Homeಕರ್ನಾಟಕರಾಜಿನಾಮೆ ರಾಜಕಾರಣದ ರಾಡಿ: ಜಿಗುಪ್ಸೆಯ ನಡುವೆಯೂ ಕುತೂಹಲ

ರಾಜಿನಾಮೆ ರಾಜಕಾರಣದ ರಾಡಿ: ಜಿಗುಪ್ಸೆಯ ನಡುವೆಯೂ ಕುತೂಹಲ

- Advertisement -
- Advertisement -

ಒಂಥರಾ ಟ್ವೆಂಟಿ-20 ಪಂದ್ಯದಂತೆ ಇಲ್ಲಿ ಸ್ಕೋರ್ ಬೋರ್ಡ್ ಬದಲಾಗುತ್ತಿದೆ. ಸಂವಿಧಾನವನ್ನೇ ಅರಗಿಸಿಕೊಂಡಂತೆ ಟಿವಿ ಸ್ಟುಡಿಯೋಗಳಿಂದ ಪಂದ್ಯದ ‘ರಿಸಲ್ಟ್’ ಹೊರಬೀಳುತ್ತಿವೆ. ಟ್ವೆಂಟಿ-20 ಪಂದ್ಯದಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್‍ಗಳನ್ನು ಹಿನ್ನೆಲೆಗೆ ಸರಿಸಿದಂತೆ ಇಲ್ಲಿಯೂ ಕುದುರೆ ವ್ಯಾಪಾರವನ್ನು ಹಿನ್ನೆಲೆಗೆ ಸರಿಸಲಾಗಿದೆ. ಸೋಲುವ ಭೀತಿಯಲ್ಲಿರುವ ಸಮ್ಮಿಶ್ರ ಟೀಮ್ ಕೈಚೆಲ್ಲಿದಂತೆ ಒದ್ದಾಡುತ್ತ, ಧೋ ಅಂತ ಮಳೆ ಸುರಿಯಲಿ ಎಂದು ಮುಗಿಲು ನೋಡುತ್ತಿದೆ. ಒಟ್ಟೂ ಈ ರಾಜಕಾರಣದ ಬಗ್ಗೆ ಜಿಗುಪ್ಸೆಯ ಭಾವನೆ ಹೊಂದಿರುವ ಸಾಮಾನ್ಯ ಜನರು ಬರದ ಬೇಗುದಿಯಲ್ಲೂ ಪಂದ್ಯವನ್ನು ವೀಕ್ಷಿಸುತ್ತ ಎಂಜಾಯ್ ಮಾಡುತ್ತ, ಗಂಟೆಗೊಮ್ಮೆ ಬದಲಾಗುತ್ತಿರುವ ರಾಜಕಾರಣವನ್ನು ಉಗಿಯುತ್ತ ತಮ್ಮ ಪಾಳೆಯಕ್ಕಾಗಿ ಕಾದಿದ್ದಾರೆ.

ಇಲ್ಲಿ ನಾಳೆ ಏನಾಗುತ್ತೆ ಎನ್ನುವುದು ಸ್ಪಷ್ಟವಾಗುತ್ತಿದ್ದರೂ ಚುಟುಕು ಪಂದ್ಯದಲ್ಲಿ ಏನಾದರೂ ಆಗಬಹುದು. ಒಂದು ಟೀಮ್‍ನ ಆಂತರಿಕ ಸದಸ್ಯರೇ ಆಗಿರುವ ಅಂಪೈರ್ ಸಾಹೇಬರು ಮೌನ ಮುರಿಯುತ್ತಲೇ ಇಲ್ಲ. ಇದು ಕೂಡ ನಿಗೂಢವಾಗಿದೆ. ಸರಿಯಾಗಿ ಒಂದು ವರ್ಷ ಎರಡು ತಿಂಗಳ ಹಿಂದೆ ಇದೇ ಅಂಪೈರ್ ತಾವೇ ‘ಸಾಂವಿಧಾನಿಕ’ ಬಿಕ್ಕಟ್ಟನ್ನು ಸೃಷ್ಟಿಸಲು ಹೋಗಿ ಸುಪ್ರಿಂಕೋರ್ಟ್‍ನ ಕೆಂಗಣ್ಣಿಗೆ ಗುರಿಯಾಗಿದ್ದರು.

ಇದೆಲ್ಲವನ್ನೂ ಹಿನ್ನೆಲೆಯಲ್ಲಿ ಇಟ್ಟುಕೊಂಡು ನೋಡಿದಾಗ, ಇಲ್ಲಿ ಸರ್ಕಾರ ಇದ್ದರೆಷ್ಟು, ಬಿದ್ದರೆಷ್ಟು ಎಂಬ ಭಾವವಂತೂ ಜನರಿಗೆ ಇದೆ. ಹಾಗೆಯೇ ಹೊಸ ಸರ್ಕಾರ ಬಂದರೂ ಮತ್ತದೇ ಅತಂತ್ರ ವಾತಾವರಣ ಎಂಬ ಪ್ರಾಥಮಿಕ ಜ್ಞಾನವೂ ಜನರಲ್ಲಿದೆ. ಆದರೆ ಈಗ ಪಾರ್ಟಿ ಬದಲಿಸರುವ ಜನಪ್ರತಿನಿಧಿಗಳಿಗೆ ಇದು ಗೊತ್ತಿದ್ದರೂ, ಅವರು ಯಾವ ಅಳುಕಿಲ್ಲದೇ ಏಕೆ ಹೋಗುತ್ತಿದ್ದಾರೆ?

