Homeಕರ್ನಾಟಕರಾಜಿನಾಮೆ ರಾಜಕಾರಣದ ರಾಡಿ: ಜಿಗುಪ್ಸೆಯ ನಡುವೆಯೂ ಕುತೂಹಲ

ರಾಜಿನಾಮೆ ರಾಜಕಾರಣದ ರಾಡಿ: ಜಿಗುಪ್ಸೆಯ ನಡುವೆಯೂ ಕುತೂಹಲ

- Advertisement -
- Advertisement -

ಒಂಥರಾ ಟ್ವೆಂಟಿ-20 ಪಂದ್ಯದಂತೆ ಇಲ್ಲಿ ಸ್ಕೋರ್ ಬೋರ್ಡ್ ಬದಲಾಗುತ್ತಿದೆ. ಸಂವಿಧಾನವನ್ನೇ ಅರಗಿಸಿಕೊಂಡಂತೆ ಟಿವಿ ಸ್ಟುಡಿಯೋಗಳಿಂದ ಪಂದ್ಯದ ‘ರಿಸಲ್ಟ್’ ಹೊರಬೀಳುತ್ತಿವೆ. ಟ್ವೆಂಟಿ-20 ಪಂದ್ಯದಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್‍ಗಳನ್ನು ಹಿನ್ನೆಲೆಗೆ ಸರಿಸಿದಂತೆ ಇಲ್ಲಿಯೂ ಕುದುರೆ ವ್ಯಾಪಾರವನ್ನು ಹಿನ್ನೆಲೆಗೆ ಸರಿಸಲಾಗಿದೆ. ಸೋಲುವ ಭೀತಿಯಲ್ಲಿರುವ ಸಮ್ಮಿಶ್ರ ಟೀಮ್ ಕೈಚೆಲ್ಲಿದಂತೆ ಒದ್ದಾಡುತ್ತ, ಧೋ ಅಂತ ಮಳೆ ಸುರಿಯಲಿ ಎಂದು ಮುಗಿಲು ನೋಡುತ್ತಿದೆ. ಒಟ್ಟೂ ಈ ರಾಜಕಾರಣದ ಬಗ್ಗೆ ಜಿಗುಪ್ಸೆಯ ಭಾವನೆ ಹೊಂದಿರುವ ಸಾಮಾನ್ಯ ಜನರು ಬರದ ಬೇಗುದಿಯಲ್ಲೂ ಪಂದ್ಯವನ್ನು ವೀಕ್ಷಿಸುತ್ತ ಎಂಜಾಯ್ ಮಾಡುತ್ತ, ಗಂಟೆಗೊಮ್ಮೆ ಬದಲಾಗುತ್ತಿರುವ ರಾಜಕಾರಣವನ್ನು ಉಗಿಯುತ್ತ ತಮ್ಮ ಪಾಳೆಯಕ್ಕಾಗಿ ಕಾದಿದ್ದಾರೆ.

ಇಲ್ಲಿ ನಾಳೆ ಏನಾಗುತ್ತೆ ಎನ್ನುವುದು ಸ್ಪಷ್ಟವಾಗುತ್ತಿದ್ದರೂ ಚುಟುಕು ಪಂದ್ಯದಲ್ಲಿ ಏನಾದರೂ ಆಗಬಹುದು. ಒಂದು ಟೀಮ್‍ನ ಆಂತರಿಕ ಸದಸ್ಯರೇ ಆಗಿರುವ ಅಂಪೈರ್ ಸಾಹೇಬರು ಮೌನ ಮುರಿಯುತ್ತಲೇ ಇಲ್ಲ. ಇದು ಕೂಡ ನಿಗೂಢವಾಗಿದೆ. ಸರಿಯಾಗಿ ಒಂದು ವರ್ಷ ಎರಡು ತಿಂಗಳ ಹಿಂದೆ ಇದೇ ಅಂಪೈರ್ ತಾವೇ ‘ಸಾಂವಿಧಾನಿಕ’ ಬಿಕ್ಕಟ್ಟನ್ನು ಸೃಷ್ಟಿಸಲು ಹೋಗಿ ಸುಪ್ರಿಂಕೋರ್ಟ್‍ನ ಕೆಂಗಣ್ಣಿಗೆ ಗುರಿಯಾಗಿದ್ದರು.

ಇದೆಲ್ಲವನ್ನೂ ಹಿನ್ನೆಲೆಯಲ್ಲಿ ಇಟ್ಟುಕೊಂಡು ನೋಡಿದಾಗ, ಇಲ್ಲಿ ಸರ್ಕಾರ ಇದ್ದರೆಷ್ಟು, ಬಿದ್ದರೆಷ್ಟು ಎಂಬ ಭಾವವಂತೂ ಜನರಿಗೆ ಇದೆ. ಹಾಗೆಯೇ ಹೊಸ ಸರ್ಕಾರ ಬಂದರೂ ಮತ್ತದೇ ಅತಂತ್ರ ವಾತಾವರಣ ಎಂಬ ಪ್ರಾಥಮಿಕ ಜ್ಞಾನವೂ ಜನರಲ್ಲಿದೆ. ಆದರೆ ಈಗ ಪಾರ್ಟಿ ಬದಲಿಸರುವ ಜನಪ್ರತಿನಿಧಿಗಳಿಗೆ ಇದು ಗೊತ್ತಿದ್ದರೂ, ಅವರು ಯಾವ ಅಳುಕಿಲ್ಲದೇ ಏಕೆ ಹೋಗುತ್ತಿದ್ದಾರೆ?

