Homeಕರ್ನಾಟಕದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ ಖಂಡಿಸಿದ ಕರ್ನಾಟಕದ ಹಿರಿಯ ಗಣ್ಯರು : ಜಂಟಿ ಹೇಳಿಕೆ ಬಿಡುಗಡೆ

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ ಖಂಡಿಸಿದ ಕರ್ನಾಟಕದ ಹಿರಿಯ ಗಣ್ಯರು : ಜಂಟಿ ಹೇಳಿಕೆ ಬಿಡುಗಡೆ

ಸರ್ಕಾರದ ರೀತಿ-ನೀತಿ ಧೋರಣೆಗಳ ಬಗ್ಗೆ ವಿಮರ್ಶಾತ್ಮಕವಾಗಿ ಇರುವುದು, ಆರ್ಥಿಕ ಹಗರಣಗಳ ಬಗ್ಗೆ ಪರಿಣಿತ ಬರಹಗಳನ್ನು ನರಸಿಂಹಮೂರ್ತಿ ಅವರು ಬರೆದಿರುವುದನ್ನು ಸರ್ಕಾರವು ಅಪರಾಧ ಎಂದು ಪರಿಗಣಿಸುತ್ತದೆಯೇ ಎಂದು ನಾವು ಕೇಳಬಯಸುತ್ತೇವೆ

