Homeಕರ್ನಾಟಕಜಾತಿ-ಧರ್ಮಗಳ ನಡುವೆ ಕೋಮುಗಲಭೆ ಎಬ್ಬಿಸಿ ಬೇಳೆ ಬೇಯಿಸಿಕೊಳ್ಳುವ ಯತ್ನಾಳ್‌ ಕುತಂತ್ರ ಫಲಿಸುವುದಿಲ್ಲ: ಕರವೇ

ಜಾತಿ-ಧರ್ಮಗಳ ನಡುವೆ ಕೋಮುಗಲಭೆ ಎಬ್ಬಿಸಿ ಬೇಳೆ ಬೇಯಿಸಿಕೊಳ್ಳುವ ಯತ್ನಾಳ್‌ ಕುತಂತ್ರ ಫಲಿಸುವುದಿಲ್ಲ: ಕರವೇ

ಕರವೇ ಅಂದರೆ ಕಳ್ಳರ ರಕ್ಷಣಾ ವೇದಿಕೆ. ನಕಲಿ ಕನ್ನಡ ಪರ ಸಂಘಟನೆಗಳಿಗೆ ಯಾರೂ ಹೆದರಬೇಡಿ ಎಂದ ಯತ್ನಾಳ್‌ಗೆ ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ತಿರುಗೇಟು ನೀಡಿದ್ದಾರೆ.

- Advertisement -
- Advertisement -

ಕರವೇ ಅಂದರೆ ಕಳ್ಳರ ರಕ್ಷಣಾ ವೇದಿಕೆ. ನಕಲಿ ಕನ್ನಡ ಪರ ಸಂಘಟನೆಗಳಿಗೆ ಯಾರೂ ಹೆದರಬೇಡಿ. ಡಿ. 5 ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ವಿಫಲಗೊಳಿಸಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕರವೇ ಕಿಡಿಕಾರಿದೆ.

ಈ ನಾಡಿನ ರಕ್ಷಣೆಗಾಗಿ ತಮ್ಮ ಸರ್ವಸ್ವವನ್ನು ಧಾರೆಯೆರೆದು ಹೋರಾಡುತ್ತಿರುವ ರಾಜ್ಯದ ಲಕ್ಷಾಂತರ ಕರವೇ ಕಾರ್ಯಕರ್ತರು ಸರಿಯಾದ ಸಂದರ್ಭದಲ್ಲಿ ಯತ್ನಾಳ್‌ಗೆ ಸರಿಯಾದ ಉತ್ತರ ನೀಡುತ್ತಾರೆ. ಯಾರು ಕಳ್ಳರು, ಯಾರು ಸುಳ್ಳರು ಎಂಬುದನ್ನು ರಾಜ್ಯದ ಜನತೆಯ ಮುಂದೆ ತೆರೆದಿಡಲಿದ್ದಾರೆ ಎಂದು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡರು ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ತಮ್ಮ ಬಾಯಿಹರುಕತನ ಪ್ರದರ್ಶಿಸಿದ್ದಾರೆ. ನೆರೆ ಪರಿಹಾರ, ಜಿಎಸ್‌ಟಿ ಬಾಕಿ ತರಲು ಒಕ್ಕೂಟ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿ ಎಂದು ಹಿಂದೆ ಸವಾಲು ಹಾಕಿದ್ದೆ. ಆದರೆ ಯತ್ನಾಳ್ ಆ ವಿಷಯ ಮಾತಾಡುತ್ತಿಲ್ಲ. ಅವರಿಗೆ ಜನರ ಕಷ್ಟಗಳ ಕುರಿತು ಕಾಳಜಿಯಿಲ್ಲ, ಕೇವಲ ಪ್ರಚಾರಕ್ಕಾಗಿ ನಾಲಿಗೆ ಹರಿಬಿಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯತ್ನಾಳ್ ಅವರು ನಾಡಿನ ಸಾಕ್ಷಿಪ್ರಜ್ಞೆ, ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಎಚ್.ಎಸ್ ದೊರೆಸ್ವಾಮಿಯವರ ಕುರಿತೂ ಕೀಳಾಗಿ ಮಾತಾಡಿದ್ದಾರೆ. ಇದು ಅವರ ಸಂಸ್ಕಾರ, ಸಂಸ್ಕೃತಿಯನ್ನು ತೋರಿಸುತ್ತದೆ. ಒಬ್ಬ ಸ್ವಾತಂತ್ರ್ಯ ಹೋರಾಟಗಾರರನ್ನು‌ ನಿಂದಿಸುವ ಇವರು ಯಾವ ಸೀಮೆಯ ದೇಶಭಕ್ತರು? ಇವರೆಂಥ ರಾಷ್ಟ್ರೀಯವಾದಿಗಳು? ಎಂದು ಪ್ರಶ್ನಿಸಿದ್ದಾರೆ.

