Homeಕರ್ನಾಟಕಉತ್ತರ ಕನ್ನಡ ರಾಜಕೀಯ ಇತಿಹಾಸದ ರೂಪಾಂತರ

ಉತ್ತರ ಕನ್ನಡ ರಾಜಕೀಯ ಇತಿಹಾಸದ ರೂಪಾಂತರ

- Advertisement -
- Advertisement -

 ಶುದ್ಧೋದನ |

ಎಲ್ಲರೂ ಸೇರಿದರು ಹೊಸ ಪಕ್ಷ ತಂಗಿ
ಬಿಡಲಿಲ್ಲ ನಾನೊಬ್ಬನೇ ಹಳೆಯ ಅಂಗಿ
ನನಗೆ ಬೇಕಾಗಿಲ್ಲ ಹೊಸ ಹಗಲುವೇಷ
ವೇಷಧಾರಿಗಳಿಂದ ಹಾಳಾಯಿತು ದೇಶ
ಇದು ರೈತ ಹೋರಾಟಗಾರ, ಶಿಕ್ಷಣ ತಜ್ಞ, ನಿಜ ಜನನಾಯಕ ದಿನಕರ ದೇಸಾಯಿ 1960ರ ದಶಕದಲ್ಲಿ ಬರೆದ ಚುಟುಕು. ಪಕ್ಷಾಂತರ ಪಿಡುಗಿಂದ ರೋಸಿದ ದೇಸಾಯರು ಇಂಥ ಹಲವು ಚೌಪದಿ ಕಟ್ಟಿದ್ದಾರೆ. ದೇಸಾಯರು ರಚಿಸಿದ ಸಾವಿರಾರು ಚುಟುಕುಗಳಲ್ಲಿ ಮುಕ್ಕಾಲು ಪಾಲು ರಾಜಕೀಯ ವಿಡಂಬನೆ, ವಿಮರ್ಶೆಗೆ ಸಂಬಂಧಿಸಿದ್ದು. 1967ರಲ್ಲಿ ದೇಸಾಯರು ಉತ್ತರ ಕನ್ನಡದಿಂದ ಗೆದ್ದು ಪಾರ್ಲಿಮೆಂಟ್‍ಗೆ ಹೋಗಿದ್ದರು. ಮೊದಲೊಮ್ಮೆ ಸೋತಿದ್ದ ದೇಸಾಯರು 1971ರಲ್ಲಿ ಗೆಲ್ಲಲಾಗಲಿಲ್ಲ; ಆ ನಂತರ ರಾಜಕೀಯದಿಂದ ದೂರಾದರು.
ಸದಾ ಜನಪರವಾಗಿ ತುಡಿಯುತ್ತಿದ್ದ, ದುಡಿಯುತ್ತಿದ್ದ ದೇಸಾಯರಂತೆ ಹಲವು ಸಜ್ಜನರು ಕೆನರಾ ಕ್ಷೇತ್ರದಲ್ಲಿ ಸೋತಿದ್ದಾರೆ. ಈಗ ಹೇಗೆ ಮೋದಿ ಮಂಕುಬೂದಿ ಹಾರಾಡುತ್ತಿದೆಯೋ ಹಾಗೆ ಅಂದು ಇಂದಿರಾ ಭ್ರಮೆ ಜಿಲ್ಲೆಯಲ್ಲಿತ್ತು. ಹಾಗಾಗಿ ಉಡುಪಿಯಿಂದ ವಲಸೆ ಬಂದಿದ್ದ ಜೋಕಿಮ್ ಆಳ್ವನಂಥ ಕೆಲಸಕ್ಕೆ ಬಾರದವರು ಎರಡೆರಡು ಬಾರಿ ಕೆನರಾದ ಎಂಪಿಯಾಗಿದ್ದು ದೌರ್ಭಾಗ್ಯವೇ ಸರಿ. ಜೋಯಿಡಾದ ರಾಮನಗರದ ಬಳಿ ವಾಸವಾಗಿದ್ದ ನಿವೃತ್ತ ಸೈನ್ಯಾಧಿಕಾರಿ, ಪ್ರಸಿದ್ಧ ಸಾಹಿತಿ ಮನೋಹರ್ ಮಾಳಗಾಂವ್ಕರ್ 1962ರಲ್ಲಿ ಸ್ಪರ್ಧಿಸಿದ್ದರು. ಅವರ ಮಹತ್ವ ಮತದಾರರಿಗೆ ಅರ್ಥವಾಗಲಿಲ್ಲ. ಆತ ಸೋತರು. ರಾಜಮಹಾರಾಜರು, ಗಂಗೆಯಲ್ಲಿ ತಿರುವು ತರಹದ ಕಾದಂಬರಿ ಇಂಗ್ಲಿಷ್‍ನಲ್ಲಿ ಬರೆದಿದ್ದ ಮಾಳಗಾಂವ್ಕರ್‍ನಂಥ ಜನರ ನಾಡಿಬಡಿತ ಬಲ್ಲವರ ಬದಲು ದಂಡಪಿಂಡ ಜೋಕಿಮ್‍ರನ್ನು ಜನ ಗೆಲ್ಲಿಸಿದ್ದರು.
