Homeಕರ್ನಾಟಕರಾಯಚೂರು: ಡಾ. ಅಂಬೇಡ್ಕರ್‌ರವರಿಗೆ ಅಗೌರವ ತೋರಿದ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಆಗ್ರಹ

ರಾಯಚೂರು: ಡಾ. ಅಂಬೇಡ್ಕರ್‌ರವರಿಗೆ ಅಗೌರವ ತೋರಿದ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಆಗ್ರಹ

’ಅಂಬೇಡ್ಕರ್‌, ಸಂವಿಧಾನದ ಬಗ್ಗೆ ಪೂರ್ವಾಗ್ರಹಗಳನ್ನಿಟ್ಟುಕೊಂಡ ಅನೇಕ ಮಂದಿ ಜಿಲ್ಲಾ ಮತ್ತು ಅಧೀನ ಕೋರ್ಟುಗಳಲ್ಲಿ ನ್ಯಾಯಾಧೀಶರ ವೇಶದಲ್ಲಿದ್ದಾರೆ’: ಸಿ.ಎಸ್.ದ್ವಾರಕನಾಥ್

- Advertisement -
- Advertisement -

ರಾಯಚೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಗಣರಾಜ್ಯೋತ್ಸವ ವೇಳೆ ಇರಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋ ತೆರವುಗೊಳಿಸಿ, ಧ್ವಜಾರೋಹಣ ನಡೆಸಿರುವ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ನಾಡಿನ ಚಿಂತಕರು, ಸಾಹಿತಿಗಳು, ವಕೀಲರು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಘಟನೆಯನ್ನು ಖಂಡಿಸಿ, ನ್ಯಾಯಧೀಶರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ತಕ್ಷಣವೇ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ.

ಘಟನೆಗೆ ಪ್ರತಿಕ್ರಿಯಿಸಿರುವ ವಿಮರ್ಶಕ ಕೇಶವ ಮಳಗಿ “ಭಾರತ ದೇಶ ಅಥವ ಇಂಡಿಯನ್‌ ನೇಶನ್‌ ಎನ್ನುವುದು ಎಷ್ಟೇ ಅಮೂರ್ತ ಕಲ್ಪನೆಯಾದರೂ ಯಾವುದೇ ರಾಜಕೀಯ ಪಕ್ಷದ ಗುತ್ತಿಗೆಯಲ್ಲ. ಇಲ್ಲಿ, ಗ್ರಾಮ ಪಂಚಾಯಿತಿ ಸದಸ್ಯ, ಚುನಾಯಿತ ಪ್ರಧಾನಿ, ಪಕ್ಷಗಳ ಒಮ್ಮತದಿಂದ ಆಯ್ಕೆಯಾಗುವ ರಾಷ್ಟ್ರಪತಿ, ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಮತ್ತು ಅತಿ ಸಾಮಾನ್ಯ ಹೀಗೆ ಎಲ್ಲರಿಗೂ ಒಂದೇ ಸಂವಿಧಾನ, ಕಾನೂನು, ನ್ಯಾಯವ್ಯವಸ್ಥೆ. ನಾವು ಯಾವುದೇ ಜಾತಿ, ಲಿಂಗ, ಕುಲಮತ, ಬುಡಕಟ್ಟು, ಲೈಂಗಿಕ ಆಯ್ಕೆ-ಅಪೇಕ್ಷೆಗಳಿಗೆ ಸೇರಿದವರಾದರು ಅಂತಿಮವಾಗಿ ಒಂದೇ ಸಂವಿಧಾನವನ್ನು ಒಪ್ಪಿಕೊಂಡು ಬದುಕಲು ಆಯ್ಕೆ ಮಾಡಿಕೊಂಡ ದೇಶಕ್ಕೆ ಸೇರಿದ್ದೇವೆ.

ಕಾನೂನು ವಿದ್ಯಾಭ್ಯಾಸ ಮಾಡಿ, ಅರ್ಹತೆಯ ಪರೀಕ್ಷೆ ಬರೆದು ಈ ಹುದ್ದೆಗೆ ಬಂದ ರಾಯಚೂರಿನ ನ್ಯಾಯಾಧೀಶರು ಈ ಸಂವೇದನೆ-ಸೂಕ್ಷ್ಮತೆ ಹೊಂದಿಲ್ಲವೆಂದರೆ ಅಂಥವರು ಆ ಹುದ್ದೆಯಲ್ಲಿ ಮುಂದುವರೆಯಲು ಅನರ್ಹರು. ಸರ್ಕಾರ ಅವರನ್ನು ಕೂಡಲೇ ಕೆಲಸದಿಂದ ಬಿಡುಗಡೆ ಮಾಡಬೇಕು. ಮಾತ್ರವಲ್ಲ, ಧ್ವಜಾರೋಹಣೆಯನ್ನು ನಿರ್ದಿಷ್ಟ ಕಾರಣಕ್ಕೆ ನಿರಾಕರಿಸಿದ್ದರೆ ಅವರ ಮೇಲೆ “ಸಂವಿಧಾನ ನಿಂದನೆ” ನಿಯಮಾವಳಿ ಪ್ರಕಾರ ಪ್ರಕರಣ ದಾಖಲಿಸಿ, ಬಂಧಿಸಬೇಕು. (ರಾಷ್ಟ್ರ ನಿಂದನೆ ಕಾನೂನು: 1971, ಆಕ್ಟ್‌ 69, 1971)” ಎಂದಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

