Homeಕರ್ನಾಟಕಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಮಹಿಳಾ ವಿರೋಧಿ ಹೇಳಿಕೆ: ಬಿಜೆಪಿಯ ಸಂಜಯ ಪಾಟೀಲ ವಿರುದ್ಧ ಆಕ್ರೋಶ

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಮಹಿಳಾ ವಿರೋಧಿ ಹೇಳಿಕೆ: ಬಿಜೆಪಿಯ ಸಂಜಯ ಪಾಟೀಲ ವಿರುದ್ಧ ಆಕ್ರೋಶ

’ಕರ್ನಾಟಕದ ಮಹಿಳೆಯರು ಪಕ್ಷಭೇದ ಮರೆತು ಇದನ್ನು ಪ್ರತಿಭಟಿಸಬೇಕು- ಪುರುಷೋತ್ತಮ ಬಿಳಿಮಲೆ’

- Advertisement -
- Advertisement -

‘‘ರಾತ್ರಿ ರಾಜಕಾರಣದ ಸಂಸ್ಕೃತಿ ತಿಳಿದಿರುವುದರಿಂದಲೆ ಕಾಂಗ್ರೆಸ್‌ನ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಶಾಸಕಿಯಾಗಿ ಆಯ್ಕೆಯಾಗಿದ್ದಾರೆ” ಎಂದು ಮಹಿಳಾ ವಿರೋಧಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಶಾಸಕ, ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಸಂಜಯ ಪಾಟೀಲ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ನಟ, ಸಾಮಾಜಿಕ ಹೋರಾಟಗಾರ ಚೇತನ್ ಕುಮಾರ್‌, ಯಾವುದೇ ಪಕ್ಷದ ಮಹಿಳಾ ರಾಜಕಾರಣಿಯು ಈ ರೀತಿಯ ಕೀಳುಮಟ್ಟದ ಮಾತುಗಳನ್ನು ಕೇಳಲು ಅರ್ಹರಲ್ಲ. ಪಕ್ಷದ ಸದಸ್ಯರು ಕ್ಷಮೆ ಕೇಳುವಂತೆ ಮುಖ್ಯಮಂತ್ರಿಗಳಾದ ಬೊಮ್ಮಾಯಿ ಆಗ್ರಹಿಸಬೇಕು ಎಂದಿದ್ದಾರೆ.

“ಮಾಜಿ ಬಿಜೆಪಿ ಶಾಸಕರೊಬ್ಬರು ಬೆಳಗಾವಿ ಗ್ರಾಮೀಣ ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರೆಡೆಗೆ ಸಂಶಯಾಸ್ಪದ ಟೀಕೆಗಳನ್ನು ಮಾಡುತ್ತಾ, ಆಕೆ “ನೈಟ್ ಪಾಲಟಿಕ್ಸ್” ಮೂಲಕ ಶಾಸಕರಾಗಿದ್ದಾರೆ ಎಂದು ಹೇಳಿದ್ದಾರೆ. ಯಾವುದೇ ಪಕ್ಷದ ಮಹಿಳಾ ರಾಜಕಾರಣಿಯು ಈ ರೀತಿಯ ಕೀಳುಮಟ್ಟದ ಮಾತುಗಳನ್ನು ಕೇಳಲು ಅರ್ಹರಲ್ಲ. ಕರ್ನಾಟಕದ ಮುಖ್ಯಮಂತ್ರಿಗಳಾದ ಬೊಮ್ಮಾಯಿ ಅವರು, ಅವರ ಪಕ್ಷದ ಸದಸ್ಯರಿಂದ ಕ್ಷಮೆ ಕೇಳಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮನುಕುಲಕ್ಕೇ ಕಪ್ಪುಚುಕ್ಕೆಯಂತೆ ಕುಪ್ಪಳಿಸಿದ ಅಸ್ಸಾಂ ಫೋಟೋಗ್ರಾಫರ್

ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಕೂಡ ಮಾಜಿ ಶಾಸಕ ಸಂಜಯ್ ಪಾಟೀಲ್ ಮಾತು ಅಸಹ್ಯದ ಪರಮಾವಧಿ ಎಂದು ವಿರುದ್ಧ ಕಿಡಿ ಕಾರಿದ್ದಾರೆ. 

“ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿಯ ಮಾಜಿ ಶಾಸಕ ಸಂಜಯ್ ಪಾಟೀಲ್ ಆಡಿರುವ ಮಾತು ಅಸಹ್ಯದ ಪರಮಾವಧಿ. ಇದು ಬಿಜೆಪಿಯವರ ಕೀಳು ಮನಸ್ಥಿತಿಯ ಅನಾವರಣ. ಸಿ.ಟಿ ರವಿಯವರು RSS ಎಂಬುವುದು ಸಂಸ್ಕೃತಿ ಹಾಗೂ ಸಂಸ್ಕಾರ ಕಲಿಸುವ ಗರಡಿ ಮನೆ ಎಂದಿದ್ದಾರೆ. ಹಾಗಾದರೆ RSS ಗರಡಿ ಮನೆಯಲ್ಲಿ‌ ಬಿಜೆಪಿ ನಾಯಕರು ಕಲಿಯುವುದು ಈ ಸಂಸ್ಕಾರವನ್ನೇ..? ಹೇಳಿ ಸಿ.ಟಿ ರವಿಯವರೆ..?” ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಹೋರಾಟಗಾರ್ತಿ, ಬರಹಗಾರ್ತಿ ಪಲ್ಲವಿ ಐದೂರು, ಬಿಜೆಪಿಯ ಸಂಜಯ ಪಾಟೀಲ ವಿರುದ್ಧ ಕಿಡಿಕಾರಿದ್ದಾರೆ.