1971ರಲ್ಲಿ ಇಂದಿರಾ ಗಾಳಿಯ ಅಲೆಯೇರಿ ಗೆದ್ದಿದ್ದು ಅಂದು ಸಹಕಾರಿ ಇಲಾಖೆಯ ಉನ್ನತ ಅಧಿಕಾರಿಯಾಗಿದ್ದ “ನಾಡವ” ಸಮುದಾಯದ ಬಿ.ವಿ.ನಾಯಕ್. ಭೂ ಮಾಲೀಕರ ವಿರುದ್ಧ ರೈತ-ಕೂಲಿಕಾರರ ಸಂಘಟಿಸಿ ಪ್ರಚಂಡ ಹೋರಾಟ ಕಟ್ಟಿದ್ದ ದೇಸಾಯರ ಎದುರು “ಅನಾಮಧೇಯ” ನಾಯಕ್ ಪಾರ್ಲಿಮೆಂಟ್ ಮೆಂಬರ್ ಆಗಿದ್ದರು. ನಾಯಕ್ ಮಹಾಮೇಧಾವಿ. ಅಂತಾರಾಷ್ಟ್ರಿಯ ವಿಷಯಗಳ ಮೇಲೆ ಪ್ರಭುತ್ವದಿಂದ ಮಾತಾಡುತ್ತಿದ್ದ ನಾಯಕ್ ಇಂದಿರಾ ಆಪ್ತ ವಲಯದಲ್ಲಿದ್ದರು. ಅಂದಿನ ಲೋಕಸಭಾ ಅಧ್ಯಕ್ಷ ಲ್ಲೋನ್‍ರ ಮೆಚ್ಚಿಗೆ ಪಡೆದಿದ್ದರು.
ಮಾದನ ಗೇರಿ, ಹಿರೇಗುತ್ತಿ ಬಡ ರೈತರಿಂದ ಹೊಲಗದ್ದೆ ಕಸಿದುಕೊಂಡು ಹೊರ ರಾಜ್ಯದ ಬಂಡವಾಳಶಾಹಿಗಳಿಗೆ ಕಾಸ್ಟಿಕ್ ಸೋಡಾ ತಯಾರಿಕೆಗೆ ಕೊಟ್ಟಾಗ ತಿರುಗಿ ಬಿದ್ದ ನಾಯಕ್ ಹೋರಾಟ ನಡೆಸಿದ್ದರು. ರೈತರಂತೆ ಕಚ್ಚೆ ಕಟ್ಟಿಕೊಂಡು ಪಾರ್ಲಿಮೆಂಟ್‍ಗೆ ಹೋಗಿ ಪ್ರತಿಭಟಿಸಿದ್ದರು. ಇದರಿಂದ ಅಂದಿನ ಸಿಎಂ ದೇವರಾಜ ಅರಸರ ಕೆಂಗಣ್ಣಿಗೆ ತುತ್ತಾದರು. ತುರ್ತುಪರಿಸ್ಥಿತಿ ವಿರೋಧಿಸಿ “ಲಾಂಗ್ ಲಾಂಗ್ ವೇ ಟು ಗೋ” ಎಂಬ ಪುಸ್ತಕ ಬರೆದು ಇಂದಿರೆಯ ಎದುರು ಹಾಕಿಕೊಂಡಿದ್ದರು. ನಂತರ ಕಾಂಗ್ರೆಸ್ ಟಿಕೆಟ್ ನಾಯಕ್‍ಗೆ ಸಿಗಲಿಲ್ಲ.
