Homeಕರ್ನಾಟಕಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಮಹಿಳಾ ವಿರೋಧಿ ಹೇಳಿಕೆ: ಬಿಜೆಪಿಯ ಸಂಜಯ ಪಾಟೀಲ ವಿರುದ್ಧ ಆಕ್ರೋಶ

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಮಹಿಳಾ ವಿರೋಧಿ ಹೇಳಿಕೆ: ಬಿಜೆಪಿಯ ಸಂಜಯ ಪಾಟೀಲ ವಿರುದ್ಧ ಆಕ್ರೋಶ

’ಕರ್ನಾಟಕದ ಮಹಿಳೆಯರು ಪಕ್ಷಭೇದ ಮರೆತು ಇದನ್ನು ಪ್ರತಿಭಟಿಸಬೇಕು- ಪುರುಷೋತ್ತಮ ಬಿಳಿಮಲೆ’

- Advertisement -
- Advertisement -

‘‘ರಾತ್ರಿ ರಾಜಕಾರಣದ ಸಂಸ್ಕೃತಿ ತಿಳಿದಿರುವುದರಿಂದಲೆ ಕಾಂಗ್ರೆಸ್‌ನ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಶಾಸಕಿಯಾಗಿ ಆಯ್ಕೆಯಾಗಿದ್ದಾರೆ” ಎಂದು ಮಹಿಳಾ ವಿರೋಧಿ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಶಾಸಕ, ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಸಂಜಯ ಪಾಟೀಲ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ನಟ, ಸಾಮಾಜಿಕ ಹೋರಾಟಗಾರ ಚೇತನ್ ಕುಮಾರ್‌, ಯಾವುದೇ ಪಕ್ಷದ ಮಹಿಳಾ ರಾಜಕಾರಣಿಯು ಈ ರೀತಿಯ ಕೀಳುಮಟ್ಟದ ಮಾತುಗಳನ್ನು ಕೇಳಲು ಅರ್ಹರಲ್ಲ. ಪಕ್ಷದ ಸದಸ್ಯರು ಕ್ಷಮೆ ಕೇಳುವಂತೆ ಮುಖ್ಯಮಂತ್ರಿಗಳಾದ ಬೊಮ್ಮಾಯಿ ಆಗ್ರಹಿಸಬೇಕು ಎಂದಿದ್ದಾರೆ.

“ಮಾಜಿ ಬಿಜೆಪಿ ಶಾಸಕರೊಬ್ಬರು ಬೆಳಗಾವಿ ಗ್ರಾಮೀಣ ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರೆಡೆಗೆ ಸಂಶಯಾಸ್ಪದ ಟೀಕೆಗಳನ್ನು ಮಾಡುತ್ತಾ, ಆಕೆ “ನೈಟ್ ಪಾಲಟಿಕ್ಸ್” ಮೂಲಕ ಶಾಸಕರಾಗಿದ್ದಾರೆ ಎಂದು ಹೇಳಿದ್ದಾರೆ. ಯಾವುದೇ ಪಕ್ಷದ ಮಹಿಳಾ ರಾಜಕಾರಣಿಯು ಈ ರೀತಿಯ ಕೀಳುಮಟ್ಟದ ಮಾತುಗಳನ್ನು ಕೇಳಲು ಅರ್ಹರಲ್ಲ. ಕರ್ನಾಟಕದ ಮುಖ್ಯಮಂತ್ರಿಗಳಾದ ಬೊಮ್ಮಾಯಿ ಅವರು, ಅವರ ಪಕ್ಷದ ಸದಸ್ಯರಿಂದ ಕ್ಷಮೆ ಕೇಳಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮನುಕುಲಕ್ಕೇ ಕಪ್ಪುಚುಕ್ಕೆಯಂತೆ ಕುಪ್ಪಳಿಸಿದ ಅಸ್ಸಾಂ ಫೋಟೋಗ್ರಾಫರ್

ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಕೂಡ ಮಾಜಿ ಶಾಸಕ ಸಂಜಯ್ ಪಾಟೀಲ್ ಮಾತು ಅಸಹ್ಯದ ಪರಮಾವಧಿ ಎಂದು ವಿರುದ್ಧ ಕಿಡಿ ಕಾರಿದ್ದಾರೆ. 

“ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿಯ ಮಾಜಿ ಶಾಸಕ ಸಂಜಯ್ ಪಾಟೀಲ್ ಆಡಿರುವ ಮಾತು ಅಸಹ್ಯದ ಪರಮಾವಧಿ. ಇದು ಬಿಜೆಪಿಯವರ ಕೀಳು ಮನಸ್ಥಿತಿಯ ಅನಾವರಣ. ಸಿ.ಟಿ ರವಿಯವರು RSS ಎಂಬುವುದು ಸಂಸ್ಕೃತಿ ಹಾಗೂ ಸಂಸ್ಕಾರ ಕಲಿಸುವ ಗರಡಿ ಮನೆ ಎಂದಿದ್ದಾರೆ. ಹಾಗಾದರೆ RSS ಗರಡಿ ಮನೆಯಲ್ಲಿ‌ ಬಿಜೆಪಿ ನಾಯಕರು ಕಲಿಯುವುದು ಈ ಸಂಸ್ಕಾರವನ್ನೇ..? ಹೇಳಿ ಸಿ.ಟಿ ರವಿಯವರೆ..?” ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಹೋರಾಟಗಾರ್ತಿ, ಬರಹಗಾರ್ತಿ ಪಲ್ಲವಿ ಐದೂರು, ಬಿಜೆಪಿಯ ಸಂಜಯ ಪಾಟೀಲ ವಿರುದ್ಧ ಕಿಡಿಕಾರಿದ್ದಾರೆ.