“ಹಗಲೆಲ್ಲ ನಾಯಕರ ಮನೆ ಮುಂದೆ ಗೇಟ್ ಕೀಪರ್‌ಗಳ ತರ, ನಾಯಿಯ ತರ ಕಾವಲು ಕಾಯ್ಕೊಂಡು ಒಂದೇ ಒಂದು ಸೀಟಿಗೆ, ಅವಕಾಶಕ್ಕೆ ತಲೆ ಹಿಡಿಯೋದಕ್ಕೂ ಹಿಂದೆ ಮುಂದೆ ನೋಡದ ಇಂಥ ನಾಯಕರು ಹೆಣ್ಣುಮಕ್ಕಳು ಏನಾದರೂ ಸಾಧಿಸಿದರೆ, ಬೆಳೆದರೆ ಮಾತ್ರ ನಾಲಿಗೆಯನ್ನು ಮೋರಿಗಿಂತ ಗಲೀಜಾಗಿ ಹರಿಬಿಡ್ತಾರೆ!!” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಸಂಶೋಧಕ, ಜೆಎನ್‌ಯು ಮಾಜಿ ಪ್ರಾಧ್ಯಪಕ ಪುರುಷೋತ್ತಮ ಬಿಳಿಮಲೆ ಅವರು ಕರ್ನಾಟಕದ ಮಹಿಳೆಯರು ಪಕ್ಷಭೇದ ಮರೆತು ಇದನ್ನು ಪ್ರತಿಭಟಿಸಬೇಕು ಎಂದು ಕರೆ ನೀಡಿದ್ದಾರೆ.
“ಇಷ್ಟು ವರ್ಷಗಳು ಆದ ಮೇಲೆಯೂ ಕರ್ನಾಟಕಕ್ಕೆ ಒಬ್ಬರು ಮಹಿಳಾ ಮುಖ್ಯಮಂತ್ರಿಯನ್ನು ಪಡೆಯಲಾಗಲಿಲ್ಲ.‌ ಜೊತೆಗೆ ಮಹಿಳೆಯರು ರಾಜಕಾರಣಕ್ಕೆ ಬಂದರೆ ಇವರೆಲ್ಲ ಹೇಗೆ ನಾಲಗೆ ಹರಿಯಬಿಡುತ್ತಾರೆ ಗಮನಿಸಿ.‌
ಈ ಸಂಜಯ ಪಾಟೀಲರನ್ನು ಬಿಜೆಪಿ ಕೂಡಲೇ ಪಕ್ಷದಿಂದ ಹೊರಹಾಕಬೇಕು ಮತ್ತು ಮಾಡಿದ ತಪ್ಪಿಗೆ ಹೆಬ್ಬಾಳ್ಕರ್ ಅವರ ಕ್ಷಮೆ ಕೇಳಬೇಕು. ಇದೇನಾ ಇವರು ನಾಡಿಗೆ ಕಲಿಸುವ ಸಂಸ್ಕೃತಿ! ಕರ್ನಾಟಕದ ಮಹಿಳೆಯರು ಪಕ್ಷಭೇದ ಮರೆತು ಇದನ್ನು ಪ್ರತಿಭಟಿಸಬೇಕು” ಎಂದಿದ್ದಾರೆ.

 

ಸಂಜಯ ಪಾಟೀಲ ಅವರ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, “ನನಗೆ ಅಭಿವೃದ್ಧಿಯ ರಾಜಕಾರಣ ಮಾತ್ರ ಗೊತ್ತಿದೆ. ಸಂಜಯ ಪಾಟೀಲ ಅವರು ಹೇಳಿರುವಂತೆ ಇತರ ರಾಜಕಾರಣ ನನಗೆ ಗೊತ್ತಿಲ್ಲ. ಹೆಣ್ಣನ್ನು ಪೂಜಿಸುವ ಸಮಾಜ ನಮ್ಮದು. ಒಬ್ಬ ಶಾಸಕಿ ಬಗ್ಗೆ ಹಗುರವಾಗಿ ಮಾತನಾಡುವುದು ಸಲ್ಲದು. ಶ್ರೀರಾಮನ 2 ನೇ ಅವತಾರವಾಗಿರುವ ಸಂಜಯ ಪಾಟೀಲರಿಗೆ ದೇವರು ಒಳ್ಳೆಯದು ಮಾಡಲಿ” ಎಂದು ತಿರುಗೇಟು ನೀಡಿದ್ದರು.

ಇದನ್ನೂ ಓದಿ: ರಾತ್ರಿ ರಾಜಕಾರಣದ ಸಂಸ್ಕೃತಿಯಿಂದ ಲಕ್ಷ್ಮಿ ಹೆಬ್ಬಾಳ್ಕರ್ ಶಾಸಕಿಯಾಗಿದ್ದಾರೆ: ಬಿಜೆಪಿ ಮಾಜಿ ಶಾಸಕ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...