ತುರ್ತು ಪರಿಸ್ಥಿತಿ ಹೊತ್ತಲ್ಲಿ ಜೈಲು ಪಾಲಾಗಿದ್ದ “ಜಾಣ” ರಾಮಕೃಷ್ಣ ಹೆಗಡೆ 1977ರ ಎಲೆಕ್ಷನ್‍ನಲ್ಲಿ ಸಂಯುಕ್ತ ಜನತಾ ಪಕ್ಷದಿಂದ ಸ್ಪರ್ಧಿಸಿದ್ದರು. ಉತ್ತರ ಕನ್ನಡದಲ್ಲಿ ಹೆಗಡೆಗೆ ಎದುರಾಳಿ ಬಿ.ಪಿ.ಕದಮ್‍ಗಿಂತ ಹೆಚ್ಚು ಮತ ಬಂದಿತ್ತು. ಆದರೆ ಬೆಳಗಾವಿ ಜಿಲ್ಲೆಯ ಖಾನಾಪುರ-ಕಿತ್ತೂರಲ್ಲಿ ಹಿನ್ನಡೆಯಾಗಿ ಬರೀ ಮೂವತ್ತು ಸಾವಿರ ಮತದಿಂದ ಸೋಲಬೇಕಾಯ್ತು. ಆನಂತರ ಕಾಂಗ್ರೆಸ್‍ನ ಜೋಬದ್ರಗೇಡಿ ಎಂದೇ ಹೆಸರುವಾಸಿಯಾಗಿದ್ದ ದೇವರಾಯ ನಾಯ್ಕ ಸತತ ನಾಲ್ಕು ಬಾರಿ ಸಂಸದರಾಗಿದ್ದರು. ಇಂದಿರಾ ಮತ್ತು ಬಂ ಪ್ರಭಾವದಿಂದ ನಾಯ್ಕ್ ಗೆಲ್ಲುತ್ತಿದ್ದರು. ಉತ್ತರ ಕನ್ನಡದ ಹೊನ್ನಾವರ ಮೂಲದ ಜನಪ್ರಿಯ ಸಿನಿನಟ ಅನಂತನಾಗ್ ಜನತಾ ಪಕ್ಷದಿಂದ ಅಖಾಡಕ್ಕಿಳಿದಾಗ ಜಿಲ್ಲೆಯಲ್ಲಿ ಕೈಗಾ-ಸೀಬರ್ಡ್ ಪರಿಸರ ಹೋರಾಟ ಬಿರುಸಾಗಿತ್ತು. ಕೈಗಾ ವಿರೋಧಿ ಚಳವಳಿಯಲ್ಲಿದ್ದ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ- ಪಕ್ಕದ ಉಡುಪಿ ಜಿಲ್ಲೆಯ ಶಿವರಾಮಕಾರಂತರನ್ನು ಪರಿಸರವಾದಿಗಳು ಕರೆತಂದು ಕಣಕ್ಕಿಳಿಸಿದ್ದರು.
