Homeಕರ್ನಾಟಕದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ ಖಂಡಿಸಿದ ಕರ್ನಾಟಕದ ಹಿರಿಯ ಗಣ್ಯರು : ಜಂಟಿ ಹೇಳಿಕೆ ಬಿಡುಗಡೆ

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ ಖಂಡಿಸಿದ ಕರ್ನಾಟಕದ ಹಿರಿಯ ಗಣ್ಯರು : ಜಂಟಿ ಹೇಳಿಕೆ ಬಿಡುಗಡೆ

ಸರ್ಕಾರದ ರೀತಿ-ನೀತಿ ಧೋರಣೆಗಳ ಬಗ್ಗೆ ವಿಮರ್ಶಾತ್ಮಕವಾಗಿ ಇರುವುದು, ಆರ್ಥಿಕ ಹಗರಣಗಳ ಬಗ್ಗೆ ಪರಿಣಿತ ಬರಹಗಳನ್ನು ನರಸಿಂಹಮೂರ್ತಿ ಅವರು ಬರೆದಿರುವುದನ್ನು ಸರ್ಕಾರವು ಅಪರಾಧ ಎಂದು ಪರಿಗಣಿಸುತ್ತದೆಯೇ ಎಂದು ನಾವು ಕೇಳಬಯಸುತ್ತೇವೆ