ಇದರ ಮೂಲ ಹುಡುಕುತ್ತ ಹೋದರೆ, ಅದು 2008ರ ಸಂದರ್ಭಕ್ಕೆ ಬಂದು ನಿಲ್ಲುತ್ತದೆ. ಪಕ್ಷಾಂತರ ಕಾನೂನನ್ನೇ ಅಣಕಿಸುವಂತೆ ಚಾಲೆಂಜ್ ಮಾಡಿದ ‘ಆಪರೇಷನ್ ಕಮಲ’ ಎಂಬ ಜನದ್ರೋಹಿ ನಡೆ ಶುರುವಾಯಿತಲ್ಲ, ಅದು ರಾಜಕಾರಣದಲ್ಲಿ ದಿಢೀರ್ ಕೋಟಿಗಳನ್ನು ಸಂಪಾದಿಸುವ ಮಾರ್ಗವನ್ನು ತೋರಿಸಿಕೊಟ್ಟಿತು. ಮೊದಲ ಆಪರೇಷನ್ ಕಮಲದ ಫಲಾನುಭವಿಗಳು ಇವತ್ತು ಎಷ್ಟು ನಿಶ್ಚಿಂತರಾಗಿದ್ದಾರೆ ಎಂದರೆ, ಅವರಿಗೆ ಈಗ ಚುನಾವಣೆ ಎಂಬುದೀಗ ಜೂಜು. ಅಭಿವೃದ್ಧಿ ಹೆಸರಲ್ಲಿ ಕಮಿಷನ್ ಹೆಸರಲ್ಲಿ ಬರುವ ದುಡ್ಡು ಜುಜುಬಿ. ಇಲ್ಲಿ ಸಿಕ್ಕಿ ಬಿದ್ದರೆ ಮಾನಗೇಡಿ. ಆದರೆ ಆಪರೇಷನ್ ಕಮಲದಲ್ಲಿ ಅನಾತಾಸವಾಗಿ 30-80 ಕೋಟಿವರೆಗೆ ಪಡೆದರೆ ಅದಕ್ಕೆ ಯಾವ ಕಾನೂನಿನ ಅಡಿಯೂ ಇಲ್ಲ!

2008ರಲ್ಲಿ ಬಿಜೆಪಿಯಿಂದ ಚಾಲನೆಗೊಂಡ ಈ ಬಲ್ಕ್ ವ್ಯಾಪಾರದ ಬಗ್ಗೆ ಯಾವ ಪಕ್ಷಕ್ಕೂ ಅಂತಹ ಅಸಹ್ಯವೇನೂ ಇಲ್ಲ. ಹೀಗಾಗಿ ಈ ರೋಗ ದೇಶದ ಎಲ್ಲ ರಾಜ್ಯಗಳಿಗೂ ಹಬ್ಬಿದೆ. ಶಾಂತವೇರಿ ಗೋಪಾಲಗೌಡ, ದೇವರಾಜ ಅರಸು, ನಜೀರ್ ಸಾಬ್‍ರಂತಹ ಮಾದರಿ ರಾಜಕಾರಣಿಗಳನ್ನು ಕೊಟ್ಟ ಕರ್ನಾಟಕವೇ ಆಪರೇಷನ್ ಕಮಲ ಎಂಬ ಹೇಯ ರಾಜಕೀಯದ ಪಿತೃ ಆಗಿರುವುದು ಒಟ್ಟೂ ರಾಜಕಾರಣದ ದುರಂತ.

ಮುಂಬೈನಲ್ಲಿ ಅತೃಪ್ತರು ತಂಗಿರುವ ಹೊಟೆಲ್‍ನ ರೂಮ್ ಬಾಡಿಗೆ ದರವನ್ನು ಉಲ್ಲೇಖಿಸುವಾಗ ಮಾಧ್ಯಮ ಮಿತ್ರರು ಅದನ್ನು ವೈಭವೀಕರಿಸುತ್ತಿದ್ದಾರೆಯೇ ವಿನ: ಅವರಿಗೆ ಇದೆಲ್ಲದರ ಹಿಂದಿರುವ ಹಣದ ಮೂಲದ ಬಗ್ಗೆ ಪ್ರಶ್ನೆಯೂ ಇಲ್ಲ. ಇವತ್ತು ಅಸಹಾಯಕ ಸ್ಥಿಯಲ್ಲಿರುವ ಮೈತ್ರಿ ಪಕ್ಷಗಳಿಗೂ ಇದನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ.

ರೆಸಾರ್ಟ್ ರಾಜಕಾರಣ ಎಂಬುದು ಈಗ ಸಹಜ ವಿದ್ಯಮಾನ ಎಂದು ಬಿಂಬಿತವಾಗಿರುವ ಈ ಸಂದರ್ಭದಲ್ಲಿ ನಾಳೆ ಹೊಸ ಸರ್ಕಾರವೋ, ರಾಷ್ಟ್ರಪತಿ ಆಡಳಿತವೋ ಎಂದು ಚರ್ಚಿಸುವುದೇ ಈ ಹೊತ್ತಿನ ವ್ಯಂಗ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...