Homeಕರ್ನಾಟಕಡಿಸೆಂಬರ್ 5ರ 'ಕರ್ನಾಟಕ ಬಂದ್'ಗೆ ಬೆಂಬಲ ಘೋಷಿಸಿದ ಕರ್ನಾಟಕ ರಕ್ಷಣಾ ವೇದಿಕೆ

ಡಿಸೆಂಬರ್ 5ರ ‘ಕರ್ನಾಟಕ ಬಂದ್’ಗೆ ಬೆಂಬಲ ಘೋಷಿಸಿದ ಕರ್ನಾಟಕ ರಕ್ಷಣಾ ವೇದಿಕೆ

'ಕರ್ನಾಟಕ ಬಂದ್' ನಡೆಸಲು ಸರ್ಕಾರವೇ ಕಾರಣ ಹೊರತು ಕನ್ನಡಪರ ಸಂಘಟನೆಗಳಲ್ಲ’ ಎಂದು ಕರವೇ ಅಭಿಪ್ರಾಯಪಟ್ಟಿದೆ.

- Advertisement -
- Advertisement -

ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮತ್ತು ಶಾಸಕರುಗಳ ಕನ್ನಡದ್ರೋಹಿ ನಡವಳಿಕೆಗಳ ಹಿನ್ನೆಲೆಯಲ್ಲಿ ಡಿಸೆಂಬರ್ 5 ರಂದು ಕರೆ ನೀಡಲಾಗಿರುವ ‘ಕರ್ನಾಟಕ ಬಂದ್’ ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಕರೆ ನೀಡಿದೆ.

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಡಿಸೆಂಬರ್ 5 ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಿದ್ದಾರೆ. ಅದೇ ರೀತಿ ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ, ತಹಸೀಲ್ದಾರ್ ಕಚೇರಿಗಳಿಗೆ ಮುತ್ತಿಗೆ ಹಾಕಲಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಸಾವಿರಾರು ಕರವೇ ಕಾರ್ಯಕರ್ತರು ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆಯನ್ನು ದಾಖಲಿಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಮ್ಮ ಪ್ರತಿಭಟನೆ ಯಾವುದೇ ಸಮಾಜದ ವಿರೋಧವಲ್ಲ, ಬದಲಾಗಿ ರಾಜಕೀಯ ಲಾಭಕ್ಕಾಗಿ ಸರ್ಕಾರ ನಡೆಸುತ್ತಿರುವ ಒಡೆದು ಆಳುವ ನೀತಿಗೆ ವಿರುದ್ಧ. ಹೀಗಾಗಿ ಯಾವುದೇ ಭಾಗದಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ಅಹಿತಕರ ಘಟನೆಗಳು‌ ನಡೆಯದಂತೆ, ಶಾಂತಿಯುತ ಬಂದ್ ನಡೆಸಲು ಕಾರ್ಯಕರ್ತರಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಕರವೇ ಮಾಹಿತಿ ನೀಡಿದೆ.

ಇದನ್ನೂ ಓದಿ: ಮರಾಠ ಅಭಿವೃದ್ಧಿ ಪ್ರಾಧಿಕಾರ: ಕನ್ನಡಪರ ಹೋರಾಟಗಾರರಿಗೆ ಎಚ್ಚರಿಕೆ ನೀಡಿದ ಯಡಿಯೂರಪ್ಪ!

ಮರಾಠಾ ಪ್ರಾಧಿಕಾರ ರಚನೆ ಸಂಬಂಧ ಮುಖ್ಯಮಂತ್ರಿಗಳು ಕನ್ನಡಪರ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾತುಕತೆ ನಡೆಸಬಹುದಿತ್ತು. ಆದರೆ ಮುಖ್ಯಮಂತ್ರಿಗಳಾದಿಯಾಗಿ ಸರ್ಕಾರವನ್ನು‌‌ ನಡೆಸುತ್ತಿರುವವರು ಹುಂಬತನದಿಂದ ಆಕ್ರಮಣಕಾರಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಆಳುವ ಪಕ್ಷದ ಶಾಸಕರುಗಳೇ ನಾಲಿಗೆ ಹರಿಬಿಟ್ಟು ಕನ್ನಡಪರ ಸಂಘಟನೆಗಳನ್ನು ದೂಷಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಕನ್ನಡದ್ರೋಹಿ ಶಾಸಕರುಗಳು “ನಮಗೆ ಕನ್ನಡಿಗರ ಮತ ಬೇಕಿಲ್ಲ” ಎಂಬಂಥ ಉದ್ಧಟತನದ ಹೇಳಿಕೆಗಳನ್ನೂ ನೀಡಿದ್ದಾರೆ. ಆದರೆ, ದುರದೃಷ್ಟವಶಾತ್ ಈ ಹೇಳಿಕೆಗಳನ್ನು ಖಂಡಿಸದೆ ಸರ್ಕಾರ ಮೌನ ಸಮ್ಮತಿ‌ ನೀಡಿರುವುದು ಕನ್ನಡ ಕಾರ್ಯಕರ್ತರ‌ನ್ನು ಕೆರಳಿಸಿದೆ. ಈ ಹಿನ್ನೆಲೆಯಲ್ಲಿ ‘ಕರ್ನಾಟಕ ಬಂದ್’ ನಡೆಸಲು ಕಾರಣಕರ್ತರು ಸರ್ಕಾರದವರೇ ಹೊರತು ಕನ್ನಡಪರ ಸಂಘಟನೆಗಳಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕಿದೆ ಎಂದು ತಮ್ಮ ಪ್ರತಿಭಟನೆಗೆ ಸರ್ಕಾರ ಕಾರಣ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಇದು ಯಡಿಯೂರಪ್ಪನವರ ’ಜಾತಿಗೊಂದು ನಿಗಮ’ವಷ್ಟೇ ಅಲ್ಲ, ಬಿಜೆಪಿಯ ಅಪಾಯಕಾರಿ ವೈದಿಕಶಾಹಿ ವರಸೆ!

