Homeಕರ್ನಾಟಕರಾಯಚೂರು: ಡಾ. ಅಂಬೇಡ್ಕರ್‌ರವರಿಗೆ ಅಗೌರವ ತೋರಿದ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಆಗ್ರಹ

ರಾಯಚೂರು: ಡಾ. ಅಂಬೇಡ್ಕರ್‌ರವರಿಗೆ ಅಗೌರವ ತೋರಿದ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಆಗ್ರಹ

’ಅಂಬೇಡ್ಕರ್‌, ಸಂವಿಧಾನದ ಬಗ್ಗೆ ಪೂರ್ವಾಗ್ರಹಗಳನ್ನಿಟ್ಟುಕೊಂಡ ಅನೇಕ ಮಂದಿ ಜಿಲ್ಲಾ ಮತ್ತು ಅಧೀನ ಕೋರ್ಟುಗಳಲ್ಲಿ ನ್ಯಾಯಾಧೀಶರ ವೇಶದಲ್ಲಿದ್ದಾರೆ’: ಸಿ.ಎಸ್.ದ್ವಾರಕನಾಥ್

- Advertisement -
- Advertisement -

ರಾಯಚೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಗಣರಾಜ್ಯೋತ್ಸವ ವೇಳೆ ಇರಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋ ತೆರವುಗೊಳಿಸಿ, ಧ್ವಜಾರೋಹಣ ನಡೆಸಿರುವ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ನಾಡಿನ ಚಿಂತಕರು, ಸಾಹಿತಿಗಳು, ವಕೀಲರು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಘಟನೆಯನ್ನು ಖಂಡಿಸಿ, ನ್ಯಾಯಧೀಶರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ತಕ್ಷಣವೇ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ.

ಘಟನೆಗೆ ಪ್ರತಿಕ್ರಿಯಿಸಿರುವ ವಿಮರ್ಶಕ ಕೇಶವ ಮಳಗಿ “ಭಾರತ ದೇಶ ಅಥವ ಇಂಡಿಯನ್‌ ನೇಶನ್‌ ಎನ್ನುವುದು ಎಷ್ಟೇ ಅಮೂರ್ತ ಕಲ್ಪನೆಯಾದರೂ ಯಾವುದೇ ರಾಜಕೀಯ ಪಕ್ಷದ ಗುತ್ತಿಗೆಯಲ್ಲ. ಇಲ್ಲಿ, ಗ್ರಾಮ ಪಂಚಾಯಿತಿ ಸದಸ್ಯ, ಚುನಾಯಿತ ಪ್ರಧಾನಿ, ಪಕ್ಷಗಳ ಒಮ್ಮತದಿಂದ ಆಯ್ಕೆಯಾಗುವ ರಾಷ್ಟ್ರಪತಿ, ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಮತ್ತು ಅತಿ ಸಾಮಾನ್ಯ ಹೀಗೆ ಎಲ್ಲರಿಗೂ ಒಂದೇ ಸಂವಿಧಾನ, ಕಾನೂನು, ನ್ಯಾಯವ್ಯವಸ್ಥೆ. ನಾವು ಯಾವುದೇ ಜಾತಿ, ಲಿಂಗ, ಕುಲಮತ, ಬುಡಕಟ್ಟು, ಲೈಂಗಿಕ ಆಯ್ಕೆ-ಅಪೇಕ್ಷೆಗಳಿಗೆ ಸೇರಿದವರಾದರು ಅಂತಿಮವಾಗಿ ಒಂದೇ ಸಂವಿಧಾನವನ್ನು ಒಪ್ಪಿಕೊಂಡು ಬದುಕಲು ಆಯ್ಕೆ ಮಾಡಿಕೊಂಡ ದೇಶಕ್ಕೆ ಸೇರಿದ್ದೇವೆ.

ಕಾನೂನು ವಿದ್ಯಾಭ್ಯಾಸ ಮಾಡಿ, ಅರ್ಹತೆಯ ಪರೀಕ್ಷೆ ಬರೆದು ಈ ಹುದ್ದೆಗೆ ಬಂದ ರಾಯಚೂರಿನ ನ್ಯಾಯಾಧೀಶರು ಈ ಸಂವೇದನೆ-ಸೂಕ್ಷ್ಮತೆ ಹೊಂದಿಲ್ಲವೆಂದರೆ ಅಂಥವರು ಆ ಹುದ್ದೆಯಲ್ಲಿ ಮುಂದುವರೆಯಲು ಅನರ್ಹರು. ಸರ್ಕಾರ ಅವರನ್ನು ಕೂಡಲೇ ಕೆಲಸದಿಂದ ಬಿಡುಗಡೆ ಮಾಡಬೇಕು. ಮಾತ್ರವಲ್ಲ, ಧ್ವಜಾರೋಹಣೆಯನ್ನು ನಿರ್ದಿಷ್ಟ ಕಾರಣಕ್ಕೆ ನಿರಾಕರಿಸಿದ್ದರೆ ಅವರ ಮೇಲೆ “ಸಂವಿಧಾನ ನಿಂದನೆ” ನಿಯಮಾವಳಿ ಪ್ರಕಾರ ಪ್ರಕರಣ ದಾಖಲಿಸಿ, ಬಂಧಿಸಬೇಕು. (ರಾಷ್ಟ್ರ ನಿಂದನೆ ಕಾನೂನು: 1971, ಆಕ್ಟ್‌ 69, 1971)” ಎಂದಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

