Homeಕರ್ನಾಟಕದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ ಖಂಡಿಸಿದ ಕರ್ನಾಟಕದ ಹಿರಿಯ ಗಣ್ಯರು : ಜಂಟಿ ಹೇಳಿಕೆ ಬಿಡುಗಡೆ

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ ಖಂಡಿಸಿದ ಕರ್ನಾಟಕದ ಹಿರಿಯ ಗಣ್ಯರು : ಜಂಟಿ ಹೇಳಿಕೆ ಬಿಡುಗಡೆ

ಸರ್ಕಾರದ ರೀತಿ-ನೀತಿ ಧೋರಣೆಗಳ ಬಗ್ಗೆ ವಿಮರ್ಶಾತ್ಮಕವಾಗಿ ಇರುವುದು, ಆರ್ಥಿಕ ಹಗರಣಗಳ ಬಗ್ಗೆ ಪರಿಣಿತ ಬರಹಗಳನ್ನು ನರಸಿಂಹಮೂರ್ತಿ ಅವರು ಬರೆದಿರುವುದನ್ನು ಸರ್ಕಾರವು ಅಪರಾಧ ಎಂದು ಪರಿಗಣಿಸುತ್ತದೆಯೇ ಎಂದು ನಾವು ಕೇಳಬಯಸುತ್ತೇವೆ

