Homeಕರ್ನಾಟಕರಾಯಚೂರು: ಡಾ. ಅಂಬೇಡ್ಕರ್‌ರವರಿಗೆ ಅಗೌರವ ತೋರಿದ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಆಗ್ರಹ

ರಾಯಚೂರು: ಡಾ. ಅಂಬೇಡ್ಕರ್‌ರವರಿಗೆ ಅಗೌರವ ತೋರಿದ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಆಗ್ರಹ

’ಅಂಬೇಡ್ಕರ್‌, ಸಂವಿಧಾನದ ಬಗ್ಗೆ ಪೂರ್ವಾಗ್ರಹಗಳನ್ನಿಟ್ಟುಕೊಂಡ ಅನೇಕ ಮಂದಿ ಜಿಲ್ಲಾ ಮತ್ತು ಅಧೀನ ಕೋರ್ಟುಗಳಲ್ಲಿ ನ್ಯಾಯಾಧೀಶರ ವೇಶದಲ್ಲಿದ್ದಾರೆ’: ಸಿ.ಎಸ್.ದ್ವಾರಕನಾಥ್

- Advertisement -
- Advertisement -

ರಾಯಚೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ಗಣರಾಜ್ಯೋತ್ಸವ ವೇಳೆ ಇರಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಫೋಟೋ ತೆರವುಗೊಳಿಸಿ, ಧ್ವಜಾರೋಹಣ ನಡೆಸಿರುವ ಪ್ರಕರಣ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.

ನಾಡಿನ ಚಿಂತಕರು, ಸಾಹಿತಿಗಳು, ವಕೀಲರು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಘಟನೆಯನ್ನು ಖಂಡಿಸಿ, ನ್ಯಾಯಧೀಶರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ತಕ್ಷಣವೇ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ.

ಘಟನೆಗೆ ಪ್ರತಿಕ್ರಿಯಿಸಿರುವ ವಿಮರ್ಶಕ ಕೇಶವ ಮಳಗಿ “ಭಾರತ ದೇಶ ಅಥವ ಇಂಡಿಯನ್‌ ನೇಶನ್‌ ಎನ್ನುವುದು ಎಷ್ಟೇ ಅಮೂರ್ತ ಕಲ್ಪನೆಯಾದರೂ ಯಾವುದೇ ರಾಜಕೀಯ ಪಕ್ಷದ ಗುತ್ತಿಗೆಯಲ್ಲ. ಇಲ್ಲಿ, ಗ್ರಾಮ ಪಂಚಾಯಿತಿ ಸದಸ್ಯ, ಚುನಾಯಿತ ಪ್ರಧಾನಿ, ಪಕ್ಷಗಳ ಒಮ್ಮತದಿಂದ ಆಯ್ಕೆಯಾಗುವ ರಾಷ್ಟ್ರಪತಿ, ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಮತ್ತು ಅತಿ ಸಾಮಾನ್ಯ ಹೀಗೆ ಎಲ್ಲರಿಗೂ ಒಂದೇ ಸಂವಿಧಾನ, ಕಾನೂನು, ನ್ಯಾಯವ್ಯವಸ್ಥೆ. ನಾವು ಯಾವುದೇ ಜಾತಿ, ಲಿಂಗ, ಕುಲಮತ, ಬುಡಕಟ್ಟು, ಲೈಂಗಿಕ ಆಯ್ಕೆ-ಅಪೇಕ್ಷೆಗಳಿಗೆ ಸೇರಿದವರಾದರು ಅಂತಿಮವಾಗಿ ಒಂದೇ ಸಂವಿಧಾನವನ್ನು ಒಪ್ಪಿಕೊಂಡು ಬದುಕಲು ಆಯ್ಕೆ ಮಾಡಿಕೊಂಡ ದೇಶಕ್ಕೆ ಸೇರಿದ್ದೇವೆ.

