Homeಕರ್ನಾಟಕಬದಲಾವಣೆಯತ್ತ ಕರ್ನಾಟಕ ರಾಜಕೀಯ; ಯಡಿಯೂರಪ್ಪ ಸುತ್ತ ಏನಾಗುತ್ತಿದೆ?

ಬದಲಾವಣೆಯತ್ತ ಕರ್ನಾಟಕ ರಾಜಕೀಯ; ಯಡಿಯೂರಪ್ಪ ಸುತ್ತ ಏನಾಗುತ್ತಿದೆ?

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಾಮಾನ್ಯವಾಗಿ ತಮ್ಮ ಭಾವನೆಗಳನ್ನು ತನ್ನಲ್ಲಿಯೆ ಇಟ್ಟುಕೊಳ್ಳುತ್ತರೆ, ಹೀಗಾಗಿ ಅವರು ಸಾರ್ವಜನಿಕವಾಗಿ ನಗುವುದು ಬಹಳ ವಿರಳ. ಹೀಗಿರುವ ಅವರು, ಜುಲೈ 17 ರಂದು ಮಾಧ್ಯಮಗಳ ಜೊತೆ ಮಾತನಾಡುತ್ತಾ, ತಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂಬ ಸುದ್ದಿಯಲ್ಲಿ ಸತ್ಯವಿಲ್ಲ ಎಂದು ಹೇಳುವಾಗ ಅದು ಸರಳ ನಿರಾಕರಣೆಗಿಂತ ಹೆಚ್ಚಿನ ವಿಶ್ವಾಸವನ್ನು ಹೊಂದಿತ್ತು.

ಬಿಜೆಪಿ ಮೂಲಗಳ ಪ್ರಕಾರ, ಯಡಿಯೂರಪ್ಪ ಕೆಲವೇ ದಿನಗಳಲ್ಲಿ ಸಿಎಂ ಸ್ಥಾನದಿಂದ ಕೆಳಗಿಳಿಯಬಹುದು. ಕರ್ನಾಟಕ ಮುಖ್ಯಮಂತ್ರಿ ಜುಲೈ 26 ರಿಂದ ಆಗಸ್ಟ್ 15 ರ ನಡುವೆ ಯಾವುದಾದರೂ ಒಂದು ದಿನ ತಮ್ಮ ಸ್ಥಾನ ಕಳೆದುಕೊಳ್ಳಲಿದ್ದಾರೆ ಹಲವು ಮಾಧ್ಯಮ ವರದಿಗಳು ಉಲ್ಲೇಖಿಸಿದೆ.

ಉತ್ತರ ಪ್ರದೇಶದ ನಂತರ ಕರ್ನಾಟಕದಲ್ಲಿ ನಾಯಕತ್ವದ ಪ್ರಶ್ನೆ

ಯಡಿಯೂರಪ್ಪ ಅವರ ಧಾರ್ಮಿಕ ನಂಬಿಕೆಗಳ ಕಾರಣದಿಂದಾಗಿ ಅವರ ರಾಜೀನಾಮೆ ದಿನಾಂಕದ ಬಗ್ಗೆ ಅನಿಶ್ಚಿತತೆಯನ್ನು ಉಂಟುಮಾಡಿವೆ ಎಂದು ಮೂಲಗಳು ಹೇಳಿವೆ. ಸಂಖ್ಯಾಶಾಸ್ತ್ರದಲ್ಲಿ ನಂಬಿಕೆ ಹೊಂದಿರುವ ಧಾರ್ಮಿಕ ವ್ಯಕ್ತಿಯಾದ ಯಡಿಯೂರಪ್ಪ ಅವರು ಆಗಸ್ಟ್ 8 ರಂದು ಆಶಾಡಾ ತಿಂಗಳು ಮುಗಿಯುವವರೆಗೂ (ದುರುದ್ದೇಶಪೂರಿತವೆಂದು) ಕಾಯಲು ಬಯಸುತ್ತಾರೆ.

ಇದನ್ನೂ ಓದಿ: ಬಿಜೆಪಿ ಸೇರುತ್ತಿರುವ ಕೊಳ್ಳೇಗಾಲ ಶಾಸಕ ಎನ್‌. ಮಹೇಶ್‌; ಆಪ್ತರ ಹೇಳಿಕೆ

ಯಡಿಯೂರಪ್ಪ ಅವರನ್ನು ಬದಲಿಸುವ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್‌ ನಿರ್ಧಾರದ ಬಗೆಗಿನ ಪ್ರಶ್ನೆಯನ್ನು ಪಕ್ಷದ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಈಗಾಗಲೆ ನಿರಾಕರಿಸಿದ್ದಾರೆ.

