Homeಕರ್ನಾಟಕಕರ್ನಾಟಕ ರಾಜ್ಯೋತ್ಸವ | ‘ಕನ್ನಡಕ್ಕಾಗಿ ನಾವು’ ಅಭಿಯಾನದ ಅಂಗವಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಕರ್ನಾಟಕ ರಾಜ್ಯೋತ್ಸವ | ‘ಕನ್ನಡಕ್ಕಾಗಿ ನಾವು’ ಅಭಿಯಾನದ ಅಂಗವಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

- Advertisement -
- Advertisement -

ಒಡೆದು ಚೂರು ಚೂರಾಗಿದ್ದ ಕರ್ನಾಕಟ ಮತ್ತೇ ಒಂದಾದ ದಿನ ನವೆಂಬರ್‌ 1. ವಿಶ್ವದಾದ್ಯಂತ ಇರುವ ಕರ್ನಾಟಕದವರು 66 ನೇ ‘ನಾಡಹಬ್ಬ’ವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡಾ ಒಂದು ವಾರ ಮುಂಚೆಯೇ ‘ನಾಡಹಬ್ಬ’ಕ್ಕೆ ಬೇಕಾದ ತಯಾರಿಯನ್ನು ಮಾಡಿದೆ. ಕರ್ನಾಟಕ ರಾಜ್ಯೋತ್ಸವ ಆಚರಣೆಯ ವಿಶೇಷ ಸಂದರ್ಭದಲ್ಲಿ “ಕನ್ನಡಕ್ಕಾಗಿ ನಾವು” ಅಭಿಯಾನದ ಭಾಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯುತ್ತಿದೆ.ಗೌರಿ ಮೀಡಿಯಾದ ಪುಸ್ತಕಗಳಿಗೆ ಇಲ್ಲಿ ಕ್ಲಿಕ್ ಮಾಡಿ.

ಕನ್ನಡ ಪುಸ್ತಕ ಪ್ರಾಧಿಕಾರ ಆಯೋಜಿಸಿರುವ ಮೇಳವು ಅಕ್ಟೋಬರ್ 29 ರಂದು ಆರಂಭವಾಗಿದ್ದು, ನವೆಂಬರ್ 02ರ ಸಂಜೆಯವರೆಗೂ ನಡೆಯಲಿದೆ. ಮೇಳದಲ್ಲಿ ಸಾಂಪ್ರದಾಯಿಕ ಉಡುಗೆ ತೊಡಿಗೆ, ದೇಸೀಯ ಆಹಾರ ಮೇಳ, ಚಿತ್ರಕಲೆ / ಶಿಲ್ಪಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದೆ. ವಿಶೇಷ ಅಭಿಯಾನದ ಭಾಗವಾಗಿ ಎಲ್ಲಾ ರೀತಿಯ ಪುಸ್ತಕಗಳನ್ನೂ 20% ರಿಯಾಯತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.

ಇದನ್ನೂ ಓದಿ: ಕನ್ನಡದ ಓದು ಕಟ್ಟಿಕೊಟ್ಟ ವೈವಿಧ್ಯತೆಯ, ಸಹನೆಯ, ಬಹುತ್ವದ ವಿವೇಕ

ಸುಮಾರು 60ಕ್ಕೂ ಹೆಚ್ಚು ಪುಸ್ತಕ ಮಳಿಗೆಗಳು, 15ಕ್ಕೂ ಹೆಚ್ಚು ಚಿತ್ರಕಲಾ, ಆಹಾರ ಮಳಿಗೆಗಳು ಪುಸ್ತಕ ಪ್ರೇಮಿಗಳು, ಕಲಾ ಪ್ರೇಮಿಗಳು ಹಾಗೂ ಗ್ರಾಹಕರನ್ನು ಸೆಳೆಯುತ್ತಿವೆ.

ಅಕ್ಟೋಬರ್ 29 ರಂದು ಆರಂಭವಾದ ಈ ಮೇಳವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್‌ ಕುಮಾರ್ ಅವರು ಉದ್ಘಾಟಿಸಬೇಕಿತ್ತು. ಆದರೆ, ಕನ್ನಡದ ಖ್ಯಾತ ನಟ ಪುನೀತ್‌ ಅವರ ಹಠಾತ್‌ ಅಗಲಿಕೆಯಿಂದ ಮೇಳವು ಉದ್ಘಾಟನೆಯೇ ಇಲ್ಲದೆ ಆರಂಭವಾಗಿದೆ. ಪುನೀತ್‌ ಅವರ ಅಗಲಿಕೆಯಿಂದ ಇಡೀ ರಾಜ್ಯವೇ ಶೋಕದಲ್ಲಿದ್ದರಿಂದಾಗಿ ಮೇಳವೂ ಗ್ರಾಹಕರಿಲ್ಲದೇ, ಸದ್ದು, ಸಡಗರವಿಲ್ಲದೇ ಸೊರಗಿದಂತಾಗಿತ್ತು.

