Homeಕರ್ನಾಟಕದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ ಖಂಡಿಸಿದ ಕರ್ನಾಟಕದ ಹಿರಿಯ ಗಣ್ಯರು : ಜಂಟಿ ಹೇಳಿಕೆ ಬಿಡುಗಡೆ

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ ಖಂಡಿಸಿದ ಕರ್ನಾಟಕದ ಹಿರಿಯ ಗಣ್ಯರು : ಜಂಟಿ ಹೇಳಿಕೆ ಬಿಡುಗಡೆ

ಸರ್ಕಾರದ ರೀತಿ-ನೀತಿ ಧೋರಣೆಗಳ ಬಗ್ಗೆ ವಿಮರ್ಶಾತ್ಮಕವಾಗಿ ಇರುವುದು, ಆರ್ಥಿಕ ಹಗರಣಗಳ ಬಗ್ಗೆ ಪರಿಣಿತ ಬರಹಗಳನ್ನು ನರಸಿಂಹಮೂರ್ತಿ ಅವರು ಬರೆದಿರುವುದನ್ನು ಸರ್ಕಾರವು ಅಪರಾಧ ಎಂದು ಪರಿಗಣಿಸುತ್ತದೆಯೇ ಎಂದು ನಾವು ಕೇಳಬಯಸುತ್ತೇವೆ

