Homeಕರ್ನಾಟಕರಾಜಿನಾಮೆ ರಾಜಕಾರಣದ ರಾಡಿ: ಜಿಗುಪ್ಸೆಯ ನಡುವೆಯೂ ಕುತೂಹಲ

ರಾಜಿನಾಮೆ ರಾಜಕಾರಣದ ರಾಡಿ: ಜಿಗುಪ್ಸೆಯ ನಡುವೆಯೂ ಕುತೂಹಲ

- Advertisement -
- Advertisement -

ಒಂಥರಾ ಟ್ವೆಂಟಿ-20 ಪಂದ್ಯದಂತೆ ಇಲ್ಲಿ ಸ್ಕೋರ್ ಬೋರ್ಡ್ ಬದಲಾಗುತ್ತಿದೆ. ಸಂವಿಧಾನವನ್ನೇ ಅರಗಿಸಿಕೊಂಡಂತೆ ಟಿವಿ ಸ್ಟುಡಿಯೋಗಳಿಂದ ಪಂದ್ಯದ ‘ರಿಸಲ್ಟ್’ ಹೊರಬೀಳುತ್ತಿವೆ. ಟ್ವೆಂಟಿ-20 ಪಂದ್ಯದಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್‍ಗಳನ್ನು ಹಿನ್ನೆಲೆಗೆ ಸರಿಸಿದಂತೆ ಇಲ್ಲಿಯೂ ಕುದುರೆ ವ್ಯಾಪಾರವನ್ನು ಹಿನ್ನೆಲೆಗೆ ಸರಿಸಲಾಗಿದೆ. ಸೋಲುವ ಭೀತಿಯಲ್ಲಿರುವ ಸಮ್ಮಿಶ್ರ ಟೀಮ್ ಕೈಚೆಲ್ಲಿದಂತೆ ಒದ್ದಾಡುತ್ತ, ಧೋ ಅಂತ ಮಳೆ ಸುರಿಯಲಿ ಎಂದು ಮುಗಿಲು ನೋಡುತ್ತಿದೆ. ಒಟ್ಟೂ ಈ ರಾಜಕಾರಣದ ಬಗ್ಗೆ ಜಿಗುಪ್ಸೆಯ ಭಾವನೆ ಹೊಂದಿರುವ ಸಾಮಾನ್ಯ ಜನರು ಬರದ ಬೇಗುದಿಯಲ್ಲೂ ಪಂದ್ಯವನ್ನು ವೀಕ್ಷಿಸುತ್ತ ಎಂಜಾಯ್ ಮಾಡುತ್ತ, ಗಂಟೆಗೊಮ್ಮೆ ಬದಲಾಗುತ್ತಿರುವ ರಾಜಕಾರಣವನ್ನು ಉಗಿಯುತ್ತ ತಮ್ಮ ಪಾಳೆಯಕ್ಕಾಗಿ ಕಾದಿದ್ದಾರೆ.

ಇಲ್ಲಿ ನಾಳೆ ಏನಾಗುತ್ತೆ ಎನ್ನುವುದು ಸ್ಪಷ್ಟವಾಗುತ್ತಿದ್ದರೂ ಚುಟುಕು ಪಂದ್ಯದಲ್ಲಿ ಏನಾದರೂ ಆಗಬಹುದು. ಒಂದು ಟೀಮ್‍ನ ಆಂತರಿಕ ಸದಸ್ಯರೇ ಆಗಿರುವ ಅಂಪೈರ್ ಸಾಹೇಬರು ಮೌನ ಮುರಿಯುತ್ತಲೇ ಇಲ್ಲ. ಇದು ಕೂಡ ನಿಗೂಢವಾಗಿದೆ. ಸರಿಯಾಗಿ ಒಂದು ವರ್ಷ ಎರಡು ತಿಂಗಳ ಹಿಂದೆ ಇದೇ ಅಂಪೈರ್ ತಾವೇ ‘ಸಾಂವಿಧಾನಿಕ’ ಬಿಕ್ಕಟ್ಟನ್ನು ಸೃಷ್ಟಿಸಲು ಹೋಗಿ ಸುಪ್ರಿಂಕೋರ್ಟ್‍ನ ಕೆಂಗಣ್ಣಿಗೆ ಗುರಿಯಾಗಿದ್ದರು.

ಇದೆಲ್ಲವನ್ನೂ ಹಿನ್ನೆಲೆಯಲ್ಲಿ ಇಟ್ಟುಕೊಂಡು ನೋಡಿದಾಗ, ಇಲ್ಲಿ ಸರ್ಕಾರ ಇದ್ದರೆಷ್ಟು, ಬಿದ್ದರೆಷ್ಟು ಎಂಬ ಭಾವವಂತೂ ಜನರಿಗೆ ಇದೆ. ಹಾಗೆಯೇ ಹೊಸ ಸರ್ಕಾರ ಬಂದರೂ ಮತ್ತದೇ ಅತಂತ್ರ ವಾತಾವರಣ ಎಂಬ ಪ್ರಾಥಮಿಕ ಜ್ಞಾನವೂ ಜನರಲ್ಲಿದೆ. ಆದರೆ ಈಗ ಪಾರ್ಟಿ ಬದಲಿಸರುವ ಜನಪ್ರತಿನಿಧಿಗಳಿಗೆ ಇದು ಗೊತ್ತಿದ್ದರೂ, ಅವರು ಯಾವ ಅಳುಕಿಲ್ಲದೇ ಏಕೆ ಹೋಗುತ್ತಿದ್ದಾರೆ?