ಹಿರಿಯ ವಕೀಲರಾದ ಸಿ.ಎಸ್.ದ್ವಾರಕನಾಥ್ ತಮ್ಮ ಫೇಸ್‌ಬುಕ್‌ನಲ್ಲಿ “ಸಂವಿಧಾನದ ಅವಧಿ ಮುಗಿಯುತ್ತಿದೆ’ ಎಂಬ ಚರ್ಚಾ ಸ್ವರ್ಧೆ ಏರ್ಪಡಿಸಿದ್ದ ಶಾಲೆ ಮತ್ತು ಅಂಬೇಡ್ಕರ್ ಫೋಟೋ ತೆಗಿಸಿದ ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಈ ಎರಡು ಪ್ರಕರಣಗಳ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ.

“ಸಂವಿಧಾನ ಮತ್ತು ಅಂಬೇಡ್ಕರ್ ರವರ ಕುರಿತು ಏನೆಲ್ಲಾ ಪೂರ್ವಾಗ್ರಹಗಳನ್ನು ಇಟ್ಟುಕೊಂಡ ಅನೇಕ ಮಂದಿ ಜಿಲ್ಲಾ ಮತ್ತು ಅಧೀನ ಕೋರ್ಟುಗಳಲ್ಲಿ ನ್ಯಾಯಾದೀಶರ ವೇಶದಲ್ಲಿದ್ದಾರೆ. ಇಂತವರು ನಮ್ಮ ಹೈಕೋರ್ಟು, ಸುಪ್ರೀಂ ಕೋರ್ಟುಗಳಲ್ಲೂ ಇದ್ದಾರೆ! ಇದರ ಬಗ್ಗೆ ಅನುಮಾನವೇ ಇಲ್ಲ! ನನಗೆ ಆತಂಕವಿರುವುದು ಇಂತಹ ಪೂರ್ವಾಗ್ರಹ ಇಟ್ಟುಕೊಂಡ ನ್ಯಾಯಾದೀಶರಿಂದ ಎಂತಹ ತೀರ್ಪುಗಳನ್ನು ಈ ನಾಡಿನ ಜನ ನಿರೀಕ್ಷಿಸಬಹುದು ಎನ್ನುವುದು..?  ಡಾ.ಅಂಬೇಡ್ಕರ್ ರವರು ಈ ದೇಶದ ಸಂವಿಧಾನ ಬರೆದವರು, ಗಣರಾಜ್ಯೋತ್ಸವದ ದಿನ ಎಂದರೆ ಸಂವಿಧಾನದ ಪ್ರಕಾರ ಈ ದೇಶವನ್ನು ಗಣರಾಜ್ಯವನ್ನಾಗಿ ಪರಿಗಣಿಸಿದ ದಿನ. ಇಂತಹ ದಿನದಂದು ಸಂವಿಧಾನ ರಚಿಸಿದ ಅಂಬೇಡ್ಕರ್ ರವರಲ್ಲದೆ ಇನ್ಯಾರ ಚಿತ್ರವನ್ನು ಇಟ್ಟು ಗಣರಾಜ್ಯೋತ್ಸವ ವನ್ನು ಆಚರಿಸಬೇಕು? ಎಂಬ ಕಾಮನ್ ಸೆನ್ಸ್ ಪ್ರಶ್ನೆಯನ್ನು ಹಾಕಿಕೊಂಡಿದ್ದರೂ ಈ ನ್ಯಾಯಾದೀಶನಿಗೆ ಉತ್ತರ ಸಿಗುತಿತ್ತು‌? ಅಂಬೇಡ್ಕರ್ ಅಸ್ಪೃಶ್ಯ ರಾಗಿದ್ದೇ ಕಾರಣ, ಈ so called ಶೂದ್ರ ಜಾತಿಗಳಿಗೂ ಜಾತಿ ಪ್ರಜ್ಞೆ ಜಾಗೃತವಾಗಿಬಿಡುತ್ತೆ. ಈ ಕ್ಯಾನ್ಸರ್ ಇವರ ತಲೆಯಲ್ಲಿರುವವರೆಗೂ ಇವರಿಗೆ ಉಳಿಗಾಲವಿಲ್ಲ!” ಎಂದಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

