Homeಕರ್ನಾಟಕ’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

’ಕುಟುಂಬ ರಾಜಕಾರಣದಲ್ಲಿ ಬಿಜೆಪಿ ಎಲ್ಲ ಪಕ್ಷಗಳ ದಾಖಲೆ ಮುರಿದಿದೆ’: ಪಟ್ಟಿ ನೀಡಿದ ಜೆಡಿಎಸ್

- Advertisement -
- Advertisement -

’ಕುಟುಂಬ ರಾಜಕಾರಣ ಜೆಡಿಎಸ್ ಸಿದ್ಧಾಂತ’ ಎಂಬ ರಾಜ್ಯ ಬಿಜೆಪಿ ವ್ಯಂಗ್ಯಕ್ಕೆ ತಿರುಗೇಟು ನೀಡಿರುವ ಜೆಡಿಎಸ್, “ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ” ಎಂದಿದ್ದು, ಪಟ್ಟಿಯನ್ನು ಟ್ವೀಟ್ ಮಾಡಿದೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಜಾತ್ಯಾತೀತ ಜನತಾದಳದ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಬಿಜೆಪಿಯ ಕುಟುಂಬ ರಾಜಕಾರಣದ ಪಟ್ಟಿ ನೀಡಿದೆ. “ಬಿಜೆಪಿ ಹೇಳುವುದೊಂದು, ಮಾಡುವುದು ಇನ್ನೊಂದು. ಮನೆಯಲ್ಲಿ ಒಂದು ಮುಖ! ಬೀದಿಯಲ್ಲಿ ಇನ್ನೊಂದು ಮುಖ! ಒಡಕು ರಾಜಕಾರಣದ ಪಕ್ಷಕ್ಕೆ ಹೊಲಸು ರಾಜಕಾರಣದಲ್ಲಿ ಹೆಚ್ಚು ನಂಬಿಕೆ ಎನ್ನುವುದು ʼಆಪರೇಷನ್ ಕಮಲʼದ ಮೂಲಕ ರಚನೆ ಮಾಡಿದ ಸರಕಾರಗಳೇ ಸಾಕ್ಷಿ” ಎಂದಿದೆ.

“ಕುಟುಂಬ ರಾಜಕಾರಣದಲ್ಲಿ ಬಿಜೆಪಿ ದೇಶದ ಎಲ್ಲ ಪಕ್ಷಗಳ ದಾಖಲೆಗಳನ್ನು ಮುರಿದಿದೆ. ಕರ್ನಾಟಕದ ಮಟ್ಟಿಗಂತೂ ಕೇಸರಿ ಕಲಿಗಳದ್ದು ಸಾರ್ವಕಾಲಿಕ ದಾಖಲೆಯೇ. ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ” ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: RSS ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

  1. ಯಡಿಯೂರಪ್ಪ ಕುಟುಂಬ: ಯಡಿಯೂರಪ್ಪ ಮಾಜಿ ಮುಖ್ಯಮಂತ್ರಿ. ಹಿರಿಮಗ ಲೋಕಸಭೆ ಸದಸ್ಯ, ಕಿರಿಮಗ ಪಕ್ಷದ ಉಪಾಧ್ಯಕ್ಷ.

2. ಶೆಟ್ಟರ್ ಕುಟುಂಬ: ಜಗದೀಶ್ ಶೆಟ್ಟರ್ ಶಾಸಕರು, ಮಾಜಿ ಸಚಿವ, ಮಾಜಿ ಸಿಎಂ; ಅವರ ತಮ್ಮ ಹಾಲಿ ವಿಧಾನ ಪರಿಷತ್ ಸದಸ್ಯ.

3. ಅಣ್ಣಾ ಸಾಹೇಬ್ ಕುಟುಂಬ: ಪತಿ ಲೋಕಸಭೆ ಸದಸ್ಯ, ಪತ್ನಿ ರಾಜ್ಯದಲ್ಲಿ ಕ್ಯಾಬಿನೆಟ್ ಸಚಿವೆ.

4. ಬಳ್ಳಾರಿ ರೆಡ್ಡಿ ಕುಟುಂಬ: ಕರುಣಾಕರ ರೆಡ್ಡಿ ಶಾಸಕ, ಅವರ ಸಹೋದರ ಸೋಮಶೇಖರ ರೆಡ್ಡಿ ಕೂಡ ಶಾಸಕ. ಇನ್ನೊಬ್ಬ ಸಹೋದರ ಬಿಜೆಪಿ ನಾಯಕರೇ. ಅವರ ಗೆಳೆಯ ಶ್ರೀರಾಮುಲು ಈಗ ಮಂತ್ರಿ. ಮಾಜಿ ಎಂಪಿ ಶಾಂತಾ ಅವರು ಶ್ರೀರಾಮುಲು ತಂಗಿ. ಸಣ್ಣ ಫಕೀರಪ್ಪ ಕೂಡ ಅವರ ಪೈಕಿಯೇ.