ಇದರ ಮೂಲ ಹುಡುಕುತ್ತ ಹೋದರೆ, ಅದು 2008ರ ಸಂದರ್ಭಕ್ಕೆ ಬಂದು ನಿಲ್ಲುತ್ತದೆ. ಪಕ್ಷಾಂತರ ಕಾನೂನನ್ನೇ ಅಣಕಿಸುವಂತೆ ಚಾಲೆಂಜ್ ಮಾಡಿದ ‘ಆಪರೇಷನ್ ಕಮಲ’ ಎಂಬ ಜನದ್ರೋಹಿ ನಡೆ ಶುರುವಾಯಿತಲ್ಲ, ಅದು ರಾಜಕಾರಣದಲ್ಲಿ ದಿಢೀರ್ ಕೋಟಿಗಳನ್ನು ಸಂಪಾದಿಸುವ ಮಾರ್ಗವನ್ನು ತೋರಿಸಿಕೊಟ್ಟಿತು. ಮೊದಲ ಆಪರೇಷನ್ ಕಮಲದ ಫಲಾನುಭವಿಗಳು ಇವತ್ತು ಎಷ್ಟು ನಿಶ್ಚಿಂತರಾಗಿದ್ದಾರೆ ಎಂದರೆ, ಅವರಿಗೆ ಈಗ ಚುನಾವಣೆ ಎಂಬುದೀಗ ಜೂಜು. ಅಭಿವೃದ್ಧಿ ಹೆಸರಲ್ಲಿ ಕಮಿಷನ್ ಹೆಸರಲ್ಲಿ ಬರುವ ದುಡ್ಡು ಜುಜುಬಿ. ಇಲ್ಲಿ ಸಿಕ್ಕಿ ಬಿದ್ದರೆ ಮಾನಗೇಡಿ. ಆದರೆ ಆಪರೇಷನ್ ಕಮಲದಲ್ಲಿ ಅನಾತಾಸವಾಗಿ 30-80 ಕೋಟಿವರೆಗೆ ಪಡೆದರೆ ಅದಕ್ಕೆ ಯಾವ ಕಾನೂನಿನ ಅಡಿಯೂ ಇಲ್ಲ!

2008ರಲ್ಲಿ ಬಿಜೆಪಿಯಿಂದ ಚಾಲನೆಗೊಂಡ ಈ ಬಲ್ಕ್ ವ್ಯಾಪಾರದ ಬಗ್ಗೆ ಯಾವ ಪಕ್ಷಕ್ಕೂ ಅಂತಹ ಅಸಹ್ಯವೇನೂ ಇಲ್ಲ. ಹೀಗಾಗಿ ಈ ರೋಗ ದೇಶದ ಎಲ್ಲ ರಾಜ್ಯಗಳಿಗೂ ಹಬ್ಬಿದೆ. ಶಾಂತವೇರಿ ಗೋಪಾಲಗೌಡ, ದೇವರಾಜ ಅರಸು, ನಜೀರ್ ಸಾಬ್‍ರಂತಹ ಮಾದರಿ ರಾಜಕಾರಣಿಗಳನ್ನು ಕೊಟ್ಟ ಕರ್ನಾಟಕವೇ ಆಪರೇಷನ್ ಕಮಲ ಎಂಬ ಹೇಯ ರಾಜಕೀಯದ ಪಿತೃ ಆಗಿರುವುದು ಒಟ್ಟೂ ರಾಜಕಾರಣದ ದುರಂತ.

ಮುಂಬೈನಲ್ಲಿ ಅತೃಪ್ತರು ತಂಗಿರುವ ಹೊಟೆಲ್‍ನ ರೂಮ್ ಬಾಡಿಗೆ ದರವನ್ನು ಉಲ್ಲೇಖಿಸುವಾಗ ಮಾಧ್ಯಮ ಮಿತ್ರರು ಅದನ್ನು ವೈಭವೀಕರಿಸುತ್ತಿದ್ದಾರೆಯೇ ವಿನ: ಅವರಿಗೆ ಇದೆಲ್ಲದರ ಹಿಂದಿರುವ ಹಣದ ಮೂಲದ ಬಗ್ಗೆ ಪ್ರಶ್ನೆಯೂ ಇಲ್ಲ. ಇವತ್ತು ಅಸಹಾಯಕ ಸ್ಥಿಯಲ್ಲಿರುವ ಮೈತ್ರಿ ಪಕ್ಷಗಳಿಗೂ ಇದನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ.

ರೆಸಾರ್ಟ್ ರಾಜಕಾರಣ ಎಂಬುದು ಈಗ ಸಹಜ ವಿದ್ಯಮಾನ ಎಂದು ಬಿಂಬಿತವಾಗಿರುವ ಈ ಸಂದರ್ಭದಲ್ಲಿ ನಾಳೆ ಹೊಸ ಸರ್ಕಾರವೋ, ರಾಷ್ಟ್ರಪತಿ ಆಡಳಿತವೋ ಎಂದು ಚರ್ಚಿಸುವುದೇ ಈ ಹೊತ್ತಿನ ವ್ಯಂಗ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...