- Advertisement -
- Advertisement -

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನವನ್ನು ಖಂಡಿಸುತ್ತೇವೆ. ಪ್ರಜಾತಂತ್ರದ ಭಿನ್ನ ದನಿಗಳನ್ನು ಎತ್ತಿ ಹಿಡಿಯುವ ನಮ್ಮ ಪ್ರಯತ್ನ ಮುಂದುವರೆಯುತ್ತದೆ ಎಂದು ಕರ್ನಾಟಕದ ವಿವಿಧ ಗಣ್ಯರು ಪ್ರತಿಪಾದಿಸಿದ್ದು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಗೌರಿ ಮೀಡಿಯಾ ಟ್ರಸ್ಟ್ ನ ಕಾರ್ಯದರ್ಶಿ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರ ಬಂಧನ, ಬಂಧಿಸಲು ಕೊಟ್ಟಿರುವ ಕಾರಣ ಮತ್ತು ರೀತಿಯನ್ನು ನಾವುಗಳು ಖಂಡಿಸುತ್ತೇವೆ. ವಿವಿಧ ಜನಪರ ಹೋರಾಟಗಳಲ್ಲಿ ಭಾಗಿಯಾಗುತ್ತಾ, ಚಿಂತನಶೀಲ ಬರಹಗಳನ್ನು ಬರೆದಿರುವ ನರಸಿಂಹಮೂರ್ತಿಯವರು ಕರ್ನಾಟಕದ ಪ್ರಮುಖ ಸಾಮಾಜಿಕ ಕಾರ್ಯಕರ್ತರಲ್ಲೊಬ್ಬರು. ಬಿಎಂಐಸಿ ವಿರೋಧಿ ಹೋರಾಟ ಮತ್ತು ಗೌರಿ ಮೀಡಿಯಾ ಪ್ರಯತ್ನಗಳ ಭಾಗವಾಗಿ ನಮಗೆ ಅವರೊಡನೆ ನೇರ ಒಡನಾಟವೂ ಇದೆ ಎಂದು ಸಾರಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ, ರೈತ ಹೋರಾಟಗಾರರಾದ ಚುಕ್ಕಿ ನಂಜುಂಡಸ್ವಾಮಿ, ಹಿರಿಯ ಸಾಹಿತಿ ಮತ್ತು ಪತ್ರಕರ್ತರಾದ ಇಂದೂಧರ ಹೊನ್ನಾಪುರ, ಹಿರಿಯ ಪತ್ರಕರ್ತರಾದ ದಿನೇಶ್ ಅಮಿನ್ ಮಟ್ಟು, ಗೌರಿ ಮೀಡಿಯಾ ಟ್ರಸ್ಟ್‌ನ ಅಧ್ಯಕ್ಷರಾದ ನಗರಗೆರೆ ರಮೇಶ್, ಹಿರಿಯ ಸಾಹಿತಿಗಳು & ಕ.ಸಾ.ಪದ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲ್ (ಚಂಪಾ), ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರು ಮತ್ತು ಹಿರಿಯ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ದಸಂಸದ ಹಿರಿಯ ನಾಯಕರಾದ   ಎನ್.ವೆಂಕಟೇಶ್, ಸಾಹಿತಿ ಮತ್ತು ಹಿರಿಯ ಪತ್ರಕರ್ತರಾದ  ಡಾ.ವಿಜಯಮ್ಮ, ಮಾಜಿ ಸಚಿವರಾದ ಬಿ.ಟಿ.ಲಲಿತಾನಾಯಕ್, ರಂಗಕರ್ಮಿಗಳಾದ ರಘುನಂದನ್, ಹಿರಿಯ ವಿಮರ್ಶಕರಾದ  ಜಿ.ರಾಜಶೇಖರ್ ಮತ್ತು ಸಿಪಿಐ ಪಕ್ಷದ ನಾಯಕರಾದ ಡಾ.ಸಿದ್ದನಗೌಡ ಪಾಟೀಲ್‌ರವರು ಜಂಟಿ ಹೇಳಿಕೆಗೆ ಸಹಿ ಹಾಕಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬರು ಇವರನ್ನು ವಿವಿಧ ಪ್ರಕರಣಗಳಲ್ಲಿ 25 ವರ್ಷಗಳ ಹಿಂದೆ ಭಾಗಿಯಾಗಿದ್ದ ವಿನೋದ್ ಎಂದು ಗುರುತಿಸಿರುವುದೇ ಆಧಾರವೆಂದು ಹೇಳಿ, ಆ ಕಾರಣಕ್ಕೆ ಬಂಧಿಸಿದ್ದೇವೆಂದು ಹೇಳಲಾಗಿದೆ. ರಾಯಚೂರು ಮತ್ತು ರಾಜ್ಯದ ಹಲವೆಡೆ ಸಾರ್ವಜನಿಕ ಸಭೆಗಳಲ್ಲಿ ಭಾಷಣ ಮಾಡುತ್ತಾ, ಜನಾಂದೋಲನಗಳಲ್ಲಿ ಭಾಗಿಯಾಗುತ್ತಾ ಬಂದಿರುವುದಲ್ಲದೇ ಅವರು ಬರೆದಿರುವ ಹಲವು ಲೇಖನಗಳು ಪ್ರಮುಖ ಪತ್ರಿಕೆಗಳಲ್ಲೂ ಪ್ರಕಟವಾಗಿವೆ. ಹೀಗಿರುವಾಗ 25 ವರ್ಷಗಳಿಂದ ತಲೆ ಮರೆಸಿಕೊಂಡಿದ್ದರು ಎಂಬುದು ಸುಳ್ಳು ಆರೋಪ ಎಂದು ಖಚಿತವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸರ್ಕಾರದ ರೀತಿ-ನೀತಿ ಧೋರಣೆಗಳ ಬಗ್ಗೆ ವಿಮರ್ಶಾತ್ಮಕವಾಗಿ ಇರುವುದು, ಆರ್ಥಿಕ ಹಗರಣಗಳ ಬಗ್ಗೆ ಪರಿಣಿತ ಬರಹಗಳನ್ನು ನರಸಿಂಹಮೂರ್ತಿ ಅವರು ಬರೆದಿರುವುದನ್ನು ಸರ್ಕಾರವು ಅಪರಾಧ ಎಂದು ಪರಿಗಣಿಸುತ್ತದೆಯೇ ಎಂದು ನಾವು ಕೇಳಬಯಸುತ್ತೇವೆ. ಗೌರಿ ಲಂಕೇಶರ ಪರಂಪರೆಯ ಮುಂದುವರಿಕೆಯಾಗಿ ನಡೆಸುತ್ತಿರುವ ಮಾಧ್ಯಮ ಸಂಸ್ಥೆಯನ್ನು ಗುರಿ ಮಾಡುವ ಉದ್ದೇಶದಿಂದ ಸರ್ಕಾರವು ಇಂತಹ ಕ್ರಮಗಳಿಗೆ ಮುಂದಾಗಿದೆಯೆ ಎಂಬ ಅನುಮಾನ ಹುಟ್ಟಲು ಕಾರಣಗಳಿವೆ. ದೇಶದ ವಿವಿಧ ಭಾಗಗಳಲ್ಲಿ ಜನಪರ ಪತ್ರಿಕೋದ್ಯಮದ ದನಿಗಳನ್ನು ದಮನಿಸುತ್ತಿರುವ ಹಲವು ಉದಾಹರಣೆಗಳನ್ನು ನೋಡುತ್ತಿದ್ದೇವೆ. ಆದರೆ, ದೇಶದ ಸಾಂವಿಧಾನಾತ್ಮಕ ಹಕ್ಕುಗಳನ್ನು ಮೊಟಕುಗೊಳಿಸುವ ಯಾವುದೇ ಪ್ರಯತ್ನಗಳನ್ನು ನಾವು ವಿರೋಧಿಸುತ್ತೇವೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನಿಸಲು ವಿವಿಧ ಮಾರ್ಗಗಳನ್ನು ಬಳಸಿದರೂ ಹತ್ತಿಕ್ಕಲು ಸಾಧ್ಯವಿಲ್ಲ ಎಂದಿದ್ದಾರೆ.

ಗೌರಿ ಲಂಕೇಶ್-ನ್ಯಾಯಪಥ ಪತ್ರಿಕೆಯ ವಿಚಾರ ಸಂಕಿರಣವೊಂದರಲ್ಲಿ ಭಾಗವಹಿಸಲು ರಾಯಚೂರಿಗೆ ಹೋಗಿದ್ದ ಮೂರ್ತಿಯವರನ್ನು ಬಂಧಿಸಿರುವ ರೀತಿ ಖಂಡನಾರ್ಹವಾಗಿದ್ದು, ಈ ಕೂಡಲೇ ಕಾನೂನುಪ್ರಕ್ರಿಯೆ ಚುರುಕುಗೊಳಿಸಿ ಅವರನ್ನು ಬಿಡುಗಡೆ ಮಾಡಬೇಕು ಎಂದು ಈ ಹಿರಿಯ ಗಣ್ಯರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...