Homeಕರ್ನಾಟಕಕರ್ನಾಟಕ ರಾಜ್ಯೋತ್ಸವ | ‘ಕನ್ನಡಕ್ಕಾಗಿ ನಾವು’ ಅಭಿಯಾನದ ಅಂಗವಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಕರ್ನಾಟಕ ರಾಜ್ಯೋತ್ಸವ | ‘ಕನ್ನಡಕ್ಕಾಗಿ ನಾವು’ ಅಭಿಯಾನದ ಅಂಗವಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

- Advertisement -
- Advertisement -

ಒಡೆದು ಚೂರು ಚೂರಾಗಿದ್ದ ಕರ್ನಾಕಟ ಮತ್ತೇ ಒಂದಾದ ದಿನ ನವೆಂಬರ್‌ 1. ವಿಶ್ವದಾದ್ಯಂತ ಇರುವ ಕರ್ನಾಟಕದವರು 66 ನೇ ‘ನಾಡಹಬ್ಬ’ವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡಾ ಒಂದು ವಾರ ಮುಂಚೆಯೇ ‘ನಾಡಹಬ್ಬ’ಕ್ಕೆ ಬೇಕಾದ ತಯಾರಿಯನ್ನು ಮಾಡಿದೆ. ಕರ್ನಾಟಕ ರಾಜ್ಯೋತ್ಸವ ಆಚರಣೆಯ ವಿಶೇಷ ಸಂದರ್ಭದಲ್ಲಿ “ಕನ್ನಡಕ್ಕಾಗಿ ನಾವು” ಅಭಿಯಾನದ ಭಾಗವಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯುತ್ತಿದೆ.ಗೌರಿ ಮೀಡಿಯಾದ ಪುಸ್ತಕಗಳಿಗೆ ಇಲ್ಲಿ ಕ್ಲಿಕ್ ಮಾಡಿ.

ಕನ್ನಡ ಪುಸ್ತಕ ಪ್ರಾಧಿಕಾರ ಆಯೋಜಿಸಿರುವ ಮೇಳವು ಅಕ್ಟೋಬರ್ 29 ರಂದು ಆರಂಭವಾಗಿದ್ದು, ನವೆಂಬರ್ 02ರ ಸಂಜೆಯವರೆಗೂ ನಡೆಯಲಿದೆ. ಮೇಳದಲ್ಲಿ ಸಾಂಪ್ರದಾಯಿಕ ಉಡುಗೆ ತೊಡಿಗೆ, ದೇಸೀಯ ಆಹಾರ ಮೇಳ, ಚಿತ್ರಕಲೆ / ಶಿಲ್ಪಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದೆ. ವಿಶೇಷ ಅಭಿಯಾನದ ಭಾಗವಾಗಿ ಎಲ್ಲಾ ರೀತಿಯ ಪುಸ್ತಕಗಳನ್ನೂ 20% ರಿಯಾಯತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.

ಇದನ್ನೂ ಓದಿ: ಕನ್ನಡದ ಓದು ಕಟ್ಟಿಕೊಟ್ಟ ವೈವಿಧ್ಯತೆಯ, ಸಹನೆಯ, ಬಹುತ್ವದ ವಿವೇಕ

ಸುಮಾರು 60ಕ್ಕೂ ಹೆಚ್ಚು ಪುಸ್ತಕ ಮಳಿಗೆಗಳು, 15ಕ್ಕೂ ಹೆಚ್ಚು ಚಿತ್ರಕಲಾ, ಆಹಾರ ಮಳಿಗೆಗಳು ಪುಸ್ತಕ ಪ್ರೇಮಿಗಳು, ಕಲಾ ಪ್ರೇಮಿಗಳು ಹಾಗೂ ಗ್ರಾಹಕರನ್ನು ಸೆಳೆಯುತ್ತಿವೆ.

ಅಕ್ಟೋಬರ್ 29 ರಂದು ಆರಂಭವಾದ ಈ ಮೇಳವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್‌ ಕುಮಾರ್ ಅವರು ಉದ್ಘಾಟಿಸಬೇಕಿತ್ತು. ಆದರೆ, ಕನ್ನಡದ ಖ್ಯಾತ ನಟ ಪುನೀತ್‌ ಅವರ ಹಠಾತ್‌ ಅಗಲಿಕೆಯಿಂದ ಮೇಳವು ಉದ್ಘಾಟನೆಯೇ ಇಲ್ಲದೆ ಆರಂಭವಾಗಿದೆ. ಪುನೀತ್‌ ಅವರ ಅಗಲಿಕೆಯಿಂದ ಇಡೀ ರಾಜ್ಯವೇ ಶೋಕದಲ್ಲಿದ್ದರಿಂದಾಗಿ ಮೇಳವೂ ಗ್ರಾಹಕರಿಲ್ಲದೇ, ಸದ್ದು, ಸಡಗರವಿಲ್ಲದೇ ಸೊರಗಿದಂತಾಗಿತ್ತು.

