Homeಕರ್ನಾಟಕಕರ್ನಾಟಕ ರಾಜ್ಯೋತ್ಸವ | ‘ಕನ್ನಡಕ್ಕಾಗಿ ನಾವು’ ಅಭಿಯಾನದ ಅಂಗವಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಕರ್ನಾಟಕ ರಾಜ್ಯೋತ್ಸವ | ‘ಕನ್ನಡಕ್ಕಾಗಿ ನಾವು’ ಅಭಿಯಾನದ ಅಂಗವಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

- Advertisement -
- Advertisement -

ಒಡೆದು ಚೂರು ಚೂರಾಗಿದ್ದ ಕರ್ನಾಕಟ ಮತ್ತೇ ಒಂದಾದ ದಿನ ನವೆಂಬರ್‌ 1. ವಿಶ್ವದಾದ್ಯಂತ ಇರುವ ಕರ್ನಾಟಕದವರು 66 ನೇ ‘ನಾಡಹಬ್ಬ’ವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡಾ ಒಂದು ವಾರ ಮುಂಚೆಯೇ ‘ನಾಡಹಬ್ಬ’ಕ್ಕೆ ಬೇಕಾದ ತಯಾರಿಯನ್ನು ಮಾಡಿದೆ. ಕರ್ನಾಟಕ ರಾಜ್ಯೋತ್ಸವ ಆಚರಣೆಯ ವಿಶೇಷ ಸಂದರ್ಭದಲ್ಲಿ “ಕನ್ನಡಕ್ಕಾಗಿ ನಾವು” ಅಭಿಯಾನದ ಭಾಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯುತ್ತಿದೆ.ಗೌರಿ ಮೀಡಿಯಾದ ಪುಸ್ತಕಗಳಿಗೆ ಇಲ್ಲಿ ಕ್ಲಿಕ್ ಮಾಡಿ.

ಕನ್ನಡ ಪುಸ್ತಕ ಪ್ರಾಧಿಕಾರ ಆಯೋಜಿಸಿರುವ ಮೇಳವು ಅಕ್ಟೋಬರ್ 29 ರಂದು ಆರಂಭವಾಗಿದ್ದು, ನವೆಂಬರ್ 02ರ ಸಂಜೆಯವರೆಗೂ ನಡೆಯಲಿದೆ. ಮೇಳದಲ್ಲಿ ಸಾಂಪ್ರದಾಯಿಕ ಉಡುಗೆ ತೊಡಿಗೆ, ದೇಸೀಯ ಆಹಾರ ಮೇಳ, ಚಿತ್ರಕಲೆ / ಶಿಲ್ಪಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದೆ. ವಿಶೇಷ ಅಭಿಯಾನದ ಭಾಗವಾಗಿ ಎಲ್ಲಾ ರೀತಿಯ ಪುಸ್ತಕಗಳನ್ನೂ 20% ರಿಯಾಯತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.

ಇದನ್ನೂ ಓದಿ: ಕನ್ನಡದ ಓದು ಕಟ್ಟಿಕೊಟ್ಟ ವೈವಿಧ್ಯತೆಯ, ಸಹನೆಯ, ಬಹುತ್ವದ ವಿವೇಕ

ಸುಮಾರು 60ಕ್ಕೂ ಹೆಚ್ಚು ಪುಸ್ತಕ ಮಳಿಗೆಗಳು, 15ಕ್ಕೂ ಹೆಚ್ಚು ಚಿತ್ರಕಲಾ, ಆಹಾರ ಮಳಿಗೆಗಳು ಪುಸ್ತಕ ಪ್ರೇಮಿಗಳು, ಕಲಾ ಪ್ರೇಮಿಗಳು ಹಾಗೂ ಗ್ರಾಹಕರನ್ನು ಸೆಳೆಯುತ್ತಿವೆ.

ಅಕ್ಟೋಬರ್ 29 ರಂದು ಆರಂಭವಾದ ಈ ಮೇಳವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್‌ ಕುಮಾರ್ ಅವರು ಉದ್ಘಾಟಿಸಬೇಕಿತ್ತು. ಆದರೆ, ಕನ್ನಡದ ಖ್ಯಾತ ನಟ ಪುನೀತ್‌ ಅವರ ಹಠಾತ್‌ ಅಗಲಿಕೆಯಿಂದ ಮೇಳವು ಉದ್ಘಾಟನೆಯೇ ಇಲ್ಲದೆ ಆರಂಭವಾಗಿದೆ. ಪುನೀತ್‌ ಅವರ ಅಗಲಿಕೆಯಿಂದ ಇಡೀ ರಾಜ್ಯವೇ ಶೋಕದಲ್ಲಿದ್ದರಿಂದಾಗಿ ಮೇಳವೂ ಗ್ರಾಹಕರಿಲ್ಲದೇ, ಸದ್ದು, ಸಡಗರವಿಲ್ಲದೇ ಸೊರಗಿದಂತಾಗಿತ್ತು.

