Homeಕರ್ನಾಟಕಕರ್ನಾಟಕ ರಾಜ್ಯೋತ್ಸವ | ‘ಕನ್ನಡಕ್ಕಾಗಿ ನಾವು’ ಅಭಿಯಾನದ ಅಂಗವಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಕರ್ನಾಟಕ ರಾಜ್ಯೋತ್ಸವ | ‘ಕನ್ನಡಕ್ಕಾಗಿ ನಾವು’ ಅಭಿಯಾನದ ಅಂಗವಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

- Advertisement -
- Advertisement -

ಒಡೆದು ಚೂರು ಚೂರಾಗಿದ್ದ ಕರ್ನಾಕಟ ಮತ್ತೇ ಒಂದಾದ ದಿನ ನವೆಂಬರ್‌ 1. ವಿಶ್ವದಾದ್ಯಂತ ಇರುವ ಕರ್ನಾಟಕದವರು 66 ನೇ ‘ನಾಡಹಬ್ಬ’ವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡಾ ಒಂದು ವಾರ ಮುಂಚೆಯೇ ‘ನಾಡಹಬ್ಬ’ಕ್ಕೆ ಬೇಕಾದ ತಯಾರಿಯನ್ನು ಮಾಡಿದೆ. ಕರ್ನಾಟಕ ರಾಜ್ಯೋತ್ಸವ ಆಚರಣೆಯ ವಿಶೇಷ ಸಂದರ್ಭದಲ್ಲಿ “ಕನ್ನಡಕ್ಕಾಗಿ ನಾವು” ಅಭಿಯಾನದ ಭಾಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯುತ್ತಿದೆ.ಗೌರಿ ಮೀಡಿಯಾದ ಪುಸ್ತಕಗಳಿಗೆ ಇಲ್ಲಿ ಕ್ಲಿಕ್ ಮಾಡಿ.

ಕನ್ನಡ ಪುಸ್ತಕ ಪ್ರಾಧಿಕಾರ ಆಯೋಜಿಸಿರುವ ಮೇಳವು ಅಕ್ಟೋಬರ್ 29 ರಂದು ಆರಂಭವಾಗಿದ್ದು, ನವೆಂಬರ್ 02ರ ಸಂಜೆಯವರೆಗೂ ನಡೆಯಲಿದೆ. ಮೇಳದಲ್ಲಿ ಸಾಂಪ್ರದಾಯಿಕ ಉಡುಗೆ ತೊಡಿಗೆ, ದೇಸೀಯ ಆಹಾರ ಮೇಳ, ಚಿತ್ರಕಲೆ / ಶಿಲ್ಪಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದೆ. ವಿಶೇಷ ಅಭಿಯಾನದ ಭಾಗವಾಗಿ ಎಲ್ಲಾ ರೀತಿಯ ಪುಸ್ತಕಗಳನ್ನೂ 20% ರಿಯಾಯತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.

ಇದನ್ನೂ ಓದಿ: ಕನ್ನಡದ ಓದು ಕಟ್ಟಿಕೊಟ್ಟ ವೈವಿಧ್ಯತೆಯ, ಸಹನೆಯ, ಬಹುತ್ವದ ವಿವೇಕ

ಸುಮಾರು 60ಕ್ಕೂ ಹೆಚ್ಚು ಪುಸ್ತಕ ಮಳಿಗೆಗಳು, 15ಕ್ಕೂ ಹೆಚ್ಚು ಚಿತ್ರಕಲಾ, ಆಹಾರ ಮಳಿಗೆಗಳು ಪುಸ್ತಕ ಪ್ರೇಮಿಗಳು, ಕಲಾ ಪ್ರೇಮಿಗಳು ಹಾಗೂ ಗ್ರಾಹಕರನ್ನು ಸೆಳೆಯುತ್ತಿವೆ.

ಅಕ್ಟೋಬರ್ 29 ರಂದು ಆರಂಭವಾದ ಈ ಮೇಳವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್‌ ಕುಮಾರ್ ಅವರು ಉದ್ಘಾಟಿಸಬೇಕಿತ್ತು. ಆದರೆ, ಕನ್ನಡದ ಖ್ಯಾತ ನಟ ಪುನೀತ್‌ ಅವರ ಹಠಾತ್‌ ಅಗಲಿಕೆಯಿಂದ ಮೇಳವು ಉದ್ಘಾಟನೆಯೇ ಇಲ್ಲದೆ ಆರಂಭವಾಗಿದೆ. ಪುನೀತ್‌ ಅವರ ಅಗಲಿಕೆಯಿಂದ ಇಡೀ ರಾಜ್ಯವೇ ಶೋಕದಲ್ಲಿದ್ದರಿಂದಾಗಿ ಮೇಳವೂ ಗ್ರಾಹಕರಿಲ್ಲದೇ, ಸದ್ದು, ಸಡಗರವಿಲ್ಲದೇ ಸೊರಗಿದಂತಾಗಿತ್ತು.