ಕಾನೂನು ವಿದ್ಯಾಭ್ಯಾಸ ಮಾಡಿ, ಅರ್ಹತೆಯ ಪರೀಕ್ಷೆ ಬರೆದು ಈ ಹುದ್ದೆಗೆ ಬಂದ ರಾಯಚೂರಿನ ನ್ಯಾಯಾಧೀಶರು ಈ ಸಂವೇದನೆ-ಸೂಕ್ಷ್ಮತೆ ಹೊಂದಿಲ್ಲವೆಂದರೆ ಅಂಥವರು ಆ ಹುದ್ದೆಯಲ್ಲಿ ಮುಂದುವರೆಯಲು ಅನರ್ಹರು. ಸರ್ಕಾರ ಅವರನ್ನು ಕೂಡಲೇ ಕೆಲಸದಿಂದ ಬಿಡುಗಡೆ ಮಾಡಬೇಕು. ಮಾತ್ರವಲ್ಲ, ಧ್ವಜಾರೋಹಣೆಯನ್ನು ನಿರ್ದಿಷ್ಟ ಕಾರಣಕ್ಕೆ ನಿರಾಕರಿಸಿದ್ದರೆ ಅವರ ಮೇಲೆ “ಸಂವಿಧಾನ ನಿಂದನೆ” ನಿಯಮಾವಳಿ ಪ್ರಕಾರ ಪ್ರಕರಣ ದಾಖಲಿಸಿ, ಬಂಧಿಸಬೇಕು. (ರಾಷ್ಟ್ರ ನಿಂದನೆ ಕಾನೂನು: 1971, ಆಕ್ಟ್‌ 69, 1971)” ಎಂದಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡಲ್ಲ: ರಾಯಚೂರು ಜಿಲ್ಲಾ ನ್ಯಾಯಾಧೀಶರ ನಡೆಗೆ ತೀವ್ರ ಆಕ್ರೋಶ

ಹಿರಿಯ ವಕೀಲರಾದ ಸಿ.ಎಸ್.ದ್ವಾರಕನಾಥ್ ತಮ್ಮ ಫೇಸ್‌ಬುಕ್‌ನಲ್ಲಿ “ಸಂವಿಧಾನದ ಅವಧಿ ಮುಗಿಯುತ್ತಿದೆ’ ಎಂಬ ಚರ್ಚಾ ಸ್ವರ್ಧೆ ಏರ್ಪಡಿಸಿದ್ದ ಶಾಲೆ ಮತ್ತು ಅಂಬೇಡ್ಕರ್ ಫೋಟೋ ತೆಗಿಸಿದ ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಈ ಎರಡು ಪ್ರಕರಣಗಳ ಕುರಿತು ಅಭಿಪ್ರಾಯ ಹಂಚಿಕೊಂಡಿದ್ದಾರೆ.

