Homeಕರ್ನಾಟಕ’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

- Advertisement -
- Advertisement -

’ಕುಟುಂಬ ರಾಜಕಾರಣ ಜೆಡಿಎಸ್ ಸಿದ್ಧಾಂತ’ ಎಂಬ ರಾಜ್ಯ ಬಿಜೆಪಿ ವ್ಯಂಗ್ಯಕ್ಕೆ ತಿರುಗೇಟು ನೀಡಿರುವ ಜೆಡಿಎಸ್, “ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ” ಎಂದಿದ್ದು, ಪಟ್ಟಿಯನ್ನು ಟ್ವೀಟ್ ಮಾಡಿದೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಜಾತ್ಯಾತೀತ ಜನತಾದಳದ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಬಿಜೆಪಿಯ ಕುಟುಂಬ ರಾಜಕಾರಣದ ಪಟ್ಟಿ ನೀಡಿದೆ. “ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ! ಬೀದಿಯಲ್ಲಿ ಇನ್ನೊಂದು ಮುಖ! ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ʼಆಪರೇಷನ್ ಕಮಲʼದ ಮೂಲಕ ರಚನೆ ಮಾಡಿದ ಸರಕಾರಗಳೇ ಸಾಕ್ಷಿ” ಎಂದಿದೆ.

“ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ” ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: RSS ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

  1. ಯಡಿಯೂರಪ್ಪ ಕುಟುಂಬ: ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ. ಹಿರಿಮಗ ಲೋಕಸಭೆ ಸದಸ್ಯ, ಕಿರಿಮಗ ಪಕ್ಷದ ಉಪಾಧ್ಯಕ್ಷ.

2. ಶೆಟ್ಟರ್ ಕುಟುಂಬ: ಜಗದೀಶ್ ಶೆಟ್ಟರ್ ಶಾಸಕರು, ಮಾಜಿ ಸಚಿವ, ಮಾಜಿ ಸಿಎಂ; ಅವರ ತಮ್ಮ ಹಾಲಿ ವಿಧಾನ ಪರಿಷತ್ ಸದಸ್ಯ.

3. ಅಣ್ಣಾ ಸಾಹೇಬ್ ಕುಟುಂಬ: ಪತಿ ಲೋಕಸಭೆ ಸದಸ್ಯ, ಪತ್ನಿ ರಾಜ್ಯದಲ್ಲಿ ಕ್ಯಾಬಿನೆಟ್ ಸಚಿವೆ.

4. ಬಳ್ಳಾರಿ ರೆಡ್ಡಿ ಕುಟುಂಬ: ಕರುಣಾಕರ ರೆಡ್ಡಿ ಶಾಸಕ, ಅವರ ಸಹೋದರ ಸೋಮಶೇಖರ ರೆಡ್ಡಿ ಕೂಡ ಶಾಸಕ. ಇನ್ನೊಬ್ಬ ಸಹೋದರ ಬಿಜೆಪಿ ನಾಯಕರೇ. ಅವರ ಗೆಳೆಯ ಶ್ರೀರಾಮುಲು ಈಗ ಮಂತ್ರಿ. ಮಾಜಿ ಎಂಪಿ ಶಾಂತಾ ಅವರು ಶ್ರೀರಾಮುಲು ತಂಗಿ. ಸಣ್ಣ ಫಕೀರಪ್ಪ ಕೂಡ ಅವರ ಪೈಕಿಯೇ.

5. ಜಾರಕಿಹೊಳಿ ಕುಟುಂಬ: ರಮೇಶ್ ಜಾರಕಿಹೊಳಿ ಮಾಜಿ ಮಂತ್ರಿ , ಶಾಸಕರು. ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಹಾಲಿ ಶಾಸಕರು, ಕೆಎಂಎಫ್ ಸದಸ್ಯರು.

