Homeಕರ್ನಾಟಕರಾಯಚೂರು: ಡಾ. ಅಂಬೇಡ್ಕರ್‌ರವರಿಗೆ ಅಗೌರವ ತೋರಿದ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಆಗ್ರಹ

ರಾಯಚೂರು: ಡಾ. ಅಂಬೇಡ್ಕರ್‌ರವರಿಗೆ ಅಗೌರವ ತೋರಿದ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಆಗ್ರಹ

’ಅಂಬೇಡ್ಕರ್‌, ಸಂವಿಧಾನದ ಬಗ್ಗೆ ಪೂರ್ವಾಗ್ರಹಗಳನ್ನಿಟ್ಟುಕೊಂಡ ಅನೇಕ ಮಂದಿ ಜಿಲ್ಲಾ ಮತ್ತು ಅಧೀನ ಕೋರ್ಟುಗಳಲ್ಲಿ ನ್ಯಾಯಾಧೀಶರ ವೇಶದಲ್ಲಿದ್ದಾರೆ’: ಸಿ.ಎಸ್.ದ್ವಾರಕನಾಥ್

- Advertisement -
- Advertisement -

ರಾಯಚೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಗಣರಾಜ್ಯೋತ್ಸವ ವೇಳೆ ಇರಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋ ತೆರವುಗೊಳಿಸಿ, ಧ್ವಜಾರೋಹಣ ನಡೆಸಿರುವ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ನಾಡಿನ ಚಿಂತಕರು, ಸಾಹಿತಿಗಳು, ವಕೀಲರು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಘಟನೆಯನ್ನು ಖಂಡಿಸಿ, ನ್ಯಾಯಧೀಶರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ತಕ್ಷಣವೇ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ.

ಘಟನೆಗೆ ಪ್ರತಿಕ್ರಿಯಿಸಿರುವ ವಿಮರ್ಶಕ ಕೇಶವ ಮಳಗಿ “ಭಾರತ ದೇಶ ಅಥವ ಇಂಡಿಯನ್‌ ನೇಶನ್‌ ಎನ್ನುವುದು ಎಷ್ಟೇ ಅಮೂರ್ತ ಕಲ್ಪನೆಯಾದರೂ ಯಾವುದೇ ರಾಜಕೀಯ ಪಕ್ಷದ ಗುತ್ತಿಗೆಯಲ್ಲ. ಇಲ್ಲಿ, ಗ್ರಾಮ ಪಂಚಾಯಿತಿ ಸದಸ್ಯ, ಚುನಾಯಿತ ಪ್ರಧಾನಿ, ಪಕ್ಷಗಳ ಒಮ್ಮತದಿಂದ ಆಯ್ಕೆಯಾಗುವ ರಾಷ್ಟ್ರಪತಿ, ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಮತ್ತು ಅತಿ ಸಾಮಾನ್ಯ ಹೀಗೆ ಎಲ್ಲರಿಗೂ ಒಂದೇ ಸಂವಿಧಾನ, ಕಾನೂನು, ನ್ಯಾಯವ್ಯವಸ್ಥೆ. ನಾವು ಯಾವುದೇ ಜಾತಿ, ಲಿಂಗ, ಕುಲಮತ, ಬುಡಕಟ್ಟು, ಲೈಂಗಿಕ ಆಯ್ಕೆ-ಅಪೇಕ್ಷೆಗಳಿಗೆ ಸೇರಿದವರಾದರು ಅಂತಿಮವಾಗಿ ಒಂದೇ ಸಂವಿಧಾನವನ್ನು ಒಪ್ಪಿಕೊಂಡು ಬದುಕಲು ಆಯ್ಕೆ ಮಾಡಿಕೊಂಡ ದೇಶಕ್ಕೆ ಸೇರಿದ್ದೇವೆ.

ಕಾನೂನು ವಿದ್ಯಾಭ್ಯಾಸ ಮಾಡಿ, ಅರ್ಹತೆಯ ಪರೀಕ್ಷೆ ಬರೆದು ಈ ಹುದ್ದೆಗೆ ಬಂದ ರಾಯಚೂರಿನ ನ್ಯಾಯಾಧೀಶರು ಈ ಸಂವೇದನೆ-ಸೂಕ್ಷ್ಮತೆ ಹೊಂದಿಲ್ಲವೆಂದರೆ ಅಂಥವರು ಆ ಹುದ್ದೆಯಲ್ಲಿ ಮುಂದುವರೆಯಲು ಅನರ್ಹರು. ಸರ್ಕಾರ ಅವರನ್ನು ಕೂಡಲೇ ಕೆಲಸದಿಂದ ಬಿಡುಗಡೆ ಮಾಡಬೇಕು. ಮಾತ್ರವಲ್ಲ, ಧ್ವಜಾರೋಹಣೆಯನ್ನು ನಿರ್ದಿಷ್ಟ ಕಾರಣಕ್ಕೆ ನಿರಾಕರಿಸಿದ್ದರೆ ಅವರ ಮೇಲೆ “ಸಂವಿಧಾನ ನಿಂದನೆ” ನಿಯಮಾವಳಿ ಪ್ರಕಾರ ಪ್ರಕರಣ ದಾಖಲಿಸಿ, ಬಂಧಿಸಬೇಕು. (ರಾಷ್ಟ್ರ ನಿಂದನೆ ಕಾನೂನು: 1971, ಆಕ್ಟ್‌ 69, 1971)” ಎಂದಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