ನಾಮಪತ್ರ ಕೊಟ್ಟ ಒಂದು ದಿನವೂ ಪ್ರಚಾರ ಮಾಡದೆ ಕಾರಂತರು ವಿದೇಶಕ್ಕೆ ಹೋದರು. ಚುನಾವಣೆ ಮುಗಿದಾಗ ಬಂದರು ಆದರೂ 58 ಸಾವಿರ ಮತ ಬಂದಿತ್ತು. ಕಾರಂತ್, ಅನಂತನಾಗ್ ಇಬ್ಬರೂ ಸೋತರು. ಅದೇ ನಿದ್ದೆಬಡುಕ ದೇನಾ ಗೆದ್ದಿದ್ದರು. ಇವತ್ತು ಜಿಲ್ಲೆಯ ಪೊಲಿಟಿಕಲ್ ಡಾನ್ ಎನಿಸಿರುವ ದೇಶಪಾಂಡೆ ಜನತಾ ಪಕ್ಷ, ಜನತಾದಳದಿಂದ ಎರಡೆರಡು ಬಾರಿ ಮುಗ್ಗರಿಸಿ ಬಿದ್ದವರೇ. ವೈಚಾರಿಕ ಸಾಹಿತಿ ಗೌರೀಶ್ ಕಾಯ್ಕಿಣಿ ಒಮ್ಮೆ ಸ್ಪರ್ಧಿಸಿದ್ದರು. ಅಧಿಕೃತವಾಗಿ ಕಾಯ್ಕಿಣಿ ಸೋತಿದ್ದರು; ಜಿಲ್ಲೆಯ ಮತದಾರರು ಎಡವಿದ್ದರು. ಜೋಕಿಮ್ ಆಳ್ವರ ಸೊಸೆ ಮ್ಯಾಗಿ ನಾಲ್ಕು ಬಾರಿ ಸ್ಪರ್ಧಿಸಿ ಒಮ್ಮೆ ಮಾತ್ರ ಗೆದ್ದಿದ್ದರು. ಆ ನಂತರದ್ದು ಸಂವಿಧಾನ ಬದಲಿಸುವ ಸಂಚಿನ, ದಲಿತರನ್ನು ನಾಯಿಗಳು ಎನ್ನುವ ಅನಂತ್ಮಾಣಿಯ ಹಿಂಧೂತ್ವದ ಅಂಧಯುಗ.
ಅಯೋಗ್ಯ ಮಾಣಿಯ ಗೆಲುವಿನ ಗುಟ್ಟು ಅಡಗಿರುವುದೇ ಮ್ಯಾಗಿ-ದೇಶ್ ಕಾಲೆಳೆದಾಟ ಮತ್ತು ಪುತ್ರ ವ್ಯಾಮೋಹದಲ್ಲಿ. ಪಾರ್ಟಿಯ ಸಬ್ಸಿಡಿ ಸೌಲತ್ತುಗಳೆಲ್ಲ ತಮ್ಮ ಕುಟುಂಬಕ್ಕಷ್ಟೇ ಸೀಮಿತ ಆಗಬೇಕೆಂಬ ಅವರ ಮಸಲತ್ತಿನಿಂದಾಗಿ ಎರಡನೇ ಸಾಲಿನ ನಾಯಕರ್ಯಾರನ್ನೂ ಬೆಳೆಸಲಿಲ್ಲ. ಆದರೆ ಮೋಟಿನ್ಸ್‍ರ ತಿಮ್ಮಪ್ಪ ಹೆಗಡೆ, ರಾಮಕೃಷ್ಣ ಹೆಗಡೆ, ಬಂಗಾರಪ್ಪ ತಮ್ಮ ಶಿಷ್ಯರಿಗೆ ಶಾಸಕ-ಮಂತ್ರಿ ಮಾಡಿ ನಾಯಕತ್ವ ಬೆಳೆಸಿದ್ದರು. ನಿಜಲಿಂಗಪ್ಪನವರು ಸಿಎಂ ಆಗಿದ್ದಾಗ ಜಿಲ್ಲೆಯಿಂದ ವಿಧಾನ ಪರಿಷತ್ತಿಗೆ ಶಿರಸಿಯ ಮೋಟಿನ್ಸರ್ ತಿಮ್ಮಪ್ಪ ಹೆಗಡೆ ನಾಮಕರಣಗೊಂಡಿದ್ದರು.
