Homeಕರ್ನಾಟಕದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ ಖಂಡಿಸಿದ ಕರ್ನಾಟಕದ ಹಿರಿಯ ಗಣ್ಯರು : ಜಂಟಿ ಹೇಳಿಕೆ ಬಿಡುಗಡೆ

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ ಖಂಡಿಸಿದ ಕರ್ನಾಟಕದ ಹಿರಿಯ ಗಣ್ಯರು : ಜಂಟಿ ಹೇಳಿಕೆ ಬಿಡುಗಡೆ

ಸರ್ಕಾರದ ರೀತಿ-ನೀತಿ ಧೋರಣೆಗಳ ಬಗ್ಗೆ ವಿಮರ್ಶಾತ್ಮಕವಾಗಿ ಇರುವುದು, ಆರ್ಥಿಕ ಹಗರಣಗಳ ಬಗ್ಗೆ ಪರಿಣಿತ ಬರಹಗಳನ್ನು ನರಸಿಂಹಮೂರ್ತಿ ಅವರು ಬರೆದಿರುವುದನ್ನು ಸರ್ಕಾರವು ಅಪರಾಧ ಎಂದು ಪರಿಗಣಿಸುತ್ತದೆಯೇ ಎಂದು ನಾವು ಕೇಳಬಯಸುತ್ತೇವೆ