ಹಿರಿಯ ವಕೀಲರಾದ ಸಿ.ಎಸ್.ದ್ವಾರಕನಾಥ್ ತಮ್ಮ ಫೇಸ್‌ಬುಕ್‌ನಲ್ಲಿ “ಸಂವಿಧಾನದ ಅವಧಿ ಮುಗಿಯುತ್ತಿದೆ’ ಎಂಬ ಚರ್ಚಾ ಸ್ವರ್ಧೆ ಏರ್ಪಡಿಸಿದ್ದ ಶಾಲೆ ಮತ್ತು ಅಂಬೇಡ್ಕರ್ ಫೋಟೋ ತೆಗಿಸಿದ ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಈ ಎರಡು ಪ್ರಕರಣಗಳ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ.

“ಸಂವಿಧಾನ ಮತ್ತು ಅಂಬೇಡ್ಕರ್ ರವರ ಕುರಿತು ಏನೆಲ್ಲಾ ಪೂರ್ವಾಗ್ರಹಗಳನ್ನು ಇಟ್ಟುಕೊಂಡ ಅನೇಕ ಮಂದಿ ಜಿಲ್ಲಾ ಮತ್ತು ಅಧೀನ ಕೋರ್ಟುಗಳಲ್ಲಿ ನ್ಯಾಯಾದೀಶರ ವೇಶದಲ್ಲಿದ್ದಾರೆ. ಇಂತವರು ನಮ್ಮ ಹೈಕೋರ್ಟು, ಸುಪ್ರೀಂ ಕೋರ್ಟುಗಳಲ್ಲೂ ಇದ್ದಾರೆ! ಇದರ ಬಗ್ಗೆ ಅನುಮಾನವೇ ಇಲ್ಲ! ನನಗೆ ಆತಂಕವಿರುವುದು ಇಂತಹ ಪೂರ್ವಾಗ್ರಹ ಇಟ್ಟುಕೊಂಡ ನ್ಯಾಯಾದೀಶರಿಂದ ಎಂತಹ ತೀರ್ಪುಗಳನ್ನು ಈ ನಾಡಿನ ಜನ ನಿರೀಕ್ಷಿಸಬಹುದು ಎನ್ನುವುದು..?  ಡಾ.ಅಂಬೇಡ್ಕರ್ ರವರು ಈ ದೇಶದ ಸಂವಿಧಾನ ಬರೆದವರು, ಗಣರಾಜ್ಯೋತ್ಸವದ ದಿನ ಎಂದರೆ ಸಂವಿಧಾನದ ಪ್ರಕಾರ ಈ ದೇಶವನ್ನು ಗಣರಾಜ್ಯವನ್ನಾಗಿ ಪರಿಗಣಿಸಿದ ದಿನ. ಇಂತಹ ದಿನದಂದು ಸಂವಿಧಾನ ರಚಿಸಿದ ಅಂಬೇಡ್ಕರ್ ರವರಲ್ಲದೆ ಇನ್ಯಾರ ಚಿತ್ರವನ್ನು ಇಟ್ಟು ಗಣರಾಜ್ಯೋತ್ಸವ ವನ್ನು ಆಚರಿಸಬೇಕು? ಎಂಬ ಕಾಮನ್ ಸೆನ್ಸ್ ಪ್ರಶ್ನೆಯನ್ನು ಹಾಕಿಕೊಂಡಿದ್ದರೂ ಈ ನ್ಯಾಯಾದೀಶನಿಗೆ ಉತ್ತರ ಸಿಗುತಿತ್ತು‌? ಅಂಬೇಡ್ಕರ್ ಅಸ್ಪೃಶ್ಯ ರಾಗಿದ್ದೇ ಕಾರಣ, ಈ so called ಶೂದ್ರ ಜಾತಿಗಳಿಗೂ ಜಾತಿ ಪ್ರಜ್ಞೆ ಜಾಗೃತವಾಗಿಬಿಡುತ್ತೆ. ಈ ಕ್ಯಾನ್ಸರ್ ಇವರ ತಲೆಯಲ್ಲಿರುವವರೆಗೂ ಇವರಿಗೆ ಉಳಿಗಾಲವಿಲ್ಲ!” ಎಂದಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

