Homeಮುಖಪುಟ’ನಿರಂತರ ಸುಳ್ಳು ಹೇಳುವ ಮೂಲಕ ಬಿಜೆಪಿ ಮೂಲ ತತ್ವ ಎತ್ತಿ ಹಿಡಿದ ಬಸವರಾಜ ಬೊಮ್ಮಾಯಿ’: ಸಿದ್ದರಾಮಯ್ಯ

’ನಿರಂತರ ಸುಳ್ಳು ಹೇಳುವ ಮೂಲಕ ಬಿಜೆಪಿ ಮೂಲ ತತ್ವ ಎತ್ತಿ ಹಿಡಿದ ಬಸವರಾಜ ಬೊಮ್ಮಾಯಿ’: ಸಿದ್ದರಾಮಯ್ಯ

- Advertisement -
- Advertisement -

“ಚುನಾವಣಾ ಪ್ರಚಾರ ಸಭೆಗಳಲ್ಲಿ ನಿರಂತರ ಸುಳ್ಳು ಹೇಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಪಕ್ಷದ ಮೂಲ ತತ್ವವನ್ನು ಎತ್ತಿಹಿಡಿದಿದ್ದಾರೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನೂರು ಬಾರಿ ಸುಳ್ಳು ಹೇಳಿ ಅದನ್ನೆ ಸತ್ಯವೆಂದು ನಂಬಿಸುವುದು ಬಿಜೆಪಿಯವರ ಹುಟ್ಟುಗುಣವಲ್ಲವೇ..? ಎಂದು ಪ್ರಶ್ನಿಸಿದ್ದಾರೆ.


’ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮುಂದಕ್ಕೆ ಕೊಂಡೊಯ್ಯುವ ಕಾಳಜಿಯನ್ನು ಬೊಮ್ಮಾಯಿಯವರು ತೋರಿಸುತ್ತಾರೆ ಎನ್ನುವ ನಿರೀಕ್ಷೆ ನನ್ನಲ್ಲಿ ಇತ್ತು. ಆ ನಿರೀಕ್ಷೆಗಳೆಲ್ಲ ಹುಸಿಯಾಗಿದೆ.ನಮ್ಮ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಮನೆಗಳ ಬಗ್ಗೆ ಆಗಾಗ್ಗೆ ಪ್ರಶ್ನೆ ಕೇಳುವ, ಸುಳ್ಳು ಹೇಳುವ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿಯಾಗಿದ್ದೂ ಮಾಹಿತಿ ತರಿಸಿಕೊಳ್ಳಲು ಕಷ್ಟವಾಗುತ್ತಿದೆಯೇ ಅಥವಾ ಮುಖ್ಯಮಂತ್ರಿಗಳು ಕೇಳಿದರೂ ಇಲಾಖೆಗಳೇ ಮಾಹಿತಿ ನೀಡುತ್ತಿಲ್ಲವೇ..?” ಎಂದು ವ್ಯಂಗ್ಯವಾಡಿದ್ದಾರೆ.

’2013 ರಿಂದ 2018 ರ ಮಾರ್ಚ್‌ವರೆಗೆ ನಮ್ಮ ಸರ್ಕಾರದ ಅವಧಿಯಲ್ಲಿ 15 ಲಕ್ಷ ಮನೆಗಳನ್ನು 16,775 ಕೋಟಿ ರೂ.ಗಳ ವೆಚ್ಚದಲ್ಲಿ ವಸತಿ ರಹಿತರಿಗಾಗಿ ನಿರ್ಮಾಣ ಮಾಡಿಕೊಟ್ಟಿದ್ದೆವು. ಈ ಮಾಹಿತಿಯನ್ನು ವಸತಿ ಸಚಿವ ಸೋಮಣ್ಣನವರ ಕಛೇರಿಯಿಂದಲೆ ನನಗೆ ಲಿಖಿತವಾಗಿ ಕಳಿಸಿದ್ದಾರೆ. ನಿಮಗೊಂದು ಪ್ರತಿ ತರಿಸಿ ಕೊಡಲೇ ಬೊಮ್ಮಾಯಿ ಅವರೇ..?’ ಎಂದು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: ಮಹಾತ್ಮ ಗಾಂಧಿಯನ್ನು ಕೊಂದ ಗೋಡ್ಸೆಯ ಪಳೆಯುಳಿಕೆ ಬಿಜೆಪಿ- ಸಿದ್ದರಾಮಯ್ಯ ಆಕ್ರೋಶ


‘ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳನ್ನು ಒಳಗೊಂಡಂತೆ 32 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ.ನಿಮ್ಮ ಸರ್ಕಾರದ ಸಾಧನೆ ಇನ್ನೂ ಸೊನ್ನೆಯಲ್ಲೇ ಭದ್ರವಾಗಿ ಕೂತಿದೆ ಅಲ್ಲವೇ..? ನಾನು ಮುಖ್ಯ ಮಂತ್ರಿಯಾಗಿದ್ದಾಗ ಗ್ರಾಮ ವಿಕಾಸ ಮತ್ತು ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಜಾರಿಗೆ ತಂದಿದ್ದೆ. ಈ ಯೋಜನೆಯಡಿ 1750 ಕೋಟಿ ರೂಪಾಯಿಗಳನ್ನು ನೀಡಿ 2000 ಗ್ರಾಮಗಳನ್ನು ಅಭಿವೃದ್ಧಿ ಪಡಿಸಿದ್ದೆ. ಇಂತಹ ಜನಪರ ಯೋಜನೆ ನಿಲ್ಲಿಸಿದ್ದು ನಿಮ್ಮದೇ ಸರ್ಕಾರ ಅಲ್ಲವೇ..?’ ಎಂದು ಪ್ರಶ್ನಿಸಿದ್ದಾರೆ.