“ಕರವೇಯಲ್ಲಿ ಸಾಬರು ಇದ್ದಾರೆ” ಎಂದು ಹೇಳಿದ್ದಾರೆ ಯತ್ನಾಳ್. ಕರವೇಯಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧರಾದಿಯಾಗಿ ಎಲ್ಲ ಧರ್ಮದವರೂ ಇದ್ದಾರೆ. ಭಾರತ ಸಂವಿಧಾನದ 14 ನೇ ವಿಧಿ, ಎಲ್ಲ ಭಾರತೀಯರೂ ಸಮಾನರೆಂದು ಹೇಳುತ್ತದೆ. ಕರವೇಯಲ್ಲಿ ಎಲ್ಲ ಧರ್ಮದವರೂ ಕನ್ನಡಸೇವೆಯಲ್ಲಿ ತೊಡಗಿದ್ದಾರೆ, ಅದಕ್ಕಾಗಿ ನಾವು ಹೆಮ್ಮೆಪಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ “ಕನ್ನಡವೇ ಜಾತಿ, ಕನ್ನಡವೇ ಧರ್ಮ, ಕನ್ನಡವೇ ದೇವರು” ಎಂಬ ಘೋಷವಾಕ್ಯದೊಂದಿಗೆ 21 ವರ್ಷಗಳಿಂದ ಕನ್ನಡ ಚಳವಳಿಯನ್ನು ಸಂಘಟಿಸುತ್ತಿದೆ. ಧರ್ಮ-ಧರ್ಮಗಳ ನಡುವೆ ದ್ವೇಷ ಹರಡಿ, ಕೋಮುಗಲಭೆ ಎಬ್ಬಿಸಿ ಬೇಳೆ ಬೇಯಿಸಿಕೊಳ್ಳುವುದು ಯತ್ನಾಳ್‌ರಂಥವರ ಕುತಂತ್ರ. ಯತ್ನಾಳ್ ಕುತಂತ್ರ ಫಲ ಕೊಡುವುದಿಲ್ಲ, ಅವರಿಗೆ ತಿರುಗುಬಾಣವಾಗುತ್ತದೆ ಎಂದಿದ್ದಾರೆ.

ತನ್ನನ್ನು ಮಂತ್ರಿ ಮಾಡಲೆಂದು ಆಗಾಗ ಬ್ಲಾಕ್ ಮೇಲ್ ಮಾಡುವ ಯತ್ನಾಳ್ ಈಗ ಬಿಜೆಪಿಯವರ ಪಾಲಿಗೇ ಗೊಡ್ಡುಹಸುವಾಗಿದ್ದಾರೆ. ಹೀಗಾಗಿ ಸುದ್ದಿಯಲ್ಲಿ ಇರಲು, ಆಕಾಶಕ್ಕೆ ಉಗುಳುವ ಕೆಲಸ ಮಾಡುತ್ತಿದ್ದಾರೆ. ಆಕಾಶಕ್ಕೆ ಉಗಿದರೆ ಅದು ಅವರ ಮೇಲೇ ಬೀಳುವುದಿಲ್ಲವೇ? ಹತ್ತು ಮಂದಿ ಪುಂಡಪೋಕರಿಗಳನ್ನು ಸುತ್ತ ನಿಲ್ಲಿಸಿಕೊಂಡು, ಮೀಡಿಯಾ ಮೈಕುಗಳ ಎದುರು ಬಾಯಿಗೆ ಬಂದಿದ್ದು ಮಾತನಾಡಿದರೆ ದೊಡ್ಡ ನಾಯಕನೆನಿಸಿಕೊಳ್ಳಬಹುದು ಎಂಬ ಭ್ರಮೆಯಲ್ಲಿ ಯತ್ನಾಳ್ ಇದ್ದಾರೆ. ಇಂಥವರು ಕರ್ನಾಟಕದ ರಾಜಕಾರಣದ ಇತಿಹಾಸದಲ್ಲಿ ಹೇಳ ಹೆಸರಿಲ್ಲದಂತೆ ಕಣ್ಮರೆಯಾಗಿದ್ದಾರೆ, ಇವರೂ ಆಗುತ್ತಾರೆ ಎಂದಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನಿಜಕ್ಕೂ ಜನರ ಪರವಾದ ಕಾಳಜಿ ಇದ್ದರೆ, ಅವರದೇ ಜಿಲ್ಲೆ ವಿಜಯಪುರದಲ್ಲಿ ನರಳುತ್ತಿರುವ ನೆರೆಸಂತ್ರಸ್ಥರ ಜತೆ ನಿಲ್ಲಲಿ. ನೆರೆ ಪರಿಹಾರ ಯಾಕೆ ಕೊಟ್ಟಿಲ್ಲವೆಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಲಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋರಾಟ ರೂಪಿಸಲಿ. ಆಗ ಅವರನ್ನು ಜನರು ನಾಯಕರೆಂದು ಪರಿಗಣಿಸುತ್ತಾರೆ ಎಂದು ನಾರಾಯಣಗೌಡ್ರು ತಿಳಿಸಿದ್ದಾರೆ.


ಇದನ್ನೂ ಓದಿ: ಯತ್ನಾಳ್‌ಗೆ ಗುಲಾಮಗಿರಿ ಬಿಟ್ಟು ಬೇರೇನೂ ಗೊತ್ತಿಲ್ಲ ಎಂದು ಒಪ್ಪಿಕೊಳ್ಳುತ್ತಾರೆಯೇ?: ಕರವೇ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...