Homeಮುಖಪುಟ’ನಿರಂತರ ಸುಳ್ಳು ಹೇಳುವ ಮೂಲಕ ಬಿಜೆಪಿ ಮೂಲ ತತ್ವ ಎತ್ತಿ ಹಿಡಿದ ಬಸವರಾಜ ಬೊಮ್ಮಾಯಿ’: ಸಿದ್ದರಾಮಯ್ಯ

’ನಿರಂತರ ಸುಳ್ಳು ಹೇಳುವ ಮೂಲಕ ಬಿಜೆಪಿ ಮೂಲ ತತ್ವ ಎತ್ತಿ ಹಿಡಿದ ಬಸವರಾಜ ಬೊಮ್ಮಾಯಿ’: ಸಿದ್ದರಾಮಯ್ಯ

- Advertisement -
- Advertisement -

“ಚುನಾವಣಾ ಪ್ರಚಾರ ಸಭೆಗಳಲ್ಲಿ ನಿರಂತರ ಸುಳ್ಳು ಹೇಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಪಕ್ಷದ ಮೂಲ ತತ್ವವನ್ನು ಎತ್ತಿಹಿಡಿದಿದ್ದಾರೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನೂರು ಬಾರಿ ಸುಳ್ಳು ಹೇಳಿ ಅದನ್ನೆ ಸತ್ಯವೆಂದು ನಂಬಿಸುವುದು ಬಿಜೆಪಿಯವರ ಹುಟ್ಟುಗುಣವಲ್ಲವೇ..? ಎಂದು ಪ್ರಶ್ನಿಸಿದ್ದಾರೆ.


’ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮುಂದಕ್ಕೆ ಕೊಂಡೊಯ್ಯುವ ಕಾಳಜಿಯನ್ನು ಬೊಮ್ಮಾಯಿಯವರು ತೋರಿಸುತ್ತಾರೆ ಎನ್ನುವ ನಿರೀಕ್ಷೆ ನನ್ನಲ್ಲಿ ಇತ್ತು. ಆ ನಿರೀಕ್ಷೆಗಳೆಲ್ಲ ಹುಸಿಯಾಗಿದೆ.ನಮ್ಮ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಮನೆಗಳ ಬಗ್ಗೆ ಆಗಾಗ್ಗೆ ಪ್ರಶ್ನೆ ಕೇಳುವ, ಸುಳ್ಳು ಹೇಳುವ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿಯಾಗಿದ್ದೂ ಮಾಹಿತಿ ತರಿಸಿಕೊಳ್ಳಲು ಕಷ್ಟವಾಗುತ್ತಿದೆಯೇ ಅಥವಾ ಮುಖ್ಯಮಂತ್ರಿಗಳು ಕೇಳಿದರೂ ಇಲಾಖೆಗಳೇ ಮಾಹಿತಿ ನೀಡುತ್ತಿಲ್ಲವೇ..?” ಎಂದು ವ್ಯಂಗ್ಯವಾಡಿದ್ದಾರೆ.

’2013 ರಿಂದ 2018 ರ ಮಾರ್ಚ್‌ವರೆಗೆ ನಮ್ಮ ಸರ್ಕಾರದ ಅವಧಿಯಲ್ಲಿ 15 ಲಕ್ಷ ಮನೆಗಳನ್ನು 16,775 ಕೋಟಿ ರೂ.ಗಳ ವೆಚ್ಚದಲ್ಲಿ ವಸತಿ ರಹಿತರಿಗಾಗಿ ನಿರ್ಮಾಣ ಮಾಡಿಕೊಟ್ಟಿದ್ದೆವು. ಈ ಮಾಹಿತಿಯನ್ನು ವಸತಿ ಸಚಿವ ಸೋಮಣ್ಣನವರ ಕಛೇರಿಯಿಂದಲೆ ನನಗೆ ಲಿಖಿತವಾಗಿ ಕಳಿಸಿದ್ದಾರೆ. ನಿಮಗೊಂದು ಪ್ರತಿ ತರಿಸಿ ಕೊಡಲೇ ಬೊಮ್ಮಾಯಿ ಅವರೇ..?’ ಎಂದು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: ಮಹಾತ್ಮ ಗಾಂಧಿಯನ್ನು ಕೊಂದ ಗೋಡ್ಸೆಯ ಪಳೆಯುಳಿಕೆ ಬಿಜೆಪಿ- ಸಿದ್ದರಾಮಯ್ಯ ಆಕ್ರೋಶ


‘ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳನ್ನು ಒಳಗೊಂಡಂತೆ 32 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ.ನಿಮ್ಮ ಸರ್ಕಾರದ ಸಾಧನೆ ಇನ್ನೂ ಸೊನ್ನೆಯಲ್ಲೇ ಭದ್ರವಾಗಿ ಕೂತಿದೆ ಅಲ್ಲವೇ..? ನಾನು ಮುಖ್ಯ ಮಂತ್ರಿಯಾಗಿದ್ದಾಗ ಗ್ರಾಮ ವಿಕಾಸ ಮತ್ತು ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಜಾರಿಗೆ ತಂದಿದ್ದೆ. ಈ ಯೋಜನೆಯಡಿ 1750 ಕೋಟಿ ರೂಪಾಯಿಗಳನ್ನು ನೀಡಿ 2000 ಗ್ರಾಮಗಳನ್ನು ಅಭಿವೃದ್ಧಿ ಪಡಿಸಿದ್ದೆ. ಇಂತಹ ಜನಪರ ಯೋಜನೆ ನಿಲ್ಲಿಸಿದ್ದು ನಿಮ್ಮದೇ ಸರ್ಕಾರ ಅಲ್ಲವೇ..?’ ಎಂದು ಪ್ರಶ್ನಿಸಿದ್ದಾರೆ.