- Advertisement -
- Advertisement -

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನವನ್ನು ಖಂಡಿಸುತ್ತೇವೆ. ಪ್ರಜಾತಂತ್ರದ ಭಿನ್ನ ದನಿಗಳನ್ನು ಎತ್ತಿ ಹಿಡಿಯುವ ನಮ್ಮ ಪ್ರಯತ್ನ ಮುಂದುವರೆಯುತ್ತದೆ ಎಂದು ಕರ್ನಾಟಕದ ವಿವಿಧ ಗಣ್ಯರು ಪ್ರತಿಪಾದಿಸಿದ್ದು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಗೌರಿ ಮೀಡಿಯಾ ಟ್ರಸ್ಟ್ ನ ಕಾರ್ಯದರ್ಶಿ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರ ಬಂಧನ, ಬಂಧಿಸಲು ಕೊಟ್ಟಿರುವ ಕಾರಣ ಮತ್ತು ರೀತಿಯನ್ನು ನಾವುಗಳು ಖಂಡಿಸುತ್ತೇವೆ. ವಿವಿಧ ಜನಪರ ಹೋರಾಟಗಳಲ್ಲಿ ಭಾಗಿಯಾಗುತ್ತಾ, ಚಿಂತನಶೀಲ ಬರಹಗಳನ್ನು ಬರೆದಿರುವ ನರಸಿಂಹಮೂರ್ತಿಯವರು ಕರ್ನಾಟಕದ ಪ್ರಮುಖ ಸಾಮಾಜಿಕ ಕಾರ್ಯಕರ್ತರಲ್ಲೊಬ್ಬರು. ಬಿಎಂಐಸಿ ವಿರೋಧಿ ಹೋರಾಟ ಮತ್ತು ಗೌರಿ ಮೀಡಿಯಾ ಪ್ರಯತ್ನಗಳ ಭಾಗವಾಗಿ ನಮಗೆ ಅವರೊಡನೆ ನೇರ ಒಡನಾಟವೂ ಇದೆ ಎಂದು ಸಾರಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ, ರೈತ ಹೋರಾಟಗಾರರಾದ ಚುಕ್ಕಿ ನಂಜುಂಡಸ್ವಾಮಿ, ಹಿರಿಯ ಸಾಹಿತಿ ಮತ್ತು ಪತ್ರಕರ್ತರಾದ ಇಂದೂಧರ ಹೊನ್ನಾಪುರ, ಹಿರಿಯ ಪತ್ರಕರ್ತರಾದ ದಿನೇಶ್ ಅಮಿನ್ ಮಟ್ಟು, ಗೌರಿ ಮೀಡಿಯಾ ಟ್ರಸ್ಟ್‌ನ ಅಧ್ಯಕ್ಷರಾದ ನಗರಗೆರೆ ರಮೇಶ್, ಹಿರಿಯ ಸಾಹಿತಿಗಳು & ಕ.ಸಾ.ಪದ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲ್ (ಚಂಪಾ), ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಮತ್ತು ಹಿರಿಯ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ದಸಂಸದ ಹಿರಿಯ ನಾಯಕರಾದ   ಎನ್.ವೆಂಕಟೇಶ್, ಸಾಹಿತಿ ಮತ್ತು ಹಿರಿಯ ಪತ್ರಕರ್ತರಾದ  ಡಾ.ವಿಜಯಮ್ಮ, ಮಾಜಿ ಸಚಿವರಾದ ಬಿ.ಟಿ.ಲಲಿತಾನಾಯಕ್, ರಂಗಕರ್ಮಿಗಳಾದ ರಘುನಂದನ್, ಹಿರಿಯ ವಿಮರ್ಶಕರಾದ  ಜಿ.ರಾಜಶೇಖರ್ ಮತ್ತು ಸಿಪಿಐ ಪಕ್ಷದ ನಾಯಕರಾದ ಡಾ.ಸಿದ್ದನಗೌಡ ಪಾಟೀಲ್‌ರವರು ಜಂಟಿ ಹೇಳಿಕೆಗೆ ಸಹಿ ಹಾಕಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬರು ಇವರನ್ನು ವಿವಿಧ ಪ್ರಕರಣಗಳಲ್ಲಿ 25 ವರ್ಷಗಳ ಹಿಂದೆ ಭಾಗಿಯಾಗಿದ್ದ ವಿನೋದ್ ಎಂದು ಗುರುತಿಸಿರುವುದೇ ಆಧಾರವೆಂದು ಹೇಳಿ, ಆ ಕಾರಣಕ್ಕೆ ಬಂಧಿಸಿದ್ದೇವೆಂದು ಹೇಳಲಾಗಿದೆ. ರಾಯಚೂರು ಮತ್ತು ರಾಜ್ಯದ ಹಲವೆಡೆ ಸಾರ್ವಜನಿಕ ಸಭೆಗಳಲ್ಲಿ ಭಾಷಣ ಮಾಡುತ್ತಾ, ಜನಾಂದೋಲನಗಳಲ್ಲಿ ಭಾಗಿಯಾಗುತ್ತಾ ಬಂದಿರುವುದಲ್ಲದೇ ಅವರು ಬರೆದಿರುವ ಹಲವು ಲೇಖನಗಳು ಪ್ರಮುಖ ಪತ್ರಿಕೆಗಳಲ್ಲೂ ಪ್ರಕಟವಾಗಿವೆ. ಹೀಗಿರುವಾಗ 25 ವರ್ಷಗಳಿಂದ ತಲೆ ಮರೆಸಿಕೊಂಡಿದ್ದರು ಎಂಬುದು ಸುಳ್ಳು ಆರೋಪ ಎಂದು ಖಚಿತವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸರ್ಕಾರದ ರೀತಿ-ನೀತಿ ಧೋರಣೆಗಳ ಬಗ್ಗೆ ವಿಮರ್ಶಾತ್ಮಕವಾಗಿ ಇರುವುದು, ಆರ್ಥಿಕ ಹಗರಣಗಳ ಬಗ್ಗೆ ಪರಿಣಿತ ಬರಹಗಳನ್ನು ನರಸಿಂಹಮೂರ್ತಿ ಅವರು ಬರೆದಿರುವುದನ್ನು ಸರ್ಕಾರವು ಅಪರಾಧ ಎಂದು ಪರಿಗಣಿಸುತ್ತದೆಯೇ ಎಂದು ನಾವು ಕೇಳಬಯಸುತ್ತೇವೆ. ಗೌರಿ ಲಂಕೇಶರ ಪರಂಪರೆಯ ಮುಂದುವರಿಕೆಯಾಗಿ ನಡೆಸುತ್ತಿರುವ ಮಾಧ್ಯಮ ಸಂಸ್ಥೆಯನ್ನು ಗುರಿ ಮಾಡುವ ಉದ್ದೇಶದಿಂದ ಸರ್ಕಾರವು ಇಂತಹ ಕ್ರಮಗಳಿಗೆ ಮುಂದಾಗಿದೆಯೆ ಎಂಬ ಅನುಮಾನ ಹುಟ್ಟಲು ಕಾರಣಗಳಿವೆ. ದೇಶದ ವಿವಿಧ ಭಾಗಗಳಲ್ಲಿ ಜನಪರ ಪತ್ರಿಕೋದ್ಯಮದ ದನಿಗಳನ್ನು ದಮನಿಸುತ್ತಿರುವ ಹಲವು ಉದಾಹರಣೆಗಳನ್ನು ನೋಡುತ್ತಿದ್ದೇವೆ. ಆದರೆ, ದೇಶದ ಸಾಂವಿಧಾನಾತ್ಮಕ ಹಕ್ಕುಗಳನ್ನು ಮೊಟಕುಗೊಳಿಸುವ ಯಾವುದೇ ಪ್ರಯತ್ನಗಳನ್ನು ನಾವು ವಿರೋಧಿಸುತ್ತೇವೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನಿಸಲು ವಿವಿಧ ಮಾರ್ಗಗಳನ್ನು ಬಳಸಿದರೂ ಹತ್ತಿಕ್ಕಲು ಸಾಧ್ಯವಿಲ್ಲ ಎಂದಿದ್ದಾರೆ.

ಗೌರಿ ಲಂಕೇಶ್-ನ್ಯಾಯಪಥ ಪತ್ರಿಕೆಯ ವಿಚಾರ ಸಂಕಿರಣವೊಂದರಲ್ಲಿ ಭಾಗವಹಿಸಲು ರಾಯಚೂರಿಗೆ ಹೋಗಿದ್ದ ಮೂರ್ತಿಯವರನ್ನು ಬಂಧಿಸಿರುವ ರೀತಿ ಖಂಡನಾರ್ಹವಾಗಿದ್ದು, ಈ ಕೂಡಲೇ ಕಾನೂನುಪ್ರಕ್ರಿಯೆ ಚುರುಕುಗೊಳಿಸಿ ಅವರನ್ನು ಬಿಡುಗಡೆ ಮಾಡಬೇಕು ಎಂದು ಈ ಹಿರಿಯ ಗಣ್ಯರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...