ಹಿರಿಯ ಮುತ್ಸದ್ದಿಯಾಗಿದ್ದ ತಿಮ್ಮಪ್ಪನವರನ್ನು ಮಂತ್ರಿ ಮಾಡಲು ನಿರ್ಧರಿಸಲಾಗಿತ್ತು. ಈ ಸುದ್ದಿ ಕೇಳಿ ತಿಮ್ಮಪ್ಪ ಖುಷಿ ಪಡಲಿಲ್ಲ, ಬದಲಿಗೆ ದಂಗಾದರು. `ನೇರವಾಗಿ ಜನರಿಂದ ಆಯ್ಕೆಯಾಗಿದ್ದ ಶಿರಸಿ ಶಾಸಕ ರಾಮಕೃಷ್ಣ ಹೆಗಡೆಯೇ ಮಂತ್ರಿಗಿರಿಗೆ ಅರ್ಹ. ನಾನು ನಾಮಕರಣ ಎಮ್ಮೆಲ್ಸಿ, ನನಗ್ಯಾಕೆ ಮಂತ್ರಿಗಿರಿ’ ಎಂದು ನಿರಾಕರಿಸುವ ತಿಮ್ಮಪ್ಪನವರು “ರಾಮಕೃಷ್ಣನಿಗೇ ಮಂತ್ರಿ ಮಾಡಿ” ಎಂದು ಸಿಎಂಗೆ ಹೇಳಿದ್ದರು. ತಿಮ್ಮಪ್ಪನವರ ಶಿಷ್ಯನಾಗಿ ರಾಜಕಾರಣ ಶುರುಮಾಡಿದ್ದ ರಾಕೃ ಹೆಗಡೆ ಮಂತ್ರಿ, ಮುಖ್ಯಮಂತ್ರಿ, ರಾಜ್ಯಸಭಾ ಸದಸ್ಯ, ಕೇಂದ್ರ ಮಂತ್ರಿ ಆಗಿ ಬೆಳೆದದ್ದು ಇತಿಹಾಸ. ದುರಂತವೆಂದರೆ, ಹೆಗಡೆ ರಾಷ್ಟ್ರಮಟ್ಟದ ಇಮೇಜು ಬೆಳೆಸಿಕೊಂಡರೇ ಹೊರತು ಹೆತ್ತ ಜಿಲ್ಲೆಯ ಋಣ ತೀರಿಸಲೇ ಇಲ್ಲ!!
ಹೆಗಡೆಜೀ ಕೊಂಕಣ ದೇಶಪಾಂಡೆಯನ್ನು “ಸೈತಾನ”ನಾಗಿ ಬೆಳೆಸಿದರು. ದೀವರ ಆರ್.ಎಸ್.ನಾಯ್ಕರನ್ನು ರಾಜ್ಯಸಭೆಗೆ ಕಳಿಸಿದರು. ನೆರೆಯ ಶಿವಮೊಗ್ಗದ `ಬಂ’ಗೆ ಉತ್ತರ ಕನ್ನಡ (ಶಿರಸಿ) ಹೆಣ್ಣು ಕೊಟ್ಟ ಮಾವನ ಮನೆ. `ಬಂ’ ಕೆ.ಎಚ್.ಗೌಡ (ಹಾಲಕ್ಕಿ ಒಕ್ಕಲಿಗ), ಆರ್.ಎನ್.ನಾಯ್ಕ್ (ದೀವರು), ದೇವರಾಯ ನಾಯ್ಕ್ (ದೀವರು), ಪ್ರಭಾಕರ್ ರಾಣೆ (ಮರಠ), ವಂಸತ್ ಅಸ್ನೋಟಿಕರ್ (ದೇವಳಿ)ಯಂಥ ತೀರಾ ಹಿಂದುಳಿದ ವರ್ಗದವರನ್ನು ಶಾಸಕ-ಸಂಸದ-ಮಂತ್ರಿ ಮಾಡಿದ್ದರು.
ಅಂದಿನ ಲಿಬರಲ್ ನಾಯಕರಿಗೂ-ಇಂದಿನ ಪುಢಾರಿಗಳಿಗೂ ಇರುವ ವ್ಯತ್ಯಾಸವಿದು! ಇಂದು ಎರಡು-ಮೂರು ದಶಕದಿಂದ ಆಳುತ್ತಿರುವ ದೇಶ್, ಮ್ಯಾಗಿ, ಮಾಣಿಗಳೇ ಉತ್ತರ ಕನ್ನಡಕ್ಕೆ ದೊಡ್ಡ ಶಾಪವಾಗಿದ್ದಾರೆ. ಪ್ರಗತಿ, ಅಭಿವೃದ್ಧಿ, ಜನಹಿತದ ಯೋಜನೆ-ಯೋಚನೆಯ ನಾಯಕರೇ ಜಿಲ್ಲೆಯಲ್ಲಿಲ್ಲ. ನತದೃಷ್ಟ ಉತ್ತರ ಕನ್ನಡ ಜಿಲ್ಲೆಯ ನೋವಿನ ಪ್ರಶ್ನೆಗಳಿಗೆ ಉತ್ತರವೇ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...