’ಅಮೃತ ಯೋಜನೆಯಡಿ ಆಯ್ದ ಗ್ರಾಮಗಳಿಗೆ ಕೇವಲ 25 ಲಕ್ಷ ರೂಪಾಯಿ ನೀಡುತ್ತೇವೆಂದು ಬೊಮ್ಮಾಯಿವರು ಹೇಳುತ್ತಾರೆ. 25 ಲಕ್ಷ ರೂಪಾಯಿಗಳಲ್ಲಿ 40% ನಿಮ್ಮ ಸರ್ಕಾರದ ಸಚಿವರು, ಅಧಿಕಾರಿಗಳಿಗೆ ಕಮಿಷನ್ ಹೋದರೆ ಉಳಿಯುವ ಹಣ ಎಷ್ಟು..? ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ಗ್ರಾಮೀಣ ರಸ್ತೆಗಳಿಗೆಂದು 1350 ಕೋಟಿ ನೀಡುವುದಾಗಿ ಆದೇಶ ಹೊರಡಿಸಿದ್ದರು. ಆದರೆ ಇದುವರೆಗೆ ಒಂದು ರೂಪಾಯಿಯನ್ನು ಬಿಡುಗಡೆ ಮಾಡಿಲ್ಲ. ಬರಿ ಘೋಷಣೆಗಳಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯವೇ..?’ ಎಂದು ಟೀಕಿಸಿದ್ದಾರೆ.

’ನಮ್ಮ ಸರ್ಕಾರದ ಅವಧಿಯಲ್ಲಿ ಗ್ರಾಮ ಪಂಚಾಯತಿ ನೌಕರರಿಗೆ ಸಂಬಳ ನೀಡಲೆಂದು ಪ್ರತಿ ವರ್ಷ 912 ಕೋಟಿ ರೂಗಳನ್ನು ತೆಗೆದಿಡುತ್ತಿದ್ದೆವು. ಅದರಿಂದ ಸಾವಿರಾರು ನೌಕರರಿಗೆ ಅನುಕೂಲವಾಗಿತ್ತು. ನಮ್ಮದು ಬಿಜೆಪಿ ಸರ್ಕಾರದಂತೆ ಹಾಳೆಗಳ ಮೇಲಿನ ಘೋಷಣೆಗಳಾಗಿ ಉಳಿದಿಲ್ಲ, ಸಾಧನೆಗಳಾಗಿವೆ’ ಎಂದು ತಿಳಿಸಿದ್ದಾರೆ.


’ಗ್ರಾಮ ಪಂಚಾಯತಿಗಳಿಗೆ ಅನುದಾನ ಬರಲು ಆರಂಭವಾಗಿದ್ದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ರವರು ನರೇಗಾ ಯೋಜನೆ ಪ್ರಾರಂಭಿಸಿದ ಮೇಲೆ. ನರೇಗಾ ಯೋಜನೆಯನ್ನು ಗುಜರಾತಿನ ಅಂದಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರು ವಿರೋಧಿಸಿದ್ದರು ಎಂಬ ಸತ್ಯವನ್ನು ಬಿಜೆಪಿ ಯವರು ಮರೆಯಬಾರದು. ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 3 ಕೋಟಿಗೂ ಹೆಚ್ಚು ಜನ ಬಿಪಿಎಲ್ ಕಾರ್ಡುದಾರರಿದ್ದಾರೆ. ಅದರಲ್ಲಿ ಒಂದು ಕೋಟಿ ಜನರಿಗೆ 100 ಮಾನವ ದಿನಗಳಷ್ಟು ಕೆಲಸ ಕೊಟ್ಟರೆ 100 ಕೋಟಿ ಮಾನವ ದಿನಗಳ ಗುರಿ ನೀಡಬೇಕಾಗುತ್ತದೆ. ಆದರೆ ರಾಜ್ಯಕ್ಕೆ 13 ಕೋಟಿ ಮಾನವ ದಿನಗಳ ಗುರಿಯನ್ನು ನೀಡಲಾಗುತ್ತಿದೆ. ಈಗಿರುವ ಗುರಿ ಕೇವಲ 13 ಲಕ್ಷ ಜನರಿಗೆ ಮಾತ್ರ ಸಾಕಾಗುತ್ತಿದೆ. ರಾಜ್ಯದಲ್ಲಿ ಆರ್ಥಿಕ ವರ್ಷ ಮುಗಿಯಲು ಇನ್ನೂ ಆರು ತಿಂಗಳಿದ್ದಾಗಲೆ ಟಾರ್ಗೆಟ್ ಮುಗಿದು ಹೋಗಿದೆ. ಬೊಮ್ಮಾಯಿಯವರು ಸುಳ್ಳು ಹೇಳಿಕೊಂಡು ಓಡಾಡುವ ಬದಲು ದೆಹಲಿಗೆ ಹೋಗಿ ನರೇಗಾ ಯೋಜನೆಗೆ ಬೇಡಿಕೆ ಆಧಾರಿತವಾಗಿ ಹೊಸ ಗುರಿ ನಿಗದಿ ಮಾಡಿಸಿಕೊಂಡು ಬರಲಿ’ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಹಂಪಿ ವಿವಿ ಹಗರಣ: ಕ್ರಮಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...