Homeಕರ್ನಾಟಕಡಿಸೆಂಬರ್ 5ರ 'ಕರ್ನಾಟಕ ಬಂದ್'ಗೆ ಬೆಂಬಲ ಘೋಷಿಸಿದ ಕರ್ನಾಟಕ ರಕ್ಷಣಾ ವೇದಿಕೆ

ಡಿಸೆಂಬರ್ 5ರ ‘ಕರ್ನಾಟಕ ಬಂದ್’ಗೆ ಬೆಂಬಲ ಘೋಷಿಸಿದ ಕರ್ನಾಟಕ ರಕ್ಷಣಾ ವೇದಿಕೆ

'ಕರ್ನಾಟಕ ಬಂದ್' ನಡೆಸಲು ಸರ್ಕಾರವೇ ಕಾರಣ ಹೊರತು ಕನ್ನಡಪರ ಸಂಘಟನೆಗಳಲ್ಲ’ ಎಂದು ಕರವೇ ಅಭಿಪ್ರಾಯಪಟ್ಟಿದೆ.

- Advertisement -
- Advertisement -

ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮತ್ತು ಶಾಸಕರುಗಳ ಕನ್ನಡದ್ರೋಹಿ ನಡವಳಿಕೆಗಳ ಹಿನ್ನೆಲೆಯಲ್ಲಿ ಡಿಸೆಂಬರ್ 5 ರಂದು ಕರೆ ನೀಡಲಾಗಿರುವ ‘ಕರ್ನಾಟಕ ಬಂದ್’ ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಕರೆ ನೀಡಿದೆ.

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಡಿಸೆಂಬರ್ 5 ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಿದ್ದಾರೆ. ಅದೇ ರೀತಿ ತಾಲ್ಲೂಕುಗಳಲ್ಲಿ ಮಿನಿ ವಿಧಾನಸೌಧ, ತಹಸೀಲ್ದಾರ್ ಕಚೇರಿಗಳಿಗೆ ಮುತ್ತಿಗೆ ಹಾಕಲಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಸಾವಿರಾರು ಕರವೇ ಕಾರ್ಯಕರ್ತರು ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆಯನ್ನು ದಾಖಲಿಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಮ್ಮ ಪ್ರತಿಭಟನೆ ಯಾವುದೇ ಸಮಾಜದ ವಿರೋಧವಲ್ಲ, ಬದಲಾಗಿ ರಾಜಕೀಯ ಲಾಭಕ್ಕಾಗಿ ಸರ್ಕಾರ ನಡೆಸುತ್ತಿರುವ ಒಡೆದು ಆಳುವ ನೀತಿಗೆ ವಿರುದ್ಧ. ಹೀಗಾಗಿ ಯಾವುದೇ ಭಾಗದಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ಅಹಿತಕರ ಘಟನೆಗಳು‌ ನಡೆಯದಂತೆ, ಶಾಂತಿಯುತ ಬಂದ್ ನಡೆಸಲು ಕಾರ್ಯಕರ್ತರಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಕರವೇ ಮಾಹಿತಿ ನೀಡಿದೆ.

ಇದನ್ನೂ ಓದಿ: ಮರಾಠ ಅಭಿವೃದ್ಧಿ ಪ್ರಾಧಿಕಾರ: ಕನ್ನಡಪರ ಹೋರಾಟಗಾರರಿಗೆ ಎಚ್ಚರಿಕೆ ನೀಡಿದ ಯಡಿಯೂರಪ್ಪ!

ಮರಾಠಾ ಪ್ರಾಧಿಕಾರ ರಚನೆ ಸಂಬಂಧ ಮುಖ್ಯಮಂತ್ರಿಗಳು ಕನ್ನಡಪರ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾತುಕತೆ ನಡೆಸಬಹುದಿತ್ತು. ಆದರೆ ಮುಖ್ಯಮಂತ್ರಿಗಳಾದಿಯಾಗಿ ಸರ್ಕಾರವನ್ನು‌‌ ನಡೆಸುತ್ತಿರುವವರು ಹುಂಬತನದಿಂದ ಆಕ್ರಮಣಕಾರಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಆಳುವ ಪಕ್ಷದ ಶಾಸಕರುಗಳೇ ನಾಲಿಗೆ ಹರಿಬಿಟ್ಟು ಕನ್ನಡಪರ ಸಂಘಟನೆಗಳನ್ನು ದೂಷಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಕನ್ನಡದ್ರೋಹಿ ಶಾಸಕರುಗಳು “ನಮಗೆ ಕನ್ನಡಿಗರ ಮತ ಬೇಕಿಲ್ಲ” ಎಂಬಂಥ ಉದ್ಧಟತನದ ಹೇಳಿಕೆಗಳನ್ನೂ ನೀಡಿದ್ದಾರೆ. ಆದರೆ, ದುರದೃಷ್ಟವಶಾತ್ ಈ ಹೇಳಿಕೆಗಳನ್ನು ಖಂಡಿಸದೆ ಸರ್ಕಾರ ಮೌನ ಸಮ್ಮತಿ‌ ನೀಡಿರುವುದು ಕನ್ನಡ ಕಾರ್ಯಕರ್ತರ‌ನ್ನು ಕೆರಳಿಸಿದೆ. ಈ ಹಿನ್ನೆಲೆಯಲ್ಲಿ ‘ಕರ್ನಾಟಕ ಬಂದ್’ ನಡೆಸಲು ಕಾರಣಕರ್ತರು ಸರ್ಕಾರದವರೇ ಹೊರತು ಕನ್ನಡಪರ ಸಂಘಟನೆಗಳಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕಿದೆ ಎಂದು ತಮ್ಮ ಪ್ರತಿಭಟನೆಗೆ ಸರ್ಕಾರ ಕಾರಣ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಇದು ಯಡಿಯೂರಪ್ಪನವರ ’ಜಾತಿಗೊಂದು ನಿಗಮ’ವಷ್ಟೇ ಅಲ್ಲ, ಬಿಜೆಪಿಯ ಅಪಾಯಕಾರಿ ವೈದಿಕಶಾಹಿ ವರಸೆ!

