Homeಕರ್ನಾಟಕರಾಜಿನಾಮೆ ರಾಜಕಾರಣದ ರಾಡಿ: ಜಿಗುಪ್ಸೆಯ ನಡುವೆಯೂ ಕುತೂಹಲ

ರಾಜಿನಾಮೆ ರಾಜಕಾರಣದ ರಾಡಿ: ಜಿಗುಪ್ಸೆಯ ನಡುವೆಯೂ ಕುತೂಹಲ

- Advertisement -
- Advertisement -

ಒಂಥರಾ ಟ್ವೆಂಟಿ-20 ಪಂದ್ಯದಂತೆ ಇಲ್ಲಿ ಸ್ಕೋರ್ ಬೋರ್ಡ್ ಬದಲಾಗುತ್ತಿದೆ. ಸಂವಿಧಾನವನ್ನೇ ಅರಗಿಸಿಕೊಂಡಂತೆ ಟಿವಿ ಸ್ಟುಡಿಯೋಗಳಿಂದ ಪಂದ್ಯದ ‘ರಿಸಲ್ಟ್’ ಹೊರಬೀಳುತ್ತಿವೆ. ಟ್ವೆಂಟಿ-20 ಪಂದ್ಯದಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್‍ಗಳನ್ನು ಹಿನ್ನೆಲೆಗೆ ಸರಿಸಿದಂತೆ ಇಲ್ಲಿಯೂ ಕುದುರೆ ವ್ಯಾಪಾರವನ್ನು ಹಿನ್ನೆಲೆಗೆ ಸರಿಸಲಾಗಿದೆ. ಸೋಲುವ ಭೀತಿಯಲ್ಲಿರುವ ಸಮ್ಮಿಶ್ರ ಟೀಮ್ ಕೈಚೆಲ್ಲಿದಂತೆ ಒದ್ದಾಡುತ್ತ, ಧೋ ಅಂತ ಮಳೆ ಸುರಿಯಲಿ ಎಂದು ಮುಗಿಲು ನೋಡುತ್ತಿದೆ. ಒಟ್ಟೂ ಈ ರಾಜಕಾರಣದ ಬಗ್ಗೆ ಜಿಗುಪ್ಸೆಯ ಭಾವನೆ ಹೊಂದಿರುವ ಸಾಮಾನ್ಯ ಜನರು ಬರದ ಬೇಗುದಿಯಲ್ಲೂ ಪಂದ್ಯವನ್ನು ವೀಕ್ಷಿಸುತ್ತ ಎಂಜಾಯ್ ಮಾಡುತ್ತ, ಗಂಟೆಗೊಮ್ಮೆ ಬದಲಾಗುತ್ತಿರುವ ರಾಜಕಾರಣವನ್ನು ಉಗಿಯುತ್ತ ತಮ್ಮ ಪಾಳೆಯಕ್ಕಾಗಿ ಕಾದಿದ್ದಾರೆ.

ಇಲ್ಲಿ ನಾಳೆ ಏನಾಗುತ್ತೆ ಎನ್ನುವುದು ಸ್ಪಷ್ಟವಾಗುತ್ತಿದ್ದರೂ ಚುಟುಕು ಪಂದ್ಯದಲ್ಲಿ ಏನಾದರೂ ಆಗಬಹುದು. ಒಂದು ಟೀಮ್‍ನ ಆಂತರಿಕ ಸದಸ್ಯರೇ ಆಗಿರುವ ಅಂಪೈರ್ ಸಾಹೇಬರು ಮೌನ ಮುರಿಯುತ್ತಲೇ ಇಲ್ಲ. ಇದು ಕೂಡ ನಿಗೂಢವಾಗಿದೆ. ಸರಿಯಾಗಿ ಒಂದು ವರ್ಷ ಎರಡು ತಿಂಗಳ ಹಿಂದೆ ಇದೇ ಅಂಪೈರ್ ತಾವೇ ‘ಸಾಂವಿಧಾನಿಕ’ ಬಿಕ್ಕಟ್ಟನ್ನು ಸೃಷ್ಟಿಸಲು ಹೋಗಿ ಸುಪ್ರಿಂಕೋರ್ಟ್‍ನ ಕೆಂಗಣ್ಣಿಗೆ ಗುರಿಯಾಗಿದ್ದರು.

ಇದೆಲ್ಲವನ್ನೂ ಹಿನ್ನೆಲೆಯಲ್ಲಿ ಇಟ್ಟುಕೊಂಡು ನೋಡಿದಾಗ, ಇಲ್ಲಿ ಸರ್ಕಾರ ಇದ್ದರೆಷ್ಟು, ಬಿದ್ದರೆಷ್ಟು ಎಂಬ ಭಾವವಂತೂ ಜನರಿಗೆ ಇದೆ. ಹಾಗೆಯೇ ಹೊಸ ಸರ್ಕಾರ ಬಂದರೂ ಮತ್ತದೇ ಅತಂತ್ರ ವಾತಾವರಣ ಎಂಬ ಪ್ರಾಥಮಿಕ ಜ್ಞಾನವೂ ಜನರಲ್ಲಿದೆ. ಆದರೆ ಈಗ ಪಾರ್ಟಿ ಬದಲಿಸರುವ ಜನಪ್ರತಿನಿಧಿಗಳಿಗೆ ಇದು ಗೊತ್ತಿದ್ದರೂ, ಅವರು ಯಾವ ಅಳುಕಿಲ್ಲದೇ ಏಕೆ ಹೋಗುತ್ತಿದ್ದಾರೆ?

