Homeಕರ್ನಾಟಕರಾಜಿನಾಮೆ ರಾಜಕಾರಣದ ರಾಡಿ: ಜಿಗುಪ್ಸೆಯ ನಡುವೆಯೂ ಕುತೂಹಲ

ರಾಜಿನಾಮೆ ರಾಜಕಾರಣದ ರಾಡಿ: ಜಿಗುಪ್ಸೆಯ ನಡುವೆಯೂ ಕುತೂಹಲ

- Advertisement -
- Advertisement -

ಒಂಥರಾ ಟ್ವೆಂಟಿ-20 ಪಂದ್ಯದಂತೆ ಇಲ್ಲಿ ಸ್ಕೋರ್ ಬೋರ್ಡ್ ಬದಲಾಗುತ್ತಿದೆ. ಸಂವಿಧಾನವನ್ನೇ ಅರಗಿಸಿಕೊಂಡಂತೆ ಟಿವಿ ಸ್ಟುಡಿಯೋಗಳಿಂದ ಪಂದ್ಯದ ‘ರಿಸಲ್ಟ್’ ಹೊರಬೀಳುತ್ತಿವೆ. ಟ್ವೆಂಟಿ-20 ಪಂದ್ಯದಲ್ಲಿ ಬೆಟ್ಟಿಂಗ್, ಮ್ಯಾಚ್ ಫಿಕ್ಸಿಂಗ್‍ಗಳನ್ನು ಹಿನ್ನೆಲೆಗೆ ಸರಿಸಿದಂತೆ ಇಲ್ಲಿಯೂ ಕುದುರೆ ವ್ಯಾಪಾರವನ್ನು ಹಿನ್ನೆಲೆಗೆ ಸರಿಸಲಾಗಿದೆ. ಸೋಲುವ ಭೀತಿಯಲ್ಲಿರುವ ಸಮ್ಮಿಶ್ರ ಟೀಮ್ ಕೈಚೆಲ್ಲಿದಂತೆ ಒದ್ದಾಡುತ್ತ, ಧೋ ಅಂತ ಮಳೆ ಸುರಿಯಲಿ ಎಂದು ಮುಗಿಲು ನೋಡುತ್ತಿದೆ. ಒಟ್ಟೂ ಈ ರಾಜಕಾರಣದ ಬಗ್ಗೆ ಜಿಗುಪ್ಸೆಯ ಭಾವನೆ ಹೊಂದಿರುವ ಸಾಮಾನ್ಯ ಜನರು ಬರದ ಬೇಗುದಿಯಲ್ಲೂ ಪಂದ್ಯವನ್ನು ವೀಕ್ಷಿಸುತ್ತ ಎಂಜಾಯ್ ಮಾಡುತ್ತ, ಗಂಟೆಗೊಮ್ಮೆ ಬದಲಾಗುತ್ತಿರುವ ರಾಜಕಾರಣವನ್ನು ಉಗಿಯುತ್ತ ತಮ್ಮ ಪಾಳೆಯಕ್ಕಾಗಿ ಕಾದಿದ್ದಾರೆ.

ಇಲ್ಲಿ ನಾಳೆ ಏನಾಗುತ್ತೆ ಎನ್ನುವುದು ಸ್ಪಷ್ಟವಾಗುತ್ತಿದ್ದರೂ ಚುಟುಕು ಪಂದ್ಯದಲ್ಲಿ ಏನಾದರೂ ಆಗಬಹುದು. ಒಂದು ಟೀಮ್‍ನ ಆಂತರಿಕ ಸದಸ್ಯರೇ ಆಗಿರುವ ಅಂಪೈರ್ ಸಾಹೇಬರು ಮೌನ ಮುರಿಯುತ್ತಲೇ ಇಲ್ಲ. ಇದು ಕೂಡ ನಿಗೂಢವಾಗಿದೆ. ಸರಿಯಾಗಿ ಒಂದು ವರ್ಷ ಎರಡು ತಿಂಗಳ ಹಿಂದೆ ಇದೇ ಅಂಪೈರ್ ತಾವೇ ‘ಸಾಂವಿಧಾನಿಕ’ ಬಿಕ್ಕಟ್ಟನ್ನು ಸೃಷ್ಟಿಸಲು ಹೋಗಿ ಸುಪ್ರಿಂಕೋರ್ಟ್‍ನ ಕೆಂಗಣ್ಣಿಗೆ ಗುರಿಯಾಗಿದ್ದರು.

ಇದೆಲ್ಲವನ್ನೂ ಹಿನ್ನೆಲೆಯಲ್ಲಿ ಇಟ್ಟುಕೊಂಡು ನೋಡಿದಾಗ, ಇಲ್ಲಿ ಸರ್ಕಾರ ಇದ್ದರೆಷ್ಟು, ಬಿದ್ದರೆಷ್ಟು ಎಂಬ ಭಾವವಂತೂ ಜನರಿಗೆ ಇದೆ. ಹಾಗೆಯೇ ಹೊಸ ಸರ್ಕಾರ ಬಂದರೂ ಮತ್ತದೇ ಅತಂತ್ರ ವಾತಾವರಣ ಎಂಬ ಪ್ರಾಥಮಿಕ ಜ್ಞಾನವೂ ಜನರಲ್ಲಿದೆ. ಆದರೆ ಈಗ ಪಾರ್ಟಿ ಬದಲಿಸರುವ ಜನಪ್ರತಿನಿಧಿಗಳಿಗೆ ಇದು ಗೊತ್ತಿದ್ದರೂ, ಅವರು ಯಾವ ಅಳುಕಿಲ್ಲದೇ ಏಕೆ ಹೋಗುತ್ತಿದ್ದಾರೆ?