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಪುರಸಭೆ ಸದಸ್ಯ ಸ್ಥಾನದಿಂದ ಮುಖ್ಯಮಂತ್ರಿ ಸ್ಥಾನದವರೆಗೆ ತಲುಪಲು ಅವರು ಹೋರಾಟದ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದೇ ಕಾರಣ. ಆದರೆ ಅವರೇ ಇಂದು ಹೋರಾಟಗಾರರಿಗೆ ಪೊಲೀಸರನ್ನು ಬಳಸಿಕೊಂಡು ಹೋರಾಟ ಹತ್ತಿಕ್ಕುವ ಬೆದರಿಕೆ ಒಡ್ಡುತ್ತಿದ್ದಾರೆ. ಮುಖ್ಯಮಂತ್ರಿಗಳು ಆತ್ಮವಿಮರ್ಶೆ ಮಾಡಿಕೊಂಡು ಈ ಬೆದರಿಕೆ ತಂತ್ರವನ್ನು ಕೈಬಿಟ್ಟು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಪ್ರಬುದ್ಧತೆ ಮೆರೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.

‘ಕರ್ನಾಟಕ ಬಂದ್’ ವೇಳೆ ವೈದ್ಯಕೀಯ ಸೇವೆಗಳು, ಆಂಬುಲೆನ್ಸ್, ಔಷಧಿ ಅಂಗಡಿಗಳು, ಹಾಲು-ದಿನಪತ್ರಿಕೆ ಸರಬರಾಜಿನಂಥ ಅಗತ್ಯ ಸೇವೆಗಳಲ್ಲಿ ವ್ಯತ್ಯಯವಾಗುವುದಿಲ್ಲ. ಸಂಚಾರ ವ್ಯವಸ್ಥೆ ಸ್ಥಗಿತಗೊಳ್ಳುವುದರಿಂದ ನಾಗರಿಕರು ಡಿಸೆಂಬರ್ 5ರಂದು ಮನೆಯಲ್ಲೇ ಉಳಿದು ಬಂದ್ ಬೆಂಬಲಿಸಬೇಕೆಂದು ವೇದಿಕೆ ಮನವಿ ಮಾಡಿದೆ.

ಇನ್ನು ’ಕನ್ನಡಿಗರಿಗೆ ಅಗತ್ಯವಿರುವ ಎಲ್ಲವನ್ನು ಮಾಡಲು ಸರ್ಕಾರ ಸಿದ್ಧವಾಗಿದೆ. ಆದರೆ ಸರ್ಕಾರದ ನಿರ್ಧಾರಕ್ಕೆ ವಿರುದ್ಧವಾಗಿ ಬಂದ್‌ಗೆ ಕರೆ ನೀಡಿರುವುದು ಸರಿಯಲ್ಲ. ಸಂಘಟನೆಗಳು ಬಲವಂತವಾಗಿ ಬಂದ್ ಜಾರಿಗೊಳಿಸಲು ಮುಂದಾದರೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅವರು ಶಾಂತಿಯುತವಾಗಿ ಪ್ರತಿಭಟಿಸಬಹುದು. ಆದರೆ ಸರ್ಕಾರವು ಬಲವಂತದ ಬಂದ್ ಅನ್ನು ನಾವು ಸಹಿಸುವುದಿಲ್ಲ” ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಕನ್ನಡಪರ ಹೋರಾಟಗಾರರಿಗೆ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ಕೃಷಿ ಕಾಯ್ದೆ ರದ್ದುಗೊಳಿಸದಿದ್ದರೆ ಎನ್‌ಡಿಎ ತೊರೆಯುತ್ತೇವೆ: ಅಮಿತ್ ಶಾಗೆ ಪತ್ರ ಬರೆದ ಬಿಜೆಪಿಯ ಮತ್ತೊಂದು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...