ಆದರೆ, ಇಂದು ಕನ್ನಡ ರಾಜ್ಯೋತ್ಸವದ ದಿನದಂತೆ ಮೇಳವು ಕೊಂಚ ಕಳೆಯನ್ನು ಪಡೆದುಕೊಂಡಿದೆ. ಪುಸ್ತಕ ಪ್ರೇಮಿಗಳು, ಗ್ರಾಹಕರು ಮೇಳಕ್ಕೆ ಭೇಟಿ ನೀಡುತ್ತಿದ್ದಾರೆ. ಬೆಳಗ್ಗಿನಿಂದ ನಿಧಾನಗತಿಯಲ್ಲಿ ಗ್ರಾಹಕರು ರವೀಂದ್ರ ಕಲಾಕ್ಷೇತ್ರದ ಕಡೆಗೆ ಹೆಜ್ಜೆ ಇಡುತ್ತಿದ್ದು, ಮೇಳವು ಹಂತ ಹಂತವಾಗಿ ಮೇಳೈಸಲಾರಂಭಿಸುತ್ತಿದೆ.

ಇದನ್ನೂ ಓದಿ: 66ನೇ ಕನ್ನಡ ರಾಜ್ಯೋತ್ಸವ; ಹಿಂದೆಂದೂ ಕಾಣದ ದೆಹಲಿ ದಾಸ್ಯದ ಸುಳಿಯಲ್ಲಿ ಕರ್ನಾಟಕ!

ಬುದ್ದ, ಬಸವ, ಅಂಬೇಡ್ಕರ್, ಗಾಂಧಿ, ಕುವೆಂಪು, ಕಾರ್ಲ್‌ಮಾರ್ಕ್ಸ್‌, ಭಗತ್‌ಸಿಂಗ್, ಚೆಗುವೆರಾ, ಬೇಂದ್ರೆ ಸೇರಿದಂತೆ ಹಲವಾರು ಮಹನೀಯರ ಪುಸ್ತಕಗಳು ರಿಯಾಯತಿ ದರದಲ್ಲಿ ಮಾರಾಟವಾಗುತ್ತಿವೆ.

ಪುಸ್ತಕ ಮೇಳದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟಕ್ಕೆ ಇಟ್ಟಿರುವ ವಂಶಿ ಪ್ರಕಶನದ ಪ್ರಕಾಶ್‌, “ಪುನೀತ್‌ ಅವರ ಅಗಲಿಕೆಯಿಂದಾಗಿ ಗ್ರಾಹಕರು ಪುಸ್ತಕ ಮೇಳದ ಕಡೆಗೆ ಬಂದಿರಲಿಲ್ಲ. ಇಂದು ಗ್ರಾಹಕರು ಮಳಿಗೆಗಳತ್ತ ಮುಖ ಮಾಡಿದ್ದಾರೆ. ಎರಡು ದಿನಳಿಂದ ಗ್ರಾಹಕರಿಲ್ಲದೇ ಕಳೆಗುಂದಿದ್ದ ಮೇಳ, ಈಗ ಮೆರಗು ಪಡೆದುಕೊಳ್ಳುತ್ತಿದೆ” ಎಂದು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅಭಿನವ ಪ್ರಕಶನದ ರವಿ, “ಮೇಳವು ಉದ್ಘಾಟನೆಗೊಳ್ಳುವ ವೇಳೆಗೆ ಪುನೀತ್‌ ಅವರು ಕೊನೆಯುಸಿರೆಳೆದರು. ಅವರ ಸಾವಿನಿಂದಾಗಿ ಇಡೀ ಅಭಿಮಾನಿ ಬಳಗವೇ ಶೋಕದಲ್ಲಿ ಮುಳುಗಿತ್ತು. ನಾವೂ ಕೂಡ ಪುನೀತ್‌ ಅವರನ್ನು ಕಳೆದುಕೊಂಡ ದುಃಖದಲ್ಲಿದ್ದೆವು. ಹೀಗಾಗಿ, ಎಲ್ಲವೂ ಸ್ಥಬ್ದವಾಗಿತ್ತು. ಕಳೆದು ಎರಡು ದಿನಗಳಲ್ಲಿ ಯಾವುದೇ ವ್ಯಾಪಾರವೂ ಆಗಿಲ್ಲ. ಇದೀಗ ಗ್ರಾಹಕರು ಮಳಿಗೆಗಳಿಗೆ ಬರುತ್ತಿದ್ದಾರೆ. ನಾಳೆಯವರೆಗೂ ಮಳಿಗೆಗಳು ತೆರೆದಿರಲಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡವೆಂದರೆ ನಮ್ಮ ದೇವ ಭಾಷೆ; ‘ಅಪ್ಪು’ ನೆನೆದು ಎಚ್‌ಡಿಕೆ ಸರಣಿ ಟ್ವೀಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...