“ಸಂವಿಧಾನ ಮತ್ತು ಅಂಬೇಡ್ಕರ್ ರವರ ಕುರಿತು ಏನೆಲ್ಲಾ ಪೂರ್ವಾಗ್ರಹಗಳನ್ನು ಇಟ್ಟುಕೊಂಡ ಅನೇಕ ಮಂದಿ ಜಿಲ್ಲಾ ಮತ್ತು ಅಧೀನ ಕೋರ್ಟುಗಳಲ್ಲಿ ನ್ಯಾಯಾದೀಶರ ವೇಶದಲ್ಲಿದ್ದಾರೆ. ಇಂತವರು ನಮ್ಮ ಹೈಕೋರ್ಟು, ಸುಪ್ರೀಂ ಕೋರ್ಟುಗಳಲ್ಲೂ ಇದ್ದಾರೆ! ಇದರ ಬಗ್ಗೆ ಅನುಮಾನವೇ ಇಲ್ಲ! ನನಗೆ ಆತಂಕವಿರುವುದು ಇಂತಹ ಪೂರ್ವಾಗ್ರಹ ಇಟ್ಟುಕೊಂಡ ನ್ಯಾಯಾದೀಶರಿಂದ ಎಂತಹ ತೀರ್ಪುಗಳನ್ನು ಈ ನಾಡಿನ ಜನ ನಿರೀಕ್ಷಿಸಬಹುದು ಎನ್ನುವುದು..?  ಡಾ.ಅಂಬೇಡ್ಕರ್ ರವರು ಈ ದೇಶದ ಸಂವಿಧಾನ ಬರೆದವರು, ಗಣರಾಜ್ಯೋತ್ಸವದ ದಿನ ಎಂದರೆ ಸಂವಿಧಾನದ ಪ್ರಕಾರ ಈ ದೇಶವನ್ನು ಗಣರಾಜ್ಯವನ್ನಾಗಿ ಪರಿಗಣಿಸಿದ ದಿನ. ಇಂತಹ ದಿನದಂದು ಸಂವಿಧಾನ ರಚಿಸಿದ ಅಂಬೇಡ್ಕರ್ ರವರಲ್ಲದೆ ಇನ್ಯಾರ ಚಿತ್ರವನ್ನು ಇಟ್ಟು ಗಣರಾಜ್ಯೋತ್ಸವ ವನ್ನು ಆಚರಿಸಬೇಕು? ಎಂಬ ಕಾಮನ್ ಸೆನ್ಸ್ ಪ್ರಶ್ನೆಯನ್ನು ಹಾಕಿಕೊಂಡಿದ್ದರೂ ಈ ನ್ಯಾಯಾದೀಶನಿಗೆ ಉತ್ತರ ಸಿಗುತಿತ್ತು‌? ಅಂಬೇಡ್ಕರ್ ಅಸ್ಪೃಶ್ಯ ರಾಗಿದ್ದೇ ಕಾರಣ, ಈ so called ಶೂದ್ರ ಜಾತಿಗಳಿಗೂ ಜಾತಿ ಪ್ರಜ್ಞೆ ಜಾಗೃತವಾಗಿಬಿಡುತ್ತೆ. ಈ ಕ್ಯಾನ್ಸರ್ ಇವರ ತಲೆಯಲ್ಲಿರುವವರೆಗೂ ಇವರಿಗೆ ಉಳಿಗಾಲವಿಲ್ಲ!” ಎಂದಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌ಗೆ ಅವಮಾನ ಘಟನೆ: ಶೋಷಿತರ ಬಗ್ಗೆ ಹೆಪ್ಪುಗೊಂಡಿರುವ ಅಸಹನೆಯ ಚಿಕ್ಕ ಪ್ರತಿನಿಧಿ ಈ ನ್ಯಾಯಾಧೀಶರು!

ಹಿರಿಯ ಸಾಹಿತಿ, ಸಂಶೋಧಕ ಪ್ರೊ. ರಹಮತ್ ತರೀಕೆರೆ ಅವರು “ಬಾಬಾಸಾಹೇಬರು ರಚಿಸಿದ ಸಂವಿಧಾನದಡಿಯಲ್ಲಿ, ನ್ಯಾಯದಾನ ಮಾಡುವ ಮತ್ತು ಅಧಿಕಾರ ನಿರ್ವಹಿಸುವ ಸಾರ್ವಜನಿಕ ಜಾಗೆಗಳಲ್ಲಿ, ದಲಿತರನ್ನು‌ ಮಹಿಳೆಯರನ್ನು ಮುಸ್ಲಿಮರನ್ನು ಬುಡಕಟ್ಟುಗಳನ್ನು ಕುರಿತು ಹೆಪ್ಪುಗೊಂಡಿರುವ ಘೋರ ಅಸಹನೆಯ ಒಂದು ಚಿಕ್ಕ ಪ್ರತಿನಿಧಿ ರಾಯಚೂರಿನ ಸದರಿ ಮಾನ್ಯ ನ್ಯಾಯಾಧೀಶರು. ನ್ಯಾಯಾಲಯ ಕ್ಷೇತ್ರದಲ್ಲಿ ಢಾಳಾಗಿ ನೆಲೆಗೊಂಡಿರುವ ಸಾಮಾಜಿಕ-ಧಾರ್ಮಿಕ ದ್ವೇಷಭಾವದ ಬಗ್ಗೆ ನನ್ನ ವಕೀಲ ಮಿತ್ರರ ಅನುಭವಗಳನ್ನು ಕೇಳಿರುವೆ. ನ್ಯಾಯಾಧೀಶರಾಗಿದ್ದ ಕೋಚೆಯವರೂ ಇಂತಹ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದರು. ಗಾಬರಿಯಾಗುತ್ತದೆ. ದುಗುಡವಾಗುತ್ತದೆ. ಅಂಬೇಡ್ಕರ್ ಅವರು “ಸಾಮಾಜಿಕ ಆರ್ಥಿಕ ಅಸಮಾನತೆ ಇರುವ ಸಮಾಜದಲ್ಲಿ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಇರುವುದಿಲ್ಲ” ಎಂದಿದ್ದು ಇದಕ್ಕಾಗಿಯೇ” ಎಂದು ಆತಂಖ ಹಂಚಿಕೊಂಡಿದ್ದಾರೆ.

