Homeಕರ್ನಾಟಕ’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

- Advertisement -
- Advertisement -

’ಕುಟುಂಬ ರಾಜಕಾರಣ ಜೆಡಿಎಸ್ ಸಿದ್ಧಾಂತ’ ಎಂಬ ರಾಜ್ಯ ಬಿಜೆಪಿ ವ್ಯಂಗ್ಯಕ್ಕೆ ತಿರುಗೇಟು ನೀಡಿರುವ ಜೆಡಿಎಸ್, “ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ” ಎಂದಿದ್ದು, ಪಟ್ಟಿಯನ್ನು ಟ್ವೀಟ್ ಮಾಡಿದೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಜಾತ್ಯಾತೀತ ಜನತಾದಳದ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಬಿಜೆಪಿಯ ಕುಟುಂಬ ರಾಜಕಾರಣದ ಪಟ್ಟಿ ನೀಡಿದೆ. “ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ! ಬೀದಿಯಲ್ಲಿ ಇನ್ನೊಂದು ಮುಖ! ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ʼಆಪರೇಷನ್ ಕಮಲʼದ ಮೂಲಕ ರಚನೆ ಮಾಡಿದ ಸರಕಾರಗಳೇ ಸಾಕ್ಷಿ” ಎಂದಿದೆ.

“ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ” ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: RSS ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

  1. ಯಡಿಯೂರಪ್ಪ ಕುಟುಂಬ: ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ. ಹಿರಿಮಗ ಲೋಕಸಭೆ ಸದಸ್ಯ, ಕಿರಿಮಗ ಪಕ್ಷದ ಉಪಾಧ್ಯಕ್ಷ.

2. ಶೆಟ್ಟರ್ ಕುಟುಂಬ: ಜಗದೀಶ್ ಶೆಟ್ಟರ್ ಶಾಸಕರು, ಮಾಜಿ ಸಚಿವ, ಮಾಜಿ ಸಿಎಂ; ಅವರ ತಮ್ಮ ಹಾಲಿ ವಿಧಾನ ಪರಿಷತ್ ಸದಸ್ಯ.

3. ಅಣ್ಣಾ ಸಾಹೇಬ್ ಕುಟುಂಬ: ಪತಿ ಲೋಕಸಭೆ ಸದಸ್ಯ, ಪತ್ನಿ ರಾಜ್ಯದಲ್ಲಿ ಕ್ಯಾಬಿನೆಟ್ ಸಚಿವೆ.

4. ಬಳ್ಳಾರಿ ರೆಡ್ಡಿ ಕುಟುಂಬ: ಕರುಣಾಕರ ರೆಡ್ಡಿ ಶಾಸಕ, ಅವರ ಸಹೋದರ ಸೋಮಶೇಖರ ರೆಡ್ಡಿ ಕೂಡ ಶಾಸಕ. ಇನ್ನೊಬ್ಬ ಸಹೋದರ ಬಿಜೆಪಿ ನಾಯಕರೇ. ಅವರ ಗೆಳೆಯ ಶ್ರೀರಾಮುಲು ಈಗ ಮಂತ್ರಿ. ಮಾಜಿ ಎಂಪಿ ಶಾಂತಾ ಅವರು ಶ್ರೀರಾಮುಲು ತಂಗಿ. ಸಣ್ಣ ಫಕೀರಪ್ಪ ಕೂಡ ಅವರ ಪೈಕಿಯೇ.

5. ಜಾರಕಿಹೊಳಿ ಕುಟುಂಬ: ರಮೇಶ್ ಜಾರಕಿಹೊಳಿ ಮಾಜಿ ಮಂತ್ರಿ , ಶಾಸಕರು. ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಹಾಲಿ ಶಾಸಕರು, ಕೆಎಂಎಫ್ ಸದಸ್ಯರು.

