Homeಮುಖಪುಟ’ನಿರಂತರ ಸುಳ್ಳು ಹೇಳುವ ಮೂಲಕ ಬಿಜೆಪಿ ಮೂಲ ತತ್ವ ಎತ್ತಿ ಹಿಡಿದ ಬಸವರಾಜ ಬೊಮ್ಮಾಯಿ’: ಸಿದ್ದರಾಮಯ್ಯ

’ನಿರಂತರ ಸುಳ್ಳು ಹೇಳುವ ಮೂಲಕ ಬಿಜೆಪಿ ಮೂಲ ತತ್ವ ಎತ್ತಿ ಹಿಡಿದ ಬಸವರಾಜ ಬೊಮ್ಮಾಯಿ’: ಸಿದ್ದರಾಮಯ್ಯ

- Advertisement -
- Advertisement -

“ಚುನಾವಣಾ ಪ್ರಚಾರ ಸಭೆಗಳಲ್ಲಿ ನಿರಂತರ ಸುಳ್ಳು ಹೇಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಪಕ್ಷದ ಮೂಲ ತತ್ವವನ್ನು ಎತ್ತಿಹಿಡಿದಿದ್ದಾರೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನೂರು ಬಾರಿ ಸುಳ್ಳು ಹೇಳಿ ಅದನ್ನೆ ಸತ್ಯವೆಂದು ನಂಬಿಸುವುದು ಬಿಜೆಪಿಯವರ ಹುಟ್ಟುಗುಣವಲ್ಲವೇ..? ಎಂದು ಪ್ರಶ್ನಿಸಿದ್ದಾರೆ.


’ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಮುಂದಕ್ಕೆ ಕೊಂಡೊಯ್ಯುವ ಕಾಳಜಿಯನ್ನು ಬೊಮ್ಮಾಯಿಯವರು ತೋರಿಸುತ್ತಾರೆ ಎನ್ನುವ ನಿರೀಕ್ಷೆ ನನ್ನಲ್ಲಿ ಇತ್ತು. ಆ ನಿರೀಕ್ಷೆಗಳೆಲ್ಲ ಹುಸಿಯಾಗಿದೆ.ನಮ್ಮ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಮನೆಗಳ ಬಗ್ಗೆ ಆಗಾಗ್ಗೆ ಪ್ರಶ್ನೆ ಕೇಳುವ, ಸುಳ್ಳು ಹೇಳುವ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿಯಾಗಿದ್ದೂ ಮಾಹಿತಿ ತರಿಸಿಕೊಳ್ಳಲು ಕಷ್ಟವಾಗುತ್ತಿದೆಯೇ ಅಥವಾ ಮುಖ್ಯಮಂತ್ರಿಗಳು ಕೇಳಿದರೂ ಇಲಾಖೆಗಳೇ ಮಾಹಿತಿ ನೀಡುತ್ತಿಲ್ಲವೇ..?” ಎಂದು ವ್ಯಂಗ್ಯವಾಡಿದ್ದಾರೆ.

’2013 ರಿಂದ 2018 ರ ಮಾರ್ಚ್‌ವರೆಗೆ ನಮ್ಮ ಸರ್ಕಾರದ ಅವಧಿಯಲ್ಲಿ 15 ಲಕ್ಷ ಮನೆಗಳನ್ನು 16,775 ಕೋಟಿ ರೂ.ಗಳ ವೆಚ್ಚದಲ್ಲಿ ವಸತಿ ರಹಿತರಿಗಾಗಿ ನಿರ್ಮಾಣ ಮಾಡಿಕೊಟ್ಟಿದ್ದೆವು. ಈ ಮಾಹಿತಿಯನ್ನು ವಸತಿ ಸಚಿವ ಸೋಮಣ್ಣನವರ ಕಛೇರಿಯಿಂದಲೆ ನನಗೆ ಲಿಖಿತವಾಗಿ ಕಳಿಸಿದ್ದಾರೆ. ನಿಮಗೊಂದು ಪ್ರತಿ ತರಿಸಿ ಕೊಡಲೇ ಬೊಮ್ಮಾಯಿ ಅವರೇ..?’ ಎಂದು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: ಮಹಾತ್ಮ ಗಾಂಧಿಯನ್ನು ಕೊಂದ ಗೋಡ್ಸೆಯ ಪಳೆಯುಳಿಕೆ ಬಿಜೆಪಿ- ಸಿದ್ದರಾಮಯ್ಯ ಆಕ್ರೋಶ


‘ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಖಾಲಿ ಹುದ್ದೆಗಳನ್ನು ಒಳಗೊಂಡಂತೆ 32 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ.ನಿಮ್ಮ ಸರ್ಕಾರದ ಸಾಧನೆ ಇನ್ನೂ ಸೊನ್ನೆಯಲ್ಲೇ ಭದ್ರವಾಗಿ ಕೂತಿದೆ ಅಲ್ಲವೇ..? ನಾನು ಮುಖ್ಯ ಮಂತ್ರಿಯಾಗಿದ್ದಾಗ ಗ್ರಾಮ ವಿಕಾಸ ಮತ್ತು ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಜಾರಿಗೆ ತಂದಿದ್ದೆ. ಈ ಯೋಜನೆಯಡಿ 1750 ಕೋಟಿ ರೂಪಾಯಿಗಳನ್ನು ನೀಡಿ 2000 ಗ್ರಾಮಗಳನ್ನು ಅಭಿವೃದ್ಧಿ ಪಡಿಸಿದ್ದೆ. ಇಂತಹ ಜನಪರ ಯೋಜನೆ ನಿಲ್ಲಿಸಿದ್ದು ನಿಮ್ಮದೇ ಸರ್ಕಾರ ಅಲ್ಲವೇ..?’ ಎಂದು ಪ್ರಶ್ನಿಸಿದ್ದಾರೆ.


