Homeಕರ್ನಾಟಕಬದಲಾವಣೆಯತ್ತ ಕರ್ನಾಟಕ ರಾಜಕೀಯ; ಯಡಿಯೂರಪ್ಪ ಸುತ್ತ ಏನಾಗುತ್ತಿದೆ?

ಬದಲಾವಣೆಯತ್ತ ಕರ್ನಾಟಕ ರಾಜಕೀಯ; ಯಡಿಯೂರಪ್ಪ ಸುತ್ತ ಏನಾಗುತ್ತಿದೆ?

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಾಮಾನ್ಯವಾಗಿ ತಮ್ಮ ಭಾವನೆಗಳನ್ನು ತನ್ನಲ್ಲಿಯೆ ಇಟ್ಟುಕೊಳ್ಳುತ್ತರೆ, ಹೀಗಾಗಿ ಅವರು ಸಾರ್ವಜನಿಕವಾಗಿ ನಗುವುದು ಬಹಳ ವಿರಳ. ಹೀಗಿರುವ ಅವರು, ಜುಲೈ 17 ರಂದು ಮಾಧ್ಯಮಗಳ ಜೊತೆ ಮಾತನಾಡುತ್ತಾ, ತಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂಬ ಸುದ್ದಿಯಲ್ಲಿ ಸತ್ಯವಿಲ್ಲ ಎಂದು ಹೇಳುವಾಗ ಅದು ಸರಳ ನಿರಾಕರಣೆಗಿಂತ ಹೆಚ್ಚಿನ ವಿಶ್ವಾಸವನ್ನು ಹೊಂದಿತ್ತು.

ಬಿಜೆಪಿ ಮೂಲಗಳ ಪ್ರಕಾರ, ಯಡಿಯೂರಪ್ಪ ಕೆಲವೇ ದಿನಗಳಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿಯಬಹುದು. ಕರ್ನಾಟಕ ಮುಖ್ಯಮಂತ್ರಿ ಜುಲೈ 26 ರಿಂದ ಆಗಸ್ಟ್ 15 ರ ನಡುವೆ ಯಾವುದಾದರೂ ಒಂದು ದಿನ ತಮ್ಮ ಸ್ಥಾನ ಕಳೆದುಕೊಳ್ಳಲಿದ್ದಾರೆ ಹಲವು ಮಾಧ್ಯಮ ವರದಿಗಳು ಉಲ್ಲೇಖಿಸಿದೆ.

ಉತ್ತರ ಪ್ರದೇಶದ ನಂತರ ಕರ್ನಾಟಕದಲ್ಲಿ ನಾಯಕತ್ವದ ಪ್ರಶ್ನೆ

ಯಡಿಯೂರಪ್ಪ ಅವರ ಧಾರ್ಮಿಕ ನಂಬಿಕೆಗಳ ಕಾರಣದಿಂದಾಗಿ ಅವರ ರಾಜೀನಾಮೆ ದಿನಾಂಕದ ಬಗ್ಗೆ ಅನಿಶ್ಚಿತತೆಯನ್ನು ಉಂಟುಮಾಡಿವೆ ಎಂದು ಮೂಲಗಳು ಹೇಳಿವೆ. ಸಂಖ್ಯಾಶಾಸ್ತ್ರದಲ್ಲಿ ನಂಬಿಕೆ ಹೊಂದಿರುವ ಧಾರ್ಮಿಕ ವ್ಯಕ್ತಿಯಾದ ಯಡಿಯೂರಪ್ಪ ಅವರು ಆಗಸ್ಟ್ 8 ರಂದು ಆಶಾಡಾ ತಿಂಗಳು ಮುಗಿಯುವವರೆಗೂ (ದುರುದ್ದೇಶಪೂರಿತವೆಂದು) ಕಾಯಲು ಬಯಸುತ್ತಾರೆ.

ಇದನ್ನೂ ಓದಿ: ಬಿಜೆಪಿ ಸೇರುತ್ತಿರುವ ಕೊಳ್ಳೇಗಾಲ ಶಾಸಕ ಎನ್‌. ಮಹೇಶ್‌; ಆಪ್ತರ ಹೇಳಿಕೆ

ಯಡಿಯೂರಪ್ಪ ಅವರನ್ನು ಬದಲಿಸುವ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್‌ ನಿರ್ಧಾರದ ಬಗೆಗಿನ ಪ್ರಶ್ನೆಯನ್ನು ಪಕ್ಷದ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಈಗಾಗಲೆ ನಿರಾಕರಿಸಿದ್ದಾರೆ.

