Homeಕರ್ನಾಟಕಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಮಹಿಳಾ ವಿರೋಧಿ ಹೇಳಿಕೆ: ಬಿಜೆಪಿಯ ಸಂಜಯ ಪಾಟೀಲ ವಿರುದ್ಧ ಆಕ್ರೋಶ

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಮಹಿಳಾ ವಿರೋಧಿ ಹೇಳಿಕೆ: ಬಿಜೆಪಿಯ ಸಂಜಯ ಪಾಟೀಲ ವಿರುದ್ಧ ಆಕ್ರೋಶ

’ಕರ್ನಾಟಕದ ಮಹಿಳೆಯರು ಪಕ್ಷಭೇದ ಮರೆತು ಇದನ್ನು ಪ್ರತಿಭಟಿಸಬೇಕು- ಪುರುಷೋತ್ತಮ ಬಿಳಿಮಲೆ’

- Advertisement -
- Advertisement -

‘‘ರಾತ್ರಿ ರಾಜಕಾರಣದ ಸಂಸ್ಕೃತಿ ತಿಳಿದಿರುವುದರಿಂದಲೆ ಕಾಂಗ್ರೆಸ್‌ನ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಶಾಸಕಿಯಾಗಿ ಆಯ್ಕೆಯಾಗಿದ್ದಾರೆ” ಎಂದು ಮಹಿಳಾ ವಿರೋಧಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಶಾಸಕ, ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಸಂಜಯ ಪಾಟೀಲ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ನಟ, ಸಾಮಾಜಿಕ ಹೋರಾಟಗಾರ ಚೇತನ್ ಕುಮಾರ್‌, ಯಾವುದೇ ಪಕ್ಷದ ಮಹಿಳಾ ರಾಜಕಾರಣಿಯು ಈ ರೀತಿಯ ಕೀಳುಮಟ್ಟದ ಮಾತುಗಳನ್ನು ಕೇಳಲು ಅರ್ಹರಲ್ಲ. ಪಕ್ಷದ ಸದಸ್ಯರು ಕ್ಷಮೆ ಕೇಳುವಂತೆ ಮುಖ್ಯಮಂತ್ರಿಗಳಾದ ಬೊಮ್ಮಾಯಿ ಆಗ್ರಹಿಸಬೇಕು ಎಂದಿದ್ದಾರೆ.

“ಮಾಜಿ ಬಿಜೆಪಿ ಶಾಸಕರೊಬ್ಬರು ಬೆಳಗಾವಿ ಗ್ರಾಮೀಣ ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರೆಡೆಗೆ ಸಂಶಯಾಸ್ಪದ ಟೀಕೆಗಳನ್ನು ಮಾಡುತ್ತಾ, ಆಕೆ “ನೈಟ್ ಪಾಲಟಿಕ್ಸ್” ಮೂಲಕ ಶಾಸಕರಾಗಿದ್ದಾರೆ ಎಂದು ಹೇಳಿದ್ದಾರೆ. ಯಾವುದೇ ಪಕ್ಷದ ಮಹಿಳಾ ರಾಜಕಾರಣಿಯು ಈ ರೀತಿಯ ಕೀಳುಮಟ್ಟದ ಮಾತುಗಳನ್ನು ಕೇಳಲು ಅರ್ಹರಲ್ಲ. ಕರ್ನಾಟಕದ ಮುಖ್ಯಮಂತ್ರಿಗಳಾದ ಬೊಮ್ಮಾಯಿ ಅವರು, ಅವರ ಪಕ್ಷದ ಸದಸ್ಯರಿಂದ ಕ್ಷಮೆ ಕೇಳಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮನುಕುಲಕ್ಕೇ ಕಪ್ಪುಚುಕ್ಕೆಯಂತೆ ಕುಪ್ಪಳಿಸಿದ ಅಸ್ಸಾಂ ಫೋಟೋಗ್ರಾಫರ್

ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಕೂಡ ಮಾಜಿ ಶಾಸಕ ಸಂಜಯ್ ಪಾಟೀಲ್ ಮಾತು ಅಸಹ್ಯದ ಪರಮಾವಧಿ ಎಂದು ವಿರುದ್ಧ ಕಿಡಿ ಕಾರಿದ್ದಾರೆ. 

“ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿಯ ಮಾಜಿ ಶಾಸಕ ಸಂಜಯ್ ಪಾಟೀಲ್ ಆಡಿರುವ ಮಾತು ಅಸಹ್ಯದ ಪರಮಾವಧಿ. ಇದು ಬಿಜೆಪಿಯವರ ಕೀಳು ಮನಸ್ಥಿತಿಯ ಅನಾವರಣ. ಸಿ.ಟಿ ರವಿಯವರು RSS ಎಂಬುವುದು ಸಂಸ್ಕೃತಿ ಹಾಗೂ ಸಂಸ್ಕಾರ ಕಲಿಸುವ ಗರಡಿ ಮನೆ ಎಂದಿದ್ದಾರೆ. ಹಾಗಾದರೆ RSS ಗರಡಿ ಮನೆಯಲ್ಲಿ‌ ಬಿಜೆಪಿ ನಾಯಕರು ಕಲಿಯುವುದು ಈ ಸಂಸ್ಕಾರವನ್ನೇ..? ಹೇಳಿ ಸಿ.ಟಿ ರವಿಯವರೆ..?” ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಹೋರಾಟಗಾರ್ತಿ, ಬರಹಗಾರ್ತಿ ಪಲ್ಲವಿ ಐದೂರು, ಬಿಜೆಪಿಯ ಸಂಜಯ ಪಾಟೀಲ ವಿರುದ್ಧ ಕಿಡಿಕಾರಿದ್ದಾರೆ.

