Homeಕರ್ನಾಟಕಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಮಹಿಳಾ ವಿರೋಧಿ ಹೇಳಿಕೆ: ಬಿಜೆಪಿಯ ಸಂಜಯ ಪಾಟೀಲ ವಿರುದ್ಧ ಆಕ್ರೋಶ

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಮಹಿಳಾ ವಿರೋಧಿ ಹೇಳಿಕೆ: ಬಿಜೆಪಿಯ ಸಂಜಯ ಪಾಟೀಲ ವಿರುದ್ಧ ಆಕ್ರೋಶ

’ಕರ್ನಾಟಕದ ಮಹಿಳೆಯರು ಪಕ್ಷಭೇದ ಮರೆತು ಇದನ್ನು ಪ್ರತಿಭಟಿಸಬೇಕು- ಪುರುಷೋತ್ತಮ ಬಿಳಿಮಲೆ’

- Advertisement -
- Advertisement -

‘‘ರಾತ್ರಿ ರಾಜಕಾರಣದ ಸಂಸ್ಕೃತಿ ತಿಳಿದಿರುವುದರಿಂದಲೆ ಕಾಂಗ್ರೆಸ್‌ನ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಶಾಸಕಿಯಾಗಿ ಆಯ್ಕೆಯಾಗಿದ್ದಾರೆ” ಎಂದು ಮಹಿಳಾ ವಿರೋಧಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಶಾಸಕ, ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಸಂಜಯ ಪಾಟೀಲ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ನಟ, ಸಾಮಾಜಿಕ ಹೋರಾಟಗಾರ ಚೇತನ್ ಕುಮಾರ್‌, ಯಾವುದೇ ಪಕ್ಷದ ಮಹಿಳಾ ರಾಜಕಾರಣಿಯು ಈ ರೀತಿಯ ಕೀಳುಮಟ್ಟದ ಮಾತುಗಳನ್ನು ಕೇಳಲು ಅರ್ಹರಲ್ಲ. ಪಕ್ಷದ ಸದಸ್ಯರು ಕ್ಷಮೆ ಕೇಳುವಂತೆ ಮುಖ್ಯಮಂತ್ರಿಗಳಾದ ಬೊಮ್ಮಾಯಿ ಆಗ್ರಹಿಸಬೇಕು ಎಂದಿದ್ದಾರೆ.

“ಮಾಜಿ ಬಿಜೆಪಿ ಶಾಸಕರೊಬ್ಬರು ಬೆಳಗಾವಿ ಗ್ರಾಮೀಣ ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರೆಡೆಗೆ ಸಂಶಯಾಸ್ಪದ ಟೀಕೆಗಳನ್ನು ಮಾಡುತ್ತಾ, ಆಕೆ “ನೈಟ್ ಪಾಲಟಿಕ್ಸ್” ಮೂಲಕ ಶಾಸಕರಾಗಿದ್ದಾರೆ ಎಂದು ಹೇಳಿದ್ದಾರೆ. ಯಾವುದೇ ಪಕ್ಷದ ಮಹಿಳಾ ರಾಜಕಾರಣಿಯು ಈ ರೀತಿಯ ಕೀಳುಮಟ್ಟದ ಮಾತುಗಳನ್ನು ಕೇಳಲು ಅರ್ಹರಲ್ಲ. ಕರ್ನಾಟಕದ ಮುಖ್ಯಮಂತ್ರಿಗಳಾದ ಬೊಮ್ಮಾಯಿ ಅವರು, ಅವರ ಪಕ್ಷದ ಸದಸ್ಯರಿಂದ ಕ್ಷಮೆ ಕೇಳಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮನುಕುಲಕ್ಕೇ ಕಪ್ಪುಚುಕ್ಕೆಯಂತೆ ಕುಪ್ಪಳಿಸಿದ ಅಸ್ಸಾಂ ಫೋಟೋಗ್ರಾಫರ್

ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಕೂಡ ಮಾಜಿ ಶಾಸಕ ಸಂಜಯ್ ಪಾಟೀಲ್ ಮಾತು ಅಸಹ್ಯದ ಪರಮಾವಧಿ ಎಂದು ವಿರುದ್ಧ ಕಿಡಿ ಕಾರಿದ್ದಾರೆ. 

“ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿಯ ಮಾಜಿ ಶಾಸಕ ಸಂಜಯ್ ಪಾಟೀಲ್ ಆಡಿರುವ ಮಾತು ಅಸಹ್ಯದ ಪರಮಾವಧಿ. ಇದು ಬಿಜೆಪಿಯವರ ಕೀಳು ಮನಸ್ಥಿತಿಯ ಅನಾವರಣ. ಸಿ.ಟಿ ರವಿಯವರು RSS ಎಂಬುವುದು ಸಂಸ್ಕೃತಿ ಹಾಗೂ ಸಂಸ್ಕಾರ ಕಲಿಸುವ ಗರಡಿ ಮನೆ ಎಂದಿದ್ದಾರೆ. ಹಾಗಾದರೆ RSS ಗರಡಿ ಮನೆಯಲ್ಲಿ‌ ಬಿಜೆಪಿ ನಾಯಕರು ಕಲಿಯುವುದು ಈ ಸಂಸ್ಕಾರವನ್ನೇ..? ಹೇಳಿ ಸಿ.ಟಿ ರವಿಯವರೆ..?” ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಹೋರಾಟಗಾರ್ತಿ, ಬರಹಗಾರ್ತಿ ಪಲ್ಲವಿ ಐದೂರು, ಬಿಜೆಪಿಯ ಸಂಜಯ ಪಾಟೀಲ ವಿರುದ್ಧ ಕಿಡಿಕಾರಿದ್ದಾರೆ.

