Homeಕರ್ನಾಟಕರಾಜಿನಾಮೆ ರಾಜಕಾರಣದ ರಾಡಿ: ಜಿಗುಪ್ಸೆಯ ನಡುವೆಯೂ ಕುತೂಹಲ

ರಾಜಿನಾಮೆ ರಾಜಕಾರಣದ ರಾಡಿ: ಜಿಗುಪ್ಸೆಯ ನಡುವೆಯೂ ಕುತೂಹಲ

- Advertisement -
- Advertisement -

ಒಂಥರಾ ಟ್ವೆಂಟಿ-20 ಪಂದ್ಯದಂತೆ ಇಲ್ಲಿ ಸ್ಕೋರ್ ಬೋರ್ಡ್ ಬದಲಾಗುತ್ತಿದೆ. ಸಂವಿಧಾನವನ್ನೇ ಅರಗಿಸಿಕೊಂಡಂತೆ ಟಿವಿ ಸ್ಟುಡಿಯೋಗಳಿಂದ ಪಂದ್ಯದ ‘ರಿಸಲ್ಟ್’ ಹೊರಬೀಳುತ್ತಿವೆ. ಟ್ವೆಂಟಿ-20 ಪಂದ್ಯದಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್‍ಗಳನ್ನು ಹಿನ್ನೆಲೆಗೆ ಸರಿಸಿದಂತೆ ಇಲ್ಲಿಯೂ ಕುದುರೆ ವ್ಯಾಪಾರವನ್ನು ಹಿನ್ನೆಲೆಗೆ ಸರಿಸಲಾಗಿದೆ. ಸೋಲುವ ಭೀತಿಯಲ್ಲಿರುವ ಸಮ್ಮಿಶ್ರ ಟೀಮ್ ಕೈಚೆಲ್ಲಿದಂತೆ ಒದ್ದಾಡುತ್ತ, ಧೋ ಅಂತ ಮಳೆ ಸುರಿಯಲಿ ಎಂದು ಮುಗಿಲು ನೋಡುತ್ತಿದೆ. ಒಟ್ಟೂ ಈ ರಾಜಕಾರಣದ ಬಗ್ಗೆ ಜಿಗುಪ್ಸೆಯ ಭಾವನೆ ಹೊಂದಿರುವ ಸಾಮಾನ್ಯ ಜನರು ಬರದ ಬೇಗುದಿಯಲ್ಲೂ ಪಂದ್ಯವನ್ನು ವೀಕ್ಷಿಸುತ್ತ ಎಂಜಾಯ್ ಮಾಡುತ್ತ, ಗಂಟೆಗೊಮ್ಮೆ ಬದಲಾಗುತ್ತಿರುವ ರಾಜಕಾರಣವನ್ನು ಉಗಿಯುತ್ತ ತಮ್ಮ ಪಾಳೆಯಕ್ಕಾಗಿ ಕಾದಿದ್ದಾರೆ.

ಇಲ್ಲಿ ನಾಳೆ ಏನಾಗುತ್ತೆ ಎನ್ನುವುದು ಸ್ಪಷ್ಟವಾಗುತ್ತಿದ್ದರೂ ಚುಟುಕು ಪಂದ್ಯದಲ್ಲಿ ಏನಾದರೂ ಆಗಬಹುದು. ಒಂದು ಟೀಮ್‍ನ ಆಂತರಿಕ ಸದಸ್ಯರೇ ಆಗಿರುವ ಅಂಪೈರ್ ಸಾಹೇಬರು ಮೌನ ಮುರಿಯುತ್ತಲೇ ಇಲ್ಲ. ಇದು ಕೂಡ ನಿಗೂಢವಾಗಿದೆ. ಸರಿಯಾಗಿ ಒಂದು ವರ್ಷ ಎರಡು ತಿಂಗಳ ಹಿಂದೆ ಇದೇ ಅಂಪೈರ್ ತಾವೇ ‘ಸಾಂವಿಧಾನಿಕ’ ಬಿಕ್ಕಟ್ಟನ್ನು ಸೃಷ್ಟಿಸಲು ಹೋಗಿ ಸುಪ್ರಿಂಕೋರ್ಟ್‍ನ ಕೆಂಗಣ್ಣಿಗೆ ಗುರಿಯಾಗಿದ್ದರು.

ಇದೆಲ್ಲವನ್ನೂ ಹಿನ್ನೆಲೆಯಲ್ಲಿ ಇಟ್ಟುಕೊಂಡು ನೋಡಿದಾಗ, ಇಲ್ಲಿ ಸರ್ಕಾರ ಇದ್ದರೆಷ್ಟು, ಬಿದ್ದರೆಷ್ಟು ಎಂಬ ಭಾವವಂತೂ ಜನರಿಗೆ ಇದೆ. ಹಾಗೆಯೇ ಹೊಸ ಸರ್ಕಾರ ಬಂದರೂ ಮತ್ತದೇ ಅತಂತ್ರ ವಾತಾವರಣ ಎಂಬ ಪ್ರಾಥಮಿಕ ಜ್ಞಾನವೂ ಜನರಲ್ಲಿದೆ. ಆದರೆ ಈಗ ಪಾರ್ಟಿ ಬದಲಿಸರುವ ಜನಪ್ರತಿನಿಧಿಗಳಿಗೆ ಇದು ಗೊತ್ತಿದ್ದರೂ, ಅವರು ಯಾವ ಅಳುಕಿಲ್ಲದೇ ಏಕೆ ಹೋಗುತ್ತಿದ್ದಾರೆ?