ಆದರೆ, ಇಂದು ಕನ್ನಡ ರಾಜ್ಯೋತ್ಸವದ ದಿನದಂತೆ ಮೇಳವು ಕೊಂಚ ಕಳೆಯನ್ನು ಪಡೆದುಕೊಂಡಿದೆ. ಪುಸ್ತಕ ಪ್ರೇಮಿಗಳು, ಗ್ರಾಹಕರು ಮೇಳಕ್ಕೆ ಭೇಟಿ ನೀಡುತ್ತಿದ್ದಾರೆ. ಬೆಳಗ್ಗಿನಿಂದ ನಿಧಾನಗತಿಯಲ್ಲಿ ಗ್ರಾಹಕರು ರವೀಂದ್ರ ಕಲಾಕ್ಷೇತ್ರದ ಕಡೆಗೆ ಹೆಜ್ಜೆ ಇಡುತ್ತಿದ್ದು, ಮೇಳವು ಹಂತ ಹಂತವಾಗಿ ಮೇಳೈಸಲಾರಂಭಿಸುತ್ತಿದೆ.

ಇದನ್ನೂ ಓದಿ: 66ನೇ ಕನ್ನಡ ರಾಜ್ಯೋತ್ಸವ; ಹಿಂದೆಂದೂ ಕಾಣದ ದೆಹಲಿ ದಾಸ್ಯದ ಸುಳಿಯಲ್ಲಿ ಕರ್ನಾಟಕ!

ಬುದ್ದ, ಬಸವ, ಅಂಬೇಡ್ಕರ್, ಗಾಂಧಿ, ಕುವೆಂಪು, ಕಾರ್ಲ್‌ಮಾರ್ಕ್ಸ್‌, ಭಗತ್‌ಸಿಂಗ್, ಚೆಗುವೆರಾ, ಬೇಂದ್ರೆ ಸೇರಿದಂತೆ ಹಲವಾರು ಮಹನೀಯರ ಪುಸ್ತಕಗಳು ರಿಯಾಯತಿ ದರದಲ್ಲಿ ಮಾರಾಟವಾಗುತ್ತಿವೆ.

ಪುಸ್ತಕ ಮೇಳದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟಕ್ಕೆ ಇಟ್ಟಿರುವ ವಂಶಿ ಪ್ರಕಶನದ ಪ್ರಕಾಶ್‌, “ಪುನೀತ್‌ ಅವರ ಅಗಲಿಕೆಯಿಂದಾಗಿ ಗ್ರಾಹಕರು ಪುಸ್ತಕ ಮೇಳದ ಕಡೆಗೆ ಬಂದಿರಲಿಲ್ಲ. ಇಂದು ಗ್ರಾಹಕರು ಮಳಿಗೆಗಳತ್ತ ಮುಖ ಮಾಡಿದ್ದಾರೆ. ಎರಡು ದಿನಳಿಂದ ಗ್ರಾಹಕರಿಲ್ಲದೇ ಕಳೆಗುಂದಿದ್ದ ಮೇಳ, ಈಗ ಮೆರಗು ಪಡೆದುಕೊಳ್ಳುತ್ತಿದೆ” ಎಂದು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅಭಿನವ ಪ್ರಕಶನದ ರವಿ, “ಮೇಳವು ಉದ್ಘಾಟನೆಗೊಳ್ಳುವ ವೇಳೆಗೆ ಪುನೀತ್‌ ಅವರು ಕೊನೆಯುಸಿರೆಳೆದರು. ಅವರ ಸಾವಿನಿಂದಾಗಿ ಇಡೀ ಅಭಿಮಾನಿ ಬಳಗವೇ ಶೋಕದಲ್ಲಿ ಮುಳುಗಿತ್ತು. ನಾವೂ ಕೂಡ ಪುನೀತ್‌ ಅವರನ್ನು ಕಳೆದುಕೊಂಡ ದುಃಖದಲ್ಲಿದ್ದೆವು. ಹೀಗಾಗಿ, ಎಲ್ಲವೂ ಸ್ಥಬ್ದವಾಗಿತ್ತು. ಕಳೆದು ಎರಡು ದಿನಗಳಲ್ಲಿ ಯಾವುದೇ ವ್ಯಾಪಾರವೂ ಆಗಿಲ್ಲ. ಇದೀಗ ಗ್ರಾಹಕರು ಮಳಿಗೆಗಳಿಗೆ ಬರುತ್ತಿದ್ದಾರೆ. ನಾಳೆಯವರೆಗೂ ಮಳಿಗೆಗಳು ತೆರೆದಿರಲಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡವೆಂದರೆ ನಮ್ಮ ದೇವ ಭಾಷೆ; ‘ಅಪ್ಪು’ ನೆನೆದು ಎಚ್‌ಡಿಕೆ ಸರಣಿ ಟ್ವೀಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...