ಆದರೆ, ಇಂದು ಕನ್ನಡ ರಾಜ್ಯೋತ್ಸವದ ದಿನದಂತೆ ಮೇಳವು ಕೊಂಚ ಕಳೆಯನ್ನು ಪಡೆದುಕೊಂಡಿದೆ. ಪುಸ್ತಕ ಪ್ರೇಮಿಗಳು, ಗ್ರಾಹಕರು ಮೇಳಕ್ಕೆ ಭೇಟಿ ನೀಡುತ್ತಿದ್ದಾರೆ. ಬೆಳಗ್ಗಿನಿಂದ ನಿಧಾನಗತಿಯಲ್ಲಿ ಗ್ರಾಹಕರು ರವೀಂದ್ರ ಕಲಾಕ್ಷೇತ್ರದ ಕಡೆಗೆ ಹೆಜ್ಜೆ ಇಡುತ್ತಿದ್ದು, ಮೇಳವು ಹಂತ ಹಂತವಾಗಿ ಮೇಳೈಸಲಾರಂಭಿಸುತ್ತಿದೆ.

ಇದನ್ನೂ ಓದಿ: 66ನೇ ಕನ್ನಡ ರಾಜ್ಯೋತ್ಸವ; ಹಿಂದೆಂದೂ ಕಾಣದ ದೆಹಲಿ ದಾಸ್ಯದ ಸುಳಿಯಲ್ಲಿ ಕರ್ನಾಟಕ!

ಬುದ್ದ, ಬಸವ, ಅಂಬೇಡ್ಕರ್, ಗಾಂಧಿ, ಕುವೆಂಪು, ಕಾರ್ಲ್‌ಮಾರ್ಕ್ಸ್‌, ಭಗತ್‌ಸಿಂಗ್, ಚೆಗುವೆರಾ, ಬೇಂದ್ರೆ ಸೇರಿದಂತೆ ಹಲವಾರು ಮಹನೀಯರ ಪುಸ್ತಕಗಳು ರಿಯಾಯತಿ ದರದಲ್ಲಿ ಮಾರಾಟವಾಗುತ್ತಿವೆ.

ಪುಸ್ತಕ ಮೇಳದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟಕ್ಕೆ ಇಟ್ಟಿರುವ ವಂಶಿ ಪ್ರಕಶನದ ಪ್ರಕಾಶ್‌, “ಪುನೀತ್‌ ಅವರ ಅಗಲಿಕೆಯಿಂದಾಗಿ ಗ್ರಾಹಕರು ಪುಸ್ತಕ ಮೇಳದ ಕಡೆಗೆ ಬಂದಿರಲಿಲ್ಲ. ಇಂದು ಗ್ರಾಹಕರು ಮಳಿಗೆಗಳತ್ತ ಮುಖ ಮಾಡಿದ್ದಾರೆ. ಎರಡು ದಿನಳಿಂದ ಗ್ರಾಹಕರಿಲ್ಲದೇ ಕಳೆಗುಂದಿದ್ದ ಮೇಳ, ಈಗ ಮೆರಗು ಪಡೆದುಕೊಳ್ಳುತ್ತಿದೆ” ಎಂದು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅಭಿನವ ಪ್ರಕಶನದ ರವಿ, “ಮೇಳವು ಉದ್ಘಾಟನೆಗೊಳ್ಳುವ ವೇಳೆಗೆ ಪುನೀತ್‌ ಅವರು ಕೊನೆಯುಸಿರೆಳೆದರು. ಅವರ ಸಾವಿನಿಂದಾಗಿ ಇಡೀ ಅಭಿಮಾನಿ ಬಳಗವೇ ಶೋಕದಲ್ಲಿ ಮುಳುಗಿತ್ತು. ನಾವೂ ಕೂಡ ಪುನೀತ್‌ ಅವರನ್ನು ಕಳೆದುಕೊಂಡ ದುಃಖದಲ್ಲಿದ್ದೆವು. ಹೀಗಾಗಿ, ಎಲ್ಲವೂ ಸ್ಥಬ್ದವಾಗಿತ್ತು. ಕಳೆದು ಎರಡು ದಿನಗಳಲ್ಲಿ ಯಾವುದೇ ವ್ಯಾಪಾರವೂ ಆಗಿಲ್ಲ. ಇದೀಗ ಗ್ರಾಹಕರು ಮಳಿಗೆಗಳಿಗೆ ಬರುತ್ತಿದ್ದಾರೆ. ನಾಳೆಯವರೆಗೂ ಮಳಿಗೆಗಳು ತೆರೆದಿರಲಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡವೆಂದರೆ ನಮ್ಮ ದೇವ ಭಾಷೆ; ‘ಅಪ್ಪು’ ನೆನೆದು ಎಚ್‌ಡಿಕೆ ಸರಣಿ ಟ್ವೀಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...