’ಅಮೃತ ಯೋಜನೆಯಡಿ ಆಯ್ದ ಗ್ರಾಮಗಳಿಗೆ ಕೇವಲ 25 ಲಕ್ಷ ರೂಪಾಯಿ ನೀಡುತ್ತೇವೆಂದು ಬೊಮ್ಮಾಯಿವರು ಹೇಳುತ್ತಾರೆ. 25 ಲಕ್ಷ ರೂಪಾಯಿಗಳಲ್ಲಿ 40% ನಿಮ್ಮ ಸರ್ಕಾರದ ಸಚಿವರು, ಅಧಿಕಾರಿಗಳಿಗೆ ಕಮಿಷನ್ ಹೋದರೆ ಉಳಿಯುವ ಹಣ ಎಷ್ಟು..? ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ಗ್ರಾಮೀಣ ರಸ್ತೆಗಳಿಗೆಂದು 1350 ಕೋಟಿ ನೀಡುವುದಾಗಿ ಆದೇಶ ಹೊರಡಿಸಿದ್ದರು. ಆದರೆ ಇದುವರೆಗೆ ಒಂದು ರೂಪಾಯಿಯನ್ನು ಬಿಡುಗಡೆ ಮಾಡಿಲ್ಲ. ಬರಿ ಘೋಷಣೆಗಳಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯವೇ..?’ ಎಂದು ಟೀಕಿಸಿದ್ದಾರೆ.

’ನಮ್ಮ ಸರ್ಕಾರದ ಅವಧಿಯಲ್ಲಿ ಗ್ರಾಮ ಪಂಚಾಯತಿ ನೌಕರರಿಗೆ ಸಂಬಳ ನೀಡಲೆಂದು ಪ್ರತಿ ವರ್ಷ 912 ಕೋಟಿ ರೂಗಳನ್ನು ತೆಗೆದಿಡುತ್ತಿದ್ದೆವು. ಅದರಿಂದ ಸಾವಿರಾರು ನೌಕರರಿಗೆ ಅನುಕೂಲವಾಗಿತ್ತು. ನಮ್ಮದು ಬಿಜೆಪಿ ಸರ್ಕಾರದಂತೆ ಹಾಳೆಗಳ ಮೇಲಿನ ಘೋಷಣೆಗಳಾಗಿ ಉಳಿದಿಲ್ಲ, ಸಾಧನೆಗಳಾಗಿವೆ’ ಎಂದು ತಿಳಿಸಿದ್ದಾರೆ.


’ಗ್ರಾಮ ಪಂಚಾಯತಿಗಳಿಗೆ ಅನುದಾನ ಬರಲು ಆರಂಭವಾಗಿದ್ದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ರವರು ನರೇಗಾ ಯೋಜನೆ ಪ್ರಾರಂಭಿಸಿದ ಮೇಲೆ. ನರೇಗಾ ಯೋಜನೆಯನ್ನು ಗುಜರಾತಿನ ಅಂದಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರು ವಿರೋಧಿಸಿದ್ದರು ಎಂಬ ಸತ್ಯವನ್ನು ಬಿಜೆಪಿ ಯವರು ಮರೆಯಬಾರದು. ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 3 ಕೋಟಿಗೂ ಹೆಚ್ಚು ಜನ ಬಿಪಿಎಲ್ ಕಾರ್ಡುದಾರರಿದ್ದಾರೆ. ಅದರಲ್ಲಿ ಒಂದು ಕೋಟಿ ಜನರಿಗೆ 100 ಮಾನವ ದಿನಗಳಷ್ಟು ಕೆಲಸ ಕೊಟ್ಟರೆ 100 ಕೋಟಿ ಮಾನವ ದಿನಗಳ ಗುರಿ ನೀಡಬೇಕಾಗುತ್ತದೆ. ಆದರೆ ರಾಜ್ಯಕ್ಕೆ 13 ಕೋಟಿ ಮಾನವ ದಿನಗಳ ಗುರಿಯನ್ನು ನೀಡಲಾಗುತ್ತಿದೆ. ಈಗಿರುವ ಗುರಿ ಕೇವಲ 13 ಲಕ್ಷ ಜನರಿಗೆ ಮಾತ್ರ ಸಾಕಾಗುತ್ತಿದೆ. ರಾಜ್ಯದಲ್ಲಿ ಆರ್ಥಿಕ ವರ್ಷ ಮುಗಿಯಲು ಇನ್ನೂ ಆರು ತಿಂಗಳಿದ್ದಾಗಲೆ ಟಾರ್ಗೆಟ್ ಮುಗಿದು ಹೋಗಿದೆ. ಬೊಮ್ಮಾಯಿಯವರು ಸುಳ್ಳು ಹೇಳಿಕೊಂಡು ಓಡಾಡುವ ಬದಲು ದೆಹಲಿಗೆ ಹೋಗಿ ನರೇಗಾ ಯೋಜನೆಗೆ ಬೇಡಿಕೆ ಆಧಾರಿತವಾಗಿ ಹೊಸ ಗುರಿ ನಿಗದಿ ಮಾಡಿಸಿಕೊಂಡು ಬರಲಿ’ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಹಂಪಿ ವಿವಿ ಹಗರಣ: ಕ್ರಮಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...