Homeಕರ್ನಾಟಕದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ ಖಂಡಿಸಿದ ಕರ್ನಾಟಕದ ಹಿರಿಯ ಗಣ್ಯರು : ಜಂಟಿ ಹೇಳಿಕೆ ಬಿಡುಗಡೆ

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ ಖಂಡಿಸಿದ ಕರ್ನಾಟಕದ ಹಿರಿಯ ಗಣ್ಯರು : ಜಂಟಿ ಹೇಳಿಕೆ ಬಿಡುಗಡೆ

ಸರ್ಕಾರದ ರೀತಿ-ನೀತಿ ಧೋರಣೆಗಳ ಬಗ್ಗೆ ವಿಮರ್ಶಾತ್ಮಕವಾಗಿ ಇರುವುದು, ಆರ್ಥಿಕ ಹಗರಣಗಳ ಬಗ್ಗೆ ಪರಿಣಿತ ಬರಹಗಳನ್ನು ನರಸಿಂಹಮೂರ್ತಿ ಅವರು ಬರೆದಿರುವುದನ್ನು ಸರ್ಕಾರವು ಅಪರಾಧ ಎಂದು ಪರಿಗಣಿಸುತ್ತದೆಯೇ ಎಂದು ನಾವು ಕೇಳಬಯಸುತ್ತೇವೆ