“ಹಗಲೆಲ್ಲ ನಾಯಕರ ಮನೆ ಮುಂದೆ ಗೇಟ್ ಕೀಪರ್‌ಗಳ ತರ, ನಾಯಿಯ ತರ ಕಾವಲು ಕಾಯ್ಕೊಂಡು ಒಂದೇ ಒಂದು ಸೀಟಿಗೆ, ಅವಕಾಶಕ್ಕೆ ತಲೆ ಹಿಡಿಯೋದಕ್ಕೂ ಹಿಂದೆ ಮುಂದೆ ನೋಡದ ಇಂಥ ನಾಯಕರು ಹೆಣ್ಣುಮಕ್ಕಳು ಏನಾದರೂ ಸಾಧಿಸಿದರೆ, ಬೆಳೆದರೆ ಮಾತ್ರ ನಾಲಿಗೆಯನ್ನು ಮೋರಿಗಿಂತ ಗಲೀಜಾಗಿ ಹರಿಬಿಡ್ತಾರೆ!!” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಸಂಶೋಧಕ, ಜೆಎನ್‌ಯು ಮಾಜಿ ಪ್ರಾಧ್ಯಪಕ ಪುರುಷೋತ್ತಮ ಬಿಳಿಮಲೆ ಅವರು ಕರ್ನಾಟಕದ ಮಹಿಳೆಯರು ಪಕ್ಷಭೇದ ಮರೆತು ಇದನ್ನು ಪ್ರತಿಭಟಿಸಬೇಕು ಎಂದು ಕರೆ ನೀಡಿದ್ದಾರೆ.
“ಇಷ್ಟು ವರ್ಷಗಳು ಆದ ಮೇಲೆಯೂ ಕರ್ನಾಟಕಕ್ಕೆ ಒಬ್ಬರು ಮಹಿಳಾ ಮುಖ್ಯಮಂತ್ರಿಯನ್ನು ಪಡೆಯಲಾಗಲಿಲ್ಲ.‌ ಜೊತೆಗೆ ಮಹಿಳೆಯರು ರಾಜಕಾರಣಕ್ಕೆ ಬಂದರೆ ಇವರೆಲ್ಲ ಹೇಗೆ ನಾಲಗೆ ಹರಿಯಬಿಡುತ್ತಾರೆ ಗಮನಿಸಿ.‌
ಈ ಸಂಜಯ ಪಾಟೀಲರನ್ನು ಬಿಜೆಪಿ ಕೂಡಲೇ ಪಕ್ಷದಿಂದ ಹೊರಹಾಕಬೇಕು ಮತ್ತು ಮಾಡಿದ ತಪ್ಪಿಗೆ ಹೆಬ್ಬಾಳ್ಕರ್ ಅವರ ಕ್ಷಮೆ ಕೇಳಬೇಕು. ಇದೇನಾ ಇವರು ನಾಡಿಗೆ ಕಲಿಸುವ ಸಂಸ್ಕೃತಿ! ಕರ್ನಾಟಕದ ಮಹಿಳೆಯರು ಪಕ್ಷಭೇದ ಮರೆತು ಇದನ್ನು ಪ್ರತಿಭಟಿಸಬೇಕು” ಎಂದಿದ್ದಾರೆ.

 

ಸಂಜಯ ಪಾಟೀಲ ಅವರ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, “ನನಗೆ ಅಭಿವೃದ್ಧಿಯ ರಾಜಕಾರಣ ಮಾತ್ರ ಗೊತ್ತಿದೆ. ಸಂಜಯ ಪಾಟೀಲ ಅವರು ಹೇಳಿರುವಂತೆ ಇತರ ರಾಜಕಾರಣ ನನಗೆ ಗೊತ್ತಿಲ್ಲ. ಹೆಣ್ಣನ್ನು ಪೂಜಿಸುವ ಸಮಾಜ ನಮ್ಮದು. ಒಬ್ಬ ಶಾಸಕಿ ಬಗ್ಗೆ ಹಗುರವಾಗಿ ಮಾತನಾಡುವುದು ಸಲ್ಲದು. ಶ್ರೀರಾಮನ 2 ನೇ ಅವತಾರವಾಗಿರುವ ಸಂಜಯ ಪಾಟೀಲರಿಗೆ ದೇವರು ಒಳ್ಳೆಯದು ಮಾಡಲಿ” ಎಂದು ತಿರುಗೇಟು ನೀಡಿದ್ದರು.

ಇದನ್ನೂ ಓದಿ: ರಾತ್ರಿ ರಾಜಕಾರಣದ ಸಂಸ್ಕೃತಿಯಿಂದ ಲಕ್ಷ್ಮಿ ಹೆಬ್ಬಾಳ್ಕರ್ ಶಾಸಕಿಯಾಗಿದ್ದಾರೆ: ಬಿಜೆಪಿ ಮಾಜಿ ಶಾಸಕ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...