- Advertisement -
- Advertisement -

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನವನ್ನು ಖಂಡಿಸುತ್ತೇವೆ. ಪ್ರಜಾತಂತ್ರದ ಭಿನ್ನ ದನಿಗಳನ್ನು ಎತ್ತಿ ಹಿಡಿಯುವ ನಮ್ಮ ಪ್ರಯತ್ನ ಮುಂದುವರೆಯುತ್ತದೆ ಎಂದು ಕರ್ನಾಟಕದ ವಿವಿಧ ಗಣ್ಯರು ಪ್ರತಿಪಾದಿಸಿದ್ದು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಗೌರಿ ಮೀಡಿಯಾ ಟ್ರಸ್ಟ್ ನ ಕಾರ್ಯದರ್ಶಿ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರ ಬಂಧನ, ಬಂಧಿಸಲು ಕೊಟ್ಟಿರುವ ಕಾರಣ ಮತ್ತು ರೀತಿಯನ್ನು ನಾವುಗಳು ಖಂಡಿಸುತ್ತೇವೆ. ವಿವಿಧ ಜನಪರ ಹೋರಾಟಗಳಲ್ಲಿ ಭಾಗಿಯಾಗುತ್ತಾ, ಚಿಂತನಶೀಲ ಬರಹಗಳನ್ನು ಬರೆದಿರುವ ನರಸಿಂಹಮೂರ್ತಿಯವರು ಕರ್ನಾಟಕದ ಪ್ರಮುಖ ಸಾಮಾಜಿಕ ಕಾರ್ಯಕರ್ತರಲ್ಲೊಬ್ಬರು. ಬಿಎಂಐಸಿ ವಿರೋಧಿ ಹೋರಾಟ ಮತ್ತು ಗೌರಿ ಮೀಡಿಯಾ ಪ್ರಯತ್ನಗಳ ಭಾಗವಾಗಿ ನಮಗೆ ಅವರೊಡನೆ ನೇರ ಒಡನಾಟವೂ ಇದೆ ಎಂದು ಸಾರಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ, ರೈತ ಹೋರಾಟಗಾರರಾದ ಚುಕ್ಕಿ ನಂಜುಂಡಸ್ವಾಮಿ, ಹಿರಿಯ ಸಾಹಿತಿ ಮತ್ತು ಪತ್ರಕರ್ತರಾದ ಇಂದೂಧರ ಹೊನ್ನಾಪುರ, ಹಿರಿಯ ಪತ್ರಕರ್ತರಾದ ದಿನೇಶ್ ಅಮಿನ್ ಮಟ್ಟು, ಗೌರಿ ಮೀಡಿಯಾ ಟ್ರಸ್ಟ್‌ನ ಅಧ್ಯಕ್ಷರಾದ ನಗರಗೆರೆ ರಮೇಶ್, ಹಿರಿಯ ಸಾಹಿತಿಗಳು & ಕ.ಸಾ.ಪದ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲ್ (ಚಂಪಾ), ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಮತ್ತು ಹಿರಿಯ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ದಸಂಸದ ಹಿರಿಯ ನಾಯಕರಾದ   ಎನ್.ವೆಂಕಟೇಶ್, ಸಾಹಿತಿ ಮತ್ತು ಹಿರಿಯ ಪತ್ರಕರ್ತರಾದ  ಡಾ.ವಿಜಯಮ್ಮ, ಮಾಜಿ ಸಚಿವರಾದ ಬಿ.ಟಿ.ಲಲಿತಾನಾಯಕ್, ರಂಗಕರ್ಮಿಗಳಾದ ರಘುನಂದನ್, ಹಿರಿಯ ವಿಮರ್ಶಕರಾದ  ಜಿ.ರಾಜಶೇಖರ್ ಮತ್ತು ಸಿಪಿಐ ಪಕ್ಷದ ನಾಯಕರಾದ ಡಾ.ಸಿದ್ದನಗೌಡ ಪಾಟೀಲ್‌ರವರು ಜಂಟಿ ಹೇಳಿಕೆಗೆ ಸಹಿ ಹಾಕಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬರು ಇವರನ್ನು ವಿವಿಧ ಪ್ರಕರಣಗಳಲ್ಲಿ 25 ವರ್ಷಗಳ ಹಿಂದೆ ಭಾಗಿಯಾಗಿದ್ದ ವಿನೋದ್ ಎಂದು ಗುರುತಿಸಿರುವುದೇ ಆಧಾರವೆಂದು ಹೇಳಿ, ಆ ಕಾರಣಕ್ಕೆ ಬಂಧಿಸಿದ್ದೇವೆಂದು ಹೇಳಲಾಗಿದೆ. ರಾಯಚೂರು ಮತ್ತು ರಾಜ್ಯದ ಹಲವೆಡೆ ಸಾರ್ವಜನಿಕ ಸಭೆಗಳಲ್ಲಿ ಭಾಷಣ ಮಾಡುತ್ತಾ, ಜನಾಂದೋಲನಗಳಲ್ಲಿ ಭಾಗಿಯಾಗುತ್ತಾ ಬಂದಿರುವುದಲ್ಲದೇ ಅವರು ಬರೆದಿರುವ ಹಲವು ಲೇಖನಗಳು ಪ್ರಮುಖ ಪತ್ರಿಕೆಗಳಲ್ಲೂ ಪ್ರಕಟವಾಗಿವೆ. ಹೀಗಿರುವಾಗ 25 ವರ್ಷಗಳಿಂದ ತಲೆ ಮರೆಸಿಕೊಂಡಿದ್ದರು ಎಂಬುದು ಸುಳ್ಳು ಆರೋಪ ಎಂದು ಖಚಿತವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸರ್ಕಾರದ ರೀತಿ-ನೀತಿ ಧೋರಣೆಗಳ ಬಗ್ಗೆ ವಿಮರ್ಶಾತ್ಮಕವಾಗಿ ಇರುವುದು, ಆರ್ಥಿಕ ಹಗರಣಗಳ ಬಗ್ಗೆ ಪರಿಣಿತ ಬರಹಗಳನ್ನು ನರಸಿಂಹಮೂರ್ತಿ ಅವರು ಬರೆದಿರುವುದನ್ನು ಸರ್ಕಾರವು ಅಪರಾಧ ಎಂದು ಪರಿಗಣಿಸುತ್ತದೆಯೇ ಎಂದು ನಾವು ಕೇಳಬಯಸುತ್ತೇವೆ. ಗೌರಿ ಲಂಕೇಶರ ಪರಂಪರೆಯ ಮುಂದುವರಿಕೆಯಾಗಿ ನಡೆಸುತ್ತಿರುವ ಮಾಧ್ಯಮ ಸಂಸ್ಥೆಯನ್ನು ಗುರಿ ಮಾಡುವ ಉದ್ದೇಶದಿಂದ ಸರ್ಕಾರವು ಇಂತಹ ಕ್ರಮಗಳಿಗೆ ಮುಂದಾಗಿದೆಯೆ ಎಂಬ ಅನುಮಾನ ಹುಟ್ಟಲು ಕಾರಣಗಳಿವೆ. ದೇಶದ ವಿವಿಧ ಭಾಗಗಳಲ್ಲಿ ಜನಪರ ಪತ್ರಿಕೋದ್ಯಮದ ದನಿಗಳನ್ನು ದಮನಿಸುತ್ತಿರುವ ಹಲವು ಉದಾಹರಣೆಗಳನ್ನು ನೋಡುತ್ತಿದ್ದೇವೆ. ಆದರೆ, ದೇಶದ ಸಾಂವಿಧಾನಾತ್ಮಕ ಹಕ್ಕುಗಳನ್ನು ಮೊಟಕುಗೊಳಿಸುವ ಯಾವುದೇ ಪ್ರಯತ್ನಗಳನ್ನು ನಾವು ವಿರೋಧಿಸುತ್ತೇವೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನಿಸಲು ವಿವಿಧ ಮಾರ್ಗಗಳನ್ನು ಬಳಸಿದರೂ ಹತ್ತಿಕ್ಕಲು ಸಾಧ್ಯವಿಲ್ಲ ಎಂದಿದ್ದಾರೆ.

ಗೌರಿ ಲಂಕೇಶ್-ನ್ಯಾಯಪಥ ಪತ್ರಿಕೆಯ ವಿಚಾರ ಸಂಕಿರಣವೊಂದರಲ್ಲಿ ಭಾಗವಹಿಸಲು ರಾಯಚೂರಿಗೆ ಹೋಗಿದ್ದ ಮೂರ್ತಿಯವರನ್ನು ಬಂಧಿಸಿರುವ ರೀತಿ ಖಂಡನಾರ್ಹವಾಗಿದ್ದು, ಈ ಕೂಡಲೇ ಕಾನೂನುಪ್ರಕ್ರಿಯೆ ಚುರುಕುಗೊಳಿಸಿ ಅವರನ್ನು ಬಿಡುಗಡೆ ಮಾಡಬೇಕು ಎಂದು ಈ ಹಿರಿಯ ಗಣ್ಯರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...