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪುರಸಭೆ ಸದಸ್ಯ ಸ್ಥಾನದಿಂದ ಮುಖ್ಯಮಂತ್ರಿ ಸ್ಥಾನದವರೆಗೆ ತಲುಪಲು ಅವರು ಹೋರಾಟದ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದೇ ಕಾರಣ. ಆದರೆ ಅವರೇ ಇಂದು ಹೋರಾಟಗಾರರಿಗೆ ಪೊಲೀಸರನ್ನು ಬಳಸಿಕೊಂಡು ಹೋರಾಟ ಹತ್ತಿಕ್ಕುವ ಬೆದರಿಕೆ ಒಡ್ಡುತ್ತಿದ್ದಾರೆ. ಮುಖ್ಯಮಂತ್ರಿಗಳು ಆತ್ಮವಿಮರ್ಶೆ ಮಾಡಿಕೊಂಡು ಈ ಬೆದರಿಕೆ ತಂತ್ರವನ್ನು ಕೈಬಿಟ್ಟು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಪ್ರಬುದ್ಧತೆ ಮೆರೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.

‘ಕರ್ನಾಟಕ ಬಂದ್’ ವೇಳೆ ವೈದ್ಯಕೀಯ ಸೇವೆಗಳು, ಆಂಬುಲೆನ್ಸ್, ಔಷಧಿ ಅಂಗಡಿಗಳು, ಹಾಲು-ದಿನಪತ್ರಿಕೆ ಸರಬರಾಜಿನಂಥ ಅಗತ್ಯ ಸೇವೆಗಳಲ್ಲಿ ವ್ಯತ್ಯಯವಾಗುವುದಿಲ್ಲ. ಸಂಚಾರ ವ್ಯವಸ್ಥೆ ಸ್ಥಗಿತಗೊಳ್ಳುವುದರಿಂದ ನಾಗರಿಕರು ಡಿಸೆಂಬರ್ 5ರಂದು ಮನೆಯಲ್ಲೇ ಉಳಿದು ಬಂದ್ ಬೆಂಬಲಿಸಬೇಕೆಂದು ವೇದಿಕೆ ಮನವಿ ಮಾಡಿದೆ.

ಇನ್ನು ’ಕನ್ನಡಿಗರಿಗೆ ಅಗತ್ಯವಿರುವ ಎಲ್ಲವನ್ನು ಮಾಡಲು ಸರ್ಕಾರ ಸಿದ್ಧವಾಗಿದೆ. ಆದರೆ ಸರ್ಕಾರದ ನಿರ್ಧಾರಕ್ಕೆ ವಿರುದ್ಧವಾಗಿ ಬಂದ್‌ಗೆ ಕರೆ ನೀಡಿರುವುದು ಸರಿಯಲ್ಲ. ಸಂಘಟನೆಗಳು ಬಲವಂತವಾಗಿ ಬಂದ್ ಜಾರಿಗೊಳಿಸಲು ಮುಂದಾದರೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅವರು ಶಾಂತಿಯುತವಾಗಿ ಪ್ರತಿಭಟಿಸಬಹುದು. ಆದರೆ ಸರ್ಕಾರವು ಬಲವಂತದ ಬಂದ್ ಅನ್ನು ನಾವು ಸಹಿಸುವುದಿಲ್ಲ” ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕನ್ನಡಪರ ಹೋರಾಟಗಾರರಿಗೆ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ಕೃಷಿ ಕಾಯ್ದೆ ರದ್ದುಗೊಳಿಸದಿದ್ದರೆ ಎನ್‌ಡಿಎ ತೊರೆಯುತ್ತೇವೆ: ಅಮಿತ್ ಶಾಗೆ ಪತ್ರ ಬರೆದ ಬಿಜೆಪಿಯ ಮತ್ತೊಂದು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...