Homeಕರ್ನಾಟಕದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ ಖಂಡಿಸಿದ ಕರ್ನಾಟಕದ ಹಿರಿಯ ಗಣ್ಯರು : ಜಂಟಿ ಹೇಳಿಕೆ ಬಿಡುಗಡೆ

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ ಖಂಡಿಸಿದ ಕರ್ನಾಟಕದ ಹಿರಿಯ ಗಣ್ಯರು : ಜಂಟಿ ಹೇಳಿಕೆ ಬಿಡುಗಡೆ

ಸರ್ಕಾರದ ರೀತಿ-ನೀತಿ ಧೋರಣೆಗಳ ಬಗ್ಗೆ ವಿಮರ್ಶಾತ್ಮಕವಾಗಿ ಇರುವುದು, ಆರ್ಥಿಕ ಹಗರಣಗಳ ಬಗ್ಗೆ ಪರಿಣಿತ ಬರಹಗಳನ್ನು ನರಸಿಂಹಮೂರ್ತಿ ಅವರು ಬರೆದಿರುವುದನ್ನು ಸರ್ಕಾರವು ಅಪರಾಧ ಎಂದು ಪರಿಗಣಿಸುತ್ತದೆಯೇ ಎಂದು ನಾವು ಕೇಳಬಯಸುತ್ತೇವೆ