5. ಜಾರಕಿಹೊಳಿ ಕುಟುಂಬ: ರಮೇಶ್ ಜಾರಕಿಹೊಳಿ ಮಾಜಿ ಮಂತ್ರಿ , ಶಾಸಕರು. ಅವರ ಸಹೋದರ ಬಾಲಚಂದ್ರ ಜಾರಕಿಹೊಳಿ ಹಾಲಿ ಶಾಸಕರು, ಕೆಎಂಎಫ್ ಸದಸ್ಯರು.

6. ಲಿಂಬಾವಳಿ ಕುಟುಂಬ: ಅರವಿಂದ ಲಿಂಬಾವಳಿ ಶಾಸಕರು, ಅವರ ಭಾವಮೈದ ರಘು ಕೂಡ ಶಾಸಕರಲ್ಲವೇ..?

7. ಉದಾಸಿ ಕುಟುಂಬ: ದಿವಂಗತ ಉದಾಸಿ ಅವರು ಮಂತ್ರಿಗಳಾಗಿದ್ದರು. ಅವರ ಮಗ ಈಗ ಸಂಸತ್ ಸದಸ್ಯರಾಗಿದ್ದಾರೆ.

ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಎಚ್.ಡಿ.ಕುಮಾರಸ್ವಾಮಿ

’ಪಟ್ಟಿ ಇನ್ನೂ ಇದೆ. ರಾಜ್ಯವಾರು ಬರೆಯುತ್ತಾ ಹೋದರೆ ಪುಟಗಳೇ ಸಾಲುವುದಿಲ್ಲ. ಕುಟುಂಬ ರಾಜಕಾರಣದ  ರೆಂಬೆಕೊಂಬೆಗಳು ಸಮೃದ್ಧವಾಗಿರುವುದು ಎಲ್ಲಿ..? ಯಾವ ಪಕ್ಷದಲ್ಲಿ..? ಕುಟುಂಬ ರಾಜಕಾರಣದ ವಿರಾಟ ದರ್ಶನ ಆಗುತ್ತಿರುತ್ತಿರುವುದು ಎಲ್ಲಿ..?’ ಎಂದು ಪ್ರಶ್ನಿಸಿದೆ.

“ರಾಷ್ಟ್ರ ನಿರ್ಮಾಣ ಬಿಜೆಪಿಯ ಗುರಿಯಲ್ಲ. ಆಪರೇಷನ್ ಕಮಲ ಅದರ ಗರಿ. ಆಪರೇಷನ್ ಕಮಲವನ್ನು ರಾಷ್ಟ್ರೀಕರಣ ಮಾಡಿ ರಾಷ್ಟ್ರಪ್ರೇಮ ಮೆರೆದ ಕುಖ್ಯಾತಿ ಅದರದ್ದು. ಒಡಕು ರಾಜಕಾರಣ ಬಿಜೆಪಿ ನಿತ್ಯ ಕಾಯಕ. ಆಪರೇಷನ್ ಕಮಲ ಅದರ ಅಧಿಕೃತ ರಾಜಧರ್ಮ. ಕುಟುಂಬ ರಾಜಕಾರಣ ಅದರ ಅಧಿಕಾರದ ಸೋಪಾನ. ಸವಕಲು ಹೇಳಿಕೆಗಳಿಂದ ಬೇಳೆ ಬೇಯಿಸಿಕೊಳ್ಳುವುದು ಬಿಟ್ಟು ಜನರ ಕೆಲಸ ಮಾಡಿ. ಬೇರೆಯವರ ತಟ್ಟೆಯತ್ತ ನೋಡುವ ಚಾಳಿ ಬಿಟ್ಟರೆ ಉತ್ತಮ” ಎಂದು ಉಪದೇಶ ನೀಡಿದೆ.

ಶನಿವಾರ ಟ್ವೀಟ್ ಮಾಡಿ ಕುಟುಂಬ ರಾಜಕಾರಣ ಜೆಡಿಎಸ್ ಸಿದ್ಧಾಂತ ಎಂದಿದ್ದ ರಾಜ್ಯ ಬಿಜೆಪಿ, “ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ರೇವಣ್ಣ, ಪ್ರಜ್ವಲ್ ರೇವಣ್ಣ, ಭವಾನಿ, ರೇವಣ್ಣ, ಸೂರಜ್ ರೇವಣ್ಣ….ಕುಟುಂಬ ರಾಜಕಾರಣದ ರೆಂಬೆಕೊಂಬೆಗಳು ಎಷ್ಟೊಂದು ಸಮೃದ್ಧವಾಗಿದೆ” ಎಂದಿತ್ತು.


ಇದನ್ನೂ ಓದಿ: ಬಿಟ್‌ ಕಾಯಿನ್‌ ವರ್ಗಾವಣೆ, ಕ್ರಿಪ್ಟೋ ವೆಬ್‌ಸೈಟ್‌ ಹ್ಯಾಕಿಂಗ್‌: ಆರೋಪಗಳಿಗೆ ಪೊಲೀಸ್ ಇಲಾಖೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...