6. ಲಿಂಬಾವಳಿ ಕುಟುಂಬ: ಅರವಿಂದ ಲಿಂಬಾವಳಿ ಶಾಸಕರು, ಅವರ ಭಾವಮೈದ ರಘು ಕೂಡ ಶಾಸಕರಲ್ಲವೇ..?

7. ಉದಾಸಿ ಕುಟುಂಬ: ದಿವಂಗತ ಉದಾಸಿ ಅವರು ಮಂತ್ರಿಗಳಾಗಿದ್ದರು. ಅವರ ಮಗ ಈಗ ಸಂಸತ್ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಎಚ್.ಡಿ.ಕುಮಾರಸ್ವಾಮಿ

’ಪಟ್ಟಿ ಇನ್ನೂ ಇದೆ. ರಾಜ್ಯವಾರು ಬರೆಯುತ್ತಾ ಹೋದರೆ ಪುಟಗಳೇ ಸಾಲುವುದಿಲ್ಲ. ಕುಟುಂಬ ರಾಜಕಾರಣದ  ರೆಂಬೆಕೊಂಬೆಗಳು ಸಮೃದ್ಧವಾಗಿರುವುದು ಎಲ್ಲಿ..? ಯಾವ ಪಕ್ಷದಲ್ಲಿ..? ಕುಟುಂಬ ರಾಜಕಾರಣದ ವಿರಾಟ ದರ್ಶನ ಆಗುತ್ತಿರುತ್ತಿರುವುದು ಎಲ್ಲಿ..?’ ಎಂದು ಪ್ರಶ್ನಿಸಿದೆ.

“ರಾಷ್ಟ್ರ ನಿರ್ಮಾಣ ಬಿಜೆಪಿಯ ಗುರಿಯಲ್ಲ. ಆಪರೇಷನ್ ಕಮಲ ಅದರ ಗರಿ. ಆಪರೇಷನ್ ಕಮಲವನ್ನು ರಾಷ್ಟ್ರೀಕರಣ ಮಾಡಿ ರಾಷ್ಟ್ರಪ್ರೇಮ ಮೆರೆದ ಕುಖ್ಯಾತಿ ಅದರದ್ದು. ಒಡಕು ರಾಜಕಾರಣ ಬಿಜೆಪಿ ನಿತ್ಯ ಕಾಯಕ. ಆಪರೇಷನ್ ಕಮಲ ಅದರ ಅಧಿಕೃತ ರಾಜಧರ್ಮ. ಕುಟುಂಬ ರಾಜಕಾರಣ ಅದರ ಅಧಿಕಾರದ ಸೋಪಾನ. ಸವಕಲು ಹೇಳಿಕೆಗಳಿಂದ ಬೇಳೆ ಬೇಯಿಸಿಕೊಳ್ಳುವುದು ಬಿಟ್ಟು ಜನರ ಕೆಲಸ ಮಾಡಿ. ಬೇರೆಯವರ ತಟ್ಟೆಯತ್ತ ನೋಡುವ ಚಾಳಿ ಬಿಟ್ಟರೆ ಉತ್ತಮ” ಎಂದು ಉಪದೇಶ ನೀಡಿದೆ.

ಶನಿವಾರ ಟ್ವೀಟ್ ಮಾಡಿ ಕುಟುಂಬ ರಾಜಕಾರಣ ಜೆಡಿಎಸ್ ಸಿದ್ಧಾಂತ ಎಂದಿದ್ದ ರಾಜ್ಯ ಬಿಜೆಪಿ, “ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ರೇವಣ್ಣ, ಪ್ರಜ್ವಲ್ ರೇವಣ್ಣ, ಭವಾನಿ, ರೇವಣ್ಣ, ಸೂರಜ್ ರೇವಣ್ಣ….ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಎಷ್ಟೊಂದು ಸಮೃದ್ಧವಾಗಿದೆ” ಎಂದಿತ್ತು.


ಇದನ್ನೂ ಓದಿ: ಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...