ಇದರ ಮೂಲ ಹುಡುಕುತ್ತ ಹೋದರೆ, ಅದು 2008ರ ಸಂದರ್ಭಕ್ಕೆ ಬಂದು ನಿಲ್ಲುತ್ತದೆ. ಪಕ್ಷಾಂತರ ಕಾನೂನನ್ನೇ ಅಣಕಿಸುವಂತೆ ಚಾಲೆಂಜ್ ಮಾಡಿದ ‘ಆಪರೇಷನ್ ಕಮಲ’ ಎಂಬ ಜನದ್ರೋಹಿ ನಡೆ ಶುರುವಾಯಿತಲ್ಲ, ಅದು ರಾಜಕಾರಣದಲ್ಲಿ ದಿಢೀರ್ ಕೋಟಿಗಳನ್ನು ಸಂಪಾದಿಸುವ ಮಾರ್ಗವನ್ನು ತೋರಿಸಿಕೊಟ್ಟಿತು. ಮೊದಲ ಆಪರೇಷನ್ ಕಮಲದ ಫಲಾನುಭವಿಗಳು ಇವತ್ತು ಎಷ್ಟು ನಿಶ್ಚಿಂತರಾಗಿದ್ದಾರೆ ಎಂದರೆ, ಅವರಿಗೆ ಈಗ ಚುನಾವಣೆ ಎಂಬುದೀಗ ಜೂಜು. ಅಭಿವೃದ್ಧಿ ಹೆಸರಲ್ಲಿ ಕಮಿಷನ್ ಹೆಸರಲ್ಲಿ ಬರುವ ದುಡ್ಡು ಜುಜುಬಿ. ಇಲ್ಲಿ ಸಿಕ್ಕಿ ಬಿದ್ದರೆ ಮಾನಗೇಡಿ. ಆದರೆ ಆಪರೇಷನ್ ಕಮಲದಲ್ಲಿ ಅನಾತಾಸವಾಗಿ 30-80 ಕೋಟಿವರೆಗೆ ಪಡೆದರೆ ಅದಕ್ಕೆ ಯಾವ ಕಾನೂನಿನ ಅಡಿಯೂ ಇಲ್ಲ!

2008ರಲ್ಲಿ ಬಿಜೆಪಿಯಿಂದ ಚಾಲನೆಗೊಂಡ ಈ ಬಲ್ಕ್ ವ್ಯಾಪಾರದ ಬಗ್ಗೆ ಯಾವ ಪಕ್ಷಕ್ಕೂ ಅಂತಹ ಅಸಹ್ಯವೇನೂ ಇಲ್ಲ. ಹೀಗಾಗಿ ಈ ರೋಗ ದೇಶದ ಎಲ್ಲ ರಾಜ್ಯಗಳಿಗೂ ಹಬ್ಬಿದೆ. ಶಾಂತವೇರಿ ಗೋಪಾಲಗೌಡ, ದೇವರಾಜ ಅರಸು, ನಜೀರ್ ಸಾಬ್‍ರಂತಹ ಮಾದರಿ ರಾಜಕಾರಣಿಗಳನ್ನು ಕೊಟ್ಟ ಕರ್ನಾಟಕವೇ ಆಪರೇಷನ್ ಕಮಲ ಎಂಬ ಹೇಯ ರಾಜಕೀಯದ ಪಿತೃ ಆಗಿರುವುದು ಒಟ್ಟೂ ರಾಜಕಾರಣದ ದುರಂತ.

ಮುಂಬೈನಲ್ಲಿ ಅತೃಪ್ತರು ತಂಗಿರುವ ಹೊಟೆಲ್‍ನ ರೂಮ್ ಬಾಡಿಗೆ ದರವನ್ನು ಉಲ್ಲೇಖಿಸುವಾಗ ಮಾಧ್ಯಮ ಮಿತ್ರರು ಅದನ್ನು ವೈಭವೀಕರಿಸುತ್ತಿದ್ದಾರೆಯೇ ವಿನ: ಅವರಿಗೆ ಇದೆಲ್ಲದರ ಹಿಂದಿರುವ ಹಣದ ಮೂಲದ ಬಗ್ಗೆ ಪ್ರಶ್ನೆಯೂ ಇಲ್ಲ. ಇವತ್ತು ಅಸಹಾಯಕ ಸ್ಥಿಯಲ್ಲಿರುವ ಮೈತ್ರಿ ಪಕ್ಷಗಳಿಗೂ ಇದನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ.

ರೆಸಾರ್ಟ್ ರಾಜಕಾರಣ ಎಂಬುದು ಈಗ ಸಹಜ ವಿದ್ಯಮಾನ ಎಂದು ಬಿಂಬಿತವಾಗಿರುವ ಈ ಸಂದರ್ಭದಲ್ಲಿ ನಾಳೆ ಹೊಸ ಸರ್ಕಾರವೋ, ರಾಷ್ಟ್ರಪತಿ ಆಡಳಿತವೋ ಎಂದು ಚರ್ಚಿಸುವುದೇ ಈ ಹೊತ್ತಿನ ವ್ಯಂಗ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...