“ಹಗಲೆಲ್ಲ ನಾಯಕರ ಮನೆ ಮುಂದೆ ಗೇಟ್ ಕೀಪರ್‌ಗಳ ತರ, ನಾಯಿಯ ತರ ಕಾವಲು ಕಾಯ್ಕೊಂಡು ಒಂದೇ ಒಂದು ಸೀಟಿಗೆ, ಅವಕಾಶಕ್ಕೆ ತಲೆ ಹಿಡಿಯೋದಕ್ಕೂ ಹಿಂದೆ ಮುಂದೆ ನೋಡದ ಇಂಥ ನಾಯಕರು ಹೆಣ್ಣುಮಕ್ಕಳು ಏನಾದರೂ ಸಾಧಿಸಿದರೆ, ಬೆಳೆದರೆ ಮಾತ್ರ ನಾಲಿಗೆಯನ್ನು ಮೋರಿಗಿಂತ ಗಲೀಜಾಗಿ ಹರಿಬಿಡ್ತಾರೆ!!” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಸಂಶೋಧಕ, ಜೆಎನ್‌ಯು ಮಾಜಿ ಪ್ರಾಧ್ಯಪಕ ಪುರುಷೋತ್ತಮ ಬಿಳಿಮಲೆ ಅವರು ಕರ್ನಾಟಕದ ಮಹಿಳೆಯರು ಪಕ್ಷಭೇದ ಮರೆತು ಇದನ್ನು ಪ್ರತಿಭಟಿಸಬೇಕು ಎಂದು ಕರೆ ನೀಡಿದ್ದಾರೆ.
“ಇಷ್ಟು ವರ್ಷಗಳು ಆದ ಮೇಲೆಯೂ ಕರ್ನಾಟಕಕ್ಕೆ ಒಬ್ಬರು ಮಹಿಳಾ ಮುಖ್ಯಮಂತ್ರಿಯನ್ನು ಪಡೆಯಲಾಗಲಿಲ್ಲ.‌ ಜೊತೆಗೆ ಮಹಿಳೆಯರು ರಾಜಕಾರಣಕ್ಕೆ ಬಂದರೆ ಇವರೆಲ್ಲ ಹೇಗೆ ನಾಲಗೆ ಹರಿಯಬಿಡುತ್ತಾರೆ ಗಮನಿಸಿ.‌
ಈ ಸಂಜಯ ಪಾಟೀಲರನ್ನು ಬಿಜೆಪಿ ಕೂಡಲೇ ಪಕ್ಷದಿಂದ ಹೊರಹಾಕಬೇಕು ಮತ್ತು ಮಾಡಿದ ತಪ್ಪಿಗೆ ಹೆಬ್ಬಾಳ್ಕರ್ ಅವರ ಕ್ಷಮೆ ಕೇಳಬೇಕು. ಇದೇನಾ ಇವರು ನಾಡಿಗೆ ಕಲಿಸುವ ಸಂಸ್ಕೃತಿ! ಕರ್ನಾಟಕದ ಮಹಿಳೆಯರು ಪಕ್ಷಭೇದ ಮರೆತು ಇದನ್ನು ಪ್ರತಿಭಟಿಸಬೇಕು” ಎಂದಿದ್ದಾರೆ.

 

ಸಂಜಯ ಪಾಟೀಲ ಅವರ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, “ನನಗೆ ಅಭಿವೃದ್ಧಿಯ ರಾಜಕಾರಣ ಮಾತ್ರ ಗೊತ್ತಿದೆ. ಸಂಜಯ ಪಾಟೀಲ ಅವರು ಹೇಳಿರುವಂತೆ ಇತರ ರಾಜಕಾರಣ ನನಗೆ ಗೊತ್ತಿಲ್ಲ. ಹೆಣ್ಣನ್ನು ಪೂಜಿಸುವ ಸಮಾಜ ನಮ್ಮದು. ಒಬ್ಬ ಶಾಸಕಿ ಬಗ್ಗೆ ಹಗುರವಾಗಿ ಮಾತನಾಡುವುದು ಸಲ್ಲದು. ಶ್ರೀರಾಮನ 2 ನೇ ಅವತಾರವಾಗಿರುವ ಸಂಜಯ ಪಾಟೀಲರಿಗೆ ದೇವರು ಒಳ್ಳೆಯದು ಮಾಡಲಿ” ಎಂದು ತಿರುಗೇಟು ನೀಡಿದ್ದರು.

ಇದನ್ನೂ ಓದಿ: ರಾತ್ರಿ ರಾಜಕಾರಣದ ಸಂಸ್ಕೃತಿಯಿಂದ ಲಕ್ಷ್ಮಿ ಹೆಬ್ಬಾಳ್ಕರ್ ಶಾಸಕಿಯಾಗಿದ್ದಾರೆ: ಬಿಜೆಪಿ ಮಾಜಿ ಶಾಸಕ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...