- Advertisement -
- Advertisement -

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನವನ್ನು ಖಂಡಿಸುತ್ತೇವೆ. ಪ್ರಜಾತಂತ್ರದ ಭಿನ್ನ ದನಿಗಳನ್ನು ಎತ್ತಿ ಹಿಡಿಯುವ ನಮ್ಮ ಪ್ರಯತ್ನ ಮುಂದುವರೆಯುತ್ತದೆ ಎಂದು ಕರ್ನಾಟಕದ ವಿವಿಧ ಗಣ್ಯರು ಪ್ರತಿಪಾದಿಸಿದ್ದು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಗೌರಿ ಮೀಡಿಯಾ ಟ್ರಸ್ಟ್ ನ ಕಾರ್ಯದರ್ಶಿ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರ ಬಂಧನ, ಬಂಧಿಸಲು ಕೊಟ್ಟಿರುವ ಕಾರಣ ಮತ್ತು ರೀತಿಯನ್ನು ನಾವುಗಳು ಖಂಡಿಸುತ್ತೇವೆ. ವಿವಿಧ ಜನಪರ ಹೋರಾಟಗಳಲ್ಲಿ ಭಾಗಿಯಾಗುತ್ತಾ, ಚಿಂತನಶೀಲ ಬರಹಗಳನ್ನು ಬರೆದಿರುವ ನರಸಿಂಹಮೂರ್ತಿಯವರು ಕರ್ನಾಟಕದ ಪ್ರಮುಖ ಸಾಮಾಜಿಕ ಕಾರ್ಯಕರ್ತರಲ್ಲೊಬ್ಬರು. ಬಿಎಂಐಸಿ ವಿರೋಧಿ ಹೋರಾಟ ಮತ್ತು ಗೌರಿ ಮೀಡಿಯಾ ಪ್ರಯತ್ನಗಳ ಭಾಗವಾಗಿ ನಮಗೆ ಅವರೊಡನೆ ನೇರ ಒಡನಾಟವೂ ಇದೆ ಎಂದು ಸಾರಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ, ರೈತ ಹೋರಾಟಗಾರರಾದ ಚುಕ್ಕಿ ನಂಜುಂಡಸ್ವಾಮಿ, ಹಿರಿಯ ಸಾಹಿತಿ ಮತ್ತು ಪತ್ರಕರ್ತರಾದ ಇಂದೂಧರ ಹೊನ್ನಾಪುರ, ಹಿರಿಯ ಪತ್ರಕರ್ತರಾದ ದಿನೇಶ್ ಅಮಿನ್ ಮಟ್ಟು, ಗೌರಿ ಮೀಡಿಯಾ ಟ್ರಸ್ಟ್‌ನ ಅಧ್ಯಕ್ಷರಾದ ನಗರಗೆರೆ ರಮೇಶ್, ಹಿರಿಯ ಸಾಹಿತಿಗಳು & ಕ.ಸಾ.ಪದ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲ್ (ಚಂಪಾ), ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಮತ್ತು ಹಿರಿಯ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ದಸಂಸದ ಹಿರಿಯ ನಾಯಕರಾದ   ಎನ್.ವೆಂಕಟೇಶ್, ಸಾಹಿತಿ ಮತ್ತು ಹಿರಿಯ ಪತ್ರಕರ್ತರಾದ  ಡಾ.ವಿಜಯಮ್ಮ, ಮಾಜಿ ಸಚಿವರಾದ ಬಿ.ಟಿ.ಲಲಿತಾನಾಯಕ್, ರಂಗಕರ್ಮಿಗಳಾದ ರಘುನಂದನ್, ಹಿರಿಯ ವಿಮರ್ಶಕರಾದ  ಜಿ.ರಾಜಶೇಖರ್ ಮತ್ತು ಸಿಪಿಐ ಪಕ್ಷದ ನಾಯಕರಾದ ಡಾ.ಸಿದ್ದನಗೌಡ ಪಾಟೀಲ್‌ರವರು ಜಂಟಿ ಹೇಳಿಕೆಗೆ ಸಹಿ ಹಾಕಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬರು ಇವರನ್ನು ವಿವಿಧ ಪ್ರಕರಣಗಳಲ್ಲಿ 25 ವರ್ಷಗಳ ಹಿಂದೆ ಭಾಗಿಯಾಗಿದ್ದ ವಿನೋದ್ ಎಂದು ಗುರುತಿಸಿರುವುದೇ ಆಧಾರವೆಂದು ಹೇಳಿ, ಆ ಕಾರಣಕ್ಕೆ ಬಂಧಿಸಿದ್ದೇವೆಂದು ಹೇಳಲಾಗಿದೆ. ರಾಯಚೂರು ಮತ್ತು ರಾಜ್ಯದ ಹಲವೆಡೆ ಸಾರ್ವಜನಿಕ ಸಭೆಗಳಲ್ಲಿ ಭಾಷಣ ಮಾಡುತ್ತಾ, ಜನಾಂದೋಲನಗಳಲ್ಲಿ ಭಾಗಿಯಾಗುತ್ತಾ ಬಂದಿರುವುದಲ್ಲದೇ ಅವರು ಬರೆದಿರುವ ಹಲವು ಲೇಖನಗಳು ಪ್ರಮುಖ ಪತ್ರಿಕೆಗಳಲ್ಲೂ ಪ್ರಕಟವಾಗಿವೆ. ಹೀಗಿರುವಾಗ 25 ವರ್ಷಗಳಿಂದ ತಲೆ ಮರೆಸಿಕೊಂಡಿದ್ದರು ಎಂಬುದು ಸುಳ್ಳು ಆರೋಪ ಎಂದು ಖಚಿತವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸರ್ಕಾರದ ರೀತಿ-ನೀತಿ ಧೋರಣೆಗಳ ಬಗ್ಗೆ ವಿಮರ್ಶಾತ್ಮಕವಾಗಿ ಇರುವುದು, ಆರ್ಥಿಕ ಹಗರಣಗಳ ಬಗ್ಗೆ ಪರಿಣಿತ ಬರಹಗಳನ್ನು ನರಸಿಂಹಮೂರ್ತಿ ಅವರು ಬರೆದಿರುವುದನ್ನು ಸರ್ಕಾರವು ಅಪರಾಧ ಎಂದು ಪರಿಗಣಿಸುತ್ತದೆಯೇ ಎಂದು ನಾವು ಕೇಳಬಯಸುತ್ತೇವೆ. ಗೌರಿ ಲಂಕೇಶರ ಪರಂಪರೆಯ ಮುಂದುವರಿಕೆಯಾಗಿ ನಡೆಸುತ್ತಿರುವ ಮಾಧ್ಯಮ ಸಂಸ್ಥೆಯನ್ನು ಗುರಿ ಮಾಡುವ ಉದ್ದೇಶದಿಂದ ಸರ್ಕಾರವು ಇಂತಹ ಕ್ರಮಗಳಿಗೆ ಮುಂದಾಗಿದೆಯೆ ಎಂಬ ಅನುಮಾನ ಹುಟ್ಟಲು ಕಾರಣಗಳಿವೆ. ದೇಶದ ವಿವಿಧ ಭಾಗಗಳಲ್ಲಿ ಜನಪರ ಪತ್ರಿಕೋದ್ಯಮದ ದನಿಗಳನ್ನು ದಮನಿಸುತ್ತಿರುವ ಹಲವು ಉದಾಹರಣೆಗಳನ್ನು ನೋಡುತ್ತಿದ್ದೇವೆ. ಆದರೆ, ದೇಶದ ಸಾಂವಿಧಾನಾತ್ಮಕ ಹಕ್ಕುಗಳನ್ನು ಮೊಟಕುಗೊಳಿಸುವ ಯಾವುದೇ ಪ್ರಯತ್ನಗಳನ್ನು ನಾವು ವಿರೋಧಿಸುತ್ತೇವೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನಿಸಲು ವಿವಿಧ ಮಾರ್ಗಗಳನ್ನು ಬಳಸಿದರೂ ಹತ್ತಿಕ್ಕಲು ಸಾಧ್ಯವಿಲ್ಲ ಎಂದಿದ್ದಾರೆ.

ಗೌರಿ ಲಂಕೇಶ್-ನ್ಯಾಯಪಥ ಪತ್ರಿಕೆಯ ವಿಚಾರ ಸಂಕಿರಣವೊಂದರಲ್ಲಿ ಭಾಗವಹಿಸಲು ರಾಯಚೂರಿಗೆ ಹೋಗಿದ್ದ ಮೂರ್ತಿಯವರನ್ನು ಬಂಧಿಸಿರುವ ರೀತಿ ಖಂಡನಾರ್ಹವಾಗಿದ್ದು, ಈ ಕೂಡಲೇ ಕಾನೂನುಪ್ರಕ್ರಿಯೆ ಚುರುಕುಗೊಳಿಸಿ ಅವರನ್ನು ಬಿಡುಗಡೆ ಮಾಡಬೇಕು ಎಂದು ಈ ಹಿರಿಯ ಗಣ್ಯರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...