- Advertisement -
- Advertisement -

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನವನ್ನು ಖಂಡಿಸುತ್ತೇವೆ. ಪ್ರಜಾತಂತ್ರದ ಭಿನ್ನ ದನಿಗಳನ್ನು ಎತ್ತಿ ಹಿಡಿಯುವ ನಮ್ಮ ಪ್ರಯತ್ನ ಮುಂದುವರೆಯುತ್ತದೆ ಎಂದು ಕರ್ನಾಟಕದ ವಿವಿಧ ಗಣ್ಯರು ಪ್ರತಿಪಾದಿಸಿದ್ದು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಗೌರಿ ಮೀಡಿಯಾ ಟ್ರಸ್ಟ್ ನ ಕಾರ್ಯದರ್ಶಿ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರ ಬಂಧನ, ಬಂಧಿಸಲು ಕೊಟ್ಟಿರುವ ಕಾರಣ ಮತ್ತು ರೀತಿಯನ್ನು ನಾವುಗಳು ಖಂಡಿಸುತ್ತೇವೆ. ವಿವಿಧ ಜನಪರ ಹೋರಾಟಗಳಲ್ಲಿ ಭಾಗಿಯಾಗುತ್ತಾ, ಚಿಂತನಶೀಲ ಬರಹಗಳನ್ನು ಬರೆದಿರುವ ನರಸಿಂಹಮೂರ್ತಿಯವರು ಕರ್ನಾಟಕದ ಪ್ರಮುಖ ಸಾಮಾಜಿಕ ಕಾರ್ಯಕರ್ತರಲ್ಲೊಬ್ಬರು. ಬಿಎಂಐಸಿ ವಿರೋಧಿ ಹೋರಾಟ ಮತ್ತು ಗೌರಿ ಮೀಡಿಯಾ ಪ್ರಯತ್ನಗಳ ಭಾಗವಾಗಿ ನಮಗೆ ಅವರೊಡನೆ ನೇರ ಒಡನಾಟವೂ ಇದೆ ಎಂದು ಸಾರಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ, ರೈತ ಹೋರಾಟಗಾರರಾದ ಚುಕ್ಕಿ ನಂಜುಂಡಸ್ವಾಮಿ, ಹಿರಿಯ ಸಾಹಿತಿ ಮತ್ತು ಪತ್ರಕರ್ತರಾದ ಇಂದೂಧರ ಹೊನ್ನಾಪುರ, ಹಿರಿಯ ಪತ್ರಕರ್ತರಾದ ದಿನೇಶ್ ಅಮಿನ್ ಮಟ್ಟು, ಗೌರಿ ಮೀಡಿಯಾ ಟ್ರಸ್ಟ್‌ನ ಅಧ್ಯಕ್ಷರಾದ ನಗರಗೆರೆ ರಮೇಶ್, ಹಿರಿಯ ಸಾಹಿತಿಗಳು & ಕ.ಸಾ.ಪದ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲ್ (ಚಂಪಾ), ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಮತ್ತು ಹಿರಿಯ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ದಸಂಸದ ಹಿರಿಯ ನಾಯಕರಾದ   ಎನ್.ವೆಂಕಟೇಶ್, ಸಾಹಿತಿ ಮತ್ತು ಹಿರಿಯ ಪತ್ರಕರ್ತರಾದ  ಡಾ.ವಿಜಯಮ್ಮ, ಮಾಜಿ ಸಚಿವರಾದ ಬಿ.ಟಿ.ಲಲಿತಾನಾಯಕ್, ರಂಗಕರ್ಮಿಗಳಾದ ರಘುನಂದನ್, ಹಿರಿಯ ವಿಮರ್ಶಕರಾದ  ಜಿ.ರಾಜಶೇಖರ್ ಮತ್ತು ಸಿಪಿಐ ಪಕ್ಷದ ನಾಯಕರಾದ ಡಾ.ಸಿದ್ದನಗೌಡ ಪಾಟೀಲ್‌ರವರು ಜಂಟಿ ಹೇಳಿಕೆಗೆ ಸಹಿ ಹಾಕಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬರು ಇವರನ್ನು ವಿವಿಧ ಪ್ರಕರಣಗಳಲ್ಲಿ 25 ವರ್ಷಗಳ ಹಿಂದೆ ಭಾಗಿಯಾಗಿದ್ದ ವಿನೋದ್ ಎಂದು ಗುರುತಿಸಿರುವುದೇ ಆಧಾರವೆಂದು ಹೇಳಿ, ಆ ಕಾರಣಕ್ಕೆ ಬಂಧಿಸಿದ್ದೇವೆಂದು ಹೇಳಲಾಗಿದೆ. ರಾಯಚೂರು ಮತ್ತು ರಾಜ್ಯದ ಹಲವೆಡೆ ಸಾರ್ವಜನಿಕ ಸಭೆಗಳಲ್ಲಿ ಭಾಷಣ ಮಾಡುತ್ತಾ, ಜನಾಂದೋಲನಗಳಲ್ಲಿ ಭಾಗಿಯಾಗುತ್ತಾ ಬಂದಿರುವುದಲ್ಲದೇ ಅವರು ಬರೆದಿರುವ ಹಲವು ಲೇಖನಗಳು ಪ್ರಮುಖ ಪತ್ರಿಕೆಗಳಲ್ಲೂ ಪ್ರಕಟವಾಗಿವೆ. ಹೀಗಿರುವಾಗ 25 ವರ್ಷಗಳಿಂದ ತಲೆ ಮರೆಸಿಕೊಂಡಿದ್ದರು ಎಂಬುದು ಸುಳ್ಳು ಆರೋಪ ಎಂದು ಖಚಿತವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸರ್ಕಾರದ ರೀತಿ-ನೀತಿ ಧೋರಣೆಗಳ ಬಗ್ಗೆ ವಿಮರ್ಶಾತ್ಮಕವಾಗಿ ಇರುವುದು, ಆರ್ಥಿಕ ಹಗರಣಗಳ ಬಗ್ಗೆ ಪರಿಣಿತ ಬರಹಗಳನ್ನು ನರಸಿಂಹಮೂರ್ತಿ ಅವರು ಬರೆದಿರುವುದನ್ನು ಸರ್ಕಾರವು ಅಪರಾಧ ಎಂದು ಪರಿಗಣಿಸುತ್ತದೆಯೇ ಎಂದು ನಾವು ಕೇಳಬಯಸುತ್ತೇವೆ. ಗೌರಿ ಲಂಕೇಶರ ಪರಂಪರೆಯ ಮುಂದುವರಿಕೆಯಾಗಿ ನಡೆಸುತ್ತಿರುವ ಮಾಧ್ಯಮ ಸಂಸ್ಥೆಯನ್ನು ಗುರಿ ಮಾಡುವ ಉದ್ದೇಶದಿಂದ ಸರ್ಕಾರವು ಇಂತಹ ಕ್ರಮಗಳಿಗೆ ಮುಂದಾಗಿದೆಯೆ ಎಂಬ ಅನುಮಾನ ಹುಟ್ಟಲು ಕಾರಣಗಳಿವೆ. ದೇಶದ ವಿವಿಧ ಭಾಗಗಳಲ್ಲಿ ಜನಪರ ಪತ್ರಿಕೋದ್ಯಮದ ದನಿಗಳನ್ನು ದಮನಿಸುತ್ತಿರುವ ಹಲವು ಉದಾಹರಣೆಗಳನ್ನು ನೋಡುತ್ತಿದ್ದೇವೆ. ಆದರೆ, ದೇಶದ ಸಾಂವಿಧಾನಾತ್ಮಕ ಹಕ್ಕುಗಳನ್ನು ಮೊಟಕುಗೊಳಿಸುವ ಯಾವುದೇ ಪ್ರಯತ್ನಗಳನ್ನು ನಾವು ವಿರೋಧಿಸುತ್ತೇವೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನಿಸಲು ವಿವಿಧ ಮಾರ್ಗಗಳನ್ನು ಬಳಸಿದರೂ ಹತ್ತಿಕ್ಕಲು ಸಾಧ್ಯವಿಲ್ಲ ಎಂದಿದ್ದಾರೆ.

ಗೌರಿ ಲಂಕೇಶ್-ನ್ಯಾಯಪಥ ಪತ್ರಿಕೆಯ ವಿಚಾರ ಸಂಕಿರಣವೊಂದರಲ್ಲಿ ಭಾಗವಹಿಸಲು ರಾಯಚೂರಿಗೆ ಹೋಗಿದ್ದ ಮೂರ್ತಿಯವರನ್ನು ಬಂಧಿಸಿರುವ ರೀತಿ ಖಂಡನಾರ್ಹವಾಗಿದ್ದು, ಈ ಕೂಡಲೇ ಕಾನೂನುಪ್ರಕ್ರಿಯೆ ಚುರುಕುಗೊಳಿಸಿ ಅವರನ್ನು ಬಿಡುಗಡೆ ಮಾಡಬೇಕು ಎಂದು ಈ ಹಿರಿಯ ಗಣ್ಯರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...