ಇದರ ಮೂಲ ಹುಡುಕುತ್ತ ಹೋದರೆ, ಅದು 2008ರ ಸಂದರ್ಭಕ್ಕೆ ಬಂದು ನಿಲ್ಲುತ್ತದೆ. ಪಕ್ಷಾಂತರ ಕಾನೂನನ್ನೇ ಅಣಕಿಸುವಂತೆ ಚಾಲೆಂಜ್ ಮಾಡಿದ ‘ಆಪರೇಷನ್ ಕಮಲ’ ಎಂಬ ಜನದ್ರೋಹಿ ನಡೆ ಶುರುವಾಯಿತಲ್ಲ, ಅದು ರಾಜಕಾರಣದಲ್ಲಿ ದಿಢೀರ್ ಕೋಟಿಗಳನ್ನು ಸಂಪಾದಿಸುವ ಮಾರ್ಗವನ್ನು ತೋರಿಸಿಕೊಟ್ಟಿತು. ಮೊದಲ ಆಪರೇಷನ್ ಕಮಲದ ಫಲಾನುಭವಿಗಳು ಇವತ್ತು ಎಷ್ಟು ನಿಶ್ಚಿಂತರಾಗಿದ್ದಾರೆ ಎಂದರೆ, ಅವರಿಗೆ ಈಗ ಚುನಾವಣೆ ಎಂಬುದೀಗ ಜೂಜು. ಅಭಿವೃದ್ಧಿ ಹೆಸರಲ್ಲಿ ಕಮಿಷನ್ ಹೆಸರಲ್ಲಿ ಬರುವ ದುಡ್ಡು ಜುಜುಬಿ. ಇಲ್ಲಿ ಸಿಕ್ಕಿ ಬಿದ್ದರೆ ಮಾನಗೇಡಿ. ಆದರೆ ಆಪರೇಷನ್ ಕಮಲದಲ್ಲಿ ಅನಾತಾಸವಾಗಿ 30-80 ಕೋಟಿವರೆಗೆ ಪಡೆದರೆ ಅದಕ್ಕೆ ಯಾವ ಕಾನೂನಿನ ಅಡಿಯೂ ಇಲ್ಲ!

2008ರಲ್ಲಿ ಬಿಜೆಪಿಯಿಂದ ಚಾಲನೆಗೊಂಡ ಈ ಬಲ್ಕ್ ವ್ಯಾಪಾರದ ಬಗ್ಗೆ ಯಾವ ಪಕ್ಷಕ್ಕೂ ಅಂತಹ ಅಸಹ್ಯವೇನೂ ಇಲ್ಲ. ಹೀಗಾಗಿ ಈ ರೋಗ ದೇಶದ ಎಲ್ಲ ರಾಜ್ಯಗಳಿಗೂ ಹಬ್ಬಿದೆ. ಶಾಂತವೇರಿ ಗೋಪಾಲಗೌಡ, ದೇವರಾಜ ಅರಸು, ನಜೀರ್ ಸಾಬ್‍ರಂತಹ ಮಾದರಿ ರಾಜಕಾರಣಿಗಳನ್ನು ಕೊಟ್ಟ ಕರ್ನಾಟಕವೇ ಆಪರೇಷನ್ ಕಮಲ ಎಂಬ ಹೇಯ ರಾಜಕೀಯದ ಪಿತೃ ಆಗಿರುವುದು ಒಟ್ಟೂ ರಾಜಕಾರಣದ ದುರಂತ.

ಮುಂಬೈನಲ್ಲಿ ಅತೃಪ್ತರು ತಂಗಿರುವ ಹೊಟೆಲ್‍ನ ರೂಮ್ ಬಾಡಿಗೆ ದರವನ್ನು ಉಲ್ಲೇಖಿಸುವಾಗ ಮಾಧ್ಯಮ ಮಿತ್ರರು ಅದನ್ನು ವೈಭವೀಕರಿಸುತ್ತಿದ್ದಾರೆಯೇ ವಿನ: ಅವರಿಗೆ ಇದೆಲ್ಲದರ ಹಿಂದಿರುವ ಹಣದ ಮೂಲದ ಬಗ್ಗೆ ಪ್ರಶ್ನೆಯೂ ಇಲ್ಲ. ಇವತ್ತು ಅಸಹಾಯಕ ಸ್ಥಿಯಲ್ಲಿರುವ ಮೈತ್ರಿ ಪಕ್ಷಗಳಿಗೂ ಇದನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ.

ರೆಸಾರ್ಟ್ ರಾಜಕಾರಣ ಎಂಬುದು ಈಗ ಸಹಜ ವಿದ್ಯಮಾನ ಎಂದು ಬಿಂಬಿತವಾಗಿರುವ ಈ ಸಂದರ್ಭದಲ್ಲಿ ನಾಳೆ ಹೊಸ ಸರ್ಕಾರವೋ, ರಾಷ್ಟ್ರಪತಿ ಆಡಳಿತವೋ ಎಂದು ಚರ್ಚಿಸುವುದೇ ಈ ಹೊತ್ತಿನ ವ್ಯಂಗ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...