ಯಡಿಯೂರಪ್ಪ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ಶಾಸಕರು, ಒಕ್ಕೂಟ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯ ನಂತರ ರಾಜ್ಯದಲ್ಲಿಯೂ ಸಿಎಂ ಬದಲಾವಣೆ ಆಗಬಹುದು ಎಂದು ಆಶಿಸಿದ್ದರು. ಆದರೆ, ಉತ್ತರಪ್ರದೇಶದಲ್ಲಿ ಭಿನ್ನಮತೀಯರನ್ನು ಶಾಂತಗೊಳಿಸಿದ ನಂತರವೇ ಪಕ್ಷವು ಕರ್ನಾಟಕದ ವಿಚಾರವನ್ನು ಕೈಗೆತ್ತಿಕೊಳ್ಳಲಿದೆ ಎಂದು ಪಕ್ಷದ ವಲಯದಲ್ಲಿ ತಿಳಿದುಬಂದಿದೆ.

ಪ್ರಧಾನಿ ಮೋದಿ ಮತ್ತು ಯಡಿಯೂರಪ್ಪ ನು ಮಾತನಾಡಿದ್ದಾರೆ?

ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದಾಗ ಮೋದಿಯನ್ನು ಭೇಟಿ ಮಾಡಿ 10 ನಿಮಿಷಗಳ ಕಾಲ ಸಭೆ ನಡೆಸಿದ್ದಾರೆ. ಈ ವೇಳೆ ಅವರು 2023ರಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಅಲ್ಲಿಯವರೆಗೂ ತಮ್ಮ ಅಧಿಕಾರವನ್ನು ಪೂರ್ಣಗೊಳಿಸಲು ಅವಕಾಶ ನೀಡಬೇಕು ಎಂದು ಸಭೆಯ ಆರಂಭದಲ್ಲಿ ಕೇಳಿಕೊಂಡಿದ್ದಾರೆ.

ಆದರೆ, ಪಕ್ಷದ ಎಲ್ಲ ನಾಯಕರು ಯುವ ಪೀಳಿಗೆಗೆ ದಾರಿ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ ಎಂದು ಪ್ರಧಾನಿ ಮೋದಿಯವರು ಯಡಿಯೂರಪ್ಪ ಅವರಿಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಬಿಜೆಪಿ ಮುಗಿಸಲು ನಳಿನ್ ಕುಮಾರ್ ಕಟೀಲ್ ಒಬ್ಬರೇ ಸಾಕು: ಕಾಂಗ್ರೆಸ್

ಹೀಗಾಗಿ, ಸಿಎಂ ಬಿಎಸ್‌ವೈ ‘ಅನಾರೋಗ್ಯದ ಕಾರಣ’ ನೀಡಿ ರಾಜೀನಾಮೆ ನೀಡಲು ಮುಂದಾಗಿದ್ದರು ಎನ್ನಲಾಗಿದೆ. ಆದರೆ, ಅದರ ನಂತರ ಪಿಎಂ ಮೋದಿ ಅವರು ‘ದಯವಿಟ್ಟು ನೀವು ಹೊರಡುವ ಮೊದಲು ಐದು ನಿಮಿಷಗಳ ಕಾಲ ಕುಳಿತುಕೊಳ್ಳಿ’ ಎಂದು ಯಡಿಯೂರಪ್ಪ ಅವರಿಗೆ ಹೇಳಿದರು ಎಂದು ತಿಳಿದು ಬಂದಿದೆ. ಇತರ ನಾಯಕರೊಂದಿಗಿನ ಸಭೆಯಲ್ಲಿ, ಪಕ್ಷವನ್ನು ಬಲಪಡಿಸುವ ಮತ್ತು ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಜಯಗಳಿಸುವ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಮುಖ್ಯಮಂತ್ರಿಯನ್ನು ಕೇಳಲಾಗಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವು ಕೆಟ್ಟ ಪ್ರದರ್ಶನ ನೀಡಿದೆ. ಈ ಚುನಾವಣೆಗಳಲ್ಲಿ ಬಿಜೆಪಿ 3 ನೇ ಸ್ಥಾನ ಪಡೆದುಕೊಂಡಿದೆ. ಅಲ್ಲದೆ, ಮೇ ತಿಂಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬೆಳಗಾವಿಯನ್ನು ಅತ್ಯಂತ ಕಡಿಮೆ ಮಾರ್ಜಿನ್‌ನಲ್ಲಿ ಬಿಜೆಪಿ ಗೆದ್ದಿದೆ. ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿ ಸೋಲುಂಡಿದೆ.

ಅಮಿತ್ ಶಾ ಜೊತೆಗೆ ಒಪ್ಪಂದ?