ಹಿರಿಯ ಸಾಹಿತಿ, ಸಂಶೋಧಕ ಪ್ರೊ. ರಹಮತ್ ತರೀಕೆರೆ ಅವರು “ಬಾಬಾಸಾಹೇಬರು ರಚಿಸಿದ ಸಂವಿಧಾನದಡಿಯಲ್ಲಿ, ನ್ಯಾಯದಾನ ಮಾಡುವ ಮತ್ತು ಅಧಿಕಾರ ನಿರ್ವಹಿಸುವ ಸಾರ್ವಜನಿಕ ಜಾಗೆಗಳಲ್ಲಿ, ದಲಿತರನ್ನು‌ ಮಹಿಳೆಯರನ್ನು ಮುಸ್ಲಿಮರನ್ನು ಬುಡಕಟ್ಟುಗಳನ್ನು ಕುರಿತು ಹೆಪ್ಪುಗೊಂಡಿರುವ ಘೋರ ಅಸಹನೆಯ ಒಂದು ಚಿಕ್ಕ ಪ್ರತಿನಿಧಿ ರಾಯಚೂರಿನ ಸದರಿ ಮಾನ್ಯ ನ್ಯಾಯಾಧೀಶರು. ನ್ಯಾಯಾಲಯ ಕ್ಷೇತ್ರದಲ್ಲಿ ಢಾಳಾಗಿ ನೆಲೆಗೊಂಡಿರುವ ಸಾಮಾಜಿಕ-ಧಾರ್ಮಿಕ ದ್ವೇಷಭಾವದ ಬಗ್ಗೆ ನನ್ನ ವಕೀಲ ಮಿತ್ರರ ಅನುಭವಗಳನ್ನು ಕೇಳಿರುವೆ. ನ್ಯಾಯಾಧೀಶರಾಗಿದ್ದ ಕೋಚೆಯವರೂ ಇಂತಹ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದರು. ಗಾಬರಿಯಾಗುತ್ತದೆ. ದುಗುಡವಾಗುತ್ತದೆ. ಅಂಬೇಡ್ಕರ್ ಅವರು “ಸಾಮಾಜಿಕ ಆರ್ಥಿಕ ಅಸಮಾನತೆ ಇರುವ ಸಮಾಜದಲ್ಲಿ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಇರುವುದಿಲ್ಲ” ಎಂದಿದ್ದು ಇದಕ್ಕಾಗಿಯೇ” ಎಂದು ಆತಂಖ ಹಂಚಿಕೊಂಡಿದ್ದಾರೆ.

ಚಿಂತಕ, ಪ್ರಾಧ್ಯಾಪಕ ಕೆಎಲ್‌ ಚಂದ್ರಶೇಖರ್‌ ಐಜೂರು, ತಮ್ಮ ಫೇಸ್‌ಬುಕ್‌ನಲ್ಲಿ ಸರ್ಕಾರಿ ಆದೇಶದ ಪ್ರತಿ ಹಂಚಿಕೊಂಡಿದ್ದು, ನ್ಯಾಯಾಧೀಶರ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

 

ಲೇಖಕ, ಪತ್ರಕರ್ತ ಬಿಎಂ ಬಶೀರ್‌ ಅವರು, ‘‘ಯಾವಾಗ ಈ ದೇಶದ ಹೈಕೋರ್ಟ್ ಮುಂದೆ ಮನುವಿನ ಪ್ರತಿಮೆ ಸ್ಥಾಪನೆಯಾಗಲು ಜನರು ಮೌನ ಸಮ್ಮತಿಯನ್ನು ಕೊಟ್ಟರೋ ಆಗಲೇ ಅಂಬೇಡ್ಕರ್ ಬದಿಗೆ ಸರಿದರು. ರಾಜಸ್ತಾನದ ಹೈಕೋರ್ಟ್ ಮುಂದೆ ಮನುವಿನ ಪ್ರತಿಮೆ ಬಟಾ ಬಯಲಲ್ಲಿ ನಿಂತು ಈ ದೇಶದ ಸಂವಿಧಾನಕ್ಕೆ ಪ್ರತಿ ದಿನ ಸವಾಲು ಹಾಕುತ್ತಿರುವಾಗ, ನಮಗೇನೂ ಅನ್ನಿಸುವುದಿಲ್ಲ. ನೆನಪಿಡಿ ಈ ಪ್ರತಿಮೆ ನಿಲ್ಲಿಸಲು ಅನುಮತಿ ನೀಡಿದವರು ನ್ಯಾಯಾಧೀಶರೇ. ಹೀಗಿರುವಾಗ ನ್ಯಾಯಾಧೀಶನೊಬ್ಬ ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡುವುದಿಲ್ಲ ಎನ್ನುವುದರಲ್ಲಿ ಅಚ್ಚರಿ ಏನೂ ಇಲ್ಲ ಎಂದಿದ್ದಾರೆ.


ಇದನ್ನೂ ಓದಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Some peoples trying to touch….. And then it gets embarrassed asking sorry……
    But we must think that once day comes next night should also be circulated…… Anyone can’t close the eyes of Almighty God.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...