ಹಿರಿಯ ವಕೀಲರಾದ ಸಿ.ಎಸ್.ದ್ವಾರಕನಾಥ್ ತಮ್ಮ ಫೇಸ್‌ಬುಕ್‌ನಲ್ಲಿ “ಸಂವಿಧಾನದ ಅವಧಿ ಮುಗಿಯುತ್ತಿದೆ’ ಎಂಬ ಚರ್ಚಾ ಸ್ವರ್ಧೆ ಏರ್ಪಡಿಸಿದ್ದ ಶಾಲೆ ಮತ್ತು ಅಂಬೇಡ್ಕರ್ ಫೋಟೋ ತೆಗಿಸಿದ ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಈ ಎರಡು ಪ್ರಕರಣಗಳ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ.

“ಸಂವಿಧಾನ ಮತ್ತು ಅಂಬೇಡ್ಕರ್ ರವರ ಕುರಿತು ಏನೆಲ್ಲಾ ಪೂರ್ವಾಗ್ರಹಗಳನ್ನು ಇಟ್ಟುಕೊಂಡ ಅನೇಕ ಮಂದಿ ಜಿಲ್ಲಾ ಮತ್ತು ಅಧೀನ ಕೋರ್ಟುಗಳಲ್ಲಿ ನ್ಯಾಯಾದೀಶರ ವೇಶದಲ್ಲಿದ್ದಾರೆ. ಇಂತವರು ನಮ್ಮ ಹೈಕೋರ್ಟು, ಸುಪ್ರೀಂ ಕೋರ್ಟುಗಳಲ್ಲೂ ಇದ್ದಾರೆ! ಇದರ ಬಗ್ಗೆ ಅನುಮಾನವೇ ಇಲ್ಲ! ನನಗೆ ಆತಂಕವಿರುವುದು ಇಂತಹ ಪೂರ್ವಾಗ್ರಹ ಇಟ್ಟುಕೊಂಡ ನ್ಯಾಯಾದೀಶರಿಂದ ಎಂತಹ ತೀರ್ಪುಗಳನ್ನು ಈ ನಾಡಿನ ಜನ ನಿರೀಕ್ಷಿಸಬಹುದು ಎನ್ನುವುದು..?  ಡಾ.ಅಂಬೇಡ್ಕರ್ ರವರು ಈ ದೇಶದ ಸಂವಿಧಾನ ಬರೆದವರು, ಗಣರಾಜ್ಯೋತ್ಸವದ ದಿನ ಎಂದರೆ ಸಂವಿಧಾನದ ಪ್ರಕಾರ ಈ ದೇಶವನ್ನು ಗಣರಾಜ್ಯವನ್ನಾಗಿ ಪರಿಗಣಿಸಿದ ದಿನ. ಇಂತಹ ದಿನದಂದು ಸಂವಿಧಾನ ರಚಿಸಿದ ಅಂಬೇಡ್ಕರ್ ರವರಲ್ಲದೆ ಇನ್ಯಾರ ಚಿತ್ರವನ್ನು ಇಟ್ಟು ಗಣರಾಜ್ಯೋತ್ಸವ ವನ್ನು ಆಚರಿಸಬೇಕು? ಎಂಬ ಕಾಮನ್ ಸೆನ್ಸ್ ಪ್ರಶ್ನೆಯನ್ನು ಹಾಕಿಕೊಂಡಿದ್ದರೂ ಈ ನ್ಯಾಯಾದೀಶನಿಗೆ ಉತ್ತರ ಸಿಗುತಿತ್ತು‌? ಅಂಬೇಡ್ಕರ್ ಅಸ್ಪೃಶ್ಯ ರಾಗಿದ್ದೇ ಕಾರಣ, ಈ so called ಶೂದ್ರ ಜಾತಿಗಳಿಗೂ ಜಾತಿ ಪ್ರಜ್ಞೆ ಜಾಗೃತವಾಗಿಬಿಡುತ್ತೆ. ಈ ಕ್ಯಾನ್ಸರ್ ಇವರ ತಲೆಯಲ್ಲಿರುವವರೆಗೂ ಇವರಿಗೆ ಉಳಿಗಾಲವಿಲ್ಲ!” ಎಂದಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