- Advertisement -
- Advertisement -

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನವನ್ನು ಖಂಡಿಸುತ್ತೇವೆ. ಪ್ರಜಾತಂತ್ರದ ಭಿನ್ನ ದನಿಗಳನ್ನು ಎತ್ತಿ ಹಿಡಿಯುವ ನಮ್ಮ ಪ್ರಯತ್ನ ಮುಂದುವರೆಯುತ್ತದೆ ಎಂದು ಕರ್ನಾಟಕದ ವಿವಿಧ ಗಣ್ಯರು ಪ್ರತಿಪಾದಿಸಿದ್ದು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಗೌರಿ ಮೀಡಿಯಾ ಟ್ರಸ್ಟ್ ನ ಕಾರ್ಯದರ್ಶಿ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರ ಬಂಧನ, ಬಂಧಿಸಲು ಕೊಟ್ಟಿರುವ ಕಾರಣ ಮತ್ತು ರೀತಿಯನ್ನು ನಾವುಗಳು ಖಂಡಿಸುತ್ತೇವೆ. ವಿವಿಧ ಜನಪರ ಹೋರಾಟಗಳಲ್ಲಿ ಭಾಗಿಯಾಗುತ್ತಾ, ಚಿಂತನಶೀಲ ಬರಹಗಳನ್ನು ಬರೆದಿರುವ ನರಸಿಂಹಮೂರ್ತಿಯವರು ಕರ್ನಾಟಕದ ಪ್ರಮುಖ ಸಾಮಾಜಿಕ ಕಾರ್ಯಕರ್ತರಲ್ಲೊಬ್ಬರು. ಬಿಎಂಐಸಿ ವಿರೋಧಿ ಹೋರಾಟ ಮತ್ತು ಗೌರಿ ಮೀಡಿಯಾ ಪ್ರಯತ್ನಗಳ ಭಾಗವಾಗಿ ನಮಗೆ ಅವರೊಡನೆ ನೇರ ಒಡನಾಟವೂ ಇದೆ ಎಂದು ಸಾರಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ, ರೈತ ಹೋರಾಟಗಾರರಾದ ಚುಕ್ಕಿ ನಂಜುಂಡಸ್ವಾಮಿ, ಹಿರಿಯ ಸಾಹಿತಿ ಮತ್ತು ಪತ್ರಕರ್ತರಾದ ಇಂದೂಧರ ಹೊನ್ನಾಪುರ, ಹಿರಿಯ ಪತ್ರಕರ್ತರಾದ ದಿನೇಶ್ ಅಮಿನ್ ಮಟ್ಟು, ಗೌರಿ ಮೀಡಿಯಾ ಟ್ರಸ್ಟ್‌ನ ಅಧ್ಯಕ್ಷರಾದ ನಗರಗೆರೆ ರಮೇಶ್, ಹಿರಿಯ ಸಾಹಿತಿಗಳು & ಕ.ಸಾ.ಪದ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲ್ (ಚಂಪಾ), ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಮತ್ತು ಹಿರಿಯ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ದಸಂಸದ ಹಿರಿಯ ನಾಯಕರಾದ   ಎನ್.ವೆಂಕಟೇಶ್, ಸಾಹಿತಿ ಮತ್ತು ಹಿರಿಯ ಪತ್ರಕರ್ತರಾದ  ಡಾ.ವಿಜಯಮ್ಮ, ಮಾಜಿ ಸಚಿವರಾದ ಬಿ.ಟಿ.ಲಲಿತಾನಾಯಕ್, ರಂಗಕರ್ಮಿಗಳಾದ ರಘುನಂದನ್, ಹಿರಿಯ ವಿಮರ್ಶಕರಾದ  ಜಿ.ರಾಜಶೇಖರ್ ಮತ್ತು ಸಿಪಿಐ ಪಕ್ಷದ ನಾಯಕರಾದ ಡಾ.ಸಿದ್ದನಗೌಡ ಪಾಟೀಲ್‌ರವರು ಜಂಟಿ ಹೇಳಿಕೆಗೆ ಸಹಿ ಹಾಕಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬರು ಇವರನ್ನು ವಿವಿಧ ಪ್ರಕರಣಗಳಲ್ಲಿ 25 ವರ್ಷಗಳ ಹಿಂದೆ ಭಾಗಿಯಾಗಿದ್ದ ವಿನೋದ್ ಎಂದು ಗುರುತಿಸಿರುವುದೇ ಆಧಾರವೆಂದು ಹೇಳಿ, ಆ ಕಾರಣಕ್ಕೆ ಬಂಧಿಸಿದ್ದೇವೆಂದು ಹೇಳಲಾಗಿದೆ. ರಾಯಚೂರು ಮತ್ತು ರಾಜ್ಯದ ಹಲವೆಡೆ ಸಾರ್ವಜನಿಕ ಸಭೆಗಳಲ್ಲಿ ಭಾಷಣ ಮಾಡುತ್ತಾ, ಜನಾಂದೋಲನಗಳಲ್ಲಿ ಭಾಗಿಯಾಗುತ್ತಾ ಬಂದಿರುವುದಲ್ಲದೇ ಅವರು ಬರೆದಿರುವ ಹಲವು ಲೇಖನಗಳು ಪ್ರಮುಖ ಪತ್ರಿಕೆಗಳಲ್ಲೂ ಪ್ರಕಟವಾಗಿವೆ. ಹೀಗಿರುವಾಗ 25 ವರ್ಷಗಳಿಂದ ತಲೆ ಮರೆಸಿಕೊಂಡಿದ್ದರು ಎಂಬುದು ಸುಳ್ಳು ಆರೋಪ ಎಂದು ಖಚಿತವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸರ್ಕಾರದ ರೀತಿ-ನೀತಿ ಧೋರಣೆಗಳ ಬಗ್ಗೆ ವಿಮರ್ಶಾತ್ಮಕವಾಗಿ ಇರುವುದು, ಆರ್ಥಿಕ ಹಗರಣಗಳ ಬಗ್ಗೆ ಪರಿಣಿತ ಬರಹಗಳನ್ನು ನರಸಿಂಹಮೂರ್ತಿ ಅವರು ಬರೆದಿರುವುದನ್ನು ಸರ್ಕಾರವು ಅಪರಾಧ ಎಂದು ಪರಿಗಣಿಸುತ್ತದೆಯೇ ಎಂದು ನಾವು ಕೇಳಬಯಸುತ್ತೇವೆ. ಗೌರಿ ಲಂಕೇಶರ ಪರಂಪರೆಯ ಮುಂದುವರಿಕೆಯಾಗಿ ನಡೆಸುತ್ತಿರುವ ಮಾಧ್ಯಮ ಸಂಸ್ಥೆಯನ್ನು ಗುರಿ ಮಾಡುವ ಉದ್ದೇಶದಿಂದ ಸರ್ಕಾರವು ಇಂತಹ ಕ್ರಮಗಳಿಗೆ ಮುಂದಾಗಿದೆಯೆ ಎಂಬ ಅನುಮಾನ ಹುಟ್ಟಲು ಕಾರಣಗಳಿವೆ. ದೇಶದ ವಿವಿಧ ಭಾಗಗಳಲ್ಲಿ ಜನಪರ ಪತ್ರಿಕೋದ್ಯಮದ ದನಿಗಳನ್ನು ದಮನಿಸುತ್ತಿರುವ ಹಲವು ಉದಾಹರಣೆಗಳನ್ನು ನೋಡುತ್ತಿದ್ದೇವೆ. ಆದರೆ, ದೇಶದ ಸಾಂವಿಧಾನಾತ್ಮಕ ಹಕ್ಕುಗಳನ್ನು ಮೊಟಕುಗೊಳಿಸುವ ಯಾವುದೇ ಪ್ರಯತ್ನಗಳನ್ನು ನಾವು ವಿರೋಧಿಸುತ್ತೇವೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನಿಸಲು ವಿವಿಧ ಮಾರ್ಗಗಳನ್ನು ಬಳಸಿದರೂ ಹತ್ತಿಕ್ಕಲು ಸಾಧ್ಯವಿಲ್ಲ ಎಂದಿದ್ದಾರೆ.

ಗೌರಿ ಲಂಕೇಶ್-ನ್ಯಾಯಪಥ ಪತ್ರಿಕೆಯ ವಿಚಾರ ಸಂಕಿರಣವೊಂದರಲ್ಲಿ ಭಾಗವಹಿಸಲು ರಾಯಚೂರಿಗೆ ಹೋಗಿದ್ದ ಮೂರ್ತಿಯವರನ್ನು ಬಂಧಿಸಿರುವ ರೀತಿ ಖಂಡನಾರ್ಹವಾಗಿದ್ದು, ಈ ಕೂಡಲೇ ಕಾನೂನುಪ್ರಕ್ರಿಯೆ ಚುರುಕುಗೊಳಿಸಿ ಅವರನ್ನು ಬಿಡುಗಡೆ ಮಾಡಬೇಕು ಎಂದು ಈ ಹಿರಿಯ ಗಣ್ಯರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....