ಯಡಿಯೂರಪ್ಪ ಅವರು ನವದೆಹಲಿಯಲ್ಲಿ ಜುಲೈ 16 ರಿಂದ 17 ರ ವರೆಗೆ ಬಿಜೆಪಿಯ ಎಲ್ಲ ಉನ್ನತ ನಾಯಕರನ್ನು ಭೇಟಿಯಾಗಿದ್ದಾರೆ. ಅವರು ತಮ್ಮ ಮುಂದುವರಿಕೆ ಅಥವಾ ರಾಜೀನಾಮೆಯ ಬಗ್ಗೆ ಅಂತಿಮ ಹೇಳಿಕೆಯನ್ನು ಅಲ್ಲಿ ನೀಡಿದ್ದಾರೆ.

ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದ ನಂತರ, ಯಡಿಯೂರಪ್ಪ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡದೆ ವಿಶೇಷ ವಿಮಾನ ಹತ್ತಲು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು.

ಅದರೆ, ಈ ನಡುವೆ ಅವರಿಗೆ ಅಮಿತ್‌‌ ಶಾ ಕಡೆಯಿಂದ ಬುಲಾವ್ ಬಂದಿದ್ದು ನಂತರ ವಾಪಸ್‌ ಹೋದ ಯಡಿಯೂರಪ್ಪ, ಅವರ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಅವರು ಒಪ್ಪಂದವನ್ನು ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಜುಲೈ 17 ರಂದು ತಡವಾಗಿ ಬೆಂಗಳೂರಿಗೆ ತಲುಪಿದ ಸಿಎಂ, ಈ ಹಿಂದೆ ತಮ್ಮ ರಾಜೀನಾಮೆಯ ಊಹಾಪೋಹಗಳನ್ನು ದೂರವಿಟ್ಟು ಭಿನ್ನರಾಗವನ್ನು ಹಾಡಿದ್ದಾರೆ.

ಇದನ್ನೂ ಓದಿ: ಅನಾರೋಗ್ಯದ ಕಾರಣ ಮುಂದಿಟ್ಟು ರಾಜೀನಾಮೆಗೆ ಮುಂದಾದ ಯಡಿಯೂರಪ್ಪ?

“ನಾಯಕರ ಕೊರತೆಯಿಲ್ಲ ಎಂದು ನಾನು ಪುನರುಚ್ಚರಿಸುತ್ತೇನೆ ಮತ್ತು ಇದೀಗ ನನಗೆ ಜವಾಬ್ದಾರಿಯನ್ನು ನೀಡಲಾಗಿದೆ. ಸದ್ಯಕ್ಕೆ ಮುಂದುವರಿಯಲು ನನ್ನನ್ನು ಕೇಳಲಾಗಿದೆ. ಉನ್ನತ ನಾಯಕತ್ವ ಹೇಳಿದ್ದನ್ನು ನಾವು ಮಾಡಬೇಕು. ಮುಂದಿನ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ನಾನು ಅವರಿಗೆ ಭರವಸೆ ನೀಡಿದ್ದೇನೆ” ಎಂದು ಅವರು ಹೇಳಿದ್ದಾರೆ.

ಸುಗಮ ಬದಲಾವಣೆ ನಿರೀಕ್ಷಿಸಲಾಗಿದೆ

ರಾಜೀನಾಮೆ ಪತ್ರಗಳನ್ನು ಪಡೆಯಲು ಅಂದಿನ ಉತ್ತರಾಖಂಡ ಮತ್ತು ಅಸ್ಸಾಂ ಮುಖ್ಯಮಂತ್ರಿಗಳನ್ನು ನವದೆಹಲಿಗೆ ಕರೆಸಿಕೊಂಡ ಮಾದರಿಯಲ್ಲಿ ಕರ್ನಾಟಕದಲ್ಲಿ ಸುಗಮವಾಗಿ ಅಧಿಕಾರ ಬದಲಾವಣೆ ಮಾಡಲು ಬಿಜೆಪಿ ನಾಯಕತ್ವ ಬಯಸಿದೆ ಎಂದು ಮೂಲಗಳು ತಿಳಿಸಿವೆ.

“ಕೊರೊನಾದಿಂದಾಗಿ ಬಿಬಿಎಂಪಿ ಮತ್ತು ಪಂಚಾಯಿತಿ ಚುನಾವಣೆಗಳನ್ನು ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ. ಹೀಗಾಗಿ, ಶೀಘ್ರದಲ್ಲೇ ಯಾವುದೇ ಚುನಾವಣೆಗಳು ನಡೆಯದ ಕಾರಣ ನಾಯಕತ್ವ ಬದಲಾವಣೆ ಮಾಡಲು ಪಕ್ಷದ ಹೈಕಮಾಂಡ್‌ಗೆ ಇದೇ ಅತ್ಯುತ್ತಮ ಸಮಯ” ಎಂದು ಮೂಲವೊಂದು ತಿಳಿಸಿದೆ.

