕಾರಣದ ವಿರಾಟ ದರ್ಶನ ಆಗುತ್ತಿರುತ್ತಿರುವುದು ಎಲ್ಲಿ..?’ ಎಂದು ಪ್ರಶ್ನಿಸಿದೆ.

“ರಾಷ್ಟ್ರ ನಿರ್ಮಾಣ ಬಿಜೆಪಿಯ ಗುರಿಯಲ್ಲ. ಆಪರೇಷನ್ ಕಮಲ ಅದರ ಗರಿ. ಆಪರೇಷನ್ ಕಮಲವನ್ನು ರಾಷ್ಟ್ರೀಕರಣ ಮಾಡಿ ರಾಷ್ಟ್ರಪ್ರೇಮ ಮೆರೆದ ಕುಖ್ಯಾತಿ ಅದರದ್ದು. ಒಡಕು ರಾಜಕಾರಣ ಬಿಜೆಪಿ ನಿತ್ಯ ಕಾಯಕ. ಆಪರೇಷನ್ ಕಮಲ ಅದರ ಅಧಿಕೃತ ರಾಜಧರ್ಮ. ಕುಟುಂಬ ರಾಜಕಾರಣ ಅದರ ಅಧಿಕಾರದ ಸೋಪಾನ. ಸವಕಲು ಹೇಳಿಕೆಗಳಿಂದ ಬೇಳೆ ಬೇಯಿಸಿಕೊಳ್ಳುವುದು ಬಿಟ್ಟು ಜನರ ಕೆಲಸ ಮಾಡಿ. ಬೇರೆಯವರ ತಟ್ಟೆಯತ್ತ ನೋಡುವ ಚಾಳಿ ಬಿಟ್ಟರೆ ಉತ್ತಮ” ಎಂದು ಉಪದೇಶ ನೀಡಿದೆ.

ಶನಿವಾರ ಟ್ವೀಟ್ ಮಾಡಿ ಕುಟುಂಬ ರಾಜಕಾರಣ ಜೆಡಿಎಸ್ ಸಿದ್ಧಾಂತ ಎಂದಿದ್ದ ರಾಜ್ಯ ಬಿಜೆಪಿ, “ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ರೇವಣ್ಣ, ಪ್ರಜ್ವಲ್ ರೇವಣ್ಣ, ಭವಾನಿ, ರೇವಣ್ಣ, ಸೂರಜ್ ರೇವಣ್ಣ….ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಎಷ್ಟೊಂದು ಸಮೃದ್ಧವಾಗಿದೆ” ಎಂದಿತ್ತು.


ಇದನ್ನೂ ಓದಿ: ಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...