Homeಕರ್ನಾಟಕರಾಜಿನಾಮೆ ರಾಜಕಾರಣದ ರಾಡಿ: ಜಿಗುಪ್ಸೆಯ ನಡುವೆಯೂ ಕುತೂಹಲ

ರಾಜಿನಾಮೆ ರಾಜಕಾರಣದ ರಾಡಿ: ಜಿಗುಪ್ಸೆಯ ನಡುವೆಯೂ ಕುತೂಹಲ

- Advertisement -
- Advertisement -

ಒಂಥರಾ ಟ್ವೆಂಟಿ-20 ಪಂದ್ಯದಂತೆ ಇಲ್ಲಿ ಸ್ಕೋರ್ ಬೋರ್ಡ್ ಬದಲಾಗುತ್ತಿದೆ. ಸಂವಿಧಾನವನ್ನೇ ಅರಗಿಸಿಕೊಂಡಂತೆ ಟಿವಿ ಸ್ಟುಡಿಯೋಗಳಿಂದ ಪಂದ್ಯದ ‘ರಿಸಲ್ಟ್’ ಹೊರಬೀಳುತ್ತಿವೆ. ಟ್ವೆಂಟಿ-20 ಪಂದ್ಯದಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್‍ಗಳನ್ನು ಹಿನ್ನೆಲೆಗೆ ಸರಿಸಿದಂತೆ ಇಲ್ಲಿಯೂ ಕುದುರೆ ವ್ಯಾಪಾರವನ್ನು ಹಿನ್ನೆಲೆಗೆ ಸರಿಸಲಾಗಿದೆ. ಸೋಲುವ ಭೀತಿಯಲ್ಲಿರುವ ಸಮ್ಮಿಶ್ರ ಟೀಮ್ ಕೈಚೆಲ್ಲಿದಂತೆ ಒದ್ದಾಡುತ್ತ, ಧೋ ಅಂತ ಮಳೆ ಸುರಿಯಲಿ ಎಂದು ಮುಗಿಲು ನೋಡುತ್ತಿದೆ. ಒಟ್ಟೂ ಈ ರಾಜಕಾರಣದ ಬಗ್ಗೆ ಜಿಗುಪ್ಸೆಯ ಭಾವನೆ ಹೊಂದಿರುವ ಸಾಮಾನ್ಯ ಜನರು ಬರದ ಬೇಗುದಿಯಲ್ಲೂ ಪಂದ್ಯವನ್ನು ವೀಕ್ಷಿಸುತ್ತ ಎಂಜಾಯ್ ಮಾಡುತ್ತ, ಗಂಟೆಗೊಮ್ಮೆ ಬದಲಾಗುತ್ತಿರುವ ರಾಜಕಾರಣವನ್ನು ಉಗಿಯುತ್ತ ತಮ್ಮ ಪಾಳೆಯಕ್ಕಾಗಿ ಕಾದಿದ್ದಾರೆ.

ಇಲ್ಲಿ ನಾಳೆ ಏನಾಗುತ್ತೆ ಎನ್ನುವುದು ಸ್ಪಷ್ಟವಾಗುತ್ತಿದ್ದರೂ ಚುಟುಕು ಪಂದ್ಯದಲ್ಲಿ ಏನಾದರೂ ಆಗಬಹುದು. ಒಂದು ಟೀಮ್‍ನ ಆಂತರಿಕ ಸದಸ್ಯರೇ ಆಗಿರುವ ಅಂಪೈರ್ ಸಾಹೇಬರು ಮೌನ ಮುರಿಯುತ್ತಲೇ ಇಲ್ಲ. ಇದು ಕೂಡ ನಿಗೂಢವಾಗಿದೆ. ಸರಿಯಾಗಿ ಒಂದು ವರ್ಷ ಎರಡು ತಿಂಗಳ ಹಿಂದೆ ಇದೇ ಅಂಪೈರ್ ತಾವೇ ‘ಸಾಂವಿಧಾನಿಕ’ ಬಿಕ್ಕಟ್ಟನ್ನು ಸೃಷ್ಟಿಸಲು ಹೋಗಿ ಸುಪ್ರಿಂಕೋರ್ಟ್‍ನ ಕೆಂಗಣ್ಣಿಗೆ ಗುರಿಯಾಗಿದ್ದರು.

ಇದೆಲ್ಲವನ್ನೂ ಹಿನ್ನೆಲೆಯಲ್ಲಿ ಇಟ್ಟುಕೊಂಡು ನೋಡಿದಾಗ, ಇಲ್ಲಿ ಸರ್ಕಾರ ಇದ್ದರೆಷ್ಟು, ಬಿದ್ದರೆಷ್ಟು ಎಂಬ ಭಾವವಂತೂ ಜನರಿಗೆ ಇದೆ. ಹಾಗೆಯೇ ಹೊಸ ಸರ್ಕಾರ ಬಂದರೂ ಮತ್ತದೇ ಅತಂತ್ರ ವಾತಾವರಣ ಎಂಬ ಪ್ರಾಥಮಿಕ ಜ್ಞಾನವೂ ಜನರಲ್ಲಿದೆ. ಆದರೆ ಈಗ ಪಾರ್ಟಿ ಬದಲಿಸರುವ ಜನಪ್ರತಿನಿಧಿಗಳಿಗೆ ಇದು ಗೊತ್ತಿದ್ದರೂ, ಅವರು ಯಾವ ಅಳುಕಿಲ್ಲದೇ ಏಕೆ ಹೋಗುತ್ತಿದ್ದಾರೆ?