ಇದನ್ನೂ ಓದಿ: ಹಲವು ಗುಮಾನಿಗಳಿಗೆ ಕಾರಣವಾದ ಸಹಕಾರ ಮಂತ್ರಾಲಯ: ಎ ನಾರಾಯಣ

2012ರಲ್ಲಿ ಬಿಜೆಪಿ ತೊರೆದು ಹೊಸ ಪಕ್ಷವನ್ನು ಕಟ್ಟಿದ್ದ ಯಡಿಯೂರಪ್ಪ, 2013ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಶಕ್ತಿ 110 ಸ್ಥಾನಗಳಿಂದ 40 ಸ್ಥಾನಗಳಿಗೆ ಕುಸಿಯುವಂತೆ ಮಾಡಿದ್ದರು. ಆದರೆ, ಈ ಬಾರಿ ಆ ರೀತಿ ಅಡೆತಡೆಗಳನ್ನು ಅವರು ಸೃಷ್ಟಿಸುವುದಿಲ್ಲ ಎಂಬ ವಿಶ್ವಾಸ ಬಿಜೆಪಿ ಹೈಕಮಾಂಡ್‌ಗೆ ಇದೆ.

ಅಲ್ಲದೆ, ಅವರ ಇಬ್ಬರು ಮಕ್ಕಳಾದ ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ.ರಾಘವೇಂದ್ರ ಮತ್ತು ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಭವಿಷ್ಯವು ಯಡಿಯೂರಪ್ಪರಿಗೆ ಅತ್ಯಂತ ಮುಖ್ಯವಾಗಿದೆ. ಹೀಗಾಗಿ, ಪಕ್ಷದ ಹೈಕಮಾಂಡ್‌ನ ವಿಶ್ವಾಸವನ್ನು ಉಳಿಸಿಕೊಳ್ಳದೆ ಅವರ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲಾಗುವುದಿಲ್ಲ ಎಂಬುದು ಅವರಿಗೆ ಸ್ಪಷ್ಟವಾಗಿ ತಿಳಿದಿದೆ.

ಹೀಗಾಗಿ, ಅವರನ್ನು ಸಿಎಂ ಸ್ಥಾನದಿಂದ ಇಳಿಸಿ, ಮಹಾರಾಷ್ಟ್ರ, ಆಂಧ್ರ ಅಥವಾ ತೆಲಂಗಾಣಕ್ಕೆ ರಾಜ್ಯಪಾಲರನ್ನಾಗಿ ನೇಮಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಮಾತ್ರವಲ್ಲ, ಅವರ ಮಗ ವಿಜಯೇಂದ್ರ ಅವರಿಗೂ ಉನ್ನತ ಹುದ್ದೆ (ಡಿಸಿಎಂ) ನೀಡುವ ಬಗ್ಗೆ ಪ್ರಸ್ತಾಪವಿದೆ ಎಂದು ಹೇಳಲಾಗಿದ್ದು, ಆ ಬಗ್ಗೆಯೂ ಮಾತುಕತೆಗಳು ನಡೆಯುತ್ತಿವೆ.

ಯಡಿಯೂರಪ್ಪ ಅವರಿಗೆ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವುದು ಹಿಂದಿನಿಂದಲೂ ಕಷ್ಟಕರವಾಗುತ್ತಲೆ ಬಂದಿದೆ. ಅವರು 2007 ರಲ್ಲಿ ಒಂದು ವಾರ, 2008 ರಲ್ಲಿ ಮೂರೂವರೆ ವರ್ಷ ಮತ್ತು 2018 ರಲ್ಲಿ ಮೂರು ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದರು. 2021 ರಲ್ಲಿ, ಅವರು ಎರಡು ವರ್ಷ ಅಧಿಕಾರವನ್ನು ಪೂರ್ಣಗೊಳ್ಳುವ ಅವಕಾಶವನ್ನು ನಿರಾಕರಿಸಲಾಗುತ್ತದೆಯೇ? ಎಂಬ ಸಂಶಯವೂ ಈ ಸಂದರ್ಭದಲ್ಲಿ ಮುಂದಿದೆ.

ಆಧಾರ: ದಿ ಕ್ವಿಂಟ್

ಇದನ್ನೂ ಓದಿ: ಯಡಿಯೂರಪ್ಪ ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಿ- ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...