’ಅಮೃತ ಯೋಜನೆಯಡಿ ಆಯ್ದ ಗ್ರಾಮಗಳಿಗೆ ಕೇವಲ 25 ಲಕ್ಷ ರೂಪಾಯಿ ನೀಡುತ್ತೇವೆಂದು ಬೊಮ್ಮಾಯಿವರು ಹೇಳುತ್ತಾರೆ. 25 ಲಕ್ಷ ರೂಪಾಯಿಗಳಲ್ಲಿ 40% ನಿಮ್ಮ ಸರ್ಕಾರದ ಸಚಿವರು, ಅಧಿಕಾರಿಗಳಿಗೆ ಕಮಿಷನ್ ಹೋದರೆ ಉಳಿಯುವ ಹಣ ಎಷ್ಟು..? ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ಗ್ರಾಮೀಣ ರಸ್ತೆಗಳಿಗೆಂದು 1350 ಕೋಟಿ ನೀಡುವುದಾಗಿ ಆದೇಶ ಹೊರಡಿಸಿದ್ದರು. ಆದರೆ ಇದುವರೆಗೆ ಒಂದು ರೂಪಾಯಿಯನ್ನು ಬಿಡುಗಡೆ ಮಾಡಿಲ್ಲ. ಬರಿ ಘೋಷಣೆಗಳಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯವೇ..?’ ಎಂದು ಟೀಕಿಸಿದ್ದಾರೆ.

’ನಮ್ಮ ಸರ್ಕಾರದ ಅವಧಿಯಲ್ಲಿ ಗ್ರಾಮ ಪಂಚಾಯತಿ ನೌಕರರಿಗೆ ಸಂಬಳ ನೀಡಲೆಂದು ಪ್ರತಿ ವರ್ಷ 912 ಕೋಟಿ ರೂಗಳನ್ನು ತೆಗೆದಿಡುತ್ತಿದ್ದೆವು. ಅದರಿಂದ ಸಾವಿರಾರು ನೌಕರರಿಗೆ ಅನುಕೂಲವಾಗಿತ್ತು. ನಮ್ಮದು ಬಿಜೆಪಿ ಸರ್ಕಾರದಂತೆ ಹಾಳೆಗಳ ಮೇಲಿನ ಘೋಷಣೆಗಳಾಗಿ ಉಳಿದಿಲ್ಲ, ಸಾಧನೆಗಳಾಗಿವೆ’ ಎಂದು ತಿಳಿಸಿದ್ದಾರೆ.


’ಗ್ರಾಮ ಪಂಚಾಯತಿಗಳಿಗೆ ಅನುದಾನ ಬರಲು ಆರಂಭವಾಗಿದ್ದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ರವರು ನರೇಗಾ ಯೋಜನೆ ಪ್ರಾರಂಭಿಸಿದ ಮೇಲೆ. ನರೇಗಾ ಯೋಜನೆಯನ್ನು ಗುಜರಾತಿನ ಅಂದಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿಯವರು ವಿರೋಧಿಸಿದ್ದರು ಎಂಬ ಸತ್ಯವನ್ನು ಬಿಜೆಪಿ ಯವರು ಮರೆಯಬಾರದು. ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 3 ಕೋಟಿಗೂ ಹೆಚ್ಚು ಜನ ಬಿಪಿಎಲ್ ಕಾರ್ಡುದಾರರಿದ್ದಾರೆ. ಅದರಲ್ಲಿ ಒಂದು ಕೋಟಿ ಜನರಿಗೆ 100 ಮಾನವ ದಿನಗಳಷ್ಟು ಕೆಲಸ ಕೊಟ್ಟರೆ 100 ಕೋಟಿ ಮಾನವ ದಿನಗಳ ಗುರಿ ನೀಡಬೇಕಾಗುತ್ತದೆ. ಆದರೆ ರಾಜ್ಯಕ್ಕೆ 13 ಕೋಟಿ ಮಾನವ ದಿನಗಳ ಗುರಿಯನ್ನು ನೀಡಲಾಗುತ್ತಿದೆ. ಈಗಿರುವ ಗುರಿ ಕೇವಲ 13 ಲಕ್ಷ ಜನರಿಗೆ ಮಾತ್ರ ಸಾಕಾಗುತ್ತಿದೆ. ರಾಜ್ಯದಲ್ಲಿ ಆರ್ಥಿಕ ವರ್ಷ ಮುಗಿಯಲು ಇನ್ನೂ ಆರು ತಿಂಗಳಿದ್ದಾಗಲೆ ಟಾರ್ಗೆಟ್ ಮುಗಿದು ಹೋಗಿದೆ. ಬೊಮ್ಮಾಯಿಯವರು ಸುಳ್ಳು ಹೇಳಿಕೊಂಡು ಓಡಾಡುವ ಬದಲು ದೆಹಲಿಗೆ ಹೋಗಿ ನರೇಗಾ ಯೋಜನೆಗೆ ಬೇಡಿಕೆ ಆಧಾರಿತವಾಗಿ ಹೊಸ ಗುರಿ ನಿಗದಿ ಮಾಡಿಸಿಕೊಂಡು ಬರಲಿ’ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಹಂಪಿ ವಿವಿ ಹಗರಣ: ಕ್ರಮಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...