ಹಿರಿಯ ಸಾಹಿತಿ, ಸಂಶೋಧಕ ಪ್ರೊ. ರಹಮತ್ ತರೀಕೆರೆ ಅವರು “ಬಾಬಾಸಾಹೇಬರು ರಚಿಸಿದ ಸಂವಿಧಾನದಡಿಯಲ್ಲಿ, ನ್ಯಾಯದಾನ ಮಾಡುವ ಮತ್ತು ಅಧಿಕಾರ ನಿರ್ವಹಿಸುವ ಸಾರ್ವಜನಿಕ ಜಾಗೆಗಳಲ್ಲಿ, ದಲಿತರನ್ನು‌ ಮಹಿಳೆಯರನ್ನು ಮುಸ್ಲಿಮರನ್ನು ಬುಡಕಟ್ಟುಗಳನ್ನು ಕುರಿತು ಹೆಪ್ಪುಗೊಂಡಿರುವ ಘೋರ ಅಸಹನೆಯ ಒಂದು ಚಿಕ್ಕ ಪ್ರತಿನಿಧಿ ರಾಯಚೂರಿನ ಸದರಿ ಮಾನ್ಯ ನ್ಯಾಯಾಧೀಶರು. ನ್ಯಾಯಾಲಯ ಕ್ಷೇತ್ರದಲ್ಲಿ ಢಾಳಾಗಿ ನೆಲೆಗೊಂಡಿರುವ ಸಾಮಾಜಿಕ-ಧಾರ್ಮಿಕ ದ್ವೇಷಭಾವದ ಬಗ್ಗೆ ನನ್ನ ವಕೀಲ ಮಿತ್ರರ ಅನುಭವಗಳನ್ನು ಕೇಳಿರುವೆ. ನ್ಯಾಯಾಧೀಶರಾಗಿದ್ದ ಕೋಚೆಯವರೂ ಇಂತಹ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದರು. ಗಾಬರಿಯಾಗುತ್ತದೆ. ದುಗುಡವಾಗುತ್ತದೆ. ಅಂಬೇಡ್ಕರ್ ಅವರು “ಸಾಮಾಜಿಕ ಆರ್ಥಿಕ ಅಸಮಾನತೆ ಇರುವ ಸಮಾಜದಲ್ಲಿ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಇರುವುದಿಲ್ಲ” ಎಂದಿದ್ದು ಇದಕ್ಕಾಗಿಯೇ” ಎಂದು ಆತಂಖ ಹಂಚಿಕೊಂಡಿದ್ದಾರೆ.

ಚಿಂತಕ, ಪ್ರಾಧ್ಯಾಪಕ ಕೆಎಲ್‌ ಚಂದ್ರಶೇಖರ್‌ ಐಜೂರು, ತಮ್ಮ ಫೇಸ್‌ಬುಕ್‌ನಲ್ಲಿ ಸರ್ಕಾರಿ ಆದೇಶದ ಪ್ರತಿ ಹಂಚಿಕೊಂಡಿದ್ದು, ನ್ಯಾಯಾಧೀಶರ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

 

ಲೇಖಕ, ಪತ್ರಕರ್ತ ಬಿಎಂ ಬಶೀರ್‌ ಅವರು, ‘‘ಯಾವಾಗ ಈ ದೇಶದ ಹೈಕೋರ್ಟ್ ಮುಂದೆ ಮನುವಿನ ಪ್ರತಿಮೆ ಸ್ಥಾಪನೆಯಾಗಲು ಜನರು ಮೌನ ಸಮ್ಮತಿಯನ್ನು ಕೊಟ್ಟರೋ ಆಗಲೇ ಅಂಬೇಡ್ಕರ್ ಬದಿಗೆ ಸರಿದರು. ರಾಜಸ್ತಾನದ ಹೈಕೋರ್ಟ್ ಮುಂದೆ ಮನುವಿನ ಪ್ರತಿಮೆ ಬಟಾ ಬಯಲಲ್ಲಿ ನಿಂತು ಈ ದೇಶದ ಸಂವಿಧಾನಕ್ಕೆ ಪ್ರತಿ ದಿನ ಸವಾಲು ಹಾಕುತ್ತಿರುವಾಗ, ನಮಗೇನೂ ಅನ್ನಿಸುವುದಿಲ್ಲ. ನೆನಪಿಡಿ ಈ ಪ್ರತಿಮೆ ನಿಲ್ಲಿಸಲು ಅನುಮತಿ ನೀಡಿದವರು ನ್ಯಾಯಾಧೀಶರೇ. ಹೀಗಿರುವಾಗ ನ್ಯಾಯಾಧೀಶನೊಬ್ಬ ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡುವುದಿಲ್ಲ ಎನ್ನುವುದರಲ್ಲಿ ಅಚ್ಚರಿ ಏನೂ ಇಲ್ಲ ಎಂದಿದ್ದಾರೆ.


ಇದನ್ನೂ ಓದಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Some peoples trying to touch….. And then it gets embarrassed asking sorry……
    But we must think that once day comes next night should also be circulated…… Anyone can’t close the eyes of Almighty God.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...