ಯಡಿಯೂರಪ್ಪ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ಶಾಸಕರು, ಒಕ್ಕೂಟ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯ ನಂತರ ರಾಜ್ಯದಲ್ಲಿಯೂ ಸಿಎಂ ಬದಲಾವಣೆ ಆಗಬಹುದು ಎಂದು ಆಶಿಸಿದ್ದರು. ಆದರೆ, ಉತ್ತರಪ್ರದೇಶದಲ್ಲಿ ಭಿನ್ನಮತೀಯರನ್ನು ಶಾಂತಗೊಳಿಸಿದ ನಂತರವೇ ಪಕ್ಷವು ಕರ್ನಾಟಕದ ವಿಚಾರವನ್ನು ಕೈಗೆತ್ತಿಕೊಳ್ಳಲಿದೆ ಎಂದು ಪಕ್ಷದ ವಲಯದಲ್ಲಿ ತಿಳಿದುಬಂದಿದೆ.

ಪ್ರಧಾನಿ ಮೋದಿ ಮತ್ತು ಯಡಿಯೂರಪ್ಪ ನು ಮಾತನಾಡಿದ್ದಾರೆ?

ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ್ದಾಗ ಮೋದಿಯನ್ನು ಭೇಟಿ ಮಾಡಿ 10 ನಿಮಿಷಗಳ ಕಾಲ ಸಭೆ ನಡೆಸಿದ್ದಾರೆ. ಈ ವೇಳೆ ಅವರು 2023ರಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಅಲ್ಲಿಯವರೆಗೂ ತಮ್ಮ ಅಧಿಕಾರವನ್ನು ಪೂರ್ಣಗೊಳಿಸಲು ಅವಕಾಶ ನೀಡಬೇಕು ಎಂದು ಸಭೆಯ ಆರಂಭದಲ್ಲಿ ಕೇಳಿಕೊಂಡಿದ್ದಾರೆ.

ಆದರೆ, ಪಕ್ಷದ ಎಲ್ಲ ನಾಯಕರು ಯುವ ಪೀಳಿಗೆಗೆ ದಾರಿ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ ಎಂದು ಪ್ರಧಾನಿ ಮೋದಿಯವರು ಯಡಿಯೂರಪ್ಪ ಅವರಿಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಬಿಜೆಪಿ ಮುಗಿಸಲು ನಳಿನ್ ಕುಮಾರ್ ಕಟೀಲ್ ಒಬ್ಬರೇ ಸಾಕು: ಕಾಂಗ್ರೆಸ್

ಹೀಗಾಗಿ, ಸಿಎಂ ಬಿಎಸ್‌ವೈ ‘ಅನಾರೋಗ್ಯದ ಕಾರಣ’ ನೀಡಿ ರಾಜೀನಾಮೆ ನೀಡಲು ಮುಂದಾಗಿದ್ದರು ಎನ್ನಲಾಗಿದೆ. ಆದರೆ, ಅದರ ನಂತರ ಪಿಎಂ ಮೋದಿ ಅವರು ‘ದಯವಿಟ್ಟು ನೀವು ಹೊರಡುವ ಮೊದಲು ಐದು ನಿಮಿಷಗಳ ಕಾಲ ಕುಳಿತುಕೊಳ್ಳಿ’ ಎಂದು ಯಡಿಯೂರಪ್ಪ ಅವರಿಗೆ ಹೇಳಿದರು ಎಂದು ತಿಳಿದು ಬಂದಿದೆ. ಇತರ ನಾಯಕರೊಂದಿಗಿನ ಸಭೆಯಲ್ಲಿ, ಪಕ್ಷವನ್ನು ಬಲಪಡಿಸುವ ಮತ್ತು ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಜಯಗಳಿಸುವ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಮುಖ್ಯಮಂತ್ರಿಯನ್ನು ಕೇಳಲಾಗಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವು ಕೆಟ್ಟ ಪ್ರದರ್ಶನ ನೀಡಿದೆ. ಈ ಚುನಾವಣೆಗಳಲ್ಲಿ ಬಿಜೆಪಿ 3 ನೇ ಸ್ಥಾನ ಪಡೆದುಕೊಂಡಿದೆ. ಅಲ್ಲದೆ, ಮೇ ತಿಂಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬೆಳಗಾವಿಯನ್ನು ಅತ್ಯಂತ ಕಡಿಮೆ ಮಾರ್ಜಿನ್‌ನಲ್ಲಿ ಬಿಜೆಪಿ ಗೆದ್ದಿದೆ. ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿ ಸೋಲುಂಡಿದೆ.

ಅಮಿತ್ ಶಾ ಜೊತೆಗೆ ಒಪ್ಪಂದ?