ಆದರೆ, ಇಂದು ಕನ್ನಡ ರಾಜ್ಯೋತ್ಸವದ ದಿನದಂತೆ ಮೇಳವು ಕೊಂಚ ಕಳೆಯನ್ನು ಪಡೆದುಕೊಂಡಿದೆ. ಪುಸ್ತಕ ಪ್ರೇಮಿಗಳು, ಗ್ರಾಹಕರು ಮೇಳಕ್ಕೆ ಭೇಟಿ ನೀಡುತ್ತಿದ್ದಾರೆ. ಬೆಳಗ್ಗಿನಿಂದ ನಿಧಾನಗತಿಯಲ್ಲಿ ಗ್ರಾಹಕರು ರವೀಂದ್ರ ಕಲಾಕ್ಷೇತ್ರದ ಕಡೆಗೆ ಹೆಜ್ಜೆ ಇಡುತ್ತಿದ್ದು, ಮೇಳವು ಹಂತ ಹಂತವಾಗಿ ಮೇಳೈಸಲಾರಂಭಿಸುತ್ತಿದೆ.

ಇದನ್ನೂ ಓದಿ: 66ನೇ ಕನ್ನಡ ರಾಜ್ಯೋತ್ಸವ; ಹಿಂದೆಂದೂ ಕಾಣದ ದೆಹಲಿ ದಾಸ್ಯದ ಸುಳಿಯಲ್ಲಿ ಕರ್ನಾಟಕ!

ಬುದ್ದ, ಬಸವ, ಅಂಬೇಡ್ಕರ್, ಗಾಂಧಿ, ಕುವೆಂಪು, ಕಾರ್ಲ್‌ಮಾರ್ಕ್ಸ್‌, ಭಗತ್‌ಸಿಂಗ್, ಚೆಗುವೆರಾ, ಬೇಂದ್ರೆ ಸೇರಿದಂತೆ ಹಲವಾರು ಮಹನೀಯರ ಪುಸ್ತಕಗಳು ರಿಯಾಯತಿ ದರದಲ್ಲಿ ಮಾರಾಟವಾಗುತ್ತಿವೆ.

ಪುಸ್ತಕ ಮೇಳದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟಕ್ಕೆ ಇಟ್ಟಿರುವ ವಂಶಿ ಪ್ರಕಶನದ ಪ್ರಕಾಶ್‌, “ಪುನೀತ್‌ ಅವರ ಅಗಲಿಕೆಯಿಂದಾಗಿ ಗ್ರಾಹಕರು ಪುಸ್ತಕ ಮೇಳದ ಕಡೆಗೆ ಬಂದಿರಲಿಲ್ಲ. ಇಂದು ಗ್ರಾಹಕರು ಮಳಿಗೆಗಳತ್ತ ಮುಖ ಮಾಡಿದ್ದಾರೆ. ಎರಡು ದಿನಳಿಂದ ಗ್ರಾಹಕರಿಲ್ಲದೇ ಕಳೆಗುಂದಿದ್ದ ಮೇಳ, ಈಗ ಮೆರಗು ಪಡೆದುಕೊಳ್ಳುತ್ತಿದೆ” ಎಂದು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಅಭಿನವ ಪ್ರಕಶನದ ರವಿ, “ಮೇಳವು ಉದ್ಘಾಟನೆಗೊಳ್ಳುವ ವೇಳೆಗೆ ಪುನೀತ್‌ ಅವರು ಕೊನೆಯುಸಿರೆಳೆದರು. ಅವರ ಸಾವಿನಿಂದಾಗಿ ಇಡೀ ಅಭಿಮಾನಿ ಬಳಗವೇ ಶೋಕದಲ್ಲಿ ಮುಳುಗಿತ್ತು. ನಾವೂ ಕೂಡ ಪುನೀತ್‌ ಅವರನ್ನು ಕಳೆದುಕೊಂಡ ದುಃಖದಲ್ಲಿದ್ದೆವು. ಹೀಗಾಗಿ, ಎಲ್ಲವೂ ಸ್ಥಬ್ದವಾಗಿತ್ತು. ಕಳೆದು ಎರಡು ದಿನಗಳಲ್ಲಿ ಯಾವುದೇ ವ್ಯಾಪಾರವೂ ಆಗಿಲ್ಲ. ಇದೀಗ ಗ್ರಾಹಕರು ಮಳಿಗೆಗಳಿಗೆ ಬರುತ್ತಿದ್ದಾರೆ. ನಾಳೆಯವರೆಗೂ ಮಳಿಗೆಗಳು ತೆರೆದಿರಲಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡವೆಂದರೆ ನಮ್ಮ ದೇವ ಭಾಷೆ; ‘ಅಪ್ಪು’ ನೆನೆದು ಎಚ್‌ಡಿಕೆ ಸರಣಿ ಟ್ವೀಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...