6. ಲಿಂಬಾವಳಿ ಕುಟುಂಬ: ಅರವಿಂದ ಲಿಂಬಾವಳಿ ಶಾಸಕರು, ಅವರ ಭಾವಮೈದ ರಘು ಕೂಡ ಶಾಸಕರಲ್ಲವೇ..?

7. ಉದಾಸಿ ಕುಟುಂಬ: ದಿವಂಗತ ಉದಾಸಿ ಅವರು ಮಂತ್ರಿಗಳಾಗಿದ್ದರು. ಅವರ ಮಗ ಈಗ ಸಂಸತ್ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಎಚ್.ಡಿ.ಕುಮಾರಸ್ವಾಮಿ

’ಪಟ್ಟಿ ಇನ್ನೂ ಇದೆ. ರಾಜ್ಯವಾರು ಬರೆಯುತ್ತಾ ಹೋದರೆ ಪುಟಗಳೇ ಸಾಲುವುದಿಲ್ಲ. ಕುಟುಂಬ ರಾಜಕಾರಣದ  ರೆಂಬೆಕೊಂಬೆಗಳು ಸಮೃದ್ಧವಾಗಿರುವುದು ಎಲ್ಲಿ..? ಯಾವ ಪಕ್ಷದಲ್ಲಿ..? ಕುಟುಂಬ ರಾಜಕಾರಣದ ವಿರಾಟ ದರ್ಶನ ಆಗುತ್ತಿರುತ್ತಿರುವುದು ಎಲ್ಲಿ..?’ ಎಂದು ಪ್ರಶ್ನಿಸಿದೆ.

“ರಾಷ್ಟ್ರ ನಿರ್ಮಾಣ ಬಿಜೆಪಿಯ ಗುರಿಯಲ್ಲ. ಆಪರೇಷನ್ ಕಮಲ ಅದರ ಗರಿ. ಆಪರೇಷನ್ ಕಮಲವನ್ನು ರಾಷ್ಟ್ರೀಕರಣ ಮಾಡಿ ರಾಷ್ಟ್ರಪ್ರೇಮ ಮೆರೆದ ಕುಖ್ಯಾತಿ ಅದರದ್ದು. ಒಡಕು ರಾಜಕಾರಣ ಬಿಜೆಪಿ ನಿತ್ಯ ಕಾಯಕ. ಆಪರೇಷನ್ ಕಮಲ ಅದರ ಅಧಿಕೃತ ರಾಜಧರ್ಮ. ಕುಟುಂಬ ರಾಜಕಾರಣ ಅದರ ಅಧಿಕಾರದ ಸೋಪಾನ. ಸವಕಲು ಹೇಳಿಕೆಗಳಿಂದ ಬೇಳೆ ಬೇಯಿಸಿಕೊಳ್ಳುವುದು ಬಿಟ್ಟು ಜನರ ಕೆಲಸ ಮಾಡಿ. ಬೇರೆಯವರ ತಟ್ಟೆಯತ್ತ ನೋಡುವ ಚಾಳಿ ಬಿಟ್ಟರೆ ಉತ್ತಮ” ಎಂದು ಉಪದೇಶ ನೀಡಿದೆ.

ಶನಿವಾರ ಟ್ವೀಟ್ ಮಾಡಿ ಕುಟುಂಬ ರಾಜಕಾರಣ ಜೆಡಿಎಸ್ ಸಿದ್ಧಾಂತ ಎಂದಿದ್ದ ರಾಜ್ಯ ಬಿಜೆಪಿ, “ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ರೇವಣ್ಣ, ಪ್ರಜ್ವಲ್ ರೇವಣ್ಣ, ಭವಾನಿ, ರೇವಣ್ಣ, ಸೂರಜ್ ರೇವಣ್ಣ….ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಎಷ್ಟೊಂದು ಸಮೃದ್ಧವಾಗಿದೆ” ಎಂದಿತ್ತು.


ಇದನ್ನೂ ಓದಿ: ಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...