ಯಡಿಯೂರಪ್ಪ ಅವರು ನವದೆಹಲಿಯಲ್ಲಿ ಜುಲೈ 16 ರಿಂದ 17 ರ ವರೆಗೆ ಬಿಜೆಪಿಯ ಎಲ್ಲ ಉನ್ನತ ನಾಯಕರನ್ನು ಭೇಟಿಯಾಗಿದ್ದಾರೆ. ಅವರು ತಮ್ಮ ಮುಂದುವರಿಕೆ ಅಥವಾ ರಾಜೀನಾಮೆಯ ಬಗ್ಗೆ ಅಂತಿಮ ಹೇಳಿಕೆಯನ್ನು ಅಲ್ಲಿ ನೀಡಿದ್ದಾರೆ.

ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದ ನಂತರ, ಯಡಿಯೂರಪ್ಪ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡದೆ ವಿಶೇಷ ವಿಮಾನ ಹತ್ತಲು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು.

ಅದರೆ, ಈ ನಡುವೆ ಅವರಿಗೆ ಅಮಿತ್‌‌ ಶಾ ಕಡೆಯಿಂದ ಬುಲಾವ್ ಬಂದಿದ್ದು ನಂತರ ವಾಪಸ್‌ ಹೋದ ಯಡಿಯೂರಪ್ಪ, ಅವರ ಜೊತೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಅವರು ಒಪ್ಪಂದವನ್ನು ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಜುಲೈ 17 ರಂದು ತಡವಾಗಿ ಬೆಂಗಳೂರಿಗೆ ತಲುಪಿದ ಸಿಎಂ, ಈ ಹಿಂದೆ ತಮ್ಮ ರಾಜೀನಾಮೆಯ ಊಹಾಪೋಹಗಳನ್ನು ದೂರವಿಟ್ಟು ಭಿನ್ನರಾಗವನ್ನು ಹಾಡಿದ್ದಾರೆ.

ಇದನ್ನೂ ಓದಿ: ಅನಾರೋಗ್ಯದ ಕಾರಣ ಮುಂದಿಟ್ಟು ರಾಜೀನಾಮೆಗೆ ಮುಂದಾದ ಯಡಿಯೂರಪ್ಪ?

“ನಾಯಕರ ಕೊರತೆಯಿಲ್ಲ ಎಂದು ನಾನು ಪುನರುಚ್ಚರಿಸುತ್ತೇನೆ ಮತ್ತು ಇದೀಗ ನನಗೆ ಜವಾಬ್ದಾರಿಯನ್ನು ನೀಡಲಾಗಿದೆ. ಸದ್ಯಕ್ಕೆ ಮುಂದುವರಿಯಲು ನನ್ನನ್ನು ಕೇಳಲಾಗಿದೆ. ಉನ್ನತ ನಾಯಕತ್ವ ಹೇಳಿದ್ದನ್ನು ನಾವು ಮಾಡಬೇಕು. ಮುಂದಿನ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ನಾನು ಅವರಿಗೆ ಭರವಸೆ ನೀಡಿದ್ದೇನೆ” ಎಂದು ಅವರು ಹೇಳಿದ್ದಾರೆ.

ಸುಗಮ ಬದಲಾವಣೆ ನಿರೀಕ್ಷಿಸಲಾಗಿದೆ

ರಾಜೀನಾಮೆ ಪತ್ರಗಳನ್ನು ಪಡೆಯಲು ಅಂದಿನ ಉತ್ತರಾಖಂಡ ಮತ್ತು ಅಸ್ಸಾಂ ಮುಖ್ಯಮಂತ್ರಿಗಳನ್ನು ನವದೆಹಲಿಗೆ ಕರೆಸಿಕೊಂಡ ಮಾದರಿಯಲ್ಲಿ ಕರ್ನಾಟಕದಲ್ಲಿ ಸುಗಮವಾಗಿ ಅಧಿಕಾರ ಬದಲಾವಣೆ ಮಾಡಲು ಬಿಜೆಪಿ ನಾಯಕತ್ವ ಬಯಸಿದೆ ಎಂದು ಮೂಲಗಳು ತಿಳಿಸಿವೆ.

“ಕೊರೊನಾದಿಂದಾಗಿ ಬಿಬಿಎಂಪಿ ಮತ್ತು ಪಂಚಾಯಿತಿ ಚುನಾವಣೆಗಳನ್ನು ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ. ಹೀಗಾಗಿ, ಶೀಘ್ರದಲ್ಲೇ ಯಾವುದೇ ಚುನಾವಣೆಗಳು ನಡೆಯದ ಕಾರಣ ನಾಯಕತ್ವ ಬದಲಾವಣೆ ಮಾಡಲು ಪಕ್ಷದ ಹೈಕಮಾಂಡ್‌ಗೆ ಇದೇ ಅತ್ಯುತ್ತಮ ಸಮಯ” ಎಂದು ಮೂಲವೊಂದು ತಿಳಿಸಿದೆ.