- Advertisement -
- Advertisement -

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನವನ್ನು ಖಂಡಿಸುತ್ತೇವೆ. ಪ್ರಜಾತಂತ್ರದ ಭಿನ್ನ ದನಿಗಳನ್ನು ಎತ್ತಿ ಹಿಡಿಯುವ ನಮ್ಮ ಪ್ರಯತ್ನ ಮುಂದುವರೆಯುತ್ತದೆ ಎಂದು ಕರ್ನಾಟಕದ ವಿವಿಧ ಗಣ್ಯರು ಪ್ರತಿಪಾದಿಸಿದ್ದು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಗೌರಿ ಮೀಡಿಯಾ ಟ್ರಸ್ಟ್ ನ ಕಾರ್ಯದರ್ಶಿ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರ ಬಂಧನ, ಬಂಧಿಸಲು ಕೊಟ್ಟಿರುವ ಕಾರಣ ಮತ್ತು ರೀತಿಯನ್ನು ನಾವುಗಳು ಖಂಡಿಸುತ್ತೇವೆ. ವಿವಿಧ ಜನಪರ ಹೋರಾಟಗಳಲ್ಲಿ ಭಾಗಿಯಾಗುತ್ತಾ, ಚಿಂತನಶೀಲ ಬರಹಗಳನ್ನು ಬರೆದಿರುವ ನರಸಿಂಹಮೂರ್ತಿಯವರು ಕರ್ನಾಟಕದ ಪ್ರಮುಖ ಸಾಮಾಜಿಕ ಕಾರ್ಯಕರ್ತರಲ್ಲೊಬ್ಬರು. ಬಿಎಂಐಸಿ ವಿರೋಧಿ ಹೋರಾಟ ಮತ್ತು ಗೌರಿ ಮೀಡಿಯಾ ಪ್ರಯತ್ನಗಳ ಭಾಗವಾಗಿ ನಮಗೆ ಅವರೊಡನೆ ನೇರ ಒಡನಾಟವೂ ಇದೆ ಎಂದು ಸಾರಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ, ರೈತ ಹೋರಾಟಗಾರರಾದ ಚುಕ್ಕಿ ನಂಜುಂಡಸ್ವಾಮಿ, ಹಿರಿಯ ಸಾಹಿತಿ ಮತ್ತು ಪತ್ರಕರ್ತರಾದ ಇಂದೂಧರ ಹೊನ್ನಾಪುರ, ಹಿರಿಯ ಪತ್ರಕರ್ತರಾದ ದಿನೇಶ್ ಅಮಿನ್ ಮಟ್ಟು, ಗೌರಿ ಮೀಡಿಯಾ ಟ್ರಸ್ಟ್‌ನ ಅಧ್ಯಕ್ಷರಾದ ನಗರಗೆರೆ ರಮೇಶ್, ಹಿರಿಯ ಸಾಹಿತಿಗಳು & ಕ.ಸಾ.ಪದ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲ್ (ಚಂಪಾ), ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಮತ್ತು ಹಿರಿಯ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ದಸಂಸದ ಹಿರಿಯ ನಾಯಕರಾದ   ಎನ್.ವೆಂಕಟೇಶ್, ಸಾಹಿತಿ ಮತ್ತು ಹಿರಿಯ ಪತ್ರಕರ್ತರಾದ  ಡಾ.ವಿಜಯಮ್ಮ, ಮಾಜಿ ಸಚಿವರಾದ ಬಿ.ಟಿ.ಲಲಿತಾನಾಯಕ್, ರಂಗಕರ್ಮಿಗಳಾದ ರಘುನಂದನ್, ಹಿರಿಯ ವಿಮರ್ಶಕರಾದ  ಜಿ.ರಾಜಶೇಖರ್ ಮತ್ತು ಸಿಪಿಐ ಪಕ್ಷದ ನಾಯಕರಾದ ಡಾ.ಸಿದ್ದನಗೌಡ ಪಾಟೀಲ್‌ರವರು ಜಂಟಿ ಹೇಳಿಕೆಗೆ ಸಹಿ ಹಾಕಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬರು ಇವರನ್ನು ವಿವಿಧ ಪ್ರಕರಣಗಳಲ್ಲಿ 25 ವರ್ಷಗಳ ಹಿಂದೆ ಭಾಗಿಯಾಗಿದ್ದ ವಿನೋದ್ ಎಂದು ಗುರುತಿಸಿರುವುದೇ ಆಧಾರವೆಂದು ಹೇಳಿ, ಆ ಕಾರಣಕ್ಕೆ ಬಂಧಿಸಿದ್ದೇವೆಂದು ಹೇಳಲಾಗಿದೆ. ರಾಯಚೂರು ಮತ್ತು ರಾಜ್ಯದ ಹಲವೆಡೆ ಸಾರ್ವಜನಿಕ ಸಭೆಗಳಲ್ಲಿ ಭಾಷಣ ಮಾಡುತ್ತಾ, ಜನಾಂದೋಲನಗಳಲ್ಲಿ ಭಾಗಿಯಾಗುತ್ತಾ ಬಂದಿರುವುದಲ್ಲದೇ ಅವರು ಬರೆದಿರುವ ಹಲವು ಲೇಖನಗಳು ಪ್ರಮುಖ ಪತ್ರಿಕೆಗಳಲ್ಲೂ ಪ್ರಕಟವಾಗಿವೆ. ಹೀಗಿರುವಾಗ 25 ವರ್ಷಗಳಿಂದ ತಲೆ ಮರೆಸಿಕೊಂಡಿದ್ದರು ಎಂಬುದು ಸುಳ್ಳು ಆರೋಪ ಎಂದು ಖಚಿತವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸರ್ಕಾರದ ರೀತಿ-ನೀತಿ ಧೋರಣೆಗಳ ಬಗ್ಗೆ ವಿಮರ್ಶಾತ್ಮಕವಾಗಿ ಇರುವುದು, ಆರ್ಥಿಕ ಹಗರಣಗಳ ಬಗ್ಗೆ ಪರಿಣಿತ ಬರಹಗಳನ್ನು ನರಸಿಂಹಮೂರ್ತಿ ಅವರು ಬರೆದಿರುವುದನ್ನು ಸರ್ಕಾರವು ಅಪರಾಧ ಎಂದು ಪರಿಗಣಿಸುತ್ತದೆಯೇ ಎಂದು ನಾವು ಕೇಳಬಯಸುತ್ತೇವೆ. ಗೌರಿ ಲಂಕೇಶರ ಪರಂಪರೆಯ ಮುಂದುವರಿಕೆಯಾಗಿ ನಡೆಸುತ್ತಿರುವ ಮಾಧ್ಯಮ ಸಂಸ್ಥೆಯನ್ನು ಗುರಿ ಮಾಡುವ ಉದ್ದೇಶದಿಂದ ಸರ್ಕಾರವು ಇಂತಹ ಕ್ರಮಗಳಿಗೆ ಮುಂದಾಗಿದೆಯೆ ಎಂಬ ಅನುಮಾನ ಹುಟ್ಟಲು ಕಾರಣಗಳಿವೆ. ದೇಶದ ವಿವಿಧ ಭಾಗಗಳಲ್ಲಿ ಜನಪರ ಪತ್ರಿಕೋದ್ಯಮದ ದನಿಗಳನ್ನು ದಮನಿಸುತ್ತಿರುವ ಹಲವು ಉದಾಹರಣೆಗಳನ್ನು ನೋಡುತ್ತಿದ್ದೇವೆ. ಆದರೆ, ದೇಶದ ಸಾಂವಿಧಾನಾತ್ಮಕ ಹಕ್ಕುಗಳನ್ನು ಮೊಟಕುಗೊಳಿಸುವ ಯಾವುದೇ ಪ್ರಯತ್ನಗಳನ್ನು ನಾವು ವಿರೋಧಿಸುತ್ತೇವೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನಿಸಲು ವಿವಿಧ ಮಾರ್ಗಗಳನ್ನು ಬಳಸಿದರೂ ಹತ್ತಿಕ್ಕಲು ಸಾಧ್ಯವಿಲ್ಲ ಎಂದಿದ್ದಾರೆ.

ಗೌರಿ ಲಂಕೇಶ್-ನ್ಯಾಯಪಥ ಪತ್ರಿಕೆಯ ವಿಚಾರ ಸಂಕಿರಣವೊಂದರಲ್ಲಿ ಭಾಗವಹಿಸಲು ರಾಯಚೂರಿಗೆ ಹೋಗಿದ್ದ ಮೂರ್ತಿಯವರನ್ನು ಬಂಧಿಸಿರುವ ರೀತಿ ಖಂಡನಾರ್ಹವಾಗಿದ್ದು, ಈ ಕೂಡಲೇ ಕಾನೂನುಪ್ರಕ್ರಿಯೆ ಚುರುಕುಗೊಳಿಸಿ ಅವರನ್ನು ಬಿಡುಗಡೆ ಮಾಡಬೇಕು ಎಂದು ಈ ಹಿರಿಯ ಗಣ್ಯರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...