ಚಿಂತಕ, ಪ್ರಾಧ್ಯಾಪಕ ಕೆಎಲ್‌ ಚಂದ್ರಶೇಖರ್‌ ಐಜೂರು, ತಮ್ಮ ಫೇಸ್‌ಬುಕ್‌ನಲ್ಲಿ ಸರ್ಕಾರಿ ಆದೇಶದ ಪ್ರತಿ ಹಂಚಿಕೊಂಡಿದ್ದು, ನ್ಯಾಯಾಧೀಶರ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

 

ಲೇಖಕ, ಪತ್ರಕರ್ತ ಬಿಎಂ ಬಶೀರ್‌ ಅವರು, ‘‘ಯಾವಾಗ ಈ ದೇಶದ ಹೈಕೋರ್ಟ್ ಮುಂದೆ ಮನುವಿನ ಪ್ರತಿಮೆ ಸ್ಥಾಪನೆಯಾಗಲು ಜನರು ಮೌನ ಸಮ್ಮತಿಯನ್ನು ಕೊಟ್ಟರೋ ಆಗಲೇ ಅಂಬೇಡ್ಕರ್ ಬದಿಗೆ ಸರಿದರು. ರಾಜಸ್ತಾನದ ಹೈಕೋರ್ಟ್ ಮುಂದೆ ಮನುವಿನ ಪ್ರತಿಮೆ ಬಟಾ ಬಯಲಲ್ಲಿ ನಿಂತು ಈ ದೇಶದ ಸಂವಿಧಾನಕ್ಕೆ ಪ್ರತಿ ದಿನ ಸವಾಲು ಹಾಕುತ್ತಿರುವಾಗ, ನಮಗೇನೂ ಅನ್ನಿಸುವುದಿಲ್ಲ. ನೆನಪಿಡಿ ಈ ಪ್ರತಿಮೆ ನಿಲ್ಲಿಸಲು ಅನುಮತಿ ನೀಡಿದವರು ನ್ಯಾಯಾಧೀಶರೇ. ಹೀಗಿರುವಾಗ ನ್ಯಾಯಾಧೀಶನೊಬ್ಬ ಅಂಬೇಡ್ಕರ್ ಫೋಟೋ ಇದ್ದರೆ ಧ್ವಜಾರೋಹಣ ಮಾಡುವುದಿಲ್ಲ ಎನ್ನುವುದರಲ್ಲಿ ಅಚ್ಚರಿ ಏನೂ ಇಲ್ಲ ಎಂದಿದ್ದಾರೆ.


ಇದನ್ನೂ ಓದಿ: ಕೋಮುವಾದಿಗಳು ಆಕ್ಟೀವ್ ಆಗಿರುವುದರಿಂದ ಇಂತಹ ಘಟನೆಗಳಾಗುತ್ತಿವೆ: ಜಸ್ಟೀಸ್ ದಾಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Some peoples trying to touch….. And then it gets embarrassed asking sorry……
    But we must think that once day comes next night should also be circulated…… Anyone can’t close the eyes of Almighty God.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....