ಇದನ್ನೂ ಓದಿ: ಹಲವು ಗುಮಾನಿಗಳಿಗೆ ಕಾರಣವಾದ ಸಹಕಾರ ಮಂತ್ರಾಲಯ: ಎ ನಾರಾಯಣ

2012ರಲ್ಲಿ ಬಿಜೆಪಿ ತೊರೆದು ಹೊಸ ಪಕ್ಷವನ್ನು ಕಟ್ಟಿದ್ದ ಯಡಿಯೂರಪ್ಪ, 2013ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಶಕ್ತಿ 110 ಸ್ಥಾನಗಳಿಂದ 40 ಸ್ಥಾನಗಳಿಗೆ ಕುಸಿಯುವಂತೆ ಮಾಡಿದ್ದರು. ಆದರೆ, ಈ ಬಾರಿ ಆ ರೀತಿ ಅಡೆತಡೆಗಳನ್ನು ಅವರು ಸೃಷ್ಟಿಸುವುದಿಲ್ಲ ಎಂಬ ವಿಶ್ವಾಸ ಬಿಜೆಪಿ ಹೈಕಮಾಂಡ್‌ಗೆ ಇದೆ.

ಅಲ್ಲದೆ, ಅವರ ಇಬ್ಬರು ಮಕ್ಕಳಾದ ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ.ರಾಘವೇಂದ್ರ ಮತ್ತು ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಭವಿಷ್ಯವು ಯಡಿಯೂರಪ್ಪರಿಗೆ ಅತ್ಯಂತ ಮುಖ್ಯವಾಗಿದೆ. ಹೀಗಾಗಿ, ಪಕ್ಷದ ಹೈಕಮಾಂಡ್‌ನ ವಿಶ್ವಾಸವನ್ನು ಉಳಿಸಿಕೊಳ್ಳದೆ ಅವರ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲಾಗುವುದಿಲ್ಲ ಎಂಬುದು ಅವರಿಗೆ ಸ್ಪಷ್ಟವಾಗಿ ತಿಳಿದಿದೆ.

ಹೀಗಾಗಿ, ಅವರನ್ನು ಸಿಎಂ ಸ್ಥಾನದಿಂದ ಇಳಿಸಿ, ಮಹಾರಾಷ್ಟ್ರ, ಆಂಧ್ರ ಅಥವಾ ತೆಲಂಗಾಣಕ್ಕೆ ರಾಜ್ಯಪಾಲರನ್ನಾಗಿ ನೇಮಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಮಾತ್ರವಲ್ಲ, ಅವರ ಮಗ ವಿಜಯೇಂದ್ರ ಅವರಿಗೂ ಉನ್ನತ ಹುದ್ದೆ (ಡಿಸಿಎಂ) ನೀಡುವ ಬಗ್ಗೆ ಪ್ರಸ್ತಾಪವಿದೆ ಎಂದು ಹೇಳಲಾಗಿದ್ದು, ಆ ಬಗ್ಗೆಯೂ ಮಾತುಕತೆಗಳು ನಡೆಯುತ್ತಿವೆ.

ಯಡಿಯೂರಪ್ಪ ಅವರಿಗೆ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವುದು ಹಿಂದಿನಿಂದಲೂ ಕಷ್ಟಕರವಾಗುತ್ತಲೆ ಬಂದಿದೆ. ಅವರು 2007 ರಲ್ಲಿ ಒಂದು ವಾರ, 2008 ರಲ್ಲಿ ಮೂರೂವರೆ ವರ್ಷ ಮತ್ತು 2018 ರಲ್ಲಿ ಮೂರು ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದರು. 2021 ರಲ್ಲಿ, ಅವರು ಎರಡು ವರ್ಷ ಅಧಿಕಾರವನ್ನು ಪೂರ್ಣಗೊಳ್ಳುವ ಅವಕಾಶವನ್ನು ನಿರಾಕರಿಸಲಾಗುತ್ತದೆಯೇ? ಎಂಬ ಸಂಶಯವೂ ಈ ಸಂದರ್ಭದಲ್ಲಿ ಮುಂದಿದೆ.

ಆಧಾರ: ದಿ ಕ್ವಿಂಟ್

ಇದನ್ನೂ ಓದಿ: ಯಡಿಯೂರಪ್ಪ ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಿ- ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...