ಇದರ ಮೂಲ ಹುಡುಕುತ್ತ ಹೋದರೆ, ಅದು 2008ರ ಸಂದರ್ಭಕ್ಕೆ ಬಂದು ನಿಲ್ಲುತ್ತದೆ. ಪಕ್ಷಾಂತರ ಕಾನೂನನ್ನೇ ಅಣಕಿಸುವಂತೆ ಚಾಲೆಂಜ್ ಮಾಡಿದ ‘ಆಪರೇಷನ್ ಕಮಲ’ ಎಂಬ ಜನದ್ರೋಹಿ ನಡೆ ಶುರುವಾಯಿತಲ್ಲ, ಅದು ರಾಜಕಾರಣದಲ್ಲಿ ದಿಢೀರ್ ಕೋಟಿಗಳನ್ನು ಸಂಪಾದಿಸುವ ಮಾರ್ಗವನ್ನು ತೋರಿಸಿಕೊಟ್ಟಿತು. ಮೊದಲ ಆಪರೇಷನ್ ಕಮಲದ ಫಲಾನುಭವಿಗಳು ಇವತ್ತು ಎಷ್ಟು ನಿಶ್ಚಿಂತರಾಗಿದ್ದಾರೆ ಎಂದರೆ, ಅವರಿಗೆ ಈಗ ಚುನಾವಣೆ ಎಂಬುದೀಗ ಜೂಜು. ಅಭಿವೃದ್ಧಿ ಹೆಸರಲ್ಲಿ ಕಮಿಷನ್ ಹೆಸರಲ್ಲಿ ಬರುವ ದುಡ್ಡು ಜುಜುಬಿ. ಇಲ್ಲಿ ಸಿಕ್ಕಿ ಬಿದ್ದರೆ ಮಾನಗೇಡಿ. ಆದರೆ ಆಪರೇಷನ್ ಕಮಲದಲ್ಲಿ ಅನಾತಾಸವಾಗಿ 30-80 ಕೋಟಿವರೆಗೆ ಪಡೆದರೆ ಅದಕ್ಕೆ ಯಾವ ಕಾನೂನಿನ ಅಡಿಯೂ ಇಲ್ಲ!

2008ರಲ್ಲಿ ಬಿಜೆಪಿಯಿಂದ ಚಾಲನೆಗೊಂಡ ಈ ಬಲ್ಕ್ ವ್ಯಾಪಾರದ ಬಗ್ಗೆ ಯಾವ ಪಕ್ಷಕ್ಕೂ ಅಂತಹ ಅಸಹ್ಯವೇನೂ ಇಲ್ಲ. ಹೀಗಾಗಿ ಈ ರೋಗ ದೇಶದ ಎಲ್ಲ ರಾಜ್ಯಗಳಿಗೂ ಹಬ್ಬಿದೆ. ಶಾಂತವೇರಿ ಗೋಪಾಲಗೌಡ, ದೇವರಾಜ ಅರಸು, ನಜೀರ್ ಸಾಬ್‍ರಂತಹ ಮಾದರಿ ರಾಜಕಾರಣಿಗಳನ್ನು ಕೊಟ್ಟ ಕರ್ನಾಟಕವೇ ಆಪರೇಷನ್ ಕಮಲ ಎಂಬ ಹೇಯ ರಾಜಕೀಯದ ಪಿತೃ ಆಗಿರುವುದು ಒಟ್ಟೂ ರಾಜಕಾರಣದ ದುರಂತ.

ಮುಂಬೈನಲ್ಲಿ ಅತೃಪ್ತರು ತಂಗಿರುವ ಹೊಟೆಲ್‍ನ ರೂಮ್ ಬಾಡಿಗೆ ದರವನ್ನು ಉಲ್ಲೇಖಿಸುವಾಗ ಮಾಧ್ಯಮ ಮಿತ್ರರು ಅದನ್ನು ವೈಭವೀಕರಿಸುತ್ತಿದ್ದಾರೆಯೇ ವಿನ: ಅವರಿಗೆ ಇದೆಲ್ಲದರ ಹಿಂದಿರುವ ಹಣದ ಮೂಲದ ಬಗ್ಗೆ ಪ್ರಶ್ನೆಯೂ ಇಲ್ಲ. ಇವತ್ತು ಅಸಹಾಯಕ ಸ್ಥಿಯಲ್ಲಿರುವ ಮೈತ್ರಿ ಪಕ್ಷಗಳಿಗೂ ಇದನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ.

ರೆಸಾರ್ಟ್ ರಾಜಕಾರಣ ಎಂಬುದು ಈಗ ಸಹಜ ವಿದ್ಯಮಾನ ಎಂದು ಬಿಂಬಿತವಾಗಿರುವ ಈ ಸಂದರ್ಭದಲ್ಲಿ ನಾಳೆ ಹೊಸ ಸರ್ಕಾರವೋ, ರಾಷ್ಟ್ರಪತಿ ಆಡಳಿತವೋ ಎಂದು ಚರ್ಚಿಸುವುದೇ ಈ ಹೊತ್ತಿನ ವ್ಯಂಗ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...