ಹಿರಿಯ ಸಾಹಿತಿ, ಸಂಶೋಧಕ ಪ್ರೊ. ರಹಮತ್ ತರೀಕೆರೆ ಅವರು “ಬಾಬಾಸಾಹೇಬರು ರಚಿಸಿದ ಸಂವಿಧಾನದಡಿಯಲ್ಲಿ, ನ್ಯಾಯದಾನ ಮಾಡುವ ಮತ್ತು ಅಧಿಕಾರ ನಿರ್ವಹಿಸುವ ಸಾರ್ವಜನಿಕ ಜಾಗೆಗಳಲ್ಲಿ, ದಲಿತರನ್ನು‌ ಮಹಿಳೆಯರನ್ನು ಮುಸ್ಲಿಮರನ್ನು ಬುಡಕಟ್ಟುಗಳನ್ನು ಕುರಿತು ಹೆಪ್ಪುಗೊಂಡಿರುವ ಘೋರ ಅಸಹನೆಯ ಒಂದು ಚಿಕ್ಕ ಪ್ರತಿನಿಧಿ ರಾಯಚೂರಿನ ಸದರಿ ಮಾನ್ಯ ನ್ಯಾಯಾಧೀಶರು. ನ್ಯಾಯಾಲಯ ಕ್ಷೇತ್ರದಲ್ಲಿ ಢಾಳಾಗಿ ನೆಲೆಗೊಂಡಿರುವ ಸಾಮಾಜಿಕ-ಧಾರ್ಮಿಕ ದ್ವೇಷಭಾವದ ಬಗ್ಗೆ ನನ್ನ ವಕೀಲ ಮಿತ್ರರ ಅನುಭವಗಳನ್ನು ಕೇಳಿರುವೆ. ನ್ಯಾಯಾಧೀಶರಾಗಿದ್ದ ಕೋಚೆಯವರೂ ಇಂತಹ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದರು. ಗಾಬರಿಯಾಗುತ್ತದೆ. ದುಗುಡವಾಗುತ್ತದೆ. ಅಂಬೇಡ್ಕರ್ ಅವರು “ಸಾಮಾಜಿಕ ಆರ್ಥಿಕ ಅಸಮಾನತೆ ಇರುವ ಸಮಾಜದಲ್ಲಿ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಇರುವುದಿಲ್ಲ” ಎಂದಿದ್ದು ಇದಕ್ಕಾಗಿಯೇ” ಎಂದು ಆತಂಖ ಹಂಚಿಕೊಂಡಿದ್ದಾರೆ.

ಚಿಂತಕ, ಪ್ರಾಧ್ಯಾಪಕ ಕೆಎಲ್‌ ಚಂದ್ರಶೇಖರ್‌ ಐಜೂರು, ತಮ್ಮ ಫೇಸ್‌ಬುಕ್‌ನಲ್ಲಿ ಸರ್ಕಾರಿ ಆದೇಶದ ಪ್ರತಿ ಹಂಚಿಕೊಂಡಿದ್ದು, ನ್ಯಾಯಾಧೀಶರ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

 

ಲೇಖಕ, ಪತ್ರಕರ್ತ ಬಿಎಂ ಬಶೀರ್‌ ಅವರು, ‘‘ಯಾವಾಗ ಈ ದೇಶದ ಹೈಕೋರ್ಟ್ ಮುಂದೆ ಮನುವಿನ ಪ್ರತಿಮೆ ಸ್ಥಾಪನೆಯಾಗಲು ಜನರು ಮೌನ ಸಮ್ಮತಿಯನ್ನು ಕೊಟ್ಟರೋ ಆಗಲೇ ಅಂಬೇಡ್ಕರ್ ಬದಿಗೆ ಸರಿದರು. ರಾಜಸ್ತಾನದ ಹೈಕೋರ್ಟ್ ಮುಂದೆ ಮನುವಿನ ಪ್ರತಿಮೆ ಬಟಾ ಬಯಲಲ್ಲಿ ನಿಂತು ಈ ದೇಶದ ಸಂವಿಧಾನಕ್ಕೆ ಪ್ರತಿ ದಿನ ಸವಾಲು ಹಾಕುತ್ತಿರುವಾಗ, ನಮಗೇನೂ ಅನ್ನಿಸುವುದಿಲ್ಲ. ನೆನಪಿಡಿ ಈ ಪ್ರತಿಮೆ ನಿಲ್ಲಿಸಲು ಅನುಮತಿ ನೀಡಿದವರು ನ್ಯಾಯಾಧೀಶರೇ. ಹೀಗಿರುವಾಗ ನ್ಯಾಯಾಧೀಶನೊಬ್ಬ ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡುವುದಿಲ್ಲ ಎನ್ನುವುದರಲ್ಲಿ ಅಚ್ಚರಿ ಏನೂ ಇಲ್ಲ ಎಂದಿದ್ದಾರೆ.


ಇದನ್ನೂ ಓದಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Some peoples trying to touch….. And then it gets embarrassed asking sorry……
    But we must think that once day comes next night should also be circulated…… Anyone can’t close the eyes of Almighty God.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...