ಇದರ ಮೂಲ ಹುಡುಕುತ್ತ ಹೋದರೆ, ಅದು 2008ರ ಸಂದರ್ಭಕ್ಕೆ ಬಂದು ನಿಲ್ಲುತ್ತದೆ. ಪಕ್ಷಾಂತರ ಕಾನೂನನ್ನೇ ಅಣಕಿಸುವಂತೆ ಚಾಲೆಂಜ್ ಮಾಡಿದ ‘ಆಪರೇಷನ್ ಕಮಲ’ ಎಂಬ ಜನದ್ರೋಹಿ ನಡೆ ಶುರುವಾಯಿತಲ್ಲ, ಅದು ರಾಜಕಾರಣದಲ್ಲಿ ದಿಢೀರ್ ಕೋಟಿಗಳನ್ನು ಸಂಪಾದಿಸುವ ಮಾರ್ಗವನ್ನು ತೋರಿಸಿಕೊಟ್ಟಿತು. ಮೊದಲ ಆಪರೇಷನ್ ಕಮಲದ ಫಲಾನುಭವಿಗಳು ಇವತ್ತು ಎಷ್ಟು ನಿಶ್ಚಿಂತರಾಗಿದ್ದಾರೆ ಎಂದರೆ, ಅವರಿಗೆ ಈಗ ಚುನಾವಣೆ ಎಂಬುದೀಗ ಜೂಜು. ಅಭಿವೃದ್ಧಿ ಹೆಸರಲ್ಲಿ ಕಮಿಷನ್ ಹೆಸರಲ್ಲಿ ಬರುವ ದುಡ್ಡು ಜುಜುಬಿ. ಇಲ್ಲಿ ಸಿಕ್ಕಿ ಬಿದ್ದರೆ ಮಾನಗೇಡಿ. ಆದರೆ ಆಪರೇಷನ್ ಕಮಲದಲ್ಲಿ ಅನಾತಾಸವಾಗಿ 30-80 ಕೋಟಿವರೆಗೆ ಪಡೆದರೆ ಅದಕ್ಕೆ ಯಾವ ಕಾನೂನಿನ ಅಡಿಯೂ ಇಲ್ಲ!

2008ರಲ್ಲಿ ಬಿಜೆಪಿಯಿಂದ ಚಾಲನೆಗೊಂಡ ಈ ಬಲ್ಕ್ ವ್ಯಾಪಾರದ ಬಗ್ಗೆ ಯಾವ ಪಕ್ಷಕ್ಕೂ ಅಂತಹ ಅಸಹ್ಯವೇನೂ ಇಲ್ಲ. ಹೀಗಾಗಿ ಈ ರೋಗ ದೇಶದ ಎಲ್ಲ ರಾಜ್ಯಗಳಿಗೂ ಹಬ್ಬಿದೆ. ಶಾಂತವೇರಿ ಗೋಪಾಲಗೌಡ, ದೇವರಾಜ ಅರಸು, ನಜೀರ್ ಸಾಬ್‍ರಂತಹ ಮಾದರಿ ರಾಜಕಾರಣಿಗಳನ್ನು ಕೊಟ್ಟ ಕರ್ನಾಟಕವೇ ಆಪರೇಷನ್ ಕಮಲ ಎಂಬ ಹೇಯ ರಾಜಕೀಯದ ಪಿತೃ ಆಗಿರುವುದು ಒಟ್ಟೂ ರಾಜಕಾರಣದ ದುರಂತ.

ಮುಂಬೈನಲ್ಲಿ ಅತೃಪ್ತರು ತಂಗಿರುವ ಹೊಟೆಲ್‍ನ ರೂಮ್ ಬಾಡಿಗೆ ದರವನ್ನು ಉಲ್ಲೇಖಿಸುವಾಗ ಮಾಧ್ಯಮ ಮಿತ್ರರು ಅದನ್ನು ವೈಭವೀಕರಿಸುತ್ತಿದ್ದಾರೆಯೇ ವಿನ: ಅವರಿಗೆ ಇದೆಲ್ಲದರ ಹಿಂದಿರುವ ಹಣದ ಮೂಲದ ಬಗ್ಗೆ ಪ್ರಶ್ನೆಯೂ ಇಲ್ಲ. ಇವತ್ತು ಅಸಹಾಯಕ ಸ್ಥಿಯಲ್ಲಿರುವ ಮೈತ್ರಿ ಪಕ್ಷಗಳಿಗೂ ಇದನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ.

ರೆಸಾರ್ಟ್ ರಾಜಕಾರಣ ಎಂಬುದು ಈಗ ಸಹಜ ವಿದ್ಯಮಾನ ಎಂದು ಬಿಂಬಿತವಾಗಿರುವ ಈ ಸಂದರ್ಭದಲ್ಲಿ ನಾಳೆ ಹೊಸ ಸರ್ಕಾರವೋ, ರಾಷ್ಟ್ರಪತಿ ಆಡಳಿತವೋ ಎಂದು ಚರ್ಚಿಸುವುದೇ ಈ ಹೊತ್ತಿನ ವ್ಯಂಗ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...