ಇದರ ಮೂಲ ಹುಡುಕುತ್ತ ಹೋದರೆ, ಅದು 2008ರ ಸಂದರ್ಭಕ್ಕೆ ಬಂದು ನಿಲ್ಲುತ್ತದೆ. ಪಕ್ಷಾಂತರ ಕಾನೂನನ್ನೇ ಅಣಕಿಸುವಂತೆ ಚಾಲೆಂಜ್ ಮಾಡಿದ ‘ಆಪರೇಷನ್ ಕಮಲ’ ಎಂಬ ಜನದ್ರೋಹಿ ನಡೆ ಶುರುವಾಯಿತಲ್ಲ, ಅದು ರಾಜಕಾರಣದಲ್ಲಿ ದಿಢೀರ್ ಕೋಟಿಗಳನ್ನು ಸಂಪಾದಿಸುವ ಮಾರ್ಗವನ್ನು ತೋರಿಸಿಕೊಟ್ಟಿತು. ಮೊದಲ ಆಪರೇಷನ್ ಕಮಲದ ಫಲಾನುಭವಿಗಳು ಇವತ್ತು ಎಷ್ಟು ನಿಶ್ಚಿಂತರಾಗಿದ್ದಾರೆ ಎಂದರೆ, ಅವರಿಗೆ ಈಗ ಚುನಾವಣೆ ಎಂಬುದೀಗ ಜೂಜು. ಅಭಿವೃದ್ಧಿ ಹೆಸರಲ್ಲಿ ಕಮಿಷನ್ ಹೆಸರಲ್ಲಿ ಬರುವ ದುಡ್ಡು ಜುಜುಬಿ. ಇಲ್ಲಿ ಸಿಕ್ಕಿ ಬಿದ್ದರೆ ಮಾನಗೇಡಿ. ಆದರೆ ಆಪರೇಷನ್ ಕಮಲದಲ್ಲಿ ಅನಾತಾಸವಾಗಿ 30-80 ಕೋಟಿವರೆಗೆ ಪಡೆದರೆ ಅದಕ್ಕೆ ಯಾವ ಕಾನೂನಿನ ಅಡಿಯೂ ಇಲ್ಲ!

2008ರಲ್ಲಿ ಬಿಜೆಪಿಯಿಂದ ಚಾಲನೆಗೊಂಡ ಈ ಬಲ್ಕ್ ವ್ಯಾಪಾರದ ಬಗ್ಗೆ ಯಾವ ಪಕ್ಷಕ್ಕೂ ಅಂತಹ ಅಸಹ್ಯವೇನೂ ಇಲ್ಲ. ಹೀಗಾಗಿ ಈ ರೋಗ ದೇಶದ ಎಲ್ಲ ರಾಜ್ಯಗಳಿಗೂ ಹಬ್ಬಿದೆ. ಶಾಂತವೇರಿ ಗೋಪಾಲಗೌಡ, ದೇವರಾಜ ಅರಸು, ನಜೀರ್ ಸಾಬ್‍ರಂತಹ ಮಾದರಿ ರಾಜಕಾರಣಿಗಳನ್ನು ಕೊಟ್ಟ ಕರ್ನಾಟಕವೇ ಆಪರೇಷನ್ ಕಮಲ ಎಂಬ ಹೇಯ ರಾಜಕೀಯದ ಪಿತೃ ಆಗಿರುವುದು ಒಟ್ಟೂ ರಾಜಕಾರಣದ ದುರಂತ.

ಮುಂಬೈನಲ್ಲಿ ಅತೃಪ್ತರು ತಂಗಿರುವ ಹೊಟೆಲ್‍ನ ರೂಮ್ ಬಾಡಿಗೆ ದರವನ್ನು ಉಲ್ಲೇಖಿಸುವಾಗ ಮಾಧ್ಯಮ ಮಿತ್ರರು ಅದನ್ನು ವೈಭವೀಕರಿಸುತ್ತಿದ್ದಾರೆಯೇ ವಿನ: ಅವರಿಗೆ ಇದೆಲ್ಲದರ ಹಿಂದಿರುವ ಹಣದ ಮೂಲದ ಬಗ್ಗೆ ಪ್ರಶ್ನೆಯೂ ಇಲ್ಲ. ಇವತ್ತು ಅಸಹಾಯಕ ಸ್ಥಿಯಲ್ಲಿರುವ ಮೈತ್ರಿ ಪಕ್ಷಗಳಿಗೂ ಇದನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ.

ರೆಸಾರ್ಟ್ ರಾಜಕಾರಣ ಎಂಬುದು ಈಗ ಸಹಜ ವಿದ್ಯಮಾನ ಎಂದು ಬಿಂಬಿತವಾಗಿರುವ ಈ ಸಂದರ್ಭದಲ್ಲಿ ನಾಳೆ ಹೊಸ ಸರ್ಕಾರವೋ, ರಾಷ್ಟ್ರಪತಿ ಆಡಳಿತವೋ ಎಂದು ಚರ್ಚಿಸುವುದೇ ಈ ಹೊತ್ತಿನ ವ್ಯಂಗ್ಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...