“ಹಗಲೆಲ್ಲ ನಾಯಕರ ಮನೆ ಮುಂದೆ ಗೇಟ್ ಕೀಪರ್‌ಗಳ ತರ, ನಾಯಿಯ ತರ ಕಾವಲು ಕಾಯ್ಕೊಂಡು ಒಂದೇ ಒಂದು ಸೀಟಿಗೆ, ಅವಕಾಶಕ್ಕೆ ತಲೆ ಹಿಡಿಯೋದಕ್ಕೂ ಹಿಂದೆ ಮುಂದೆ ನೋಡದ ಇಂಥ ನಾಯಕರು ಹೆಣ್ಣುಮಕ್ಕಳು ಏನಾದರೂ ಸಾಧಿಸಿದರೆ, ಬೆಳೆದರೆ ಮಾತ್ರ ನಾಲಿಗೆಯನ್ನು ಮೋರಿಗಿಂತ ಗಲೀಜಾಗಿ ಹರಿಬಿಡ್ತಾರೆ!!” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಸಂಶೋಧಕ, ಜೆಎನ್‌ಯು ಮಾಜಿ ಪ್ರಾಧ್ಯಪಕ ಪುರುಷೋತ್ತಮ ಬಿಳಿಮಲೆ ಅವರು ಕರ್ನಾಟಕದ ಮಹಿಳೆಯರು ಪಕ್ಷಭೇದ ಮರೆತು ಇದನ್ನು ಪ್ರತಿಭಟಿಸಬೇಕು ಎಂದು ಕರೆ ನೀಡಿದ್ದಾರೆ.
“ಇಷ್ಟು ವರ್ಷಗಳು ಆದ ಮೇಲೆಯೂ ಕರ್ನಾಟಕಕ್ಕೆ ಒಬ್ಬರು ಮಹಿಳಾ ಮುಖ್ಯಮಂತ್ರಿಯನ್ನು ಪಡೆಯಲಾಗಲಿಲ್ಲ.‌ ಜೊತೆಗೆ ಮಹಿಳೆಯರು ರಾಜಕಾರಣಕ್ಕೆ ಬಂದರೆ ಇವರೆಲ್ಲ ಹೇಗೆ ನಾಲಗೆ ಹರಿಯಬಿಡುತ್ತಾರೆ ಗಮನಿಸಿ.‌
ಈ ಸಂಜಯ ಪಾಟೀಲರನ್ನು ಬಿಜೆಪಿ ಕೂಡಲೇ ಪಕ್ಷದಿಂದ ಹೊರಹಾಕಬೇಕು ಮತ್ತು ಮಾಡಿದ ತಪ್ಪಿಗೆ ಹೆಬ್ಬಾಳ್ಕರ್ ಅವರ ಕ್ಷಮೆ ಕೇಳಬೇಕು. ಇದೇನಾ ಇವರು ನಾಡಿಗೆ ಕಲಿಸುವ ಸಂಸ್ಕೃತಿ! ಕರ್ನಾಟಕದ ಮಹಿಳೆಯರು ಪಕ್ಷಭೇದ ಮರೆತು ಇದನ್ನು ಪ್ರತಿಭಟಿಸಬೇಕು” ಎಂದಿದ್ದಾರೆ.

 

ಸಂಜಯ ಪಾಟೀಲ ಅವರ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, “ನನಗೆ ಅಭಿವೃದ್ಧಿಯ ರಾಜಕಾರಣ ಮಾತ್ರ ಗೊತ್ತಿದೆ. ಸಂಜಯ ಪಾಟೀಲ ಅವರು ಹೇಳಿರುವಂತೆ ಇತರ ರಾಜಕಾರಣ ನನಗೆ ಗೊತ್ತಿಲ್ಲ. ಹೆಣ್ಣನ್ನು ಪೂಜಿಸುವ ಸಮಾಜ ನಮ್ಮದು. ಒಬ್ಬ ಶಾಸಕಿ ಬಗ್ಗೆ ಹಗುರವಾಗಿ ಮಾತನಾಡುವುದು ಸಲ್ಲದು. ಶ್ರೀರಾಮನ 2 ನೇ ಅವತಾರವಾಗಿರುವ ಸಂಜಯ ಪಾಟೀಲರಿಗೆ ದೇವರು ಒಳ್ಳೆಯದು ಮಾಡಲಿ” ಎಂದು ತಿರುಗೇಟು ನೀಡಿದ್ದರು.

ಇದನ್ನೂ ಓದಿ: ರಾತ್ರಿ ರಾಜಕಾರಣದ ಸಂಸ್ಕೃತಿಯಿಂದ ಲಕ್ಷ್ಮಿ ಹೆಬ್ಬಾಳ್ಕರ್ ಶಾಸಕಿಯಾಗಿದ್ದಾರೆ: ಬಿಜೆಪಿ ಮಾಜಿ ಶಾಸಕ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...